AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಖಾಸಗಿ ವಾಹನದಲ್ಲಿ ಒಂಟಿಯಾಗಿ ಪ್ರಯಾಣಿಸುವಾಗ ಮಾಸ್ಕ್​ ಕಡ್ಡಾಯವಲ್ಲ; ಕೇಂದ್ರ ಸರ್ಕಾರ

ಅರ್ಜಿ ವಿಚಾರಣೆ ವೇಳೆ ಭಾರತ ಸರ್ಕಾರದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ (MoHFW) ದೆಹಲಿ ಹೈಕೋರ್ಟ್‌ಗೆ ಪ್ರತಿಕ್ರಿಯಿಸಿದೆ. ವಾಹನಗಳಲ್ಲಿ ಒಂಟಿಯಾಗಿ ತೆರಳುವಾಗ ಮಾಸ್ಕ್​ ಹಾಕಬೇಕು ಎನ್ನುವುದು ನಿಯಮಾವಳಿಯಲ್ಲಿ ಇಲ್ಲ ಎಂದು ಸ್ಪಷ್ಟಪಡಿಸಿದೆ.

ಖಾಸಗಿ ವಾಹನದಲ್ಲಿ ಒಂಟಿಯಾಗಿ ಪ್ರಯಾಣಿಸುವಾಗ ಮಾಸ್ಕ್​ ಕಡ್ಡಾಯವಲ್ಲ; ಕೇಂದ್ರ ಸರ್ಕಾರ
ಪ್ರಾತಿನಿಧಿಕ ಚಿತ್ರ
ರಾಜೇಶ್ ದುಗ್ಗುಮನೆ
| Edited By: |

Updated on: Jan 10, 2021 | 9:32 PM

Share

ದೆಹಲಿ: ಕಾರಿನಲ್ಲಿ ಅಥವಾ ಯಾವುದೇ ಖಾಸಗಿ ವಾಹನದಲ್ಲಿ ಒಂಟಿಯಾಗಿ ಪ್ರಯಾಣಿಸುವಾಗಲೂ ಮಾಸ್ಕ್​ ಹಾಕದಿದ್ದರೆ ದಂಡ ವಿಧಿಸಿದ್ದ ಸಾಕಷ್ಟು ಪ್ರಕರಣಗಳು ಬೆಳಕಿಗೆ ಬಂದಿದ್ದವು. ಈ ಬಗ್ಗೆ ಸಾರ್ವಜನಿಕರಿಂದ ಆಕ್ರೋಶ ಕೂಡ ವ್ಯಕ್ತವಾಗಿತ್ತು. ಈ ವಿಚಾರಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರ ಸ್ಪಷ್ಟನೆ ನೀಡಿದ್ದು, ಖಾಸಗಿ ವಾಹನದಲ್ಲಿ ಒಬ್ಬಂಟಿಯಾಗಿ ಪ್ರಯಾಣಿಸುವಾಗ ಮಾಸ್ಕ್​ ಕಡ್ಡಾಯವಲ್ಲ ಎಂದು ಹೇಳಿದೆ.

ಸೌರಭ್​ ಶರ್ಮಾ ಹೆಸರಿನ ವಕೀಲರು ಕಾರಿನಲ್ಲಿ ಒಬ್ಬಂಟಿಯಾಗಿ ತೆರಳುತ್ತಿದ್ದರು. ಈ ವೇಳೆ ಮಾಸ್ಕ್​ ಧರಿಸಿಲ್ಲ ಎನ್ನುವ ಕಾರಣಕ್ಕೆ ಅವರಿಗೆ 500 ರೂಪಾಯಿ ದಂಡ ಹಾಕಲಾಗಿತ್ತು. ಇದನ್ನು ಸೌರಭ್​ ಶರ್ಮಾ ದೆಹಲಿ ಹೈಕೋರ್ಟ್​​ನಲ್ಲಿ ಪ್ರಶ್ನೆ ಮಾಡಿದ್ದರು. ಅಲ್ಲದೆ, ಮಾನಸಿಕವಾಗಿ ಹಿಂಸೆ ನೀಡಿದ್ದಕ್ಕೆ 10 ರೂಪಾಯಿ ಪರಿಹಾರ ನೀಡುವಂತೆ ಕೋರಿದ್ದರು.

