AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆಸ್ಪತ್ರೆ ಇಲ್ಲ, ರಸ್ತೆಯೂ ಇಲ್ಲ: 17 ಕಿ.ಮೀ ಹೊತ್ತು ಸಾಗಿದ್ರೂ ಜೀವ ಉಳಿಯಲಿಲ್ಲ!

ಹೈದರಾಬಾದ್​: ಆಂಧ್ರದ ವಿಜಯನಗರಂ ಜಿಲ್ಲೆಯ ಪಲ್ಲಪುದುಂಗಾಡ ಗ್ರಾಮದ ನಾಗರಾಜ್​ಗೆ ಕೆಲ ದಿನಗಳ ಹಿಂದೆ ವಿಪರೀತ ಜ್ವರ ಕಾಣಿಸಿಕೊಂಡಿತ್ತು. ಆಸ್ಪತ್ರೆಗೆ ಹೋಗೋಣ ಅಂದ್ರೆ ಹತ್ತಿರದಲ್ಲಿ ಆಸ್ಪತ್ರೆ ಇಲ್ಲ. ಬೇರೆ ಆಸ್ಪತ್ರೆಗೆ ಸೇರಿಸೋಣ ಅಂದ್ರೆ ಗ್ರಾಮಕ್ಕೆ ಸರಿಯಾದ ರಸ್ತೆ ಇಲ್ಲ. ಹೀಗಾಗಿ ಮನೆಯಲ್ಲೇ ಮದ್ದು ನೀಡಿದ್ರೂ ಯುವಕನ ಸ್ಥಿತಿ ಬಿಗಡಾಯಿಸತೊಡಗಿದೆ. ತಕ್ಷಣ ಎಚ್ಚೆತ್ತುಕೊಂಡ ಕುಟುಂಬಸ್ಥರು ಡೋಲಿ ರೆಡಿ ಮಾಡಿದ್ದಾರೆ. ಅದ್ರಲ್ಲಿ ರೋಗಿಯನ್ನ ಕೂರಿಸಿಕೊಂಡು ಬರೋಬ್ಬರಿ 17 ಕಿಲೋ ಮೀಟರ್ ದೂರ ನಡೆದುಕೊಂಡೇ ಹೋಗಿದ್ದಾರೆ. ಅಲ್ಲಿಂದ ಌಂಬುಲೆನ್ಸ್​ನಲ್ಲಿ ತೆರಳಿ ಆಸ್ಪತ್ರೆಗೆ ಅಡ್ಮಿಟ್ […]

ಆಸ್ಪತ್ರೆ ಇಲ್ಲ, ರಸ್ತೆಯೂ ಇಲ್ಲ: 17 ಕಿ.ಮೀ ಹೊತ್ತು ಸಾಗಿದ್ರೂ ಜೀವ ಉಳಿಯಲಿಲ್ಲ!
ಸಾಧು ಶ್ರೀನಾಥ್​
|

Updated on:Jan 30, 2020 | 10:49 AM

Share

ಹೈದರಾಬಾದ್​: ಆಂಧ್ರದ ವಿಜಯನಗರಂ ಜಿಲ್ಲೆಯ ಪಲ್ಲಪುದುಂಗಾಡ ಗ್ರಾಮದ ನಾಗರಾಜ್​ಗೆ ಕೆಲ ದಿನಗಳ ಹಿಂದೆ ವಿಪರೀತ ಜ್ವರ ಕಾಣಿಸಿಕೊಂಡಿತ್ತು. ಆಸ್ಪತ್ರೆಗೆ ಹೋಗೋಣ ಅಂದ್ರೆ ಹತ್ತಿರದಲ್ಲಿ ಆಸ್ಪತ್ರೆ ಇಲ್ಲ. ಬೇರೆ ಆಸ್ಪತ್ರೆಗೆ ಸೇರಿಸೋಣ ಅಂದ್ರೆ ಗ್ರಾಮಕ್ಕೆ ಸರಿಯಾದ ರಸ್ತೆ ಇಲ್ಲ. ಹೀಗಾಗಿ ಮನೆಯಲ್ಲೇ ಮದ್ದು ನೀಡಿದ್ರೂ ಯುವಕನ ಸ್ಥಿತಿ ಬಿಗಡಾಯಿಸತೊಡಗಿದೆ.

