Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಜರಂಗ ದಳಕ್ಕೆ ನಿರ್ಬಂಧ ಹೇರುವ ಅಗತ್ಯವಿಲ್ಲ; ಸಂಸದೀಯ ಸಮಿತಿಗೆ ಫೇಸ್​ಬುಕ್​ ವಿವರಣೆ

ಬಜರಂಗದಳದ ಮೇಲೆ ನಿಷೇಧ ಹೇರುವಂಥ ಸಂಗತಿಗಳು ಫೇಸ್​ಬುಕ್​ನ ಸತ್ಯ ಪರಿಶೀಲನಾ ತಂಡಕ್ಕೆ ಗೋಚರಿಸಿಲ್ಲವೆಂದು ಭಾರತದ ಫೇಸ್​ಬುಕ್ ಭಾರತ ಘಟಕದ ಮುಖ್ಯಸ್ಥ ಅಜಿತ್ ಮೋಹನ್ ಬುಧವಾರ ಸಂಸದೀಯ ಸಮಿತಿಯ ಮುಂದೆ ಹೇಳಿದರು.

ಬಜರಂಗ ದಳಕ್ಕೆ ನಿರ್ಬಂಧ ಹೇರುವ ಅಗತ್ಯವಿಲ್ಲ; ಸಂಸದೀಯ ಸಮಿತಿಗೆ ಫೇಸ್​ಬುಕ್​ ವಿವರಣೆ
ಪ್ರಾತಿನಿಧಿಕ ಚಿತ್ರ
Follow us
guruganesh bhat
| Updated By: Ghanashyam D M | ಡಿ.ಎಂ.ಘನಶ್ಯಾಮ

Updated on:Dec 17, 2020 | 2:18 PM

ದೆಹಲಿ: ಬಜರಂಗದಳದ ಮೇಲೆ ನಿಷೇಧ ಹೇರುವಂಥ ಸಂಗತಿಗಳು ಫೇಸ್​ಬುಕ್​ನ ಸತ್ಯಪರಿಶೀಲನಾ ತಂಡಕ್ಕೆ ಗೋಚರಿಸಿಲ್ಲವೆಂದು ಕಂಪನಿಯ ಭಾರತೀಯ ಘಟಕದ ಮುಖ್ಯಸ್ಥ ಅಜಿತ್ ಮೋಹನ್ ಬುಧವಾರ ಸಂಸದೀಯ ಸಮಿತಿಯ ಮುಂದೆ ಹೇಳಿದರು.

ಅಮೆರಿಕದ ವಾಲ್​ಸ್ಟ್ರೀಟ್ ಜರ್ನಲ್ ದಿನಪತ್ರಿಕೆಯು, ಬಜರಂಗದಳಕ್ಕೆ ವೇದಿಕೆ ಕಲ್ಪಿಸಿಕೊಡುವುದನ್ನು ನಿರ್ಬಂಧಿಸಿದರೆ ಫೇಸ್​ಬುಕ್​ನ ವಹಿವಾಟು ಮತ್ತು ಸಿಬ್ಬಂದಿಗೆ ಅಪಾಯವಾಗುವ ಸಾಧ್ಯತೆ ಇದೆ. ಅದಕ್ಕಾಗಿ ಫೇಸ್​ಬುಕ್​ ಬಜರಂಗದಳದ ಚಟುವಟಿಕೆಗಳಿಗೆ ನಿಷೇಧ ಹೇರುತ್ತಿಲ್ಲ ಎಂದು ವರದಿ ಮಾಡಿದ ಹಿನ್ನೆಲೆಯಲ್ಲಿ ಇದು ತೀವ್ರ ಚರ್ಚೆಗೆ ಗ್ರಾಸವಾಗಿತ್ತು.

ಶಶಿ ತರೂರ್ ನೇತೃತ್ವದ ಸಂಸದೀಯ ಸಮಿತಿಯು ನಾಗರಿಕರ ದತ್ತಾಂಶ ಸುರಕ್ಷತೆಗೆ ಸಂಬಂಧಿಸಿದ ವಿಷಯವನ್ನು ಚರ್ಚಿಸಲು ಮೋಹನ್ ಅವರನ್ನು ಕರೆಸಿಕೊಂಡ ಸಂದರ್ಭದಲ್ಲಿ ಭಾರತೀಯ ಸಾರ್ವಜನಿಕ ನೀತಿ ನಿರ್ದೇಶಕ ಶಿವನಾಥ ತುಕ್ರಲ್ ಕೂಡ ಹಾಜರಿದ್ದರು.

ಅವರನ್ನು ಮತ್ತಷ್ಟು ಪ್ರಶ್ನಿಸಿದ ಬಿಜೆಪಿ ಸಂಸದ ನಿಶಿಕಾಂತ್ ದುಬೆ, ‘ಫೇಸ್​ಬುಕ್​ನಲ್ಲಿ ಬಜರಂಗದಳ ಸಾಮಾಜಿಕ ಮಾಧ್ಯಮ ನೀತಿಗಳನ್ನು ಉಲ್ಲಂಘಿಸಿರುವುದು ನಿಜವಲ್ಲದಿದ್ದರೆ ಫೇಸ್‌ಬುಕ್, ವಾಲ್​ ಸ್ಟ್ರೀಟ್ ಜರ್ನಲ್ ವರದಿಯನ್ನು ಯಾಕೆ ನಿರಾಕರಿಸಲಿಲ್ಲ’ ಎಂದು ಪ್ರಶ್ನಿಸಿದರು.

