Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೊರ್ಬಿ ಸೇತುವೆ ದುರಂತದಲ್ಲಿ ಯಾರೊಬ್ಬರೂ ನಾಪತ್ತೆಯಾಗಿರುವ ಬಗ್ಗೆ ಮಾಹಿತಿ ಇಲ್ಲ

ಒಟ್ಟು 135 ಜನರು ಸಾವನ್ನಪ್ಪಿದ್ದಾರೆ. ಆದರೆ ನಮ್ಮ ನಿಯಂತ್ರಣ ಕೊಠಡಿ ಇನ್ನೂ ಕಾರ್ಯನಿರ್ವಹಿಸುತ್ತಿದೆ. ಜನರು ನಮಗೆ ಅಂತಹ ಎಲ್ಲಾ ಮಾಹಿತಿಯನ್ನು ನೀಡಬಹುದು

ಮೊರ್ಬಿ ಸೇತುವೆ ದುರಂತದಲ್ಲಿ ಯಾರೊಬ್ಬರೂ ನಾಪತ್ತೆಯಾಗಿರುವ ಬಗ್ಗೆ ಮಾಹಿತಿ ಇಲ್ಲ
Follow us
TV9 Web
| Updated By: ರಶ್ಮಿ ಕಲ್ಲಕಟ್ಟ

Updated on: Nov 03, 2022 | 8:50 PM

ದೆಹಲಿ: ಗುಜರಾತ್ ಸೇತುವೆ ದುರಂತದಲ್ಲಿ ಇಲ್ಲಿಯವರೆಗೆ ಯಾರೊಬ್ಬರೂ ನಾಪತ್ತೆಯಾಗಿರುವ ಬಗ್ಗೆ ಯಾವುದೇ ಮಾಹಿತಿ ಇಲ್ಲ ಎಂದು ಉನ್ನತ ಅಧಿಕಾರಿಯೊಬ್ಬರು ಇಂದು ಹೇಳಿದ್ದಾರೆ. ಒಟ್ಟು 135 ಜನರು ಸಾವನ್ನಪ್ಪಿದ್ದಾರೆ. ಆದರೆ ನಮ್ಮ ನಿಯಂತ್ರಣ ಕೊಠಡಿ ಇನ್ನೂ ಕಾರ್ಯನಿರ್ವಹಿಸುತ್ತಿದೆ. ಜನರು ನಮಗೆ ಅಂತಹ ಎಲ್ಲಾ ಮಾಹಿತಿಯನ್ನು ನೀಡಬಹುದು, ನಾವು ಅದನ್ನು ಸರಿಯಾದ ಪ್ರಕ್ರಿಯೆಯೊಂದಿಗೆ ಅನುಸರಿಸುತ್ತೇವೆ” ಎಂದು ಮೊರ್ಬಿ ಜಿಲ್ಲಾಧಿಕಾರಿ ಜಿಟಿ ಪಾಂಡ್ಯ ಹೇಳಿದರು. ಗುಜರಾತ್‌ನ ಮೊರ್ಬಿಯಲ್ಲಿ ಶತಮಾನದಷ್ಟು ಹಳೆಯದಾದ ತೂಗುಸೇತುವೆಯನ್ನು ನವೀಕರಿಸಿದ ಗಡಿಯಾರ ತಯಾರಕ ಒರೆವಾ ಮೇಲೆನಿರ್ಲಕ್ಷ್ಯದ ಆರೋಪವನ್ನು ಹೊರಿಸಲಾಗಿದೆ. ಅದು ಪುನಃ ತೆರೆದ ನಾಲ್ಕು ದಿನಗಳ ನಂತರ ಕುಸಿದು ಬಿದ್ದಿದ್ದು ಭಾನುವಾರ ನಡೆದ ದುರಂತದಲ್ಲಿ 135 ಜನರು ಸಾವಿಗೀಡಾಗಿದ್ದಾರೆ.

