AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Parliament Winter Session ರೈತರ ಪ್ರತಿಭಟನೆಯ ವೇಳೆ ಪೊಲೀಸರ ಕ್ರಮದಿಂದಾಗಿ ರೈತರು ಸಾವಿಗೀಡಾಗಿಲ್ಲ: ಕೇಂದ್ರ ಸಚಿವ ತೋಮರ್

Narendra Singh Tomar ರಾಜ್ಯಸಭೆಗೆ ಲಿಖಿತ ಉತ್ತರದಲ್ಲಿ “ರೈತರ ಚಳವಳಿಯಲ್ಲಿ ಮೃತ ರೈತರ ಕುಟುಂಬಗಳಿಗೆ ಪರಿಹಾರ ಇತ್ಯಾದಿ ವಿಷಯಗಳು ಸಂಬಂಧಪಟ್ಟ ರಾಜ್ಯ ಸರ್ಕಾರಗಳದ್ದಾಗಿದೆ. ರೈತರ ಆಂದೋಲನದ ಸಂದರ್ಭದಲ್ಲಿ ಪೊಲೀಸರ ಕ್ರಮದಿಂದ ಯಾವುದೇ ರೈತ ಸಾವನ್ನಪ್ಪಿಲ್ಲ ಎಂದು ಹೇಳಿದ್ದಾರೆ.

Parliament Winter Session ರೈತರ ಪ್ರತಿಭಟನೆಯ ವೇಳೆ ಪೊಲೀಸರ ಕ್ರಮದಿಂದಾಗಿ ರೈತರು ಸಾವಿಗೀಡಾಗಿಲ್ಲ: ಕೇಂದ್ರ ಸಚಿವ ತೋಮರ್
ನರೇಂದ್ರ ಸಿಂಗ್ ತೋಮರ್
TV9 Web
| Updated By: ರಶ್ಮಿ ಕಲ್ಲಕಟ್ಟ|

Updated on: Dec 10, 2021 | 7:00 PM

Share

ದೆಹಲಿ: ವರ್ಷವಿಡೀ ನಡೆದ ರೈತರ ಹೋರಾಟದ (Farmers Protest) ವೇಳೆ ಪೊಲೀಸರ ಕ್ರಮದಿಂದ ಯಾವುದೇ ರೈತ ಸಾವನ್ನಪ್ಪಿಲ್ಲ ಎಂದು ಕೇಂದ್ರ ಕೃಷಿ ಸಚಿವ ನರೇಂದ್ರ ಸಿಂಗ್ ತೋಮರ್(Narendra Singh Tomar) ಶುಕ್ರವಾರ ಹೇಳಿದ್ದಾರೆ. ಕಾಂಗ್ರೆಸ್ ನಾಯಕ ಧೀರಜ್ ಪ್ರಸಾದ್ ಸಾಹು ಮತ್ತು ಎಎಪಿ ನಾಯಕ ಸಂಜಯ್ ಸಿಂಗ್ ಅವರ ಜಂಟಿ ಪ್ರಶ್ನೆಗೆ ಪ್ರತಿಕ್ರಿಯಿಸಿದ ತೋಮರ್, ರಾಜ್ಯಸಭೆಗೆ (Rajya sabha) ಲಿಖಿತ ಉತ್ತರದಲ್ಲಿ “ರೈತರ ಚಳವಳಿಯಲ್ಲಿ ಮೃತ ರೈತರ ಕುಟುಂಬಗಳಿಗೆ ಪರಿಹಾರ ಇತ್ಯಾದಿ ವಿಷಯಗಳು ಸಂಬಂಧಪಟ್ಟ ರಾಜ್ಯ ಸರ್ಕಾರಗಳದ್ದಾಗಿದೆ. ರೈತರ ಆಂದೋಲನದ ಸಂದರ್ಭದಲ್ಲಿ ಪೊಲೀಸರ ಕ್ರಮದಿಂದ ಯಾವುದೇ ರೈತ ಸಾವನ್ನಪ್ಪಿಲ್ಲ ಎಂದು ಹೇಳಿದ್ದಾರೆ. ಇದೀಗ ರದ್ದಾದ ಮೂರು ಹೊಸ ಕೃಷಿ ಕಾನೂನುಗಳ ವಿರುದ್ಧ ರೈತರು ಪ್ರತಿಭಟನೆ ನಡೆಸುತ್ತಿದ್ದರು. ಪ್ರತಿಭಟನಾಕಾರರ ವಿರುದ್ಧದ ಪೊಲೀಸ್ ಪ್ರಕರಣಗಳನ್ನು ಹಿಂಪಡೆಯುವುದು ಮತ್ತು ಕನಿಷ್ಠ ಬೆಂಬಲ ಬೆಲೆ ಸೇರಿದಂತೆ ಅವರ ಪ್ರಮುಖ ಬಾಕಿ ಇರುವ ಬೇಡಿಕೆಗಳನ್ನು ಕೇಂದ್ರ ಸರ್ಕಾರ ಅಂಗೀಕರಿಸಿದ ನಂತರ ದೆಹಲಿ ಗಡಿಯಲ್ಲಿ ವರ್ಷವಿಡೀ ನಡೆದ ಪ್ರತಿಭಟನೆಯನ್ನು ಸಂಯುಕ್ತ ಕಿಸಾನ್ ಮೋರ್ಚಾ (SKM) ಗುರುವಾರ ಸ್ಥಗಿತಗೊಳಿಸಿದೆ.