ತಕ್ಷಣ ಎಚ್ಚೆತ್ತುಕೊಂಡ ಕುಟುಂಬಸ್ಥರು ಡೋಲಿ ರೆಡಿ ಮಾಡಿದ್ದಾರೆ. ಅದ್ರಲ್ಲಿ ರೋಗಿಯನ್ನ ಕೂರಿಸಿಕೊಂಡು ಬರೋಬ್ಬರಿ 17 ಕಿಲೋ ಮೀಟರ್ ದೂರ ನಡೆದುಕೊಂಡೇ ಹೋಗಿದ್ದಾರೆ. ಅಲ್ಲಿಂದ ಌಂಬುಲೆನ್ಸ್​ನಲ್ಲಿ ತೆರಳಿ ಆಸ್ಪತ್ರೆಗೆ ಅಡ್ಮಿಟ್ ಮಾಡಿದ್ದಾರೆ. ಆದ್ರೆ ಸೂಕ್ತ ಸಮಯಕ್ಕೆ ಚಿಕಿತ್ಸೆ ಸಿಗದಿದ್ದರಿಂದ ಬಾಳಿ ಬದುಕಬೇಕಿದ್ದ ಯುವಕ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾನೆ.

ಯುವಕನ್ನ ಉಳಿಸಿಕೊಳ್ಳಲು ಇಷ್ಟೆಲ್ಲಾ ಹರಸಾಹಸ ಪಟ್ಟಿದ್ದ ಕುಟುಂಬಸ್ಥರು ಬಳಿಕ ಅದೇ ಡೋಲಿಯಲ್ಲಿ ಯುವಕ ಮೃತದೇಹ ಹೊತ್ತುಕೊಂಡು ಊರಿಗೆ ಬಂದಿದ್ದಾರೆ. ಇದು ಕೇವಲ ವಿಜಯನಗರಂ ಜಿಲ್ಲೆಯ ಸಮಸ್ಯೆಯಲ್ಲ. ವಿಶಾಖಪಟ್ಟಣ ಭಾಗದ ವಿವಿಧ ಗ್ರಾಮಗಳಿಗೆ ರಸ್ತೆ, ಆಸ್ಪತ್ರೆಗಳಿಲ್ಲದೆ ಜನ ಪರದಾಡುತ್ತಿದ್ದಾರೆ.

