AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜನಸಂಖ್ಯೆ ನಿಯಂತ್ರಣಕ್ಕೆ ಮುಂದಾದ ಉತ್ತರ ಪ್ರದೇಶ; ಎರಡು ಮಕ್ಕಳ ನೀತಿ ಉಲ್ಲಂಘಿಸಿದರೆ ಸರ್ಕಾರಿ ಸೌಲಭ್ಯಗಳಿಲ್ಲ, ನೌಕರಿಯೂ ಸಿಗೋಲ್ಲ

Uttar Pradesh: ಬಡತನ ರೇಖೆಗಿಂತ ಕೆಳಗೆ ಇದ್ದು, ಸ್ವಯಂಪ್ರೇರಿತರಾಗಿ ಒಂದೇ ಮಗುವನ್ನು ಹೊಂದುವ ದಂಪತಿಗೆ ಸರ್ಕಾರದಿಂದ ಹಣಕಾಸಿನ ನೆರವು ನೀಡಲಾಗುತ್ತದೆ.

ಜನಸಂಖ್ಯೆ ನಿಯಂತ್ರಣಕ್ಕೆ ಮುಂದಾದ ಉತ್ತರ ಪ್ರದೇಶ; ಎರಡು ಮಕ್ಕಳ ನೀತಿ ಉಲ್ಲಂಘಿಸಿದರೆ ಸರ್ಕಾರಿ ಸೌಲಭ್ಯಗಳಿಲ್ಲ, ನೌಕರಿಯೂ ಸಿಗೋಲ್ಲ
ಯೋಗಿ ಆದಿತ್ಯನಾಥ
TV9 Web
| Edited By: |

Updated on:Jul 10, 2021 | 2:49 PM

Share

ಭಾರತದಲ್ಲಿ ಅತ್ಯಂತ ಹೆಚ್ಚು ಜನಸಂಖ್ಯೆ ಹೊಂದಿರುವ ಉತ್ತರ ಪ್ರದೇಶ (Uttar Pradesh) ಇದೀಗ ಜನಸಂಖ್ಯೆ ನಿಯಂತ್ರಣಾ ನೀತಿ ಜಾರಿಗೊಳಿಸಲು ಮುಂದಾಗಿದೆ. ಈ ಸಂಬಂಧ ಮೊದಲ ಕರಡನ್ನು ಶುಕ್ರವಾರ ಬಿಡುಗಡೆ ಮಾಡಿದ್ದು, ಜನರಿಂದ ಪ್ರತಿಕ್ರಿಯೆ, ಆಕ್ಷೇಪಣೆಗಳನ್ನು ಆಹ್ವಾನಿಸಿದೆ. ಒಂದು ಅಥವಾ ಎರಡು ಮಕ್ಕಳನ್ನು ಹೊಂದಿರುವ ಕುಟುಂಬಕ್ಕೆ ಪ್ರೋತ್ಸಾಹಕ ಸೌಲಭ್ಯ ನೀಡುವ ಮತ್ತು ಎರಡಕ್ಕಿಂತಲೂ ಹೆಚ್ಚು ಮಕ್ಕಳನ್ನು ಹೊಂದುವವರಿಗೆ ಕೆಲವು ಸೌಲಭ್ಯಗಳನ್ನು ಕಡಿತ ಮಾಡುವ ಬಗ್ಗೆ ಈ ಮಸೂದೆಯಲ್ಲಿ ಉಲ್ಲೇಖವಾಗಿದೆ.

ಈ ಎರಡು ಮಕ್ಕಳ ನೀತಿ ಜಾರಿಯಾದ ಕ್ಷಣದಿಂದ ಇಬ್ಬರಿಗಿಂತ ಹೆಚ್ಚು ಮಕ್ಕಳನ್ನು ಹೊಂದುವ ಯಾವುದೇ ಕುಟುಂಬ ಸರ್ಕಾರದ ಕಲ್ಯಾಣ ಯೋಜನೆಗಳಿಂದ ನಿರ್ಬಂಧಿತಗೊಳ್ಳುತ್ತದೆ. ಅಂದರೆ ಅವರಿಗೆ ಸರ್ಕಾರ ಅಭಿವೃದ್ಧಿ ಯೋಜನೆಗಳು ಸಿಗುವುದಿಲ್ಲ. ಇಬ್ಬರಿಗಿಂತ ಹೆಚ್ಚಿನ ಮಕ್ಕಳನ್ನು ಹೊಂದುವವರಿಗೆ ಸ್ಥಳೀಯ ಸಂಸ್ಥೆ ಚುನಾವಣೆಗಳಲ್ಲಿ ಸ್ಪರ್ಧಿಸಲು ಅವಕಾಶ ಇರುವುದಿಲ್ಲ. ಅಷ್ಟೇ ಅಲ್ಲ, ರಾಜ್ಯ ಸರ್ಕಾರಿ ಕೆಲಸಗಳಿಗೆ ಅರ್ಜಿ ಸಲ್ಲಿಸುವ ಅರ್ಹತೆಯನ್ನೂ ಅವರು ಕಳೆದುಕೊಳ್ಳುತ್ತಾರೆ. ಈಗಾಗಲೇ ಮೂರು ಮಕ್ಕಳನ್ನು ಹೊಂದಿರುವವರೂ ಇದೆಲ್ಲ ನಿಯಮಗಳು ಅನ್ವಯ ಆಗುತ್ತದೆ. ಸರ್ಕಾರಿ ಸೌಲಭ್ಯಗಳು ಮರೀಚಿಕೆ ಆಗಲಿವೆ.

