AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

60 ವರ್ಷ ಮೇಲ್ಪಟ್ಟು, ಇನ್ನಿತರ ಕಾಯಿಲೆಗಳಿರುವವರು ಲಸಿಕೆ 3ನೇ ಡೋಸ್ ಪಡೆಯಲು ಮೆಡಿಕಲ್​ ಸರ್ಟಿಫಿಕೇಟ್​ ಬೇಕಾಗಿಲ್ಲ: ಕೇಂದ್ರ ಸರ್ಕಾರ ಸ್ಪಷ್ಟನೆ

ಈ ಬಾರಿ ಮೂರನೇ ಡೋಸ್​ ಆಗಿ ಬೇರೆಯದ್ದೇ ಲಸಿಕೆ ನೀಡಲಾಗುವುದು ಎಂದು ಆರೋಗ್ಯ ತಜ್ಞರು ಹೇಳಿದ್ದಾರೆ. ಆದರೆ ಯಾವ ಲಸಿಕೆ ಎಂಬುದು ಇನ್ನೂ ದೃಢಪಟ್ಟಿಲ್ಲ. ಈ ಮಧ್ಯೆ ಇಂದು ಕೊವಾವ್ಯಾಕ್ಸ್, ಕಾರ್ಬೆವ್ಯಾಕ್ಸ್ ಕೊವಿಡ್ 19 ಲಸಿಕೆಗಳ ತುರ್ತು ಬಳಕೆಗೆ ಕೇಂದ್ರ ಸರ್ಕಾರ ಅನುಮೋದನೆ ನೀಡಿದೆ.

60 ವರ್ಷ ಮೇಲ್ಪಟ್ಟು, ಇನ್ನಿತರ ಕಾಯಿಲೆಗಳಿರುವವರು ಲಸಿಕೆ 3ನೇ ಡೋಸ್ ಪಡೆಯಲು ಮೆಡಿಕಲ್​ ಸರ್ಟಿಫಿಕೇಟ್​ ಬೇಕಾಗಿಲ್ಲ: ಕೇಂದ್ರ ಸರ್ಕಾರ ಸ್ಪಷ್ಟನೆ
ಪ್ರಾತಿನಿಧಿಕ ಚಿತ್ರ
TV9 Web
| Updated By: Lakshmi Hegde|

Updated on: Dec 28, 2021 | 3:54 PM

Share

60 ವರ್ಷ ಮೇಲ್ಪಟ್ಟು, ಇನ್ನಿತರ ಯಾವುದೇ ರೋಗದಿಂದ ಬಳಲುತ್ತಿದ್ದವರಿಗೆ ಕೊವಿಡ್​ 19 ಲಸಿಕೆ ಮೂರನೇ ಡೋಸ್​​ ( Booster Dose-ಬೂಸ್ಟರ್​ ಡೋಸ್​ ಅಥವಾ ಮುಂಜಾಗರೂಕತೆ ಡೋಸ್​) ನೀಡಲು ಯಾವುದೇ ವೈದ್ಯಕೀಯ ಸರ್ಟಿಫಿಕೇಟ್​ ಆಗಲಿ, ವೈದ್ಯರ ಶಿಫಾರಸ್ಸು ಆಗಲೀ ಅಗತ್ಯವಿಲ್ಲ ಎಂದು ಕೇಂದ್ರ ಸರ್ಕಾರ ಇಂದು ಹೇಳಿದೆ. ಇಂದು ಕೇಂದ್ರ ಆರೋಗ್ಯ ಕಾರ್ಯದರ್ಶಿ ರಾಜೇಶ್ ಭೂಷಣ್​ ಅವರು, ರಾಜ್ಯಗಳ ಆರೋಗ್ಯ ಕಾರ್ಯದರ್ಶಿಗಳೊಂದಿಗೆ ನಡೆಸಿದ ಸಭೆಯಲ್ಲಿ ಈ ತೀರ್ಮಾನ ಕೈಗೊಳ್ಳಲಾಗಿದೆ. 60 ವರ್ಷ ಮೇಲ್ಪಟ್ಟವರಿಗೆ ಮುಂಜಾಗರೂಕತೆ ಡೋಸ್ ನೀಡಲು ಯಾವುದೇ ಪ್ರಮಾಣ ಪತ್ರ ಬೇಡ. ಆದರೆ ಇತರ ಕೆಲವು ರೋಗಗಳಿಂದ ಬಳಲುತ್ತಿರುವವರು ಲಸಿಕೆಯ ಮೂರನೇ ಡೋಸ್ ಪಡೆಯುವುದಕ್ಕೂ ಮೊದಲು ತಾವು ಚಿಕಿತ್ಸೆ ಪಡೆಯುತ್ತಿರುವ ವೈದ್ಯರೊಟ್ಟಿಗೆ ಒಮ್ಮೆ ಸಮಾಲೋಚನೆ ನಡೆಸಬೇಕು ಎಂದು ಕೇಂದ್ರ ಸರ್ಕಾರ ಸ್ಪಷ್ಟಪಡಿಸಿದೆ. 

