AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಜಸ್ಥಾನ, ಛತ್ತೀಸ್‌ಗಢ ಮತ್ತು ಮಧ್ಯಪ್ರದೇಶಕ್ಕೆ ಯಾರು ಸಿಎಂ?; ನಾಳೆ ವೀಕ್ಷಕರನ್ನು ನೇಮಕ ಮಾಡಲಿದೆ ಬಿಜೆಪಿ

ರಾಜಸ್ಥಾನ, ಛತ್ತೀಸ್‌ಗಢ ಮತ್ತು ಮಧ್ಯಪ್ರದೇಶದ ಮೂರು ರಾಜ್ಯಗಳಲ್ಲಿ ಮುಖ್ಯಮಂತ್ರಿ ಹುದ್ದೆಗೆ ಯಾರನ್ನು ಆಯ್ಕೆ ಮಾಡುವುದು ಎಂಬುದರ ಬಗ್ಗೆ ಬಿಜೆಪಿ ಇನ್ನೂ ಒಮ್ಮತಕ್ಕೆ ಬಂದಿಲ್ಲ. ಮುಖ್ಯಮಂತ್ರಿಗಳ ಆಯ್ಕೆಗಾಗಿ ಪಕ್ಷವು ನಾಳೆ (ಶುಕ್ರವಾರ) ವೀಕ್ಷಕರನ್ನು ನೇಮಕ ಮಾಡಲಿದೆ ಎಂದು ಮೂಲಗಳು ಹೇಳಿವೆ.

ರಾಜಸ್ಥಾನ, ಛತ್ತೀಸ್‌ಗಢ ಮತ್ತು ಮಧ್ಯಪ್ರದೇಶಕ್ಕೆ ಯಾರು ಸಿಎಂ?; ನಾಳೆ ವೀಕ್ಷಕರನ್ನು ನೇಮಕ ಮಾಡಲಿದೆ ಬಿಜೆಪಿ
ಬಿಜೆಪಿ
ರಶ್ಮಿ ಕಲ್ಲಕಟ್ಟ
|

Updated on: Dec 07, 2023 | 8:39 PM

Share

ದೆಹಲಿ ಡಿಸೆಂಬರ್ 07 : ಇತ್ತೀಚೆಗಷ್ಟೇ ನಡೆದ ವಿಧಾನಸಭಾ ಚುನಾವಣೆಯಲ್ಲಿ (Assembly Election 2023) ಬಿಜೆಪಿ (BJP) ಜಯಗಳಿಸಿದ ಮೂರು ರಾಜ್ಯಗಳಲ್ಲಿ ಮುಖ್ಯಮಂತ್ರಿಯಾಗಲು (Chief Minister) ಅಂತಿಮ ಹೆಸರುಗಳನ್ನು ಆಯ್ಕೆ ಮಾಡುವ ಕಾರ್ಯವನ್ನು ಬಿಜೆಪಿ ಇನ್ನೂ ನಡೆಸುತ್ತಿದೆ ಎಂದು ಮೂಲಗಳು ತಿಳಿಸಿವೆ. ಅಂತಿಮವಾಗಿ ಹೆಸರುಗಳನ್ನು ಆಯ್ಕೆ ಮಾಡಲು ಪಕ್ಷವು ನಾಳೆ (ಶುಕ್ರವಾರ) ಮೂರು ರಾಜ್ಯಗಳಿಗೆ ವೀಕ್ಷಕರನ್ನು ನೇಮಿಸುತ್ತದೆ ಎಂದು ಮೂಲಗಳು ಹೇಳಿರುವುದಾಗಿ ಎನ್​​ಡಿಟಿವಿ ವರದಿ ಮಾಡಿದೆ.