Published On - 7:58 am, Thu, 30 January 20

ಸಿಡ್ನಿಯ ಬೊಂಡಿ ಬೀಚ್​ನಲ್ಲಿ ಸಾಮೂಹಿಕ ಗುಂಡಿನ ದಾಳಿ, 10 ಮಂದಿ ಸಾವು
ಸಿಡ್ನಿಯ ಬೊಂಡಿ ಬೀಚ್​ನಲ್ಲಿ ಸಾಮೂಹಿಕ ಗುಂಡಿನ ದಾಳಿ, 10 ಮಂದಿ ಸಾವು
ಪರಪ್ಪನ ಅಗ್ರಹಾರ ಮಹಿಳಾ ಪೊಲೀಸ್ ಸಿಬ್ಬಂದಿಗೆ ಠಾಣೆಯಲ್ಲಿ ಸೀಮಂತ
ಪರಪ್ಪನ ಅಗ್ರಹಾರ ಮಹಿಳಾ ಪೊಲೀಸ್ ಸಿಬ್ಬಂದಿಗೆ ಠಾಣೆಯಲ್ಲಿ ಸೀಮಂತ
ಪ್ರೋಮೊನಲ್ಲೇ ಶಾಕ್ ಕೊಟ್ಟ ಬಿಗ್​​ಬಾಸ್: ಮನೆಯಿಂದ ಇಬ್ಬರು ಹೊರಕ್ಕೆ
ಪ್ರೋಮೊನಲ್ಲೇ ಶಾಕ್ ಕೊಟ್ಟ ಬಿಗ್​​ಬಾಸ್: ಮನೆಯಿಂದ ಇಬ್ಬರು ಹೊರಕ್ಕೆ
ದುರಹಂಕಾರದಿಂದ ಬಿಗ್ ಬಾಸ್ ನಿರೂಪಣೆ ಬೇಡ ಅಂತ ನಾನು ಹೇಳಲಿಲ್ಲ: ಸುದೀಪ್
ದುರಹಂಕಾರದಿಂದ ಬಿಗ್ ಬಾಸ್ ನಿರೂಪಣೆ ಬೇಡ ಅಂತ ನಾನು ಹೇಳಲಿಲ್ಲ: ಸುದೀಪ್
ಯಶಸ್ವಿ ಜೈಸ್ವಾಲ್ ಸ್ಫೋಟಕ ಸೆಂಚುರಿ: ಮುಂಬೈ ದಾಖಲೆಯ ರನ್ ಚೇಸ್​
ಯಶಸ್ವಿ ಜೈಸ್ವಾಲ್ ಸ್ಫೋಟಕ ಸೆಂಚುರಿ: ಮುಂಬೈ ದಾಖಲೆಯ ರನ್ ಚೇಸ್​
ಮೊಟ್ಟೆಗಳಲ್ಲಿ ಕ್ಯಾನ್ಸರ್ ಕಾರಕ ಅಂಶ ಪತ್ತೆ?: ಭಾರಿ ಚರ್ಚೆ
ಮೊಟ್ಟೆಗಳಲ್ಲಿ ಕ್ಯಾನ್ಸರ್ ಕಾರಕ ಅಂಶ ಪತ್ತೆ?: ಭಾರಿ ಚರ್ಚೆ
‘ಮಾರ್ಕ್’ ಸಿನಿಮಾದಲ್ಲಿ ಹೀರೋಯಿನ್ ಇಲ್ಲ ಯಾಕೆ? ಉತ್ತರಿಸಿದ ಕಿಚ್ಚ ಸುದೀಪ್
‘ಮಾರ್ಕ್’ ಸಿನಿಮಾದಲ್ಲಿ ಹೀರೋಯಿನ್ ಇಲ್ಲ ಯಾಕೆ? ಉತ್ತರಿಸಿದ ಕಿಚ್ಚ ಸುದೀಪ್
ಪಾಕ್ ವಿರುದ್ಧ ಫ್ಲಾಪ್: ಸುಲಭವಾಗಿ ಔಟಾದ ವೈಭವ್ ಸೂರ್ಯವಂಶಿ
ಪಾಕ್ ವಿರುದ್ಧ ಫ್ಲಾಪ್: ಸುಲಭವಾಗಿ ಔಟಾದ ವೈಭವ್ ಸೂರ್ಯವಂಶಿ
ನಕಲಿ ಪೊಲೀಸರಿಗೆ ಅಸಲಿ ಖಾಕಿ ಶಾಕ್​​: ದರೋಡೆಗಿಳಿದಿದ್ದ ಗ್ಯಾಂಗ್​​ ಅರೆಸ್ಟ್
ನಕಲಿ ಪೊಲೀಸರಿಗೆ ಅಸಲಿ ಖಾಕಿ ಶಾಕ್​​: ದರೋಡೆಗಿಳಿದಿದ್ದ ಗ್ಯಾಂಗ್​​ ಅರೆಸ್ಟ್
ರಜತ್ ಪಾಪದ ಕೊಡ ತುಂಬಿದೆ, ಮನೆಯಿಂದ ಹೊರಗೆ ಕಳಿಸ್ತೀನಿ: ಗಿಲ್ಲಿ ಚಾಲೆಂಜ್
ರಜತ್ ಪಾಪದ ಕೊಡ ತುಂಬಿದೆ, ಮನೆಯಿಂದ ಹೊರಗೆ ಕಳಿಸ್ತೀನಿ: ಗಿಲ್ಲಿ ಚಾಲೆಂಜ್