AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಜಂತರ್ ಮಂತರ್‌ನಲ್ಲಿ ಯಾವ ಗುಂಡಿನ ದಾಳಿಯೂ ನಡೆದಿಲ್ಲ’; ರಾಹುಲ್ ಗಾಂಧಿಗೆ ಸಚಿವ ಜೆ.ಪಿ. ನಡ್ಡಾ ತಿರುಗೇಟು

ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರ ಆರೋಪಗಳಿಗೆ ಸೋಮವಾರ ತಿರುಗೇಟು ನೀಡಿರುವ ಕೇಂದ್ರ ಸಚಿವ ಜೆ.ಪಿ. ನಡ್ಡಾ, 'ಜಂತರ್ ಮಂತರ್‌ನಲ್ಲಿ ಯಾವುದೇ ಗುಂಡಿನ ದಾಳಿ ನಡೆದಿಲ್ಲ' ಎಂದು ಸ್ಪಷ್ಟಪಡಿಸಿದ್ದಾರೆ. 'ಇಂತಹ ಸುಳ್ಳು ಹೇಳಿಕೆಗಳನ್ನು ನೀಡುವ ಮೂಲಕ ರಾಹುಲ್ ಗಾಂಧಿ ಸಾರ್ವಜನಿಕರನ್ನು ಹಾಗೂ ದೇಶವನ್ನು ದಾರಿ ತಪ್ಪಿಸುತ್ತಿದ್ದಾರೆ' ಎಂದು ಜೆ.ಪಿ ನಡ್ಡಾ ಆರೋಪಿಸಿದ್ದಾರೆ. ಪ್ರತಿಭಟನಾನಿರತ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್‌ಗಳಿಂದ ದಾಳಿ ನಡೆಸಲು ಯಾರು ಆದೇಶ ನೀಡಿದ್ದರು ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ರಾಹುಲ್ ಗಾಂಧಿ ಪ್ರಶ್ನಿಸಿದ ಬೆನ್ನಲ್ಲೇ ಜೆಪಿ ನಡ್ಡಾ ಈ ಪ್ರತಿಕ್ರಿಯೆ ನೀಡಿದ್ದಾರೆ.

'ಜಂತರ್ ಮಂತರ್‌ನಲ್ಲಿ ಯಾವ ಗುಂಡಿನ ದಾಳಿಯೂ ನಡೆದಿಲ್ಲ'; ರಾಹುಲ್ ಗಾಂಧಿಗೆ ಸಚಿವ ಜೆ.ಪಿ. ನಡ್ಡಾ ತಿರುಗೇಟು
Jp Nadda Image Credit source: PTI
ಸುಷ್ಮಾ ಚಕ್ರೆ
|

Updated on: Aug 10, 2026 | 9:39 PM

Share

ನವದೆಹಲಿ, ಆಗಸ್ಟ್ 10: ದೆಹಲಿಯ ಜಂತರ್ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿದ್ದ ವಿದ್ಯಾರ್ಥಿಗಳ ಮೇಲೆ ಯಾವುದೇ ಗುಂಡಿನ ದಾಳಿ ಅಥವಾ ಪೆಲೆಟ್ ಗನ್ ಪ್ರಯೋಗ ನಡೆದಿಲ್ಲ ಎಂದು ಕೇಂದ್ರ ಸಚಿವ ಜೆ.ಪಿ. ನಡ್ಡಾ (JP Nadda) ಸ್ಪಷ್ಟಪಡಿಸಿದ್ದು, ವಿಪಕ್ಷ ನಾಯಕ ರಾಹುಲ್ ಗಾಂಧಿ (Rahul Gandhi) ದೇಶದ ಜನರನ್ನು ದಾರಿ ತಪ್ಪಿಸುತ್ತಿದ್ದಾರೆ ಎಂದು ಆರೋಪಿಸಿದ್ದಾರೆ. ಅಧಿವೇಶನದ ಆರಂಭದಲ್ಲಿ ರಾಹುಲ್ ಗಾಂಧಿ ನೀಟ್ (NEET) ಕುರಿತು ಚರ್ಚೆಗೆ ಪಟ್ಟು ಹಿಡಿದಿದ್ದರು. ಸರ್ಕಾರ ಅದಕ್ಕೆ ಒಪ್ಪಿಕೊಂಡಾಗ ರಾಮಮಂದಿರ ಟ್ರಸ್ಟ್ ವಿಷಯ ಎತ್ತಿದರು. ನಂತರ ಜಂತರ್ ಮಂತರ್ ಘಟನೆಯ ಕುರಿತು ಪ್ರಸ್ತಾಪಿಸಿ ದಿನಕ್ಕೊಂದು ನಿರೂಪಣೆ ಬದಲಾಯಿಸುತ್ತಿದ್ದಾರೆ ಎಂದು ಆರೋಪಿಸಿದರು.

ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ವಿಷಯಗಳನ್ನು ಬದಲಾಯಿಸುತ್ತಾ ಸಂಸತ್ತಿನ ಕಲಾಪಕ್ಕೆ ಅಡ್ಡಿಪಡಿಸುತ್ತಿದ್ದಾರೆ. ಸದನ ನಡೆಯದಂತೆ ತಡೆಯುವುದೇ ಅವರ ಮುಖ್ಯ ಉದ್ದೇಶವಾಗಿದೆ ಎಂದು ಜೆ.ಪಿ ನಡ್ಡಾ ಆರೋಪಿಸಿದ್ದಾರೆ. ರಾಹುಲ್ ಗಾಂಧಿ ಆರಂಭದಲ್ಲಿ ನೀಟ್ (NEET) ಕುರಿತು ಚರ್ಚೆಗೆ ಆಗ್ರಹಿಸಿದ್ದರು. ಆದರೆ, ಸರ್ಕಾರ ಅದಕ್ಕೆ ಒಪ್ಪಿಕೊಂಡಾಗ ತಮ್ಮ ಬೇಡಿಕೆಯನ್ನು ಬದಲಾಯಿಸಿ, ರಾಮಮಂದಿರ ಟ್ರಸ್ಟ್ ಮತ್ತು ಜಂತರ್ ಮಂತರ್ ಘಟನೆಯನ್ನು ಪ್ರಸ್ತಾಪಿಸಿದರು ಎಂದು ಆರೋಗ್ಯ ಸಚಿವ ಜೆ.ಪಿ ನಡ್ಡಾ ಹೇಳಿದ್ದಾರೆ.

ಇದನ್ನೂ ಓದಿ: ಮಹಿಳಾ ಮೀಸಲಾತಿ ವಿಧೇಯಕದ ಕುರಿತು ರಾಹುಲ್ ಗಾಂಧಿ- ಸಚಿವ ಕಿರಣ್ ರಿಜಿಜು ನಡುವೆ ತೀವ್ರ ವಾಕ್ಸಮರ

“ರಾಹುಲ್ ಗಾಂಧಿ ಸಂಸತ್ತಿನಲ್ಲಿ ದಿನಕ್ಕೊಂದು ವಿಷಯವನ್ನು ಬದಲಾಯಿಸುತ್ತಿದ್ದಾರೆ. ಮಾತುಕತೆ ನಡೆಸುವುದು ಅವರ ಉದ್ದೇಶವಲ್ಲ; ಗೊಂದಲ ಸೃಷ್ಟಿಸುವುದಾಗಿದೆ. ಅಧಿವೇಶನದ ಆರಂಭದಲ್ಲಿ ಅವರು ನೀಟ್ ಕುರಿತು ಚರ್ಚೆಗೆ ಆಗ್ರಹಿಸಿದರು. ನಾವು ಅದಕ್ಕೆ ಒಪ್ಪಿದಾಗ ರಾಮಮಂದಿರ ಟ್ರಸ್ಟ್ ವಿಷಯ ಎತ್ತಿದರು, ನಂತರ ಜಂತರ್ ಮಂತರ್ ಘಟನೆಯ ಕುರಿತು ಗೃಹ ಸಚಿವರೇ ಹೇಳಿಕೆ ನೀಡಬೇಕೆಂದು ಪಟ್ಟು ಹಿಡಿದರು. ಸದನ ನಡೆಯಬಾರದು ಎಂಬುದೇ ಅವರ ಉದ್ದೇಶ” ಎಂದಿದ್ದಾರೆ.