ರಾಜಸ್ಥಾನ, ಛತ್ತೀಸ್‌ಗಢ ಮತ್ತು ಮಧ್ಯಪ್ರದೇಶದ ಮೂರು ರಾಜ್ಯಗಳಲ್ಲಿ ಮುಖ್ಯಮಂತ್ರಿ ಹುದ್ದೆಗೆ ಸಂಭಾವ್ಯರ ಪಟ್ಟಿಯಲ್ಲಿ ಬೆರಳೆಣಿಕೆಯ ಹೆಸರುಗಳಿವೆ ಎಂದು ಹೇಳಲಾಗಿದೆ. ಬಿಜೆಪಿ ಯಾವುದೇ ಮುಖ್ಯಮಂತ್ರಿ ಅಭ್ಯರ್ಥಿಯನ್ನು ಹೆಸರಿಸದೆ ಚುನಾವಣಾ ಕಣಕ್ಕಿಳಿದಿತ್ತು. ವೀಕ್ಷಕರು ಮೂರು ರಾಜ್ಯಗಳಲ್ಲಿ ಹೊಸದಾಗಿ ಚುನಾಯಿತ ಶಾಸಕರ ಸಭೆಗಳನ್ನು ಮೇಲ್ವಿಚಾರಣೆ ಮಾಡುವ ಸಾಧ್ಯತೆಯಿದೆ, ಅಲ್ಲಿ ಅವರು ತಮ್ಮ ನಾಯಕರನ್ನು ಆಯ್ಕೆ ಮಾಡುತ್ತಾರೆ. ಬಿಜೆಪಿಯೊಳಗಿನ ಅನೇಕರು ಮೂರು ರಾಜ್ಯಗಳಲ್ಲಿ ಪಡೆದಿರುವ ಬೃಹತ್ ಜನಾದೇಶವನ್ನು ಅದರ ನೀತಿಗಳು ಮತ್ತು ಪ್ರಧಾನಿ ನರೇಂದ್ರ ಮೋದಿಯವರ ನಾಯಕತ್ವಕ್ಕೆ ವ್ಯಾಪಕವಾದ ಜನಬೆಂಬಲದ ಬಲವಾದ ಹೇಳಿಕೆಯಾಗಿ ನೋಡುತ್ತಾರೆ.

ಶಿವರಾಜ್ ಸಿಂಗ್ ಚೌಹಾಣ್ ಮಧ್ಯಪ್ರದೇಶದಲ್ಲಿ ಮೂರನೇ ಎರಡರಷ್ಟು ಬಹುಮತದೊಂದಿಗೆ ಪಕ್ಷದ ಗೆಲುವಿನ ನಂತರ ಪ್ರಬಲ ಸ್ಪರ್ಧಿಯಾಗಿ ಉಳಿದಿದ್ದಾರೆ. ಕೇಂದ್ರ ಸಚಿವರಾದ ಪ್ರಹ್ಲಾದ್ ಪಟೇಲ್, ಜ್ಯೋತಿರಾದಿತ್ಯ ಸಿಂಧಿಯಾ ಮತ್ತು ನರೇಂದ್ರ ಸಿಂಗ್ ತೋಮರ್ ಕೂಡ ಸಂಭಾವ್ಯರೆಂದು ಪರಿಗಣಿಸಲಾಗಿದೆ.

ಛತ್ತೀಸ್‌ಗಢದಲ್ಲಿ ಮಾಜಿ ಮುಖ್ಯಮಂತ್ರಿ ರಮಣ್ ಸಿಂಗ್, ರಾಜ್ಯ ಬಿಜೆಪಿ ಅಧ್ಯಕ್ಷ ಅರುಣ್ ಕುಮಾರ್ ಸಾವೊ, ವಿರೋಧ ಪಕ್ಷದ ನಾಯಕ ಧರ್ಮಲಾಲ್ ಕೌಶಿಕ್ ಮತ್ತು ಮಾಜಿ ಐಎಎಸ್ ಅಧಿಕಾರಿ ಒಪಿ ಚೌಧರಿ ಅವರನ್ನು ರಾಜಕೀಯ ವಿಶ್ಲೇಷಕರು ಸ್ಪರ್ಧಿಗಳಾಗಿ ನೋಡಿದ್ದಾರೆ. ಸಿಂಗ್ ಹೊರತುಪಡಿಸಿ, ಎಲ್ಲಾ ಮೂರು ನಾಯಕರು ಇತರ ಹಿಂದುಳಿದ ವರ್ಗಗಳಿಂದ (OBC) ಬಂದವರು. ಆದಾಗ್ಯೂ, ಬಿಜೆಪಿ ನಾಯಕತ್ವವು ಈ ಹಿಂದೆ ತನ್ನ ಮುಖ್ಯಮಂತ್ರಿ ಆಯ್ಕೆಯೊಂದಿಗೆ ವೀಕ್ಷಕರನ್ನು ಆಶ್ಚರ್ಯಗೊಳಿಸಿದೆ.

