AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗಲ್ಲು ಗುಲ್ಲು ಇನ್ನೂ ಜೀವಂತ.. ನಿರ್ಭಯಾ ಹಂತಕರಿಗೆ ಸದ್ಯಕ್ಕೆ ಗಲ್ಲು ಶಿಕ್ಷೆ ಜಾರಿ ಇಲ್ಲ

ದೆಹಲಿ: ನಿರ್ಭಯಾ ಸಾಮೂಹಿಕ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ಅಪರಾಧಿಗಳಿಗೆ ನಾಳೆ ನಿಗದಿಯಾಗಿದ್ದ ಗಲ್ಲು ಶಿಕ್ಷೆ ಮತ್ತೆ ಮುಂದೂಡಿಕೆಯಾಗಿದೆ. ನಿಗದಿಯಂತೆ ನಾಳೆ ಗಲ್ಲು ಶಿಕ್ಷೆ ಜಾರಿ ಮಾಡುವಂತಿಲ್ಲ. ಹೊಸ ಡೆತ್​ ವಾರಂಟ್ ನೀಡಿದ ಬಳಿಕವಷ್ಟೇ ಗಲ್ಲು ಶಿಕ್ಷೆ ಜಾರಿ ಮಾಡಬೇಕು ಎಂದು ದೆಹಲಿಯ ಪಟಿಯಾಲ ಹೌಸ್ ಕೋರ್ಟ್​ ಆದೇಶಿಸಿದೆ. ಆದೇಶ ಪ್ರಕಟವಾಗ್ತಿದ್ದಂತೆ ಕುಸಿದು ಬಿದ್ದ ನಿರ್ಭಯಾ ತಾಯಿ: ಈ ಹಿಂದೆ ಹೊರಡಿಸಿದ್ದ ಡೆತ್​ ವಾರಂಟ್​ಗೆ ತಡೆಯಾಜ್ಞೆ ನೀಡುತ್ತಿದ್ದಂತೆ ಕೋರ್ಟ್​ ಆವರಣದಲ್ಲೇ ನಿರ್ಭಯಾ ತಾಯಿ ಕುಸಿದು ಬಿದ್ದಿದ್ದಾರೆ. ಅಪರಾಧಿಗಳಿಗೆ […]

ಗಲ್ಲು ಗುಲ್ಲು ಇನ್ನೂ ಜೀವಂತ.. ನಿರ್ಭಯಾ ಹಂತಕರಿಗೆ ಸದ್ಯಕ್ಕೆ ಗಲ್ಲು ಶಿಕ್ಷೆ ಜಾರಿ ಇಲ್ಲ
ಸಾಧು ಶ್ರೀನಾಥ್​
|

Updated on:Mar 02, 2020 | 6:04 PM

Share

ದೆಹಲಿ: ನಿರ್ಭಯಾ ಸಾಮೂಹಿಕ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ಅಪರಾಧಿಗಳಿಗೆ ನಾಳೆ ನಿಗದಿಯಾಗಿದ್ದ ಗಲ್ಲು ಶಿಕ್ಷೆ ಮತ್ತೆ ಮುಂದೂಡಿಕೆಯಾಗಿದೆ. ನಿಗದಿಯಂತೆ ನಾಳೆ ಗಲ್ಲು ಶಿಕ್ಷೆ ಜಾರಿ ಮಾಡುವಂತಿಲ್ಲ. ಹೊಸ ಡೆತ್​ ವಾರಂಟ್ ನೀಡಿದ ಬಳಿಕವಷ್ಟೇ ಗಲ್ಲು ಶಿಕ್ಷೆ ಜಾರಿ ಮಾಡಬೇಕು ಎಂದು ದೆಹಲಿಯ ಪಟಿಯಾಲ ಹೌಸ್ ಕೋರ್ಟ್​ ಆದೇಶಿಸಿದೆ.

ಆದೇಶ ಪ್ರಕಟವಾಗ್ತಿದ್ದಂತೆ ಕುಸಿದು ಬಿದ್ದ ನಿರ್ಭಯಾ ತಾಯಿ: ಈ ಹಿಂದೆ ಹೊರಡಿಸಿದ್ದ ಡೆತ್​ ವಾರಂಟ್​ಗೆ ತಡೆಯಾಜ್ಞೆ ನೀಡುತ್ತಿದ್ದಂತೆ ಕೋರ್ಟ್​ ಆವರಣದಲ್ಲೇ ನಿರ್ಭಯಾ ತಾಯಿ ಕುಸಿದು ಬಿದ್ದಿದ್ದಾರೆ. ಅಪರಾಧಿಗಳಿಗೆ ಮಾ.3ರಂದು ಗಲ್ಲುಶಿಕ್ಷೆ ನೀಡಬೇಕೆಂದು ಈ ಹಿಂದೆ ದಿನಾಂಕ ನಿಗದಿಪಡಿಸಲಾಗಿತ್ತು. ಆದ್ರೀಗ ದೋಷಿಗಳಿಗೆ ಗಲ್ಲುಶಿಕ್ಷೆ ಮುಂದೂಡಿಕೆ ಬಗ್ಗೆ ಆದೇಶ ಪ್ರಕಟವಾಗ್ತಿದ್ದಂತೆ ಪಟಿಯಾಲ ಹೌಸ್ ಕೋರ್ಟ್​ ಬಳಿ ನಿರ್ಭಯಾ ತಾಯಿ ಕುಸಿದು ಬಿದ್ದಿದ್ದಾರೆ.