ಸಚಿವರ ಲಿಖಿತ ಉತ್ತರ

ಸಿಡಿಎಸ್ ಜನರಲ್ ಬಿಪಿನ್ ರಾವತ್ ಮತ್ತು ಕೂನೂರು ಬಳಿ ಹೆಲಿಕಾಪ್ಟರ್ ಅಪಘಾತದಲ್ಲಿ ಇತರ ಸಂತ್ರಸ್ತರಿಗೆ ಗೌರವ ಸಲ್ಲಿಸುವ ಸಲುವಾಗಿ, ವಿರೋಧ ಪಕ್ಷದ ನಾಯಕರು ಇಂದು ಸಂಸತ್ತಿನ ಹೊರಗೆ ಪ್ರತಿಭಟನೆ ಮಾಡುವುದಿಲ್ಲ ಎಂದು ಕಾಂಗ್ರೆಸ್ ನಾಯಕ ಜೈರಾಮ್ ರಮೇಶ್ ಟ್ವೀಟ್ ಮಾಡಿದ್ದಾರೆ.

“ಜನರಲ್ ರಾವತ್ ಮತ್ತು ಇತರರ ಅಂತಿಮ ವಿಧಿಗಳನ್ನು ಇಂದು ಮಧ್ಯಾಹ್ನ ನಡೆಸಲಾಗುತ್ತಿರುವುದರಿಂದ, ಇಂದು ರಾಜ್ಯಸಭೆಯಲ್ಲಿ 12 ವಿರೋಧ ಪಕ್ಷದ ಸಂಸದರನ್ನು ಅಸಂವಿಧಾನಿಕ ಮತ್ತು ಕಾನೂನುಬಾಹಿರ ಅಮಾನತುಗೊಳಿಸುವುದರ ವಿರುದ್ಧ ಪ್ರತಿಪಕ್ಷಗಳು ಪ್ರತಿಭಟನೆಯಿಂದ ದೂರವಿರುತ್ತವೆ” ಎಂದು ಜೈರಾಮ್ ರಮೇಶ್ ಟ್ವೀಟ್ ಮಾಡಿದ್ದಾರೆ.

ನಕಲಿ ಕೊವಿಡ್ ಲಸಿಕೆ, ಲಸಿಕೆ ಶಿಬಿರಗಳು ಉತ್ತರ ಪ್ರದೇಶ, ಮಹಾರಾಷ್ಟ್ರ, ಬಂಗಾಳದಿಂದ ವರದಿಯಾಗಿದೆ: ಸರ್ಕಾರ ಮಹಾರಾಷ್ಟ್ರ, ಪಶ್ಚಿಮ ಬಂಗಾಳ ಮತ್ತು ಉತ್ತರ ಪ್ರದೇಶದಿಂದ ನಕಲಿ ಕೊವಿಡ್-19 ಲಸಿಕೆ ಶಿಬಿರಗಳು ಮತ್ತು ಲಸಿಕೆಗಳ ನಿದರ್ಶನಗಳು ಕೇಂದ್ರ ಸರ್ಕಾರದ ಗಮನಕ್ಕೆ ಬಂದಿವೆ ಎಂದು ಲೋಕಸಭೆಗೆ ಶುಕ್ರವಾರ ತಿಳಿಸಲಾಗಿದೆ. ಈ ಪ್ರಕರಣಗಳ ಬಗ್ಗೆ ತನಿಖೆ ನಡೆಸಿ ಮುಂದೆ ಇಂತಹ ಮೋಸದ ಚಟುವಟಿಕೆಗಳು ಮರುಕಳಿಸದಂತೆ ಕಠಿಣ ಕಾನೂನು ಮತ್ತು ಆಡಳಿತಾತ್ಮಕ ಕ್ರಮಗಳನ್ನು ತೆಗೆದುಕೊಳ್ಳುವಂತೆ ಆರೋಗ್ಯ ಸಚಿವಾಲಯವು ರಾಜ್ಯ ಸರ್ಕಾರಗಳಿಗೆ ಸೂಚಿಸಿದೆ ಎಂದು ಆರೋಗ್ಯ ಖಾತೆ ರಾಜ್ಯ ಸಚಿವೆ ಭಾರತಿ ಪ್ರವೀಣ್ ಪವಾರ್ ಲೋಕಸಭೆಯಲ್ಲಿ ಪ್ರಶ್ನೆಯೊಂದಕ್ಕೆ ಲಿಖಿತ ಉತ್ತರದಲ್ಲಿ ತಿಳಿಸಿದ್ದಾರೆ.

