ಅವಿಶ್ವಾಸ ನಿರ್ಣಯ: ಇಂದು ಲೋಕಸಭೆಯಲ್ಲಿ ಉತ್ತರ ನೀಡಲಿದ್ದಾರೆ ಪ್ರಧಾನಿ ಮೋದಿ

ಮಣಿಪುರ ಹಿಂಸಾಚಾರಕ್ಕೆ ಸಂಬಂಧಿಸಿದಂತೆ ಪ್ರತಿಪಕ್ಷಗಳು ಕೇಂದ್ರ ಸರ್ಕಾರದ ವಿರುದ್ಧ ಸಂಸತ್ತಿನಲ್ಲಿ ತಂದಿರುವ ಅವಿಶ್ವಾಸ ನಿರ್ಣಯಕ್ಕೆ ಪ್ರಧಾನಿ ಮೋದಿ ಇಂದು ಉತ್ತರ ನೀಡಲಿದ್ದಾರೆ.

ಅವಿಶ್ವಾಸ ನಿರ್ಣಯ: ಇಂದು ಲೋಕಸಭೆಯಲ್ಲಿ ಉತ್ತರ ನೀಡಲಿದ್ದಾರೆ ಪ್ರಧಾನಿ ಮೋದಿ
ನರೇಂದ್ರ ಮೋದಿ

Updated on: Aug 10, 2023 | 9:54 AM

ಮಣಿಪುರ ಹಿಂಸಾಚಾರ(Manipur Violence)ಕ್ಕೆ ಸಂಬಂಧಿಸಿದಂತೆ ಪ್ರತಿಪಕ್ಷಗಳು ಕೇಂದ್ರ ಸರ್ಕಾರದ ವಿರುದ್ಧ ಸಂಸತ್ತಿನಲ್ಲಿ ತಂದಿರುವ ಅವಿಶ್ವಾಸ ನಿರ್ಣಯ(No-Confidence Motion)ಕ್ಕೆ ಪ್ರಧಾನಿ ಮೋದಿ ಇಂದು ಉತ್ತರ ನೀಡಲಿದ್ದಾರೆ. ಜುಲೈ 26 ರಂದು ಮಣಿಪುರ ಹಿಂಸಾಚಾರದ ವಿಷಯದ ಬಗ್ಗೆ ಪ್ರತಿಪಕ್ಷಗಳು ಅವಿಶ್ವಾಸ ನಿರ್ಣಯವನ್ನು ಮಂಡಿಸಿದ್ದವು, ಅದನ್ನು ಲೋಕಸಭೆ ಸ್ಪೀಕರ್ ಓಂ ಬಿರ್ಲಾ ಅವರು ಅಂಗೀಕರಿಸಿದ್ದರು.

ಮಂಗಳವಾರದಂದು ಕಾಂಗ್ರೆಸ್ ಸಂಸದ ಗೌರವ್ ಗೊಗೊಯ್ ಅವರು ಮಸೂದೆಯ ಮೇಲಿನ ಚರ್ಚೆಯನ್ನು ಆರಂಭಿಸಿದರು. ಇದನ್ನು ಲೋಕಸಭೆ ಸ್ಪೀಕರ್ ಓಂ ಬಿರ್ಲಾ ಒಪ್ಪಿಕೊಂಡಿದ್ದಾರೆ.

ಅವಿಶ್ವಾಸ ನಿರ್ಣಯಕ್ಕೆ ಉತ್ತರ ನೀಡಲು ಪ್ರಧಾನಿ ಇಂದು ಸದನಕ್ಕೆ ಹಾಜರಾಗಲಿದ್ದು, ನಿರ್ಣಯದ ಕುರಿತು ಮಾತನಾಡಲಿದ್ದಾರೆ ಎಂದು ಕೇಂದ್ರ ಸಚಿವರು ಕೆಳಮನೆಗೆ ತಿಳಿಸಿದ್ದಾರೆ.