ಅರ್ಜಿ ವಿಚಾರಣೆ ವೇಳೆ ಭಾರತ ಸರ್ಕಾರದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ (MoHFW) ದೆಹಲಿ ಹೈಕೋರ್ಟ್‌ಗೆ ಪ್ರತಿಕ್ರಿಯಿಸಿದೆ. ವಾಹನಗಳಲ್ಲಿ ಒಂಟಿಯಾಗಿ ತೆರಳುವಾಗ ಮಾಸ್ಕ್​ ಹಾಕಬೇಕು ಎನ್ನುವುದು ನಿಯಮಾವಳಿಯಲ್ಲಿ ಇಲ್ಲ ಎಂದು ಸ್ಪಷ್ಟಪಡಿಸಿದೆ.

ಈ ಮೊದಲು ದೆಹಲಿ ಹೈಕೋರ್ಟ್​ಗೆ ಮಾಹಿತಿ ನೀಡಿದ್ದ ಅರವಿಂದ್​ ಕೇಜ್ರಿವಾಲ್​ ನೇತೃತ್ವದ ಸರ್ಕಾರ, ಯಾವುದೇ ವ್ಯಕ್ತಿ ತನ್ನ ಖಾಸಗಿ ವಾಹನದಲ್ಲಿ ಒಬ್ಬಂಟಿಯಾಗಿ ಸಾಗುತ್ತಿದ್ದರೂ ಮಾಸ್ಕ್​ ಧರಿಸುವುದು ಕಡ್ಡಾಯ ಎಂದಿತ್ತು. ಈಗ ಈ ವಿಚಾರದಲ್ಲಿ ಕೇಂದ್ರ ಸ್ಪಷ್ಟನೆ ನೀಡಿದಂತಾಗಿದೆ.