ಕಾಣೆಯಾದ ಮಗುವಿಗಾಗಿ ಹುಡುಕಾಟ

135 ಜನರ ಸಾವಿಗೆ ಕಾರಣವಾದ ಗುಜರಾತ್ ಸೇತುವೆಯ ದುರಂತ ಸಂಭವಿಸಿ ನಾಲ್ಕು ದಿನಗಳ ನಂತರ, ದುರಂತದ ಸ್ಥಳದಲ್ಲಿ ವ್ಯಕ್ತಿಯೊಬ್ಬರು ಕಾಣೆಯಾದ ಮಗುವಿಗಾಗಿ ಅಳುತ್ತಿದ್ದರು. ಆದರೆ ಸೈಟ್‌ನ ಅಧಿಕಾರಿಯೊಬ್ಬರು “ಯಾರೂ ಕಾಣೆಯಾಗಿರುವ ಬಗ್ಗೆ ಯಾವುದೇ ಮಾಹಿತಿ ಇಲ್ಲ” ಎಂದು ಹೇಳಿದರು. “ನಮ್ಮ ಹುಡುಗ ಪತ್ತೆಯಾಗಿಲ್ಲ,” ಆ ವ್ಯಕ್ತಿ ಅಳುತ್ತಾ ಹೇಳಿದ್ದಾರೆ. ಅವರು ಕಾಣೆಯಾದ ತಮ್ಮ ಸೋದರಳಿಯ ಬಗ್ಗೆ ಮಾತನಾಡುತ್ತಿದ್ದರು.

ಅವರ ಸಹೋದರಿ – ಹುಡುಗನ ತಾಯಿ – ಭಾನುವಾರ ಮೋರ್ಬಿಯಲ್ಲಿ ಸೇತುವೆ ಕುಸಿದು ಸಾವನ್ನಪ್ಪಿದ್ದು ನಿನ್ನೆ ಅಂತ್ಯಕ್ರಿಯೆ ಮಾಡಲಾಯಿತು. ಮಹಿಳೆ ಮತ್ತು ಆಕೆಯ ಮಗ ಶಾಮನಗರದಿಂದ ಐತಿಹಾಸಿಕ “ತೂಗು ಸೇತುವೆ” ಯಲ್ಲಿ ವಿಹಾರಕ್ಕೆ ಬಂದಿದ್ದರು.

“ಅದು ಏನೇ ಇರಲಿ … ನಾವು ಅವನನ್ನು ಕಂಡುಕೊಂಡರೆ ನಾವು ಸ್ವಲ್ಪ ಸಮಾಧಾನ ಆಗುತ್ತಿತ್ತು ಎಂದು ಅವರು ಹೇಳಿದರು. ಪಾಂಡ್ಯ ಮತ್ತು ಇತರ ಅಧಿಕಾರಿಗಳು ನಂತರ ಆ ವ್ಯಕ್ತಿಯನ್ನು ಪಕ್ಕಕ್ಕೆ ಕರೆದೊಯ್ದು ಅವನ ಸೋದರಳಿಯನನ್ನು ಹುಡುಕಲು ಪ್ರಯತ್ನಿಸಿದರು.

ಭಾನುವಾರ, ಏಳು ತಿಂಗಳ ನವೀಕರಣದ ನಂತರ ಮತ್ತೆ ತೆರೆದ ನಾಲ್ಕು ದಿನಗಳ ನಂತರ ಸೇತುವೆ ಕುಸಿದಾಗ ಸೇತುವೆಯ ಮೇಲೆ ಸುಮಾರು 500 ಜನರು ಇದ್ದರು.