ನಿರ್ಭಯಾ ಅತ್ಯಾಚಾರ ಹಾಗೂ ಹತ್ಯೆ ಅಪರಾಧಿಗಳು ನಾಳೆ ನೀಡಬೇಕಿದ್ದ ಗಲ್ಲು ಶಿಕ್ಷೆಗೆ ಮತ್ತೆ ತಡೆ ಬಿದ್ದಿದೆ. ನಾಲ್ವರು ಅಪರಾಧಿಗಳ ಗಲ್ಲು ಶಿಕ್ಷೆ ನಾಳೆ ಬೆಳಗ್ಗೆ 6 ಗಂಟೆಗೆ ಫಿಕ್ಸ್ ಮಾಡಲಾಗಿತ್ತು. ಆದ್ರೆ ಮುಂದಿನ ಆದೇಶದವರೆಗೂ ಅಪರಾಧಿಗಳ ಗಲ್ಲು ಶಿಕ್ಷೆಯನ್ನು ತಡೆಹಿಡಿಯಲಾಗಿದೆ. ಇದಕ್ಕೂ ಮುನ್ನ ಅಪರಾಧಿಯ ಕ್ಷಮಾದಾನ ಅರ್ಜಿಯನ್ನು ರಾಷ್ಟ್ರಪತಿಗಳು ತಿರಸ್ಕರಿಸಿದ್ದರು. ಅಲ್ಲದೆ ಕೋರ್ಟ್ ಕೂಡ ಅಪರಾಧಿಗಳ ಗಲ್ಲು ತಡೆ ಅರ್ಜಿಯನ್ನು ತಿರಸ್ಕರಿಸಲಾಗಿತ್ತು.

ಅಪರಾಧಿಗಳ ಹೋರಾಟದ ಹಾದಿ ಮುಕ್ತಾಯ: ನಿರ್ಭಯಾ ಅಪರಾಧಿಗಳ ಹೋರಾಟದ ಹಾದಿ ಮುಕ್ತಾಯವಾಗಿದೆ. ಸತತವಾಗಿ ನ್ಯಾಯಾಲಯಗಳಲ್ಲಿ ಅರ್ಜಿ ಸಲ್ಲಿಕೆ ಮಾಡ್ತಿದ್ದ ಅಪರಾಧಿಗಳ ಕೊನೆಯ ಕಸರತ್ತಿಗೂ ಕೋರ್ಟ್ ಮನ್ನಣೆ ಕೊಟ್ಟಿಲ್ಲ. ಸಾಕೇತ್ ಜಿಲ್ಲಾ ನ್ಯಾಯಾಲಯ, ದೆಹಲಿ ಹೈಕೋರ್ಟ್, ಸುಪ್ರೀಂಕೋರ್ಟ್ ಗೆ ಹೋದ್ರೂ ಅಪರಾಧಿಗಳಿಗೆ ಗೆಲುವಾಗಿರಲಿಲ್ಲ. ಇದಾದ ಬಳಿಕ ಸುಪ್ರೀಂಕೋರ್ಟ್​ಗೆ ಪುನರ್ ಪರಿಶೀಲನೆ ಅರ್ಜಿ ಹಾಗೂ ಕ್ಯುರೆಟಿವ್ ಅರ್ಜಿ ಸಲ್ಲಿಕೆ ಮಾಡಿದ್ದರು. ಆದ್ರೆ ಎಲ್ಲಾ ಅರ್ಜಿಗಳು ಈಗ ತಿರಸ್ಕೃತಗೊಂಡಿವೆ. ಜೊತೆಗೆ ರಾಷ್ಟ್ರಪತಿಗಳೂ ಕ್ಷಮಾದಾನ ಅರ್ಜಿಯನ್ನೂ ತಿರಸ್ಕರಿಸಿದ್ದಾರೆ.

Published On - 5:50 pm, Mon, 2 March 20

Follow Us
ಗ್ಯಾಸ್​ ಇಲ್ಲಿದೇ ಬೆಂಗಳೂರಿನ ಗಲ್ಲಿ ಗಲ್ಲಿಯಲ್ಲೂ ನಿಂತ ಆಟೋಗಳು!
ಗ್ಯಾಸ್​ ಇಲ್ಲಿದೇ ಬೆಂಗಳೂರಿನ ಗಲ್ಲಿ ಗಲ್ಲಿಯಲ್ಲೂ ನಿಂತ ಆಟೋಗಳು!
ಅಧಿಕಾರಿ ಮೇಲೆ ಪಾಲಿಕೆ ಸದಸ್ಯ ಹಲ್ಲೆ: ಪ್ರಕರಣದಲ್ಲಿ​ ಶಾಸಕ ರೆಡ್ಡಿ ಎಂಟ್ರಿ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯ ಹಲ್ಲೆ: ಪ್ರಕರಣದಲ್ಲಿ​ ಶಾಸಕ ರೆಡ್ಡಿ ಎಂಟ್ರಿ
ಹಿಂದೆ ಸಂಬಂಧಿಯನ್ನ ಕೊಂದ್ರು, ಈಗ ಅಳಿಯನ ಹತ್ಯೆ:ಮಾಜಿ ಸಚಿವ ಬೆಳಮಗಿ ಕಣ್ಣೀರು
ಹಿಂದೆ ಸಂಬಂಧಿಯನ್ನ ಕೊಂದ್ರು, ಈಗ ಅಳಿಯನ ಹತ್ಯೆ:ಮಾಜಿ ಸಚಿವ ಬೆಳಮಗಿ ಕಣ್ಣೀರು
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