AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗಲ್ಲು ಗುಲ್ಲು ಇನ್ನೂ ಜೀವಂತ.. ನಿರ್ಭಯಾ ಹಂತಕರಿಗೆ ಸದ್ಯಕ್ಕೆ ಗಲ್ಲು ಶಿಕ್ಷೆ ಜಾರಿ ಇಲ್ಲ

ದೆಹಲಿ: ನಿರ್ಭಯಾ ಸಾಮೂಹಿಕ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ಅಪರಾಧಿಗಳಿಗೆ ನಾಳೆ ನಿಗದಿಯಾಗಿದ್ದ ಗಲ್ಲು ಶಿಕ್ಷೆ ಮತ್ತೆ ಮುಂದೂಡಿಕೆಯಾಗಿದೆ. ನಿಗದಿಯಂತೆ ನಾಳೆ ಗಲ್ಲು ಶಿಕ್ಷೆ ಜಾರಿ ಮಾಡುವಂತಿಲ್ಲ. ಹೊಸ ಡೆತ್​ ವಾರಂಟ್ ನೀಡಿದ ಬಳಿಕವಷ್ಟೇ ಗಲ್ಲು ಶಿಕ್ಷೆ ಜಾರಿ ಮಾಡಬೇಕು ಎಂದು ದೆಹಲಿಯ ಪಟಿಯಾಲ ಹೌಸ್ ಕೋರ್ಟ್​ ಆದೇಶಿಸಿದೆ. ಆದೇಶ ಪ್ರಕಟವಾಗ್ತಿದ್ದಂತೆ ಕುಸಿದು ಬಿದ್ದ ನಿರ್ಭಯಾ ತಾಯಿ: ಈ ಹಿಂದೆ ಹೊರಡಿಸಿದ್ದ ಡೆತ್​ ವಾರಂಟ್​ಗೆ ತಡೆಯಾಜ್ಞೆ ನೀಡುತ್ತಿದ್ದಂತೆ ಕೋರ್ಟ್​ ಆವರಣದಲ್ಲೇ ನಿರ್ಭಯಾ ತಾಯಿ ಕುಸಿದು ಬಿದ್ದಿದ್ದಾರೆ. ಅಪರಾಧಿಗಳಿಗೆ […]

ಗಲ್ಲು ಗುಲ್ಲು ಇನ್ನೂ ಜೀವಂತ.. ನಿರ್ಭಯಾ ಹಂತಕರಿಗೆ ಸದ್ಯಕ್ಕೆ ಗಲ್ಲು ಶಿಕ್ಷೆ ಜಾರಿ ಇಲ್ಲ
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​|

Updated on:Mar 02, 2020 | 6:04 PM

Share

ದೆಹಲಿ: ನಿರ್ಭಯಾ ಸಾಮೂಹಿಕ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ಅಪರಾಧಿಗಳಿಗೆ ನಾಳೆ ನಿಗದಿಯಾಗಿದ್ದ ಗಲ್ಲು ಶಿಕ್ಷೆ ಮತ್ತೆ ಮುಂದೂಡಿಕೆಯಾಗಿದೆ. ನಿಗದಿಯಂತೆ ನಾಳೆ ಗಲ್ಲು ಶಿಕ್ಷೆ ಜಾರಿ ಮಾಡುವಂತಿಲ್ಲ. ಹೊಸ ಡೆತ್​ ವಾರಂಟ್ ನೀಡಿದ ಬಳಿಕವಷ್ಟೇ ಗಲ್ಲು ಶಿಕ್ಷೆ ಜಾರಿ ಮಾಡಬೇಕು ಎಂದು ದೆಹಲಿಯ ಪಟಿಯಾಲ ಹೌಸ್ ಕೋರ್ಟ್​ ಆದೇಶಿಸಿದೆ.