“ಅವರಿಗೆ ಸದನ ನಡೆಯುವುದು ಬೇಕಾಗಿಲ್ಲ. ಅದಕ್ಕಾಗಿಯೇ ಅವರು ಕಳೆದ 15 ದಿನಗಳಿಂದ ಕಲಾಪಕ್ಕೆ ಅಡ್ಡಿಪಡಿಸುತ್ತಿದ್ದಾರೆ” ಎಂದು ಹೇಳಿದ ಜೆಪಿ ನಡ್ಡಾ, ಜಂತರ್ ಮಂತರ್ ವಿಷಯದ ಬಗ್ಗೆ ಚರ್ಚಿಸಲು ಸರ್ಕಾರ ಒಪ್ಪಿಕೊಂಡಾಗ, ರಾಹುಲ್ ಗಾಂಧಿ ಅಲ್ಲಿ ಗುಂಡಿನ ದಾಳಿ ನಡೆದಿದೆ ಎಂದು ಹೇಳುವ ಮೂಲಕ ಜನರನ್ನು ದಾರಿ ತಪ್ಪಿಸಲು ಪ್ರಾರಂಭಿಸಿದರು ಎಂದು ಆರೋಪಿಸಿದರು.

ಇದನ್ನೂ ಓದಿ: ‘ಜಾರ್ಖಂಡ್​​ನಲ್ಲಿ ವಿದ್ಯಾರ್ಥಿಗಳ ಮೇಲೆ ಲಾಠಿಚಾರ್ಜ್ ಸರಿಯಲ್ಲ’; ತಮ್ಮದೇ ಸರ್ಕಾರದ ವಿರುದ್ಧ ರಾಹುಲ್ ಗಾಂಧಿ ಟೀಕೆ

“ಇಂದು ಜಂತರ್ ಮಂತರ್ ವಿಷಯದ ಬಗ್ಗೆ ಚರ್ಚಿಸಲು ನಿರ್ಧರಿಸಿದಾಗ ಅಲ್ಲಿ ಯಾವುದೇ ಅಂತಹ ಘಟನೆ ನಡೆಯದಿದ್ದರೂ, ಗುಂಡಿನ ದಾಳಿ ನಡೆದಿದೆ ಎಂದು ಹೇಳುವ ಮೂಲಕ ಅವರು ಜನರನ್ನು ಮತ್ತು ದೇಶವನ್ನು ದಾರಿ ತಪ್ಪಿಸಲು ತೊಡಗಿದರು” ಎಂದು ಅವರು ಹೇಳಿದರು.