Published On - 2:17 pm, Thu, 17 December 20

ಮಕ್ಕಳಿಂದ ಶುಚಿಮಾಡಿಸಿದರೆ ಕೂಡಲೇ ಕ್ರಮ ಜರುಗಿಸುತ್ತೇವೆ: ಮಧು ಬಂಗಾರಪ್ಪ
ಮಕ್ಕಳಿಂದ ಶುಚಿಮಾಡಿಸಿದರೆ ಕೂಡಲೇ ಕ್ರಮ ಜರುಗಿಸುತ್ತೇವೆ: ಮಧು ಬಂಗಾರಪ್ಪ
ಕಾಂಗ್ರೆಸ್ ನಾಯಕರ ಒಳಜಗಳಗಳಿಂದ ಸರ್ಕಾರ ಪತನಗೊಳ್ಳಲಿದೆ: ಜಗದೀಶ್ ಶೆಟ್ಟರ್
ಕಾಂಗ್ರೆಸ್ ನಾಯಕರ ಒಳಜಗಳಗಳಿಂದ ಸರ್ಕಾರ ಪತನಗೊಳ್ಳಲಿದೆ: ಜಗದೀಶ್ ಶೆಟ್ಟರ್
CSK ವಿರುದ್ಧದ ಗೆಲುವಿನ ಖುಷಿಯಲ್ಲಿ ವಿರಾಟ್ ಕೊಹ್ಲಿ ಭರ್ಜರಿ ಡ್ಯಾನ್ಸ್
CSK ವಿರುದ್ಧದ ಗೆಲುವಿನ ಖುಷಿಯಲ್ಲಿ ವಿರಾಟ್ ಕೊಹ್ಲಿ ಭರ್ಜರಿ ಡ್ಯಾನ್ಸ್
ಸಿನಿಮೀಯ ರೀತಿಯಲ್ಲಿ ವಾಹನ ಚೇಸ್ ಮಾಡಿ ಗೋವುಗಳ ರಕ್ಷಣೆ: ವಿಡಿಯೋ ನೋಡಿ
ಸಿನಿಮೀಯ ರೀತಿಯಲ್ಲಿ ವಾಹನ ಚೇಸ್ ಮಾಡಿ ಗೋವುಗಳ ರಕ್ಷಣೆ: ವಿಡಿಯೋ ನೋಡಿ
ಹನಿ ಟ್ರ್ಯಾಪ್ ಹಿಂದೆ ಯಾರಿದ್ದಾರೆ ಅಂತ ಪೊಲೀಸರು ಹೇಳಬೇಕು: ಜಾರಕಿಹೊಳಿ
ಹನಿ ಟ್ರ್ಯಾಪ್ ಹಿಂದೆ ಯಾರಿದ್ದಾರೆ ಅಂತ ಪೊಲೀಸರು ಹೇಳಬೇಕು: ಜಾರಕಿಹೊಳಿ
ರಾಜ್ಯಾದ್ಯಂತ ಸುತ್ತಿ ಜನರ ಬಳಿ ಹೋಗ್ತೀನಿ, ನಾನು ಪಲಾಯನವಾದಿಯಲ್ಲ: ಯತ್ನಾಳ್
ರಾಜ್ಯಾದ್ಯಂತ ಸುತ್ತಿ ಜನರ ಬಳಿ ಹೋಗ್ತೀನಿ, ನಾನು ಪಲಾಯನವಾದಿಯಲ್ಲ: ಯತ್ನಾಳ್
ಬಸನಗೌಡ ಯತ್ನಾಳ್ ಇಂದು ವಿಜಯಪುರಕ್ಕೆ ಮರಳುವ ಸಾಧ್ಯತೆ
ಬಸನಗೌಡ ಯತ್ನಾಳ್ ಇಂದು ವಿಜಯಪುರಕ್ಕೆ ಮರಳುವ ಸಾಧ್ಯತೆ
‘ರೀಲ್ಸ್​ ಕೇಸ್.. ಹಹಹ’; ನಗುತ್ತಲೇ ಜೈಲಿನಿಂದ ಹೊರ ಬಂದ ವಿನಯ್-ರಜತ್
‘ರೀಲ್ಸ್​ ಕೇಸ್.. ಹಹಹ’; ನಗುತ್ತಲೇ ಜೈಲಿನಿಂದ ಹೊರ ಬಂದ ವಿನಯ್-ರಜತ್
ಹತ್ಯೆಯಾದ ಮಹಿಳೆಯ ಮೂರನೇ ಗಂಡ ಪತ್ನಿ ಮತ್ತು ಇತರರನ್ನು ಕೊಂದನೇ?
ಹತ್ಯೆಯಾದ ಮಹಿಳೆಯ ಮೂರನೇ ಗಂಡ ಪತ್ನಿ ಮತ್ತು ಇತರರನ್ನು ಕೊಂದನೇ?
WITT: ಟಿವಿ9 ಶೃಂಗಸಭೆಯಲ್ಲಿ ಕೇಂದ್ರ ಸಚಿವರ ಸಂದರ್ಶನ, ಲೈವ್ ನೋಡಿ
WITT: ಟಿವಿ9 ಶೃಂಗಸಭೆಯಲ್ಲಿ ಕೇಂದ್ರ ಸಚಿವರ ಸಂದರ್ಶನ, ಲೈವ್ ನೋಡಿ