AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೋದಿ- ಕೇಜ್ರಿವಾಲ್ ನಡುವೆ ಯಾವುದೇ ವ್ಯತ್ಯಾಸವಿಲ್ಲ; ಮಿತ್ರಪಕ್ಷ ಆಪ್ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ಸೀಲಾಂಪುರ್ ರ್ಯಾಲಿಯಲ್ಲಿ ಮಾತನಾಡಿದ ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ, ಪ್ರಧಾನಿ ನರೇಂದ್ರ ಮೋದಿ ಮತ್ತು ದೆಹಲಿ ಮಾಜಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಇಬ್ಬರೂ ಜಾತಿ ಜನಗಣತಿ ವಿಷಯದಲ್ಲಿ ಮೌನವಾಗಿದ್ದಾರೆ. ಅವರಿಬ್ಬರ ನಡುವೆ ಯಾವುದೇ ವ್ಯತ್ಯಾಸವಿಲ್ಲ. ಇಬ್ಬರೂ ಸುಳ್ಳು ಭರವಸೆಗಳನ್ನು ನೀಡುವುದರಲ್ಲಿ ನಿಸ್ಸೀಮರು ಎಂದು ಆರೋಪಿಸಿದ್ದಾರೆ. ಹಿಂದುಳಿದ ಸಮುದಾಯಗಳು ಮತ್ತು ಅಲ್ಪಸಂಖ್ಯಾತರು ತಮ್ಮ ನ್ಯಾಯಯುತ ಪಾಲನ್ನು ಪಡೆಯುವುದನ್ನು ಅವರು ಬಯಸುವುದಿಲ್ಲ ಎಂದು ಟೀಕಿಸಿದ್ದಾರೆ.

ಮೋದಿ- ಕೇಜ್ರಿವಾಲ್ ನಡುವೆ ಯಾವುದೇ ವ್ಯತ್ಯಾಸವಿಲ್ಲ; ಮಿತ್ರಪಕ್ಷ ಆಪ್ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ
Rahul Gandhi
ಸುಷ್ಮಾ ಚಕ್ರೆ
|

Updated on: Jan 13, 2025 | 10:47 PM

Share

ನವದೆಹಲಿ: ದೆಹಲಿಯ ಸೀಲಾಂಪುರ್‌ನಲ್ಲಿ ನಡೆದ ರ್ಯಾಲಿಯನ್ನು ಉದ್ದೇಶಿಸಿ ಮಾತನಾಡಿದ ಲೋಕಸಭೆಯ ವಿರೋಧ ಪಕ್ಷದ ನಾಯಕ ಮತ್ತು ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ, ಇಂಡಿಯಾ ಬಣದ ಮಿತ್ರಪಕ್ಷವಾದ ಆಮ್ ಆದ್ಮಿ ಪಕ್ಷದ ವಿರುದ್ಧವೇ ತೀವ್ರ ವಾಗ್ದಾಳಿ ನಡೆಸಿದ್ದಾರೆ. ಆಮ್ ಆದ್ಮಿ ಪಕ್ಷದ (ಎಎಪಿ) ಮುಖ್ಯಸ್ಥ ಅರವಿಂದ್ ಕೇಜ್ರಿವಾಲ್ ಮತ್ತು ಪ್ರಧಾನಿ ನರೇಂದ್ರ ಮೋದಿ ನಡುವೆ ಯಾವುದೇ ವ್ಯತ್ಯಾಸವಿಲ್ಲ. ಬಿಜೆಪಿ ಜನರನ್ನು ಪರಸ್ಪರರ ವಿರುದ್ಧ ಹೋರಾಡಲು ಪ್ರೋತ್ಸಾಹಿಸುವ ಮೂಲಕ ಸಂಘರ್ಷವನ್ನು ಸೃಷ್ಟಿಸಲು ಪ್ರಯತ್ನಿಸುತ್ತಿದೆ ಎಂದು ಹೇಳಿದ್ದಾರೆ.

ಹಣದುಬ್ಬರವನ್ನು ಕಡಿಮೆ ಮಾಡುವ ಭರವಸೆಗಳನ್ನು ಈಡೇರಿಸುವಲ್ಲಿ ಮೋದಿ- ಕೇಜ್ರಿವಾಲ್ ಈ ಇಬ್ಬರೂ ನಾಯಕರು ವಿಫಲರಾಗಿದ್ದಾರೆ. ಅವರು ಬಡವರನ್ನು ಇನ್ನಷ್ಟು ಬಡವರನ್ನಾಗಿ ಮಾಡುತ್ತಾರೆ ಮತ್ತು ಶ್ರೀಮಂತರು ಶ್ರೀಮಂತರಾಗುತ್ತಲೇ ಇರುತ್ತಾರೆ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಹೇಳಿದ್ದಾರೆ.