ಆದೇಶ ಪ್ರಕಟವಾಗ್ತಿದ್ದಂತೆ ಕುಸಿದು ಬಿದ್ದ ನಿರ್ಭಯಾ ತಾಯಿ: ಈ ಹಿಂದೆ ಹೊರಡಿಸಿದ್ದ ಡೆತ್​ ವಾರಂಟ್​ಗೆ ತಡೆಯಾಜ್ಞೆ ನೀಡುತ್ತಿದ್ದಂತೆ ಕೋರ್ಟ್​ ಆವರಣದಲ್ಲೇ ನಿರ್ಭಯಾ ತಾಯಿ ಕುಸಿದು ಬಿದ್ದಿದ್ದಾರೆ. ಅಪರಾಧಿಗಳಿಗೆ ಮಾ.3ರಂದು ಗಲ್ಲುಶಿಕ್ಷೆ ನೀಡಬೇಕೆಂದು ಈ ಹಿಂದೆ ದಿನಾಂಕ ನಿಗದಿಪಡಿಸಲಾಗಿತ್ತು. ಆದ್ರೀಗ ದೋಷಿಗಳಿಗೆ ಗಲ್ಲುಶಿಕ್ಷೆ ಮುಂದೂಡಿಕೆ ಬಗ್ಗೆ ಆದೇಶ ಪ್ರಕಟವಾಗ್ತಿದ್ದಂತೆ ಪಟಿಯಾಲ ಹೌಸ್ ಕೋರ್ಟ್​ ಬಳಿ ನಿರ್ಭಯಾ ತಾಯಿ ಕುಸಿದು ಬಿದ್ದಿದ್ದಾರೆ.

ನಿರ್ಭಯಾ ಅತ್ಯಾಚಾರ ಹಾಗೂ ಹತ್ಯೆ ಅಪರಾಧಿಗಳು ನಾಳೆ ನೀಡಬೇಕಿದ್ದ ಗಲ್ಲು ಶಿಕ್ಷೆಗೆ ಮತ್ತೆ ತಡೆ ಬಿದ್ದಿದೆ. ನಾಲ್ವರು ಅಪರಾಧಿಗಳ ಗಲ್ಲು ಶಿಕ್ಷೆ ನಾಳೆ ಬೆಳಗ್ಗೆ 6 ಗಂಟೆಗೆ ಫಿಕ್ಸ್ ಮಾಡಲಾಗಿತ್ತು. ಆದ್ರೆ ಮುಂದಿನ ಆದೇಶದವರೆಗೂ ಅಪರಾಧಿಗಳ ಗಲ್ಲು ಶಿಕ್ಷೆಯನ್ನು ತಡೆಹಿಡಿಯಲಾಗಿದೆ. ಇದಕ್ಕೂ ಮುನ್ನ ಅಪರಾಧಿಯ ಕ್ಷಮಾದಾನ ಅರ್ಜಿಯನ್ನು ರಾಷ್ಟ್ರಪತಿಗಳು ತಿರಸ್ಕರಿಸಿದ್ದರು. ಅಲ್ಲದೆ ಕೋರ್ಟ್ ಕೂಡ ಅಪರಾಧಿಗಳ ಗಲ್ಲು ತಡೆ ಅರ್ಜಿಯನ್ನು ತಿರಸ್ಕರಿಸಲಾಗಿತ್ತು.

ಅಪರಾಧಿಗಳ ಹೋರಾಟದ ಹಾದಿ ಮುಕ್ತಾಯ: ನಿರ್ಭಯಾ ಅಪರಾಧಿಗಳ ಹೋರಾಟದ ಹಾದಿ ಮುಕ್ತಾಯವಾಗಿದೆ. ಸತತವಾಗಿ ನ್ಯಾಯಾಲಯಗಳಲ್ಲಿ ಅರ್ಜಿ ಸಲ್ಲಿಕೆ ಮಾಡ್ತಿದ್ದ ಅಪರಾಧಿಗಳ ಕೊನೆಯ ಕಸರತ್ತಿಗೂ ಕೋರ್ಟ್ ಮನ್ನಣೆ ಕೊಟ್ಟಿಲ್ಲ. ಸಾಕೇತ್ ಜಿಲ್ಲಾ ನ್ಯಾಯಾಲಯ, ದೆಹಲಿ ಹೈಕೋರ್ಟ್, ಸುಪ್ರೀಂಕೋರ್ಟ್ ಗೆ ಹೋದ್ರೂ ಅಪರಾಧಿಗಳಿಗೆ ಗೆಲುವಾಗಿರಲಿಲ್ಲ. ಇದಾದ ಬಳಿಕ ಸುಪ್ರೀಂಕೋರ್ಟ್​ಗೆ ಪುನರ್ ಪರಿಶೀಲನೆ ಅರ್ಜಿ ಹಾಗೂ ಕ್ಯುರೆಟಿವ್ ಅರ್ಜಿ ಸಲ್ಲಿಕೆ ಮಾಡಿದ್ದರು. ಆದ್ರೆ ಎಲ್ಲಾ ಅರ್ಜಿಗಳು ಈಗ ತಿರಸ್ಕೃತಗೊಂಡಿವೆ. ಜೊತೆಗೆ ರಾಷ್ಟ್ರಪತಿಗಳೂ ಕ್ಷಮಾದಾನ ಅರ್ಜಿಯನ್ನೂ ತಿರಸ್ಕರಿಸಿದ್ದಾರೆ.