ಲಸಿಕೆ ಕಾರ್ಯಕ್ರಮದ ಆರಂಭದಿಂದಲೂ ದೇಶಾದ್ಯಂತ ಅನುಮೋದಿತ ಕೊವಿಶೀಲ್ಡ್, ಕೊವಾಕ್ಸಿನ್, ಸ್ಪುಟ್ನಿಕ್ ನ ಯಾವುದಾದರೂ  ನಕಲಿ ಲಸಿಕೆಗಳನ್ನು ಸರ್ಕಾರ ಗುರುತಿಸಿದೆಯೇ ಮತ್ತು ನಕಲಿ ಲಸಿಕೆಗಳನ್ನು  ಗುರುತಿಸಲು ಮತ್ತು ತಡೆಯಲು ತೆಗೆದುಕೊಂಡ ಕ್ರಮಗಳ ಕುರಿತು ಪ್ರಶ್ನೆಗೆ ಅವರು ಪ್ರತಿಕ್ರಿಯಿಸಿದರು.

ರೈಲ್ವೆಯಲ್ಲಿ ಪ್ರಯಾಣಿಕರಿಗೆ ಹೊದಿಕೆ ಒದಗಿಸುವ ಮೊದಲು ರೈಲ್ವೇ ಸರಿಯಾದ ನಿರ್ಧಾರ ತೆಗೆದುಕೊಳ್ಳುತ್ತದೆ: ಅಶ್ವಿನಿ ವೈಷ್ಣವ್ ಒಮಿಕ್ರಾನ್ ಭಯದ ಮಧ್ಯೆ ಪ್ರಯಾಣಿಕರಿಗೆ ಹೊದಿಕೆ ಒದಗಿಸುವುದನ್ನು ಪುನರಾರಂಭಿಸುವ ಬಗ್ಗೆ ಯಾವುದೇ ನಿರ್ಧಾರವನ್ನು ತೆಗೆದುಕೊಳ್ಳುವ ಮೊದಲು ರೈಲ್ವೇಗಳು ಸರಿಯಾದ ಶ್ರದ್ಧೆ ತೆಗೆದುಕೊಳ್ಳುತ್ತವೆ ಎಂದು ರೈಲ್ವೇ ಸಚಿವ ಅಶ್ವಿನಿ ವೈಷ್ಣವ್ ರಾಜ್ಯಸಭೆಯಲ್ಲಿ ಹೇಳಿದರು. ಕಳೆದ ತಿಂಗಳು, ರೈಲ್ವೇಯು ರೈಲುಗಳ “ವಿಶೇಷ” ಟ್ಯಾಗ್ ಅನ್ನು ತೆಗೆದುಹಾಕಲು ನಿರ್ಧರಿಸಿತ್ತು. ಅದು ರೈಲು ದರವನ್ನು ಕಡಿಮೆ ಮಾಡಿತು ಮತ್ತು ಬಿಸಿ ಊಟವನ್ನು ಪುನರಾರಂಭಿಸಿತು. ರಿಯಾಯಿತಿಗಳನ್ನು ಮರುಸ್ಥಾಪಿಸುವುದು ಮತ್ತು ಹೊದಿಕೆಗಳನ್ನು ಒದಗಿಸುವುದು ಇನ್ನೂ ನಿರ್ಧರಿಸಲಾಗಿಲ್ಲ.ರಾಷ್ಟ್ರದ ಭದ್ರತೆ ಮತ್ತು ನಾಗರಿಕರ ಆರೋಗ್ಯದ ಬಗ್ಗೆ ತರಾತುರಿಯಲ್ಲಿ ನಿರ್ಧಾರ ತೆಗೆದುಕೊಳ್ಳುವುದಿಲ್ಲ ಎಂದು ವೈಷ್ಣವ್ ಹೇಳಿದ್ದಾರೆ.

ಇದನ್ನೂ ಓದಿ:  ಕೊವಿಡ್ ಲಸಿಕೆ ಅರ್ಹ ಜನಸಂಖ್ಯೆಯ ಶೇ 86 ಮಂದಿಗೆ 1ನೇ ಡೋಸ್ ನೀಡಲಾಗಿದೆ: ಕೇಂದ್ರ ಆರೋಗ್ಯ ಸಚಿವ

ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಕಾಡಾನೆಗಳ ಹಿಂಡು ಡ್ರೋನ್ ಕ್ಯಾಮರಾದಲ್ಲಿ ಸೆರೆ
ಕಾಡಾನೆಗಳ ಹಿಂಡು ಡ್ರೋನ್ ಕ್ಯಾಮರಾದಲ್ಲಿ ಸೆರೆ
Video: ಹಾಸ್ಟೆಲ್​ನಲ್ಲಿ ಮಗನ ಕಾಲಿಗೆ ಸರಪಳಿ ಹಾಕಿ ಕೂರಿಸಿದ ತಂದೆ
Video: ಹಾಸ್ಟೆಲ್​ನಲ್ಲಿ ಮಗನ ಕಾಲಿಗೆ ಸರಪಳಿ ಹಾಕಿ ಕೂರಿಸಿದ ತಂದೆ