AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಾರ್ಚ್​ 31ರಿಂದ ದೇಶದಲ್ಲಿ ಕೊವಿಡ್ 19 ನಿರ್ಬಂಧ ನಿಯಮಗಳು ಇರುವುದಿಲ್ಲ, ಮಾಸ್ಕ್​ ಮಾತ್ರ ಕಡ್ಡಾಯ: ಕೇಂದ್ರ ಸರ್ಕಾರ

ನಿರ್ಬಂಧ ತೆಗೆದುಹಾಕುವ ಬಗ್ಗೆ ಕೇಂದ್ರ ಗೃಹ ಇಲಾಖೆ ಕಾರ್ಯದರ್ಶಿ ಅಜಯ್ ಭಲ್ಲಾ ಸಹಿ ಇರುವ ಪ್ರಕಟಣೆ ಬಿಡುಗಡೆ ಮಾಡಿದ್ದು, ಕೊವಿಡ್ 19 ನಿರ್ಬಂಧ ನಿಯಮಗಳಿಗೆ ವಿಪತ್ತು ನಿರ್ವಹಣಾ ಕಾಯ್ದೆಅನ್ವಯಿಸುವ ಅಗತ್ಯವಿಲ್ಲ ಎಂದು ಹೇಳಲಾಗಿದೆ.

ಮಾರ್ಚ್​ 31ರಿಂದ ದೇಶದಲ್ಲಿ ಕೊವಿಡ್ 19 ನಿರ್ಬಂಧ ನಿಯಮಗಳು ಇರುವುದಿಲ್ಲ, ಮಾಸ್ಕ್​ ಮಾತ್ರ ಕಡ್ಡಾಯ: ಕೇಂದ್ರ ಸರ್ಕಾರ
ಪ್ರಾತಿನಿಧಿಕ ಚಿತ್ರ
TV9 Web
| Edited By: |

Updated on:Mar 23, 2022 | 2:57 PM

Share

ಕೊವಿಡ್​ 19 ನಿಯಂತ್ರಣಕ್ಕಾಗಿ (Covid 19 Restrictions) ಕೇಂದ್ರ ಸರ್ಕಾರದಿಂದ ಹೇರಲಾಗಿದ್ದ ಎಲ್ಲ ನಿರ್ಬಂಧಗಳನ್ನೂ ಮಾರ್ಚ್​ 31ರಿಂದ ತೆಗೆದುಹಾಕಲು ನಿರ್ಧಾರ ಮಾಡಿದ್ದಾಗಿ ಗೃಹ ಸಚಿವಾಲಯ ತಿಳಿಸಿದೆ. ಅಷ್ಟೇ ಅಲ್ಲ, ಕೊವಿಡ್ 19 ಸುರಕ್ಷತಾ ಕ್ರಮಗಳಿಗೆ ಸಂಬಂಧಪಟ್ಟಂತೆ ವಿಪತ್ತು ನಿರ್ವಹಣಾ ಕಾಯ್ದೆಯನ್ನೂ ಅನ್ವಯಿಸುವುದಿಲ್ಲ (ಕೊವಿಡ್​ 19 ನಿರ್ಬಂಧ ಉಲ್ಲಂಘಿಸಿದರೆ ವಿಪತ್ತು ನಿರ್ವಹಣಾ ಕಾಯ್ದೆಯಡಿ ಪ್ರಕರಣ ದಾಖಲಾಗುವುದಿಲ್ಲ) ಎಂದು ಸ್ಪಷ್ಟಪಡಿಸಿದೆ. ಆದರೆ ಮಾಸ್ಕ್​ ಮಾತ್ರ  ಸಾರ್ವಜನಿಕ ಸ್ಥಳಗಳಲ್ಲಿ ಕಡ್ಡಾಯವಾಗಿರುತ್ತದೆ ಎಂದೂ ಕೇಂದ್ರ ಗೃಹ ಇಲಾಖೆ ಸ್ಪಷ್ಟಪಡಿಸಿದೆ.