ಇದನ್ನೂ ಓದಿ: 40% ಕಮಿಷನ್​​ ಆರೋಪ ಕೇಸ್​: ಬಿಜೆಪಿ, ಕಾಂಗ್ರೆಸ್​ ಸರ್ಕಾರದ ವಿರುದ್ಧ ದಾಖಲೆ ಸಲ್ಲಿಸಿದ ಕೆಂಪಣ್ಣ

ರಾಜಸ್ಥಾನದಲ್ಲಿ, ಮಾಜಿ ಮುಖ್ಯಮಂತ್ರಿ ವಸುಂಧರಾ ರಾಜೆ ಅವರು ಉನ್ನತ ಹುದ್ದೆಯ ಆಕಾಂಕ್ಷಿಗಳಲ್ಲಿ ಒಬ್ಬರಾಗಿದ್ದಾರೆ. ಸುಮಾರು 25 ಬಿಜೆಪಿ ಶಾಸಕರು ಸೋಮವಾರ ಅವರನ್ನು ಭೇಟಿಯಾಗಿದ್ದು ಅದು ಅವರಿಗೆ ಬೆಂಬಲ ಮತ್ತು ಶಕ್ತಿ ಪ್ರದರ್ಶನವಾಗಿ ಕಂಡುಬಂದಿದೆ. ಶಾಸಕರು ಇದೊಂದು ಸೌಜನ್ಯದ ಭೇಟಿ ಎಂದು ಹೇಳಿದ್ದರೂ, ಪಕ್ಷದ ನಾಯಕತ್ವವು ರಾಜೇ ಅವರನ್ನು ಉನ್ನತ ಹುದ್ದೆಗೆ ಆಯ್ಕೆ ಮಾಡಿದರೆ ತಾವು ಬೆಂಬಲಿಸುವುದಾಗಿ ಹೇಳಿದ್ದಾರೆ.

