AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೊರ್ಬಿ ಸೇತುವೆ ದುರಂತದಲ್ಲಿ ಯಾರೊಬ್ಬರೂ ನಾಪತ್ತೆಯಾಗಿರುವ ಬಗ್ಗೆ ಮಾಹಿತಿ ಇಲ್ಲ

ಒಟ್ಟು 135 ಜನರು ಸಾವನ್ನಪ್ಪಿದ್ದಾರೆ. ಆದರೆ ನಮ್ಮ ನಿಯಂತ್ರಣ ಕೊಠಡಿ ಇನ್ನೂ ಕಾರ್ಯನಿರ್ವಹಿಸುತ್ತಿದೆ. ಜನರು ನಮಗೆ ಅಂತಹ ಎಲ್ಲಾ ಮಾಹಿತಿಯನ್ನು ನೀಡಬಹುದು

ಮೊರ್ಬಿ ಸೇತುವೆ ದುರಂತದಲ್ಲಿ ಯಾರೊಬ್ಬರೂ ನಾಪತ್ತೆಯಾಗಿರುವ ಬಗ್ಗೆ ಮಾಹಿತಿ ಇಲ್ಲ
TV9 Web
| Edited By: ರಶ್ಮಿ ಕಲ್ಲಕಟ್ಟ|

Updated on: Nov 03, 2022 | 8:50 PM

Share

ದೆಹಲಿ: ಗುಜರಾತ್ ಸೇತುವೆ ದುರಂತದಲ್ಲಿ ಇಲ್ಲಿಯವರೆಗೆ ಯಾರೊಬ್ಬರೂ ನಾಪತ್ತೆಯಾಗಿರುವ ಬಗ್ಗೆ ಯಾವುದೇ ಮಾಹಿತಿ ಇಲ್ಲ ಎಂದು ಉನ್ನತ ಅಧಿಕಾರಿಯೊಬ್ಬರು ಇಂದು ಹೇಳಿದ್ದಾರೆ. ಒಟ್ಟು 135 ಜನರು ಸಾವನ್ನಪ್ಪಿದ್ದಾರೆ. ಆದರೆ ನಮ್ಮ ನಿಯಂತ್ರಣ ಕೊಠಡಿ ಇನ್ನೂ ಕಾರ್ಯನಿರ್ವಹಿಸುತ್ತಿದೆ. ಜನರು ನಮಗೆ ಅಂತಹ ಎಲ್ಲಾ ಮಾಹಿತಿಯನ್ನು ನೀಡಬಹುದು, ನಾವು ಅದನ್ನು ಸರಿಯಾದ ಪ್ರಕ್ರಿಯೆಯೊಂದಿಗೆ ಅನುಸರಿಸುತ್ತೇವೆ” ಎಂದು ಮೊರ್ಬಿ ಜಿಲ್ಲಾಧಿಕಾರಿ ಜಿಟಿ ಪಾಂಡ್ಯ ಹೇಳಿದರು. ಗುಜರಾತ್‌ನ ಮೊರ್ಬಿಯಲ್ಲಿ ಶತಮಾನದಷ್ಟು ಹಳೆಯದಾದ ತೂಗುಸೇತುವೆಯನ್ನು ನವೀಕರಿಸಿದ ಗಡಿಯಾರ ತಯಾರಕ ಒರೆವಾ ಮೇಲೆನಿರ್ಲಕ್ಷ್ಯದ ಆರೋಪವನ್ನು ಹೊರಿಸಲಾಗಿದೆ. ಅದು ಪುನಃ ತೆರೆದ ನಾಲ್ಕು ದಿನಗಳ ನಂತರ ಕುಸಿದು ಬಿದ್ದಿದ್ದು ಭಾನುವಾರ ನಡೆದ ದುರಂತದಲ್ಲಿ 135 ಜನರು ಸಾವಿಗೀಡಾಗಿದ್ದಾರೆ.