ಮತ್ತಷ್ಟು ಓದಿ: 2023ರಲ್ಲಿಯೂ ಅವಿಶ್ವಾಸ ನಿರ್ಣಯ ಮಂಡಿಸಲು ಅವಕಾಶ ಸಿಗಲಿ: 5 ವರ್ಷಗಳ ಹಿಂದೆ ಮೋದಿ ಹೇಳಿದ್ದ ವಿಡಿಯೊ ವೈರಲ್

ಪ್ರಧಾನಿ ನರೇಂದ್ರ ಮೋದಿ ಅವರು ಅವಿಶ್ವಾಸ ನಿರ್ಣಯವನ್ನು ಎದುರಿಸುತ್ತಿರುವುದು ಇದು ಎರಡನೇ ಬಾರಿ. ಆಂಧ್ರಪ್ರದೇಶಕ್ಕೆ ವಿಶೇಷ ವರ್ಗದ ಸ್ಥಾನಮಾನ ನೀಡುವ ಕುರಿತು 2018 ರಲ್ಲಿ ಮೋದಿ ಸರ್ಕಾರದ ವಿರುದ್ಧ ಅವಿಶ್ವಾಸ ನಿರ್ಣಯ ಮಂಡಿಸಲಾಗಿತ್ತು.

ವಿಪಕ್ಷಗಳಿಂದ ಪ್ರಧಾನಿಗೆ ಮೂರು ಪ್ರಶ್ನೆ

ಮೋದಿ ಮಣಿಪುರಕ್ಕೆ ಏಕೆ ಹೋಗಿಲ್ಲ?” ರಾಹುಲ್ ಗಾಂಧಿ, ವಿವಿಧ ಪಕ್ಷಗಳ ಸಂಸದರು, ಅಲ್ಲಿಗೆ ಹೋದರು, ಕೇಂದ್ರ ಗೃಹ ಸಚಿವರು ಅಲ್ಲಿಗೆ ಹೋದರು, ರಾಜ್ಯ ಗೃಹ ಸಚಿವರೂ ಅಲ್ಲಿಗೆ ಹೋಗಿದ್ದರು, ಆದರೆ ದೇಶದ ಪ್ರಧಾನಿಯಾಗಿರುವ ಮೋದಿ ಏಕೆ ಮಣಿಪುರಕ್ಕೆ ಹೋಗಲಿಲ್ಲ.

ಎರಡನೆಯ ಪ್ರಶ್ನೆ: ಮಣಿಪುರದ ಬಗ್ಗೆ ಮಾತನಾಡಲು ಮೋದಿ ಅವರು 80 ದಿನಗಳನ್ನು ಏಕೆ ತೆಗೆದುಕೊಂಡರು?

ಮೂರನೇ ಪ್ರಶ್ನೆ: ಮಣಿಪುರದ ಮುಖ್ಯಮಂತ್ರಿಯನ್ನು ಏಕೆ ವಜಾ ಮಾಡಿಲ್ಲ?ಗುಜರಾತಿನಲ್ಲಿ ನೀವು ರಾಜಕೀಯ ಮಾಡಬೇಕಾದಾಗ ನೀವು ಎರಡು ಬಾರಿ ಸಿಎಂ ಬದಲಾಯಿಸಿದ್ದೀರಿ. ಉತ್ತರಾಖಂಡದಲ್ಲಿ ಚುನಾವಣೆ ನಡೆದಾಗ ಹಲವು ಬಾರಿ ಸಿಎಂ ಬದಲಾಯಿಸಿದ್ದೀರಿ. ತ್ರಿಪುರಾದಲ್ಲಿ ಚುನಾವಣೆ ಹತ್ತಿರವಾದಾಗ ಅಲ್ಲಿಯೂ ಸಿಎಂ ಬದಲಾಯಿಸಿದ್ದೀರಿ. ಮಣಿಪುರ ಸಿಎಂಗೆ ನೀವೇಕೆ ಆಶೀರ್ವಾದ ಮಾಡುತ್ತಿದ್ದೀರಿ ಎಂದು ಪ್ರಶ್ನಿಸಿದೆ.

 

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Nayana Rajeev

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More
Follow Us