ಭಾರತದಲ್ಲಿ ಕೊರೊನಾ ಪ್ರಕರಣಗಳ ಸಂಖ್ಯೆ ಇಳಿಕೆಯಾಗಿದ್ದು, ಜತೆಗೆ ಕೊವಿಡ್​ 19 ಲಸಿಕೆ ಅಭಿಯಾನವೂ ಅಚ್ಚುಕಟ್ಟಾಗಿ ನಡೆಯುತ್ತಿದೆ. ಮೂರನೇ ಅಲೆಗೆ ಕಾರಣವಾಗಿದ್ದ ಒಮಿಕ್ರಾನ್​ ಸೋಂಕಿನ ಪ್ರಸರಣ ತಗ್ಗಿದೆ. ಹಾಗಿದ್ದಾಗ್ಯೂ ಚೀನಾ, ದಕ್ಷಿಣ ಕೊರಿಯಾ, ಯುಕೆ, ಸಿಂಗಾಪುರ, ಫ್ರಾನ್ಸ್​, ಜರ್ಮನಿಗಳಲ್ಲಿ ಮತ್ತೆ ಹೊಸದಾಗಿ ಕೊವಿಡ್ 19 ಪ್ರಸರಣ ಉತ್ತುಂಗಕ್ಕೇರಿದ್ದು, ಲಾಕ್​ಡೌನ್​​ನಂಥ ನಿರ್ಬಂಧಗಳನ್ನು ಹೇರಲಾಗುತ್ತಿದೆ.  ಆದರೂ ಕೂಡ ಕೇಂದ್ರ ಸರ್ಕಾರ ಎಲ್ಲ ರೀತಿಯ ಕೊವಿಡ್ 19 ನಿರ್ಬಂಧ ಮಾರ್ಗಸೂಚಿಗಳನ್ನು ಮಾರ್ಚ್​ 31ರಿಂದ ತೆಗೆದುಹಾಕುವುದಾಗಿ ಘೋಷಿಸಿದೆ.

ನಿರ್ಬಂಧ ತೆಗೆದುಹಾಕುವ ಬಗ್ಗೆ ಕೇಂದ್ರ ಗೃಹ ಇಲಾಖೆ ಕಾರ್ಯದರ್ಶಿ ಅಜಯ್ ಭಲ್ಲಾ ಸಹಿ ಇರುವ ಪ್ರಕಟಣೆ ಬಿಡುಗಡೆ ಮಾಡಿದ್ದು, ಕೊವಿಡ್ 19 ನಿರ್ಬಂಧ ನಿಯಮಗಳಿಗೆ ವಿಪತ್ತು ನಿರ್ವಹಣಾ ಕಾಯ್ದೆಅನ್ವಯಿಸುವ ಅಗತ್ಯವಿಲ್ಲ ಎಂದು  ರಾಷ್ಟ್ರೀಯ ವಿಪತ್ತು ನಿರ್ವಹಣಾ ಪ್ರಾಧಿಕಾರ ನಿರ್ಧರಿಸಿದೆ. ಆದರೆ ಮಾಸ್ಕ್​ವೊಂದನ್ನು ಕಡ್ಡಾಯವಾಗಿ ಧರಿಸಬೇಕು. ಇನ್ನು ಕೈಗಳನ್ನು ಸ್ವಚ್ಛಗೊಳಿಸಿಕೊಳ್ಳುವುದು, ಲಸಿಕೆ ಹಾಕಿಸಿಕೊಳ್ಳುವುದು ಪ್ರತಿಯೊಬ್ಬ ನಾಗರಿಕನ ಜವಾಬ್ದಾರಿ ಎಂದು ಹೇಳಲಾಗಿದೆ.  ಎಲ್ಲ ರಾಜ್ಯ ಸರ್ಕಾರಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳೂ ಈ  ಪ್ರಕಟಣೆಯನ್ನು ಪರಿಗಣಿಸಬೇಕು. ಈ ಹಿಂದೆ ಕೊವಿಡ್​ 19 ನಿಯಂತ್ರಣಕ್ಕಾಗಿ ವಿಪತ್ತು ನಿರ್ವಹಣಾ ಕಾಯ್ದೆ 2005ರಡಿ ವಿಧಿಸಲಾಗಿದ್ದ ಮಾರ್ಗಸೂಚಿಗಳನ್ನು ರದ್ದು ಮಾಡಬಹುದು ಎಂದೂ ಉಲ್ಲೇಖಿಸಲಾಗಿದೆ.