Published On - 5:50 pm, Mon, 2 March 20

Follow Us
sadhu srinath
sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ
Live: ಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣ; ಲೈವ್​​ ನೋಡಿ
Live: ಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣ; ಲೈವ್​​ ನೋಡಿ
ಡಿಸಿಎಂ ಆಗಿ ಆಯ್ಕೆ ಬೆನ್ನಲ್ಲೇ ಪರಮೇಶ್ವರ್​​ ಫಸ್ಟ್​​ ರಿಯಾಕ್ಷನ್​​
ಡಿಸಿಎಂ ಆಗಿ ಆಯ್ಕೆ ಬೆನ್ನಲ್ಲೇ ಪರಮೇಶ್ವರ್​​ ಫಸ್ಟ್​​ ರಿಯಾಕ್ಷನ್​​
ಸಿಎಂ ಆಗುವ ಮುನ್ನವೇ ಡಿಕೆಶಿ ರಾಜಕೀಯ ತಂತ್ರಗಾರಿಕೆ
ಸಿಎಂ ಆಗುವ ಮುನ್ನವೇ ಡಿಕೆಶಿ ರಾಜಕೀಯ ತಂತ್ರಗಾರಿಕೆ
ಡಿಕೆಶಿ ಜೊತೆಗಿನ 25 ವರ್ಷದ ಆತ್ಮೀಯತೆ ಹಂಚಿಕೊಂಡ ಕಡಲೆಕಾಯಿ ವ್ಯಾಪಾರಿ
ಡಿಕೆಶಿ ಜೊತೆಗಿನ 25 ವರ್ಷದ ಆತ್ಮೀಯತೆ ಹಂಚಿಕೊಂಡ ಕಡಲೆಕಾಯಿ ವ್ಯಾಪಾರಿ
ಡಿಕೆಶಿ ಸಿಎಂ, ಪರಮೇಶ್ವರ್-ಡಿಸಿಎಂ: ಇಲ್ಲಿದೆ ಸಚಿವರ ಅಧಿಕೃತ ಲಿಸ್ಟ್
ಡಿಕೆಶಿ ಸಿಎಂ, ಪರಮೇಶ್ವರ್-ಡಿಸಿಎಂ: ಇಲ್ಲಿದೆ ಸಚಿವರ ಅಧಿಕೃತ ಲಿಸ್ಟ್
ಡಿಕೆಶಿ ಪ್ರಮಾಣವಚನ ಕಾರ್ಯಕ್ರಮದ ಬಗ್ಗೆ ನೊಣವಿನಕೆರೆ ಶ್ರೀಗಳು ಹೇಳಿದ್ದಿಷ್ಟು
ಡಿಕೆಶಿ ಪ್ರಮಾಣವಚನ ಕಾರ್ಯಕ್ರಮದ ಬಗ್ಗೆ ನೊಣವಿನಕೆರೆ ಶ್ರೀಗಳು ಹೇಳಿದ್ದಿಷ್ಟು
‘ಬ್ಲಾಸ್ಟ್​’ ಸಿನಿಮಾಗೆ ಬ್ಲಾಸ್ಟ್​ ಮ್ಯೂಸಿಕ್ ಕೊಟ್ಟ ರವಿ ಬಸ್ರೂರು
‘ಬ್ಲಾಸ್ಟ್​’ ಸಿನಿಮಾಗೆ ಬ್ಲಾಸ್ಟ್​ ಮ್ಯೂಸಿಕ್ ಕೊಟ್ಟ ರವಿ ಬಸ್ರೂರು
ಬೆಂಗಳೂರಿನಾದ್ಯಂತ ಡಿಕೆ ಶಿವಕುಮಾರ್ ಫ್ಲೆಕ್ಸ್, ಕಟೌಟ್​​ಗಳ ಅಬ್ಬರ!
ಬೆಂಗಳೂರಿನಾದ್ಯಂತ ಡಿಕೆ ಶಿವಕುಮಾರ್ ಫ್ಲೆಕ್ಸ್, ಕಟೌಟ್​​ಗಳ ಅಬ್ಬರ!
ಕ್ಯಾಪ್ಸಿ ಆರ್ಭಟಕ್ಕೆ ತತ್ತರಿಸಿದ ಟೀಮ್ ಇಂಡಿಯಾ
ಕ್ಯಾಪ್ಸಿ ಆರ್ಭಟಕ್ಕೆ ತತ್ತರಿಸಿದ ಟೀಮ್ ಇಂಡಿಯಾ