ಪ್ರೋತ್ಸಾಹಕಗಳೇನು? ಇನ್ನು ಈ ಎರಡು ಮಕ್ಕಳ ನೀತಿಯನ್ನು ಹೆಚ್ಚೆಚ್ಚು ಜನರು ಅಳವಡಿಸಿಕೊಳ್ಳಬೇಕು ಎಂಬ ದೃಷ್ಟಿಯಿಂದ ಕೆಲವು ಪ್ರೋತ್ಸಾಹಕ ಸೌಲಭ್ಯಗಳನ್ನೂ ಈ ಮಸೂದೆಯಲ್ಲಿ ಉಲ್ಲೇಖಿಸಲಾಗಿದೆ. ಅದರ ಅನ್ವಯ ಈ ಎರಡು ಮಕ್ಕಳ ನೀತಿಯನ್ನು ಸ್ವಯಂಪ್ರೇರಿತವಾಗಿ ಅಳವಡಿಸಿಕೊಂಡು, ಸಂತಾನಶಕ್ತಿ ಹರಣ ಚಿಕಿತ್ಸೆಗೆ ಒಳಗಾಗುವ ಕುಟುಂಬಕ್ಕೆ ಕೆಲವು ಸೌಕರ್ಯಗಳನ್ನು ಸರ್ಕಾರ ನೀಡಲಿದೆ. ಹಾಗೇ ನೀರು, ವಿದ್ಯುತ್​​ ದರ ಮತ್ತು ಮನೆ ತೆರಿಗೆಗಳಲ್ಲಿ ರಿಯಾಯಿತಿ ಕೊಡಲಿದೆ. ಇನ್ನು ಒಂದೇ ಮಗುವನ್ನು ಹೊಂದಲು ಸ್ವಯಂಪ್ರೇರಿತವಾಗಿ ನಿರ್ಧಾರ ತೆಗೆದುಕೊಳ್ಳುವ ದಂಪತಿಗೆ, ಆ ಮಗುವಿಗೆ 20 ವರ್ಷ ತುಂಬುವವರಿಗೆ ಉಚಿತ ವೈದ್ಯಕೀಯ ಸೌಲಭ್ಯ ಹಾಗೂ ಆರೋಗ್ಯ ವಿಮೆ ಸೌಲಭ್ಯ ನೀಡಲಾಗುವುದು. ಶಿಕ್ಷಣದಲ್ಲೂ ಸಹ ಅಂಥ ಮಕ್ಕಳಿಗೆ ಆದ್ಯತೆ ಇರುತ್ತದೆ. ಪದವಿ ಹಂತದವರೆಗೂ ಉಚಿತ ಶಿಕ್ಷಣ, ಉನ್ನತ ವ್ಯಾಸಂಗಕ್ಕಾಗಿ ಸ್ಕಾಲರ್​ಶಿಪ್​ ಸೌಕರ್ಯ ನೀಡಲಾಗುವುದು ಎಂದು ಮಸೂದೆಯಲ್ಲಿ ಉಲ್ಲೇಖಿಸಲಾಗಿದೆ. ಇನ್ನು ಬಡತನ ರೇಖೆಗಿಂತ ಕೆಳಗೆ ಇದ್ದು, ಸ್ವಯಂಪ್ರೇರಿತರಾಗಿ ಒಂದೇ ಮಗುವನ್ನು ಹೊಂದುವ ದಂಪತಿಗೆ ಸರ್ಕಾರದಿಂದ ಹಣಕಾಸಿನ ನೆರವು ನೀಡಲಾಗುತ್ತದೆ. ಆ ಮಗು ಗಂಡಾಗಿದ್ದರೆ ದಂಪತಿಗೆ 80,000 ರೂ. ಮತ್ತು ಹೆಣ್ಣಾಗಿದ್ದರೆ 1 ಲಕ್ಷ ರೂ.ನೀಡುವುದಾಗಿ ಮಸೂದೆ ವಿವರಿಸಿದೆ.

ಇದನ್ನೂ ಓದಿ: SBI savings account: ಈ ಉಳಿತಾಯ ಖಾತೆದಾರರಿಗೆ ಎಸ್​ಬಿಐನಿಂದ ರೂ. 2 ಲಕ್ಷದ ಉಚಿತ ಇನ್ಷೂರೆನ್ಸ್

No Government Job for those with more than two kids in Uttarpradesh Draft introduced

Published On - 2:49 pm, Sat, 10 July 21

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