ಡಿಸೆಂಬರ್​ 25ರಂದು ದೇಶವನ್ನು ಉದ್ದೇಶಿಸಿ ಮಾತನಾಡಿದ್ದ ಪ್ರಧಾನಮಂತ್ರಿ ನರೇಂದ್ರ ಮೋದಿಯವರು, ಕೊವಿಡ್​ 19 ವಿರುದ್ಧ ಹೋರಾಟದಲ್ಲಿ ಮುಂಚೂಣಿಯಲ್ಲಿ ಇರುವವರಿಗೆ ಮತ್ತು 60 ವರ್ಷ ಮೇಲ್ಪಟ್ಟವರಿಗೆ ಕೊರೊನಾ ಲಸಿಕೆ ಮೂರನೇ ಡೋಸ್ ಅಥವಾ ಮುನ್ನೆಚ್ಚರಿಕಾ ಡೋಸ್ ನೀಡಲಾಗುವುದು ಎಂದು ಹೇಳಿದ್ದರು. ಅದಾದ ನಂತರ ಈ ಬಗ್ಗೆ ಒಂದೊಂದೇ ಬೆಳವಣಿಗೆ ಆಗುತ್ತಿದೆ. ಎರಡನೇ ಡೋಸ್​ ಪಡೆದು 9 ತಿಂಗಳು ಆದವರಷ್ಟೇ ಈ ಮೂರನೇ ಡೋಸ್​ಗೆ ಅರ್ಹರಾಗಿರುತ್ತಾರೆ ಎಂದು ಕೇಂದ್ರ ಸರ್ಕಾರ ಸ್ಪಷ್ಟಪಡಿಸಿದೆ.

ಕೊವಿಡ್​ 19 ಲಸಿಕೆ ನೋಂದಣಿ ವೇದಿಕೆ ಕೊವಿನ್​ ವೆಬ್​ಸೈಟ್​ ಕಾರ್ಯಕಾರಿ ಮುಖ್ಯಸ್ಥರಾಗಿದ್ದ ಡಾ. ಆರ್​.ಎಸ್​.ಶರ್ಮಾ ಈ ಹಿಂದೆ ಮೂರನೇ ಡೋಸ್ ಬಗ್ಗೆ ಮಾತನಾಡಿ, 60 ವರ್ಷ ಮೇಲ್ಪಟ್ಟು, ಇನ್ನಿತರ ರೋಗಗಳಿಂದ ಬಳಲುತ್ತಿರುವವರು ಕೊವಿಡ್​ 19 ಬೂಸ್ಟರ್​ ಡೋಸ್ ಪಡೆಯಬೇಕೆಂದರೆ, ಅವರು ಸಂಬಂಧಪಟ್ಟ ವೈದ್ಯರಿಂದ ಸರ್ಟಿಫಿಕೇಟ್​ ಹೊಂದಿರಬೇಕು. ಈ ವೈದ್ಯಕೀಯ ಪ್ರಮಾಣಪತ್ರವಿಲ್ಲದೆ ಇದ್ದರೆ ಲಸಿಕೆ ನೀಡಲು ಆಗುವುದಿಲ್ಲ. ಅವರಿಗೆ ಯಾವೆಲ್ಲ ಸಮಸ್ಯೆ ಇದೆ ಎಂಬುದನ್ನು ಡಾಕ್ಟರ್ ಸರ್ಟಿಫಿಕೇಟ್​​ ಮೂಲಕ ತಿಳಿದು, ಮೂರನೇ ಡೋಸ್ ನೀಡಲಾಗುತ್ತದೆ. ಉಳಿದಂತೆ ಇನ್ಯಾವುದೇ ಬದಲಾವಣೆ ಇಲ್ಲ ಎಂದು ಹೇಳಿದ್ದರು.ಇದೀಗ ಯಾವುದೇ ಸರ್ಟಿಫಿಕೇಟ್​ ಬೇಡವೆಂದು ಕೇಂದ್ರ ಸರ್ಕಾರ ತಿಳಿಸಿದೆ.

ಅಂದಹಾಗೆ, ಈ ಬಾರಿ ಮೂರನೇ ಡೋಸ್​ ಆಗಿ ಬೇರೆಯದ್ದೇ ಲಸಿಕೆ ನೀಡಲಾಗುವುದು ಎಂದು ಆರೋಗ್ಯ ತಜ್ಞರು ಹೇಳಿದ್ದಾರೆ. ಆದರೆ ಯಾವ ಲಸಿಕೆ ಎಂಬುದು ಇನ್ನೂ ದೃಢಪಟ್ಟಿಲ್ಲ. ಈ ಮಧ್ಯೆ ಇಂದು ಕೊವಾವ್ಯಾಕ್ಸ್, ಕಾರ್ಬೆವ್ಯಾಕ್ಸ್ ಕೊವಿಡ್ 19 ಲಸಿಕೆಗಳ ತುರ್ತು ಬಳಕೆಗೆ ಕೇಂದ್ರ ಸರ್ಕಾರ ಅನುಮೋದನೆ ನೀಡಿದೆ. ದೇಶದಲ್ಲಿ ಮುನ್ನೆಚ್ಚರಿಕಾ ಡೋಸ್ ಆಗಿ ಕೊವಾವ್ಯಾಕ್ಸ್ ಲಸಿಕೆ ನೀಡುವುದು ಉತ್ತಮ ಎಂಬ ಶಿಫಾರಸ್ಸುಗಳನ್ನೂ ಕೆಲವು ಆರೋಗ್ಯ ತಜ್ಞರು ಮಾಡಿದ್ದು, ಇನ್ನು ಕೆಲವೇ ದಿನಗಳಲ್ಲಿ ಅಂತಿಮ ನಿರ್ಧಾರ ಹೊರಬೀಳಲಿದೆ.

ಇದನ್ನೂ ಓದಿ: Good News: ಭಾರತದಲ್ಲಿ ಕೊವಾವ್ಯಾಕ್ಸ್​, ಕಾರ್ಬೆವ್ಯಾಕ್ಸ್ ಲಸಿಕೆ, ​ಮೊಲ್ನುಪಿರವಿರ್ ಔಷಧ ತುರ್ತು ಬಳಕೆಗೆ ಕೇಂದ್ರ ಸರ್ಕಾರ ಅನುಮೋದನೆ

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