ಇದನ್ನೂ ಓದಿ: ದೆಹಲಿ ಚುನಾವಣೆ: ಆಮ್​ ಆದ್ಮಿ ಪಕ್ಷ ಗೆದ್ದರೆ ದೇವಸ್ಥಾನಗಳ ಅರ್ಚಕರ ಗೌರವಧನ 18 ಸಾವಿರ ರೂ.ಗೆ ಏರಿಕೆ: ಕೇಜ್ರಿವಾಲ್

ಇದೇ ವೇಳೆ ಸಂಪನ್ಮೂಲಗಳ ಅಸಮಾನ ಹಂಚಿಕೆಯ ಬಗ್ಗೆಯೂ ಅವರು ಕಳವಳ ವ್ಯಕ್ತಪಡಿಸಿದ್ದಾರೆ. ಹಿಂದುಳಿದ ಸಮುದಾಯಗಳಿಗೆ ಅವರ ನ್ಯಾಯಯುತ ಪಾಲನ್ನು ನಿರಾಕರಿಸಲಾಗುತ್ತಿದೆ. ಹಿಂದುಳಿದ ಮತ್ತು ಅಲ್ಪಸಂಖ್ಯಾತ ಸಮುದಾಯಗಳಿಗೆ, ವಿಶೇಷವಾಗಿ ಜಾತಿ ಜನಗಣತಿಗೆ ಸಂಬಂಧಿಸಿದಂತೆ ಜನರು ತಮ್ಮ ಹಕ್ಕುಗಳನ್ನು ಪಡೆಯುವುದನ್ನು ಪಿಎಂ ಮೋದಿ ಮತ್ತು ಅರವಿಂದ್ ಕೇಜ್ರಿವಾಲ್ ಇಬ್ಬರೂ ಬಯಸುತ್ತಿಲ್ಲ ಎಂದು ರಾಹುಲ್ ಗಾಂಧಿ ಆರೋಪಿಸಿದರು.

ಕಾಂಗ್ರೆಸ್‌ಗೆ ಎಲ್ಲಾ ನಾಗರಿಕರು ಸಮಾನರು. ಪ್ರೀತಿಯು ಹಿಂಸೆಯ ಮೇಲೆ ಜಯ ಗಳಿಸುತ್ತದೆ ಎಂಬ ನಂಬಿಕೆ ನಮ್ಮದು. ಬಡತನದ ಅಂಚಿನಲ್ಲಿರುವವರನ್ನು ಮೇಲಕ್ಕೆತ್ತುವುದು ಮತ್ತು ಎಲ್ಲರಿಗೂ ಸಮಾನ ಅವಕಾಶಗಳನ್ನು ನೀಡುವುದಕ್ಕೆ ಕಾಂಗ್ರೆಸ್ ಪಕ್ಷ ಗಮನ ನೀಡುತ್ತದೆ. “ನನಗೆ, ಭಾರತ ಎಂದರೆ ಜನರಲ್ಲಿ ಯಾವುದೇ ದ್ವೇಷ ಇರಬಾರದು ಮತ್ತು ಬಡವರು ದೊಡ್ಡ ಕನಸುಗಳನ್ನು ಹೊಂದಿರಬೇಕು” ಎಂದು ರಾಹುಲ್ ಗಾಂಧಿ ಘೋಷಿಸಿದ್ದಾರೆ.

ಇದನ್ನೂ ಓದಿ: ನಾನು ಕೂಡ ಶೀಶ್​ ಮಹಲ್ ನಿರ್ಮಿಸಬಹುದಿತ್ತು; ಅರವಿಂದ್ ಕೇಜ್ರಿವಾಲ್ ವಿರುದ್ಧ ಪ್ರಧಾನಿ ಮೋದಿ ವಾಗ್ದಾಳಿ

ದೆಹಲಿಯ ಆಡಳಿತದ ವಿರುದ್ಧ ಅಸಮಾಧಾನ ಹೊರಹಾಕಿದ ರಾಹುಲ್ ಗಾಂಧಿ, ನಗರವನ್ನು ಸ್ವಚ್ಛಗೊಳಿಸುವ, ಭ್ರಷ್ಟಾಚಾರವನ್ನು ಎದುರಿಸುವ, ಹೆಚ್ಚುತ್ತಿರುವ ಮಾಲಿನ್ಯ ಮತ್ತು ಹಣದುಬ್ಬರವನ್ನು ನಿಭಾಯಿಸುವ ಭರವಸೆಗಳನ್ನು ಈಡೇರಿಸುವಲ್ಲಿ ಅರವಿಂದ್ ಕೇಜ್ರಿವಾಲ್ ಅವರ ಆಡಳಿತ ವಿಫಲವಾಗಿದೆ ಎಂದು ಟೀಕಿಸಿದರು.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
‘ಮಾರ್ಕ್’-‘45’ ಒಂದೇ ದಿನ ಬಿಡುಗಡೆ: ಸುದೀಪ್ ಹೇಳಿದ್ದೇನು?
‘ಮಾರ್ಕ್’-‘45’ ಒಂದೇ ದಿನ ಬಿಡುಗಡೆ: ಸುದೀಪ್ ಹೇಳಿದ್ದೇನು?
ಬೌಲಿಂಗ್‌ನಲ್ಲಿ ಪಾಕ್ ನಾಯಕನ ವಿಕೆಟ್ ಎಗರಿಸಿದ ವೈಭವ್
ಬೌಲಿಂಗ್‌ನಲ್ಲಿ ಪಾಕ್ ನಾಯಕನ ವಿಕೆಟ್ ಎಗರಿಸಿದ ವೈಭವ್
ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!