AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಜಕೀಯ ಬಿಟ್ಟು ವೇದ, ಉಪನಿಷತ್ ಅಧ್ಯಯನ ಮಾಡುವೆ; ನಿವೃತ್ತಿ ಪ್ಲಾನ್ ಬಿಚ್ಚಿಟ್ಟ ಅಮಿತ್ ಶಾ

ಕೇಂದ್ರ ಗೃಹ ಸಚಿವ ಅಮಿತ್ ಶಾ ತಮ್ಮ ನಿವೃತ್ತಿ ಪ್ಲಾನ್ ಬಗ್ಗೆ ಮಾಹಿತಿ ಹಂಚಿಕೊಂಡಿದ್ದಾರೆ. ತಮ್ಮ ಉಳಿದ ಜೀವನವನ್ನು ವೇದಗಳು, ಉಪನಿಷತ್ತುಗಳ ಅಧ್ಯಯನ ಮತ್ತು ನೈಸರ್ಗಿಕ ಕೃಷಿಗೆ ಮೀಸಲಿಡಲು ಬಯಸುತ್ತೇನೆ ಎಂದು ಅವರು ಹೇಳಿದ್ದಾರೆ. ಸಹಕಾರ ಸಚಿವಾಲಯವು ಪ್ರಧಾನಿ ಮೋದಿ ಅವರ 'ಸಹಕಾರದ ಮೂಲಕ ಸಮೃದ್ಧಿ' ಎಂಬ ದೃಷ್ಟಿಕೋನಕ್ಕೆ ಅನುಗುಣವಾಗಿ ರೈತರನ್ನು ಸಬಲೀಕರಣಗೊಳಿಸುವ ಮೂಲಕ ಗ್ರಾಮೀಣ ಆರ್ಥಿಕತೆಯ ಜೊತೆಗೆ ದೇಶದ ಆರ್ಥಿಕತೆಯನ್ನು ಬಲಪಡಿಸುತ್ತಿದೆ ಎಂದು ಅಮಿತ್ ಶಾ ಹೇಳಿದ್ದಾರೆ.

ರಾಜಕೀಯ ಬಿಟ್ಟು ವೇದ, ಉಪನಿಷತ್ ಅಧ್ಯಯನ ಮಾಡುವೆ; ನಿವೃತ್ತಿ ಪ್ಲಾನ್ ಬಿಚ್ಚಿಟ್ಟ ಅಮಿತ್ ಶಾ
Amit Shah
ಸುಷ್ಮಾ ಚಕ್ರೆ
|

Updated on: Jul 09, 2025 | 6:00 PM

Share

ನವದೆಹಲಿ, ಜುಲೈ 9: ಕೇಂದ್ರ ಸಚಿವ ಅಮಿತ್ ಶಾ ಇಂದು (ಬುಧವಾರ) ತಮ್ಮ ನಿವೃತ್ತಿ ಪ್ಲಾನ್ ಬಗ್ಗೆ ಆಸಕ್ತಿಕರ ಮಾಹಿತಿಗಳನ್ನು ಬಹಿರಂಗಪಡಿಸಿದ್ದಾರೆ. “ನಿವೃತ್ತಿಯ ನಂತರ ನನ್ನ ಉಳಿದ ಜೀವನವನ್ನು ವೇದಗಳು, ಉಪನಿಷತ್ತುಗಳು ಮತ್ತು ನೈಸರ್ಗಿಕ ಕೃಷಿಯನ್ನು (Natural Farming) ಅಧ್ಯಯನ ಮಾಡಲು ಮೀಸಲಿಡಬೇಕೆಂದು ನಾನು ನಿರ್ಧರಿಸಿದ್ದೇನೆ” ಎಂದು ಅಮಿತ್ ಶಾ (Amit Shah)  ಹೇಳಿದ್ದಾರೆ. ಗುಜರಾತ್, ಮಧ್ಯಪ್ರದೇಶ, ರಾಜಸ್ಥಾನ ಮತ್ತು ಇತರ ಸಹಕಾರಿ ಕಾರ್ಮಿಕರ ಮಹಿಳೆಯರೊಂದಿಗೆ ‘ಸಹಕಾರ್ ಸಂವಾದ’ದಲ್ಲಿ ಪಾಲ್ಗೊಂಡು ಅಮಿತ್ ಶಾ ಈ ಮಾತುಗಳನ್ನಾಡಿದ್ದಾರೆ.

