AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Free Electricity in Rajasthan: ರಾಜಸ್ಥಾನದಲ್ಲಿ ಪ್ರತಿ ಮನೆಗೂ 100 ಯೂನಿಟ್ ವಿದ್ಯುತ್ ಉಚಿತ, ಸಿಎಂ ಗೆಹ್ಲೋಟ್ ಘೋಷಣೆ: ಕರ್ನಾಟಕದಲ್ಲಿ ಯಾವಾಗ?

ರಾಜಸ್ಥಾನ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್​ ಮಹತ್ವದ ಘೋಷಣೆ ಮಾಡಿದ್ದು, ಜೂನ್ 1 ರಿಂದ ಜಾರಿಗೆ ಬರುವಂತೆ ಪ್ರತಿ ಮನೆಗೂ 100 ಯೂನಿಟ್ ವಿದ್ಯುತ್ ಉಚಿತವಾಗಿ ಪೂರೈಕೆ ಮಾಡಲಾಗುವುದು ಎಂದು ಘೋಷಿಸಿದ್ದಾರೆ.

Free Electricity in Rajasthan: ರಾಜಸ್ಥಾನದಲ್ಲಿ ಪ್ರತಿ ಮನೆಗೂ 100 ಯೂನಿಟ್ ವಿದ್ಯುತ್ ಉಚಿತ, ಸಿಎಂ ಗೆಹ್ಲೋಟ್ ಘೋಷಣೆ: ಕರ್ನಾಟಕದಲ್ಲಿ ಯಾವಾಗ?
ಅಶೋಕ್ ಗೆಹ್ಲೋಟ್
ನಯನಾ ರಾಜೀವ್
|

Updated on: Jun 01, 2023 | 7:57 AM

Share

ರಾಜಸ್ಥಾನ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್​ ಮಹತ್ವದ ಘೋಷಣೆ ಮಾಡಿದ್ದು, ಜೂನ್ 1 ರಿಂದ ಜಾರಿಗೆ ಬರುವಂತೆ ಪ್ರತಿ ಮನೆಗೂ 100 ಯೂನಿಟ್ ವಿದ್ಯುತ್ ಉಚಿತವಾಗಿ ಪೂರೈಕೆ ಮಾಡಲಾಗುವುದು ಎಂದು ಘೋಷಿಸಿದ್ದಾರೆ. ಈಗ ಹೊಸ ನಿಯಮಗಳ ಪ್ರಕಾರ ರಾಜಸ್ಥಾನದಲ್ಲಿ ಪ್ರತಿ ತಿಂಗಳು 100 ಯೂನಿಟ್ ವಿದ್ಯುತ್ ಬಳಕೆ ಮಾಡುವವರ ಬಿಲ್ ಸಂಪೂರ್ಣ ಶೂನ್ಯವಾಗಲಿದೆ. 100 ಯೂನಿಟ್‌ಗಿಂತ ಹೆಚ್ಚು ವಿದ್ಯುತ್ ಖರ್ಚು ಮಾಡುವ ಕುಟುಂಬಗಳು ಅವರು 100 ಯುನಿಟ್‌ಗಳ ರಿಯಾಯಿತಿಯನ್ನು ಸಹ ಪಡೆಯುತ್ತಾರೆ. ಅಂದರೆ 100 ಯೂನಿಟ್ ಗಿಂತ ಹೆಚ್ಚು ವಿದ್ಯುತ್ ಬಳಕೆ ಮಾಡಿದರೂ ಸಂಪೂರ್ಣ ಬಿಲ್​ನಲ್ಲಿ 100 ಯೂನಿಟ್ ಕಡಿತವಾಗುತ್ತದೆ.

ಹಣದುಬ್ಬರ ಪರಿಹಾರ ಶಿಬಿರಗಳಲ್ಲಿ ಸಾರ್ವಜನಿಕರೊಂದಿಗೆ ಮಾತನಾಡಿದ ನಂತರ, ರಾಜಸ್ಥಾನದಲ್ಲಿ ವಿದ್ಯುತ್ ಬಿಲ್‌ಗಳಲ್ಲಿ ನೀಡಲಾದ ಸ್ಲ್ಯಾಬ್‌ವಾರು ವಿನಾಯಿತಿಯನ್ನು ಬದಲಾಯಿಸಬೇಕು ಎಂದು ಸಲಹೆ ನೀಡಲಾಯಿತು ಎಂದು ಗೆಹ್ಲೋಟ್ ಹೇಳಿದರು. ಇದರ ಬೆನ್ನಲ್ಲೇ ಗೆಹ್ಲೋಟ್ ಸರ್ಕಾರ ಎಲ್ಲರಿಗೂ 100 ಯೂನಿಟ್ ವರೆಗೆ ಉಚಿತ ವಿದ್ಯುತ್ ಉಡುಗೊರೆ ನೀಡಿದೆ.