ಕಾಣೆಯಾದ ಮಗುವಿಗಾಗಿ ಹುಡುಕಾಟ

135 ಜನರ ಸಾವಿಗೆ ಕಾರಣವಾದ ಗುಜರಾತ್ ಸೇತುವೆಯ ದುರಂತ ಸಂಭವಿಸಿ ನಾಲ್ಕು ದಿನಗಳ ನಂತರ, ದುರಂತದ ಸ್ಥಳದಲ್ಲಿ ವ್ಯಕ್ತಿಯೊಬ್ಬರು ಕಾಣೆಯಾದ ಮಗುವಿಗಾಗಿ ಅಳುತ್ತಿದ್ದರು. ಆದರೆ ಸೈಟ್‌ನ ಅಧಿಕಾರಿಯೊಬ್ಬರು “ಯಾರೂ ಕಾಣೆಯಾಗಿರುವ ಬಗ್ಗೆ ಯಾವುದೇ ಮಾಹಿತಿ ಇಲ್ಲ” ಎಂದು ಹೇಳಿದರು. “ನಮ್ಮ ಹುಡುಗ ಪತ್ತೆಯಾಗಿಲ್ಲ,” ಆ ವ್ಯಕ್ತಿ ಅಳುತ್ತಾ ಹೇಳಿದ್ದಾರೆ. ಅವರು ಕಾಣೆಯಾದ ತಮ್ಮ ಸೋದರಳಿಯ ಬಗ್ಗೆ ಮಾತನಾಡುತ್ತಿದ್ದರು.

ಅವರ ಸಹೋದರಿ – ಹುಡುಗನ ತಾಯಿ – ಭಾನುವಾರ ಮೋರ್ಬಿಯಲ್ಲಿ ಸೇತುವೆ ಕುಸಿದು ಸಾವನ್ನಪ್ಪಿದ್ದು ನಿನ್ನೆ ಅಂತ್ಯಕ್ರಿಯೆ ಮಾಡಲಾಯಿತು. ಮಹಿಳೆ ಮತ್ತು ಆಕೆಯ ಮಗ ಶಾಮನಗರದಿಂದ ಐತಿಹಾಸಿಕ “ತೂಗು ಸೇತುವೆ” ಯಲ್ಲಿ ವಿಹಾರಕ್ಕೆ ಬಂದಿದ್ದರು.

“ಅದು ಏನೇ ಇರಲಿ … ನಾವು ಅವನನ್ನು ಕಂಡುಕೊಂಡರೆ ನಾವು ಸ್ವಲ್ಪ ಸಮಾಧಾನ ಆಗುತ್ತಿತ್ತು ಎಂದು ಅವರು ಹೇಳಿದರು. ಪಾಂಡ್ಯ ಮತ್ತು ಇತರ ಅಧಿಕಾರಿಗಳು ನಂತರ ಆ ವ್ಯಕ್ತಿಯನ್ನು ಪಕ್ಕಕ್ಕೆ ಕರೆದೊಯ್ದು ಅವನ ಸೋದರಳಿಯನನ್ನು ಹುಡುಕಲು ಪ್ರಯತ್ನಿಸಿದರು.

ಭಾನುವಾರ, ಏಳು ತಿಂಗಳ ನವೀಕರಣದ ನಂತರ ಮತ್ತೆ ತೆರೆದ ನಾಲ್ಕು ದಿನಗಳ ನಂತರ ಸೇತುವೆ ಕುಸಿದಾಗ ಸೇತುವೆಯ ಮೇಲೆ ಸುಮಾರು 500 ಜನರು ಇದ್ದರು.

ಸುಮಾರು 47 ಮಕ್ಕಳು ಸಾವಿಗೀಡಾಗಿದ್ದು ಇಬ್ಬರು ಕಿರಿಯರು ಎಂದು ಅಧಿಕಾರಿ ಹೇಳಿದ್ದಾರೆ

Follow Us
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