AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆಸ್ಪತ್ರೆ ಇಲ್ಲ, ರಸ್ತೆಯೂ ಇಲ್ಲ: 17 ಕಿ.ಮೀ ಹೊತ್ತು ಸಾಗಿದ್ರೂ ಜೀವ ಉಳಿಯಲಿಲ್ಲ!

ಹೈದರಾಬಾದ್​: ಆಂಧ್ರದ ವಿಜಯನಗರಂ ಜಿಲ್ಲೆಯ ಪಲ್ಲಪುದುಂಗಾಡ ಗ್ರಾಮದ ನಾಗರಾಜ್​ಗೆ ಕೆಲ ದಿನಗಳ ಹಿಂದೆ ವಿಪರೀತ ಜ್ವರ ಕಾಣಿಸಿಕೊಂಡಿತ್ತು. ಆಸ್ಪತ್ರೆಗೆ ಹೋಗೋಣ ಅಂದ್ರೆ ಹತ್ತಿರದಲ್ಲಿ ಆಸ್ಪತ್ರೆ ಇಲ್ಲ. ಬೇರೆ ಆಸ್ಪತ್ರೆಗೆ ಸೇರಿಸೋಣ ಅಂದ್ರೆ ಗ್ರಾಮಕ್ಕೆ ಸರಿಯಾದ ರಸ್ತೆ ಇಲ್ಲ. ಹೀಗಾಗಿ ಮನೆಯಲ್ಲೇ ಮದ್ದು ನೀಡಿದ್ರೂ ಯುವಕನ ಸ್ಥಿತಿ ಬಿಗಡಾಯಿಸತೊಡಗಿದೆ. ತಕ್ಷಣ ಎಚ್ಚೆತ್ತುಕೊಂಡ ಕುಟುಂಬಸ್ಥರು ಡೋಲಿ ರೆಡಿ ಮಾಡಿದ್ದಾರೆ. ಅದ್ರಲ್ಲಿ ರೋಗಿಯನ್ನ ಕೂರಿಸಿಕೊಂಡು ಬರೋಬ್ಬರಿ 17 ಕಿಲೋ ಮೀಟರ್ ದೂರ ನಡೆದುಕೊಂಡೇ ಹೋಗಿದ್ದಾರೆ. ಅಲ್ಲಿಂದ ಌಂಬುಲೆನ್ಸ್​ನಲ್ಲಿ ತೆರಳಿ ಆಸ್ಪತ್ರೆಗೆ ಅಡ್ಮಿಟ್ […]

ಆಸ್ಪತ್ರೆ ಇಲ್ಲ, ರಸ್ತೆಯೂ ಇಲ್ಲ: 17 ಕಿ.ಮೀ ಹೊತ್ತು ಸಾಗಿದ್ರೂ ಜೀವ ಉಳಿಯಲಿಲ್ಲ!
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​|

Updated on:Jan 30, 2020 | 10:49 AM

Share

ಹೈದರಾಬಾದ್​: ಆಂಧ್ರದ ವಿಜಯನಗರಂ ಜಿಲ್ಲೆಯ ಪಲ್ಲಪುದುಂಗಾಡ ಗ್ರಾಮದ ನಾಗರಾಜ್​ಗೆ ಕೆಲ ದಿನಗಳ ಹಿಂದೆ ವಿಪರೀತ ಜ್ವರ ಕಾಣಿಸಿಕೊಂಡಿತ್ತು. ಆಸ್ಪತ್ರೆಗೆ ಹೋಗೋಣ ಅಂದ್ರೆ ಹತ್ತಿರದಲ್ಲಿ ಆಸ್ಪತ್ರೆ ಇಲ್ಲ. ಬೇರೆ ಆಸ್ಪತ್ರೆಗೆ ಸೇರಿಸೋಣ ಅಂದ್ರೆ ಗ್ರಾಮಕ್ಕೆ ಸರಿಯಾದ ರಸ್ತೆ ಇಲ್ಲ. ಹೀಗಾಗಿ ಮನೆಯಲ್ಲೇ ಮದ್ದು ನೀಡಿದ್ರೂ ಯುವಕನ ಸ್ಥಿತಿ ಬಿಗಡಾಯಿಸತೊಡಗಿದೆ.

ತಕ್ಷಣ ಎಚ್ಚೆತ್ತುಕೊಂಡ ಕುಟುಂಬಸ್ಥರು ಡೋಲಿ ರೆಡಿ ಮಾಡಿದ್ದಾರೆ. ಅದ್ರಲ್ಲಿ ರೋಗಿಯನ್ನ ಕೂರಿಸಿಕೊಂಡು ಬರೋಬ್ಬರಿ 17 ಕಿಲೋ ಮೀಟರ್ ದೂರ ನಡೆದುಕೊಂಡೇ ಹೋಗಿದ್ದಾರೆ. ಅಲ್ಲಿಂದ ಌಂಬುಲೆನ್ಸ್​ನಲ್ಲಿ ತೆರಳಿ ಆಸ್ಪತ್ರೆಗೆ ಅಡ್ಮಿಟ್ ಮಾಡಿದ್ದಾರೆ. ಆದ್ರೆ ಸೂಕ್ತ ಸಮಯಕ್ಕೆ ಚಿಕಿತ್ಸೆ ಸಿಗದಿದ್ದರಿಂದ ಬಾಳಿ ಬದುಕಬೇಕಿದ್ದ ಯುವಕ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾನೆ.

ಯುವಕನ್ನ ಉಳಿಸಿಕೊಳ್ಳಲು ಇಷ್ಟೆಲ್ಲಾ ಹರಸಾಹಸ ಪಟ್ಟಿದ್ದ ಕುಟುಂಬಸ್ಥರು ಬಳಿಕ ಅದೇ ಡೋಲಿಯಲ್ಲಿ ಯುವಕ ಮೃತದೇಹ ಹೊತ್ತುಕೊಂಡು ಊರಿಗೆ ಬಂದಿದ್ದಾರೆ. ಇದು ಕೇವಲ ವಿಜಯನಗರಂ ಜಿಲ್ಲೆಯ ಸಮಸ್ಯೆಯಲ್ಲ. ವಿಶಾಖಪಟ್ಟಣ ಭಾಗದ ವಿವಿಧ ಗ್ರಾಮಗಳಿಗೆ ರಸ್ತೆ, ಆಸ್ಪತ್ರೆಗಳಿಲ್ಲದೆ ಜನ ಪರದಾಡುತ್ತಿದ್ದಾರೆ.

Published On - 7:58 am, Thu, 30 January 20

Follow Us
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಶಾರ್ಟ್​ ಸರ್ಕ್ಯೂಟ್​ಗೆ ಸಿಲಿಂಡರ್​ ಸ್ಫೋಟ; 21 ಲಕ್ಷ ರೂ. ಕಳೆದುಕೊಂಡ ಮಾಲೀಕ
ಶಾರ್ಟ್​ ಸರ್ಕ್ಯೂಟ್​ಗೆ ಸಿಲಿಂಡರ್​ ಸ್ಫೋಟ; 21 ಲಕ್ಷ ರೂ. ಕಳೆದುಕೊಂಡ ಮಾಲೀಕ