ಮತ್ತಷ್ಟು ರಾಜಕೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
ರಾಯಚೂರಲ್ಲಿ ಪೊಲೀಸ್ ಶ್ವಾನಗಳಿಗೆ ಫ್ಯಾನ್, ಏರ್ ಕೂಲರ್​ ವ್ಯವಸ್ಥೆ
ರಾಯಚೂರಲ್ಲಿ ಪೊಲೀಸ್ ಶ್ವಾನಗಳಿಗೆ ಫ್ಯಾನ್, ಏರ್ ಕೂಲರ್​ ವ್ಯವಸ್ಥೆ
ಅನ್ನಭಾಗ್ಯ ಅಕ್ಕಿಯ ಅಕ್ರಮ ದಾಸ್ತಾನು: ದಂಧೆಕೋರರಿಗೆ ಬಿಗ್​​ ಶಾಕ್​​
ಅನ್ನಭಾಗ್ಯ ಅಕ್ಕಿಯ ಅಕ್ರಮ ದಾಸ್ತಾನು: ದಂಧೆಕೋರರಿಗೆ ಬಿಗ್​​ ಶಾಕ್​​
ಡಾ ರಾಜ್​ಕುಮಾರ್ ಗೀತ ನಮನ ಕಾರ್ಯಕ್ರಮದಲ್ಲಿ ಸಾಧು ಕೋಕಿಲ ಮಾತು
ಡಾ ರಾಜ್​ಕುಮಾರ್ ಗೀತ ನಮನ ಕಾರ್ಯಕ್ರಮದಲ್ಲಿ ಸಾಧು ಕೋಕಿಲ ಮಾತು
ಸಮಂತಾ ಸೆಟ್​​​ನಲ್ಲಿ ಹೇಗಿರ್ತಾರೆ? ವಿವರಿಸಿದ ದಿಗಂತ್
ಸಮಂತಾ ಸೆಟ್​​​ನಲ್ಲಿ ಹೇಗಿರ್ತಾರೆ? ವಿವರಿಸಿದ ದಿಗಂತ್
KSRTC ಬಸ್​ ಅಡ್ಡಗಟ್ಟಿ ಕುಡುಕರ ಕಿರಿಕ್​​: ಸೆಲ್ಫಿ ತೆಗೆದು ಹುಚ್ಚಾಟ
KSRTC ಬಸ್​ ಅಡ್ಡಗಟ್ಟಿ ಕುಡುಕರ ಕಿರಿಕ್​​: ಸೆಲ್ಫಿ ತೆಗೆದು ಹುಚ್ಚಾಟ
ಲಕ್ಷ್ಮೀಪುರ ಬಿಡಿಎ ಲೇಔಟಲ್ಲಿ ಚೀಲದಲ್ಲಿ ಅಪರಿಚಿತ ಶವ ಪತ್ತೆ, ಬೆಚ್ಚಿದ ಜನ
ಲಕ್ಷ್ಮೀಪುರ ಬಿಡಿಎ ಲೇಔಟಲ್ಲಿ ಚೀಲದಲ್ಲಿ ಅಪರಿಚಿತ ಶವ ಪತ್ತೆ, ಬೆಚ್ಚಿದ ಜನ
ಅಣ್ಣಾವ್ರ ಸಮಾಧಿಗೆ ಪೂಜೆ ಮಾಡಿದ ರಾಘಣ್ಣ ಮತ್ತು ಶಾಸಕ ಗೋಪಾಲಯ್ಯ
ಅಣ್ಣಾವ್ರ ಸಮಾಧಿಗೆ ಪೂಜೆ ಮಾಡಿದ ರಾಘಣ್ಣ ಮತ್ತು ಶಾಸಕ ಗೋಪಾಲಯ್ಯ
ಸಿಇಟಿ ಬರೆಯಲು ಬಂದ ವಿದ್ಯಾರ್ಥಿಯ ಜನಿವಾರ ತೆಗೆಸಿದ್ರಾ ಸಿಬ್ಬಂದಿ?
ಸಿಇಟಿ ಬರೆಯಲು ಬಂದ ವಿದ್ಯಾರ್ಥಿಯ ಜನಿವಾರ ತೆಗೆಸಿದ್ರಾ ಸಿಬ್ಬಂದಿ?
ನಾವೇನು ಪಾಕಿಸ್ತಾನದಲ್ಲಿ ಇದ್ದೇವಾ? ಜನಿವಾರ ತೆಗೆಸಿದ್ದಕ್ಕೆ ವ್ಯಾಪಕ ಆಕ್ರೋಶ
ನಾವೇನು ಪಾಕಿಸ್ತಾನದಲ್ಲಿ ಇದ್ದೇವಾ? ಜನಿವಾರ ತೆಗೆಸಿದ್ದಕ್ಕೆ ವ್ಯಾಪಕ ಆಕ್ರೋಶ
ಒಂದು ರನ್​​ಗಾಗಿ ಇಷ್ಟೆಲ್ಲ ಪೋಸ್​​​ ಬೇಕಿತ್ತಾ ಪಾಂಡ್ಯ?
ಒಂದು ರನ್​​ಗಾಗಿ ಇಷ್ಟೆಲ್ಲ ಪೋಸ್​​​ ಬೇಕಿತ್ತಾ ಪಾಂಡ್ಯ?