ಸುಮಾರು 47 ಮಕ್ಕಳು ಸಾವಿಗೀಡಾಗಿದ್ದು ಇಬ್ಬರು ಕಿರಿಯರು ಎಂದು ಅಧಿಕಾರಿ ಹೇಳಿದ್ದಾರೆ

28 ಸೆಕೆಂಡಲ್ಲಿ 20 ಹೊಡೆತ; ಉತ್ತರಾಖಂಡದ ಮೆಡಿಕಲ್ ಶಾಪ್ ಮಾಲೀಕರ ಮೇಲೆ ಹಲ್ಲೆ
28 ಸೆಕೆಂಡಲ್ಲಿ 20 ಹೊಡೆತ; ಉತ್ತರಾಖಂಡದ ಮೆಡಿಕಲ್ ಶಾಪ್ ಮಾಲೀಕರ ಮೇಲೆ ಹಲ್ಲೆ
ಕಾಮಿಡಿ ಶೋಗಳಲ್ಲಿ ಅಡಲ್ಟ್ ಭಾಷೆ ಯಾಕೆ? ಸಮರ್ಥನೆ ನೀಡಿದ ನಿರೂಪ್, ಶ್ರವಣ್
ಕಾಮಿಡಿ ಶೋಗಳಲ್ಲಿ ಅಡಲ್ಟ್ ಭಾಷೆ ಯಾಕೆ? ಸಮರ್ಥನೆ ನೀಡಿದ ನಿರೂಪ್, ಶ್ರವಣ್
ಲೋಕಾಯುಕ್ತ ಬಿ ರಿಪೋರ್ಟ್ ಸಲ್ಲಿಕೆ ಪ್ರಶ್ನಿಸಿ ದೂರುದಾರರಿಂದ ತಕರಾರು ಅರ್ಜಿ
ಲೋಕಾಯುಕ್ತ ಬಿ ರಿಪೋರ್ಟ್ ಸಲ್ಲಿಕೆ ಪ್ರಶ್ನಿಸಿ ದೂರುದಾರರಿಂದ ತಕರಾರು ಅರ್ಜಿ
ಗೃಹಲಕ್ಷ್ಮಿ ಹಣದಿಂದ ತೋಟದಲ್ಲಿ ಬೋರ್​ವೆಲ್ ಕೊರೆಸಿದ ದಂಪತಿ
ಗೃಹಲಕ್ಷ್ಮಿ ಹಣದಿಂದ ತೋಟದಲ್ಲಿ ಬೋರ್​ವೆಲ್ ಕೊರೆಸಿದ ದಂಪತಿ
ಸಿದ್ದರಾಮಯ್ಯ ದಲಿತರ ಕೈ ಬಿಟ್ಟು ಮುಸಲ್ಮಾನರ ಕೈ ಹಿಡಿದಿದ್ದಾರೆ: ಅಶೋಕ
ಸಿದ್ದರಾಮಯ್ಯ ದಲಿತರ ಕೈ ಬಿಟ್ಟು ಮುಸಲ್ಮಾನರ ಕೈ ಹಿಡಿದಿದ್ದಾರೆ: ಅಶೋಕ
ಸ್ಟ್ಯಾಂಡಪ್ ಕಾಮಿಡಿಯನ್ ನಿರೂಪ್ ಮೋಹನ್ ಬಗ್ಗೆ ನಿಮಗೆಷ್ಟು ಗೊತ್ತು?
ಸ್ಟ್ಯಾಂಡಪ್ ಕಾಮಿಡಿಯನ್ ನಿರೂಪ್ ಮೋಹನ್ ಬಗ್ಗೆ ನಿಮಗೆಷ್ಟು ಗೊತ್ತು?
ಮತೀಯ ಭಾವನೆಗಳನ್ನು ಯಾರೂ ಕೆರಳಿಸಬಾರದು: ಕೋಲಾರ ಮಸೀದಿಯೊಂದರ ಮೌಲ್ವಿ
ಮತೀಯ ಭಾವನೆಗಳನ್ನು ಯಾರೂ ಕೆರಳಿಸಬಾರದು: ಕೋಲಾರ ಮಸೀದಿಯೊಂದರ ಮೌಲ್ವಿ
ವರದಿ ಮೇಲಿನ ಚರ್ಚೆಗೆ ಸಿಎಂ ವಿಶೇಷ ಅಧಿವೇಶನ ಕರೆಯಲು ಮನವಿ: ಜಾರಕಿಹೊಳಿ
ವರದಿ ಮೇಲಿನ ಚರ್ಚೆಗೆ ಸಿಎಂ ವಿಶೇಷ ಅಧಿವೇಶನ ಕರೆಯಲು ಮನವಿ: ಜಾರಕಿಹೊಳಿ
ಮಧ್ಯಂತರ ವರದಿಯನ್ನು ಅಧಿಕಾರಿಗಳು ಅಂತಿಮ ವರದಿ ಅಂದಿದ್ದಾರೆ: ಸ್ನೇಹಮಯಿ
ಮಧ್ಯಂತರ ವರದಿಯನ್ನು ಅಧಿಕಾರಿಗಳು ಅಂತಿಮ ವರದಿ ಅಂದಿದ್ದಾರೆ: ಸ್ನೇಹಮಯಿ
ಬನಶಂಕರಿ ದೇವಿ ಸನ್ನಿಧಿಯಲ್ಲಿ ಪವಿತ್ರಾ ಗೌಡ, ಇಲ್ಲಿದೆ ವಿಡಿಯೋ
ಬನಶಂಕರಿ ದೇವಿ ಸನ್ನಿಧಿಯಲ್ಲಿ ಪವಿತ್ರಾ ಗೌಡ, ಇಲ್ಲಿದೆ ವಿಡಿಯೋ