ಮತ್ತಷ್ಟು ಓದಿ:Free power supply: ಉಚಿತ ವಿದ್ಯುತ್ ಪೂರೈಕೆ ಕುರಿತು ಸೃಷ್ಟಿಯಾಗಿರುವ ಗೊಂದಲವನ್ನು ಸರ್ಕಾರ ಕೂಡಲೇ ಪರಿಹರಿಸಬೇಕು, ಎಸ್ಕಾಂ ಸಿಬ್ಬಂದಿ ಅಪಾಯದಲ್ಲಿದೆ!

200 ಯೂನಿಟ್ ವರೆಗೆ ವಿದ್ಯುತ್ ಬಳಸುವ ಕುಟುಂಬಗಳಿಗೂ ಹೆಚ್ಚಿನ ರಿಯಾಯಿತಿ ನೀಡಲಾಗಿದೆ. ಇದರಲ್ಲಿ, ಮೊದಲ 100 ಯುನಿಟ್‌ಗಳು ಉಚಿತವಾಗಿರುತ್ತದೆ, ಆದರೆ ಅದಕ್ಕಿಂತ ಹೆಚ್ಚಿನ ಬಳಕೆಯ ಮೇಲೆ, ಸ್ಥಿರ ಶುಲ್ಕಗಳು, ಇಂಧನ ಹೆಚ್ಚುವರಿ ಶುಲ್ಕಗಳು ಸೇರಿದಂತೆ ಎಲ್ಲಾ ಇತರ ಶುಲ್ಕಗಳನ್ನು ಮನ್ನಾ ಮಾಡಲಾಗುತ್ತದೆ.

ವರ್ಷಾಂತ್ಯಕ್ಕೆ ವಿಧಾನಸಭೆ ಚುನಾವಣೆ ಎದುರಿಸುವ ರಾಜಸ್ಥಾನದಲ್ಲಿ ಆಡಳಿತಾರೂಢ ಕಾಂಗ್ರೆಸ್‌ನಿಂದ ಜನರ ಮನಗೆಲ್ಲಲು ಉಚಿತ ವಿದ್ಯುತ್‌ ಯೋಜನೆ ಘೋಷಣೆ ಮಾಡಲಾಗಿದೆ ಎಂದು ಪ್ರತಿಪಕ್ಷ ಬಿಜೆಪಿ ಆರೋಪಿಸಿದೆ. ವಿದ್ಯುತ್​ ಅನ್ನು ಎಷ್ಟೇ ಬಳಕೆ ಮಾಡಿದರೂ, ಬಳಕೆದಾರರು ಮೊದಲ 100 ಯೂನಿಟ್‌ಗಳಿಗೆ ಯಾವುದೇ ವಿದ್ಯುತ್ ಶುಲ್ಕವನ್ನು ಪಾವತಿಸಬೇಕಾಗಿಲ್ಲ.

ದೇಶದ ಇತರೆ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
ಗ್ಯಾಸ್​ ಇಲ್ಲಿದೇ ಬೆಂಗಳೂರಿನ ಗಲ್ಲಿ ಗಲ್ಲಿಯಲ್ಲೂ ನಿಂತ ಆಟೋಗಳು!
ಗ್ಯಾಸ್​ ಇಲ್ಲಿದೇ ಬೆಂಗಳೂರಿನ ಗಲ್ಲಿ ಗಲ್ಲಿಯಲ್ಲೂ ನಿಂತ ಆಟೋಗಳು!
ಅಧಿಕಾರಿ ಮೇಲೆ ಪಾಲಿಕೆ ಸದಸ್ಯ ಹಲ್ಲೆ: ಪ್ರಕರಣದಲ್ಲಿ​ ಶಾಸಕ ರೆಡ್ಡಿ ಎಂಟ್ರಿ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯ ಹಲ್ಲೆ: ಪ್ರಕರಣದಲ್ಲಿ​ ಶಾಸಕ ರೆಡ್ಡಿ ಎಂಟ್ರಿ
ಹಿಂದೆ ಸಂಬಂಧಿಯನ್ನ ಕೊಂದ್ರು, ಈಗ ಅಳಿಯನ ಹತ್ಯೆ:ಮಾಜಿ ಸಚಿವ ಬೆಳಮಗಿ ಕಣ್ಣೀರು
ಹಿಂದೆ ಸಂಬಂಧಿಯನ್ನ ಕೊಂದ್ರು, ಈಗ ಅಳಿಯನ ಹತ್ಯೆ:ಮಾಜಿ ಸಚಿವ ಬೆಳಮಗಿ ಕಣ್ಣೀರು
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