ಮಹಾರಾಷ್ಟ್ರದಲ್ಲಿ ಇನ್ನು 6 ತಿಂಗಳು ಮಾಸ್ಕ್ ಕಡ್ಡಾಯ: ಮುಖ್ಯಮಂತ್ರಿ ಉದ್ಧವ್ ಠಾಕ್ರೆ

ಹಿಪೊಪೊಟಮಸ್​ಗಳಿಂದ ತುಂಬಿದ ಹೊಳೆಯಲ್ಲಿ ಹೆದರದೆ ನಿಂತ ಆನೆ
ಹಿಪೊಪೊಟಮಸ್​ಗಳಿಂದ ತುಂಬಿದ ಹೊಳೆಯಲ್ಲಿ ಹೆದರದೆ ನಿಂತ ಆನೆ
ಹರ್‌ಪ್ರೀತ್ ಮ್ಯಾಜಿಕಲ್ ಎಸೆತಕ್ಕೆ ರಾಹುಲ್ ಕ್ಲೀನ್ ಬೌಲ್ಡ್
ಹರ್‌ಪ್ರೀತ್ ಮ್ಯಾಜಿಕಲ್ ಎಸೆತಕ್ಕೆ ರಾಹುಲ್ ಕ್ಲೀನ್ ಬೌಲ್ಡ್
ಜೊಕೊವಿಕ್- ಅಲ್ಕರಾಜ್ ನಡುವೆ ಆಸ್ಟ್ರೇಲಿಯನ್ ಓಪನ್‌ ಫೈನಲ್​
ಜೊಕೊವಿಕ್- ಅಲ್ಕರಾಜ್ ನಡುವೆ ಆಸ್ಟ್ರೇಲಿಯನ್ ಓಪನ್‌ ಫೈನಲ್​
ನಟಿ, ಮಾಜಿ ರಾಜ್ಯಸಭಾ ಸದಸ್ಯೆ ಬಿ ಜಯಶ್ರೀಯ ಸತಾಯಿಸಿದ ಅಧಿಕಾರಿಗಳು
ನಟಿ, ಮಾಜಿ ರಾಜ್ಯಸಭಾ ಸದಸ್ಯೆ ಬಿ ಜಯಶ್ರೀಯ ಸತಾಯಿಸಿದ ಅಧಿಕಾರಿಗಳು
ಉದ್ಯಮ ಸಾಮ್ರಾಜ್ಯ ಕಟ್ಟಿದ್ದ ಸಿಜೆ ರಾಯ್ ಆತ್ಮಹತ್ಯೆ,ಕಮಿಷನರ್ ಹೇಳಿದ್ದಿಷ್ಟು
ಉದ್ಯಮ ಸಾಮ್ರಾಜ್ಯ ಕಟ್ಟಿದ್ದ ಸಿಜೆ ರಾಯ್ ಆತ್ಮಹತ್ಯೆ,ಕಮಿಷನರ್ ಹೇಳಿದ್ದಿಷ್ಟು
ದಾರಿ ಬಿಡಿ, ದಾರಿ ಬಿಡಿ.. ತವರಿನಲ್ಲಿ ಸಂಜು ಸ್ಯಾಮ್ಸನ್ ಕಾಲೆಳೆದ ಸೂರ್ಯ
ದಾರಿ ಬಿಡಿ, ದಾರಿ ಬಿಡಿ.. ತವರಿನಲ್ಲಿ ಸಂಜು ಸ್ಯಾಮ್ಸನ್ ಕಾಲೆಳೆದ ಸೂರ್ಯ
ಲಂಚ ಪಡೆಯುವಾಗ ತಗ್ಲಾಕೊಂಡ ಇನ್ಸ್​​ಪೆಕ್ಟರ್​​​​​​​ ಕೂಗಾಡಿ ರಂಪಾಟ!
ಲಂಚ ಪಡೆಯುವಾಗ ತಗ್ಲಾಕೊಂಡ ಇನ್ಸ್​​ಪೆಕ್ಟರ್​​​​​​​ ಕೂಗಾಡಿ ರಂಪಾಟ!
ವಿರೋಧದ ನಡುವೆ ಮುಸ್ಲಿಂ ಹುಡ್ಗನ ಮದ್ವೆಯಾಗಿ ಬೀದಿಗೆ ಬಿದ್ದ ಯುವತಿ
ವಿರೋಧದ ನಡುವೆ ಮುಸ್ಲಿಂ ಹುಡ್ಗನ ಮದ್ವೆಯಾಗಿ ಬೀದಿಗೆ ಬಿದ್ದ ಯುವತಿ
ಎಲ್ಲೆಂದರಲ್ಲಿ ಕಸ ಬಿಸಾಡಿದ್ರೇ ಇದೇ ಶಾಸ್ತಿ: ಆಗಿದ್ದೇನು? ವಿಡಿಯೋ ನೋಡಿ
ಎಲ್ಲೆಂದರಲ್ಲಿ ಕಸ ಬಿಸಾಡಿದ್ರೇ ಇದೇ ಶಾಸ್ತಿ: ಆಗಿದ್ದೇನು? ವಿಡಿಯೋ ನೋಡಿ
ಬ್ಯಾಂಕ್​ನಲ್ಲಿ ನಕಲಿ ಚಿನ್ನ ಅಡವಿಟ್ಟು 56 ಲಕ್ಷ ರೂ. ವಂಚನೆ!
ಬ್ಯಾಂಕ್​ನಲ್ಲಿ ನಕಲಿ ಚಿನ್ನ ಅಡವಿಟ್ಟು 56 ಲಕ್ಷ ರೂ. ವಂಚನೆ!