ಕೇಂದ್ರ ಗೃಹ ಸಚಿವ ಅಮಿತ್ ಶಾ ತಮ್ಮ ನಿವೃತ್ತಿ ಜೀವನವನ್ನು ರಾಜಕೀಯದಿಂದ ದೂರವಿದ್ದು ಕಳೆಯುವುದಾಗಿ ಹೇಳಿಕೊಂಡಿದ್ದಾರೆ. ಪ್ರಧಾನಿ ನರೇಂದ್ರ ಮೋದಿಗೆ ಆಪ್ತರಾಗಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ ನಿವೃತ್ತಿಯ ಬಳಿಕ ರಾಜಕೀಯದಿಂದ ದೂರ ಸರಿಯುವ ಇಚ್ಛೆ ವ್ಯಕ್ತಪಡಿಸಿದ್ದಾರೆ. “ನಾನು ನಿವೃತ್ತಿ ಹೊಂದಿದಾಗ ನನ್ನ ಜೀವನದ ಉಳಿದ ಭಾಗವನ್ನು ವೇದಗಳು, ಉಪನಿಷತ್ತುಗಳು ಮತ್ತು ನೈಸರ್ಗಿಕ ಕೃಷಿಗೆ ಮೀಸಲಿಡುತ್ತೇನೆ” ಎಂದು ಅಹಮದಾಬಾದ್‌ನಲ್ಲಿ ನಡೆದ ‘ಸಹಕಾರ್ ಸಂವಾದ’ ಕಾರ್ಯಕ್ರಮದಲ್ಲಿ ಅಮಿತ್ ಶಾ ಹೇಳಿದ್ದಾರೆ. ಅಮಿತ್ ಶಾ ಆಗಾಗ ಓದುವ ಪ್ರೀತಿಯನ್ನು ವ್ಯಕ್ತಪಡಿಸುತ್ತಲೇ ಇರುತ್ತಾರೆ. ಅವರು ನನ್ನ ಬಳಿ 8,000 ಪುಸ್ತಕಗಳಿವೆ. ಆದರೆ, ಅವುಗಳನ್ನು ಓದಲು ಸಮಯವಿಲ್ಲ ಎಂದು ಹೇಳಿಕೊಂಡಿದ್ದರು. ಅಮಿತ್ ಶಾ ಅವರಿಗೆ ಶಾಸ್ತ್ರೀಯ ಸಂಗೀತದ ಬಗ್ಗೆಯೂ ಒಲವು ಇದೆ.

ಇದನ್ನೂ ಓದಿ: ಭಾರತ ಎಂದಿಗೂ ಸರ್ವಾಧಿಕಾರವನ್ನು ಸ್ವೀಕರಿಸುವುದಿಲ್ಲ; ಅಮಿತ್ ಶಾ

ಇಂದಿನ ಸಂವಾದಕ್ಕೂ ಮುನ್ನ, ಅಮಿತ್ ಶಾ ಹಿಂದಿಯಲ್ಲಿ ಎಕ್ಸ್​ ನಲ್ಲಿ ಪೋಸ್ಟ್ ಮಾಡಿದ್ದು, “ಮೋದಿ ಅವರ ‘ಸಹಕಾರದ ಮೂಲಕ ಸಮೃದ್ಧಿ’ ಎಂಬ ದೃಷ್ಟಿಕೋನಕ್ಕೆ ಅನುಗುಣವಾಗಿ ರೈತರನ್ನು ಸಬಲೀಕರಣಗೊಳಿಸುವ ಮೂಲಕ ಸಹಕಾರ ಸಚಿವಾಲಯವು ಗ್ರಾಮೀಣ ಆರ್ಥಿಕತೆಯ ಜೊತೆಗೆ ದೇಶದ ಆರ್ಥಿಕತೆಯನ್ನು ಬಲಪಡಿಸುತ್ತಿದೆ. ಮೋದಿ ಸರ್ಕಾರದಲ್ಲಿ ಸಹಕಾರಿ ವಲಯವು ಮಹಿಳೆಯರ ಸ್ವಾವಲಂಬನೆಗೆ ಬಲವಾದ ಮಾಧ್ಯಮವಾಗಿದೆ” ಎಂದು ಹೇಳಿದ್ದರು.

ಇದನ್ನೂ ಓದಿ: ಅಣ್ಣಾಮಲೈಗೆ ತಮಿಳುನಾಡಿನ ಜೊತೆ ರಾಷ್ಟ್ರೀಯ ಹುದ್ದೆ ನೀಡುತ್ತೇವೆ; ಅಮಿತ್ ಶಾ

ಜುಲೈ 10ರಂದು ರಾಂಚಿಯಲ್ಲಿ ನಡೆಯುವ ಪೂರ್ವ ವಲಯ ಮಂಡಳಿ ಸಭೆಯ ಅಧ್ಯಕ್ಷತೆಯನ್ನು ಅಮಿತ್ ಶಾ ವಹಿಸಲಿದ್ದಾರೆ, ಇದರಲ್ಲಿ 4 ಪೂರ್ವ ರಾಜ್ಯಗಳಾದ ಜಾರ್ಖಂಡ್, ಬಿಹಾರ, ಒಡಿಶಾ ಮತ್ತು ಪಶ್ಚಿಮ ಬಂಗಾಳದ ಸುಮಾರು 70 ಪ್ರತಿನಿಧಿಗಳು ಭಾಗವಹಿಸುವ ನಿರೀಕ್ಷೆಯಿದೆ ಎಂದು ಅಧಿಕಾರಿಯೊಬ್ಬರು ಪಿಟಿಐಗೆ ತಿಳಿಸಿದ್ದಾರೆ. ಈ ಸಭೆಯ ಹಿನ್ನೆಲೆಯಲ್ಲಿ ರಾಂಚಿಯಲ್ಲಿ ಭದ್ರತೆಯನ್ನು ಹೆಚ್ಚಿಸಲಾಗಿದ್ದು, ಇಂದು ಸಂಜೆ ಅಮಿತ್ ಶಾ ಜಾರ್ಖಂಡ್ ರಾಜಧಾನಿಗೆ ಆಗಮಿಸಲಿದ್ದಾರೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ 

ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!