ಇದನ್ನೂ ಓದಿ: ಚೀನಾದಲ್ಲಿ ಮತ್ತೆ ಹೆಚ್ಚಾಗಿದೆ ಕೊರೊನಾ ವೈರಸ್​; ಒಂದು ವರ್ಷದ ಬಳಿಕ ಒಂದೇ ದಿನ ಇಬ್ಬರು ಸೋಂಕಿನಿಂದ ಸಾವು

Published On - 2:21 pm, Wed, 23 March 22

‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ಚಿತ್ರಕ್ಕೆ ನಾನು ಡೈರೆಕ್ಟರ್, ನೀವಲ್ಲ ಎಂದಿದ್ದ ಉಪ್ಪಿ; ಶಿವಣ್ಣನ ಏನಂದ್ರು?
ಚಿತ್ರಕ್ಕೆ ನಾನು ಡೈರೆಕ್ಟರ್, ನೀವಲ್ಲ ಎಂದಿದ್ದ ಉಪ್ಪಿ; ಶಿವಣ್ಣನ ಏನಂದ್ರು?
ಹೈಕಮಾಂಡ್ ನಮಗಿಬ್ರಿಗೂ ಏನೋ ಹೇಳಿದೆ: ಡಿಕೆಶಿ ಅಚ್ಚರಿಯ ಹೇಳಿಕೆ
ಹೈಕಮಾಂಡ್ ನಮಗಿಬ್ರಿಗೂ ಏನೋ ಹೇಳಿದೆ: ಡಿಕೆಶಿ ಅಚ್ಚರಿಯ ಹೇಳಿಕೆ
ಪಾವಗಡ ಕಡಮಲಕುಂಟೆ ಬಳಿ ಭೀಕರ ಅಪಘಾತ: ಕಾರು ಚಾಲಕ ಸಾವು
ಪಾವಗಡ ಕಡಮಲಕುಂಟೆ ಬಳಿ ಭೀಕರ ಅಪಘಾತ: ಕಾರು ಚಾಲಕ ಸಾವು
‘45’ ಶೂಟ್​​ನಲ್ಲಿ ಸಾವಿನ ಬಗ್ಗೆ ಮಾತನಾಡಿದ್ದ ಶಿವಣ್ಣ; ಜನ್ಯ, ರಾಜ್
‘45’ ಶೂಟ್​​ನಲ್ಲಿ ಸಾವಿನ ಬಗ್ಗೆ ಮಾತನಾಡಿದ್ದ ಶಿವಣ್ಣ; ಜನ್ಯ, ರಾಜ್
2026ರಲ್ಲಿ ಕಟಕ ರಾಶಿಯವರ ವರ್ಷ ಭವಿಷ್ಯ ಹೇಗಿದೆ ನೋಡಿ
2026ರಲ್ಲಿ ಕಟಕ ರಾಶಿಯವರ ವರ್ಷ ಭವಿಷ್ಯ ಹೇಗಿದೆ ನೋಡಿ
ಅಶ್ವಗಂಧ ಹಾಗೂ ಸಾಂಪ್ರದಾಯಿಕ ಔಷಧಿಗಳ ಬಗ್ಗೆ ಪ್ರಧಾನಿ ಮೋದಿ ಹೇಳಿದ್ದೇನು?
ಅಶ್ವಗಂಧ ಹಾಗೂ ಸಾಂಪ್ರದಾಯಿಕ ಔಷಧಿಗಳ ಬಗ್ಗೆ ಪ್ರಧಾನಿ ಮೋದಿ ಹೇಳಿದ್ದೇನು?