ಸಂಸತ್ತಿನಲ್ಲಿ ಪ್ರತಿಯೊಂದು ಪ್ರಶ್ನೆಗೂ ಉತ್ತರಿಸಲು ಗೃಹ ಸಚಿವರು ಸಿದ್ಧರಿದ್ದಾರೆ ಎಂದು ಹೇಳಿದ ಜೆಪಿ ನಡ್ಡಾ, “ನಾನು ರಾಹುಲ್ ಗಾಂಧಿಯವರಿಗೆ ಮತ್ತೊಮ್ಮೆ ಸವಾಲು ಹಾಕುತ್ತೇನೆ. ಸದನಕ್ಕೆ ಬನ್ನಿ. ನಾವು ಚರ್ಚೆಗೆ ಸಿದ್ಧರಿದ್ದೇವೆ ಮತ್ತು ನಿಮಗೆ ತಕ್ಕ ಉತ್ತರ ಸಿಗಲಿದೆ. ಅಪಪ್ರಚಾರ ಹರಡಬೇಡಿ. ಜಂತರ್ ಮಂತರ್‌ನಲ್ಲಿ ಯಾವುದೇ ಗುಂಡು ಹಾರಿಸಿಲ್ಲ ಅಥವಾ ಅಲ್ಲಿ ಗುಂಡು ಹಾರಿಸಲು ಯಾವುದೇ ಆದೇಶ ನೀಡಿರಲಿಲ್ಲ” ಎಂದು ಹೇಳಿದ್ದಾರೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಆಸ್ಪತ್ರೆಯಲ್ಲಿ ಚೆನ್ನಮ್ಮರ ಕೊನೆ ಕ್ಷಣಗಳನ್ನ ಹೇಳಿ ಗದ್ಗದಿತರಾದ ದೇವೇಗೌಡ್ರು
ಆಸ್ಪತ್ರೆಯಲ್ಲಿ ಚೆನ್ನಮ್ಮರ ಕೊನೆ ಕ್ಷಣಗಳನ್ನ ಹೇಳಿ ಗದ್ಗದಿತರಾದ ದೇವೇಗೌಡ್ರು
‘ಯಶ್ ಈಗ ರಾಜ್ಯ, ದೇಶ ಗೆದ್ದಾಗಿದೆ, ವಿಶ್ವವನ್ನೂ ಗೆಲ್ತಾರೆ’; ಅಜಯ್ ರಾವ್
‘ಯಶ್ ಈಗ ರಾಜ್ಯ, ದೇಶ ಗೆದ್ದಾಗಿದೆ, ವಿಶ್ವವನ್ನೂ ಗೆಲ್ತಾರೆ’; ಅಜಯ್ ರಾವ್
ರಾಸಾಯನಿಕ ತ್ಯಾಜ್ಯ: 3 ಕೈಗಾರಿಕೆ ಮುಚ್ಚಲು ಈಶ್ವರ ಖಂಡ್ರೆ ಸೂಚನೆ
ರಾಸಾಯನಿಕ ತ್ಯಾಜ್ಯ: 3 ಕೈಗಾರಿಕೆ ಮುಚ್ಚಲು ಈಶ್ವರ ಖಂಡ್ರೆ ಸೂಚನೆ
ಮಕ್ಕಳ ಪಿಕ್ಕಿ ಈಟಿಂಗ್ ಕಡಿಮೆ ಮಾಡೋದು ಹೇಗೆ?
ಮಕ್ಕಳ ಪಿಕ್ಕಿ ಈಟಿಂಗ್ ಕಡಿಮೆ ಮಾಡೋದು ಹೇಗೆ?
ಜೆಡಿಎಸ್ ಪಾದಯಾತ್ರೆ ಬಗ್ಗೆ ಪಿಸು ಮಾತು ವೈರಲ್: ಸ್ಪಷ್ಟನೆ ನೀಡಿದ ವಿಜಯೇಂದ್ರ
ಜೆಡಿಎಸ್ ಪಾದಯಾತ್ರೆ ಬಗ್ಗೆ ಪಿಸು ಮಾತು ವೈರಲ್: ಸ್ಪಷ್ಟನೆ ನೀಡಿದ ವಿಜಯೇಂದ್ರ
ಕೊಡಗು: ಪ್ರವಾಸಿಗರ ಬಸ್ ಪಲ್ಟಿ; 22ಕ್ಕೂ ಹೆಚ್ಚು ಜನರಿಗೆ ಗಾಯ
ಕೊಡಗು: ಪ್ರವಾಸಿಗರ ಬಸ್ ಪಲ್ಟಿ; 22ಕ್ಕೂ ಹೆಚ್ಚು ಜನರಿಗೆ ಗಾಯ
ಜೆಡಿಎಸ್ ಪಾದಯಾತ್ರೆ ತಡೆದ ಪೊಲೀಸರು: ಭಾರಿ ಹೈಡ್ರಾಮಾ
ಜೆಡಿಎಸ್ ಪಾದಯಾತ್ರೆ ತಡೆದ ಪೊಲೀಸರು: ಭಾರಿ ಹೈಡ್ರಾಮಾ
ಬೆಂಗಳೂರಲ್ಲಿ ಅಬ್ಬರಿಸಿದ ವರುಣ: ಕೆರೆಗಳಂತಾದ ರಸ್ತೆಗಳು; ಸವಾರರು ಪರದಾಟ
ಬೆಂಗಳೂರಲ್ಲಿ ಅಬ್ಬರಿಸಿದ ವರುಣ: ಕೆರೆಗಳಂತಾದ ರಸ್ತೆಗಳು; ಸವಾರರು ಪರದಾಟ
ಕಾವೇರಿ ನೀರು ವಿವಾದ: ತಮಿಳುನಾಡು ಅರ್ಜಿ ವಿಚಾರಣೆಗೆ ಸುಪ್ರೀಂ ಸಮ್ಮತಿ
ಕಾವೇರಿ ನೀರು ವಿವಾದ: ತಮಿಳುನಾಡು ಅರ್ಜಿ ವಿಚಾರಣೆಗೆ ಸುಪ್ರೀಂ ಸಮ್ಮತಿ
ಬಿಡದಿ ಟೌನ್​ಶಿಪ್​ ಯೋಜನೆಯ ಹಿಂದಿನ ಉದ್ದೇಶ ಏನು? ಸಿಎಂಗೆ ದೇವೇಗೌಡ ಪ್ರಶ್ನೆ
ಬಿಡದಿ ಟೌನ್​ಶಿಪ್​ ಯೋಜನೆಯ ಹಿಂದಿನ ಉದ್ದೇಶ ಏನು? ಸಿಎಂಗೆ ದೇವೇಗೌಡ ಪ್ರಶ್ನೆ