AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಖಾಸಗಿ ವಾಹನದಲ್ಲಿ ಒಂಟಿಯಾಗಿ ಪ್ರಯಾಣಿಸುವಾಗ ಮಾಸ್ಕ್​ ಕಡ್ಡಾಯವಲ್ಲ; ಕೇಂದ್ರ ಸರ್ಕಾರ

ಅರ್ಜಿ ವಿಚಾರಣೆ ವೇಳೆ ಭಾರತ ಸರ್ಕಾರದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ (MoHFW) ದೆಹಲಿ ಹೈಕೋರ್ಟ್‌ಗೆ ಪ್ರತಿಕ್ರಿಯಿಸಿದೆ. ವಾಹನಗಳಲ್ಲಿ ಒಂಟಿಯಾಗಿ ತೆರಳುವಾಗ ಮಾಸ್ಕ್​ ಹಾಕಬೇಕು ಎನ್ನುವುದು ನಿಯಮಾವಳಿಯಲ್ಲಿ ಇಲ್ಲ ಎಂದು ಸ್ಪಷ್ಟಪಡಿಸಿದೆ.

ಖಾಸಗಿ ವಾಹನದಲ್ಲಿ ಒಂಟಿಯಾಗಿ ಪ್ರಯಾಣಿಸುವಾಗ ಮಾಸ್ಕ್​ ಕಡ್ಡಾಯವಲ್ಲ; ಕೇಂದ್ರ ಸರ್ಕಾರ
ಪ್ರಾತಿನಿಧಿಕ ಚಿತ್ರ
ರಾಜೇಶ್ ದುಗ್ಗುಮನೆ
| Edited By: |

Updated on: Jan 10, 2021 | 9:32 PM

Share

ದೆಹಲಿ: ಕಾರಿನಲ್ಲಿ ಅಥವಾ ಯಾವುದೇ ಖಾಸಗಿ ವಾಹನದಲ್ಲಿ ಒಂಟಿಯಾಗಿ ಪ್ರಯಾಣಿಸುವಾಗಲೂ ಮಾಸ್ಕ್​ ಹಾಕದಿದ್ದರೆ ದಂಡ ವಿಧಿಸಿದ್ದ ಸಾಕಷ್ಟು ಪ್ರಕರಣಗಳು ಬೆಳಕಿಗೆ ಬಂದಿದ್ದವು. ಈ ಬಗ್ಗೆ ಸಾರ್ವಜನಿಕರಿಂದ ಆಕ್ರೋಶ ಕೂಡ ವ್ಯಕ್ತವಾಗಿತ್ತು. ಈ ವಿಚಾರಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರ ಸ್ಪಷ್ಟನೆ ನೀಡಿದ್ದು, ಖಾಸಗಿ ವಾಹನದಲ್ಲಿ ಒಬ್ಬಂಟಿಯಾಗಿ ಪ್ರಯಾಣಿಸುವಾಗ ಮಾಸ್ಕ್​ ಕಡ್ಡಾಯವಲ್ಲ ಎಂದು ಹೇಳಿದೆ.

ಸೌರಭ್​ ಶರ್ಮಾ ಹೆಸರಿನ ವಕೀಲರು ಕಾರಿನಲ್ಲಿ ಒಬ್ಬಂಟಿಯಾಗಿ ತೆರಳುತ್ತಿದ್ದರು. ಈ ವೇಳೆ ಮಾಸ್ಕ್​ ಧರಿಸಿಲ್ಲ ಎನ್ನುವ ಕಾರಣಕ್ಕೆ ಅವರಿಗೆ 500 ರೂಪಾಯಿ ದಂಡ ಹಾಕಲಾಗಿತ್ತು. ಇದನ್ನು ಸೌರಭ್​ ಶರ್ಮಾ ದೆಹಲಿ ಹೈಕೋರ್ಟ್​​ನಲ್ಲಿ ಪ್ರಶ್ನೆ ಮಾಡಿದ್ದರು. ಅಲ್ಲದೆ, ಮಾನಸಿಕವಾಗಿ ಹಿಂಸೆ ನೀಡಿದ್ದಕ್ಕೆ 10 ರೂಪಾಯಿ ಪರಿಹಾರ ನೀಡುವಂತೆ ಕೋರಿದ್ದರು.

ಅರ್ಜಿ ವಿಚಾರಣೆ ವೇಳೆ ಭಾರತ ಸರ್ಕಾರದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ (MoHFW) ದೆಹಲಿ ಹೈಕೋರ್ಟ್‌ಗೆ ಪ್ರತಿಕ್ರಿಯಿಸಿದೆ. ವಾಹನಗಳಲ್ಲಿ ಒಂಟಿಯಾಗಿ ತೆರಳುವಾಗ ಮಾಸ್ಕ್​ ಹಾಕಬೇಕು ಎನ್ನುವುದು ನಿಯಮಾವಳಿಯಲ್ಲಿ ಇಲ್ಲ ಎಂದು ಸ್ಪಷ್ಟಪಡಿಸಿದೆ.

ಈ ಮೊದಲು ದೆಹಲಿ ಹೈಕೋರ್ಟ್​ಗೆ ಮಾಹಿತಿ ನೀಡಿದ್ದ ಅರವಿಂದ್​ ಕೇಜ್ರಿವಾಲ್​ ನೇತೃತ್ವದ ಸರ್ಕಾರ, ಯಾವುದೇ ವ್ಯಕ್ತಿ ತನ್ನ ಖಾಸಗಿ ವಾಹನದಲ್ಲಿ ಒಬ್ಬಂಟಿಯಾಗಿ ಸಾಗುತ್ತಿದ್ದರೂ ಮಾಸ್ಕ್​ ಧರಿಸುವುದು ಕಡ್ಡಾಯ ಎಂದಿತ್ತು. ಈಗ ಈ ವಿಚಾರದಲ್ಲಿ ಕೇಂದ್ರ ಸ್ಪಷ್ಟನೆ ನೀಡಿದಂತಾಗಿದೆ.

ಮಹಾರಾಷ್ಟ್ರದಲ್ಲಿ ಇನ್ನು 6 ತಿಂಗಳು ಮಾಸ್ಕ್ ಕಡ್ಡಾಯ: ಮುಖ್ಯಮಂತ್ರಿ ಉದ್ಧವ್ ಠಾಕ್ರೆ

Follow Us
ಜೋಳ ತಿಂದು ಅಡ್ಡಾದಿಡ್ಡಿ ಓಡಿದ ಆನೆ ಮರಿ
ಜೋಳ ತಿಂದು ಅಡ್ಡಾದಿಡ್ಡಿ ಓಡಿದ ಆನೆ ಮರಿ
ದಕ್ಷಿಣ ಕನ್ನಡದಲ್ಲಿ ಭಾರಿ ಮಳೆ: ಶಾಲೆ, ಕಾಲೇಜುಗಳಿಗೆ ರಜೆ
ದಕ್ಷಿಣ ಕನ್ನಡದಲ್ಲಿ ಭಾರಿ ಮಳೆ: ಶಾಲೆ, ಕಾಲೇಜುಗಳಿಗೆ ರಜೆ
ಮೇಷಕ್ಕೆ ಹೂಡಿಕೆಯಲ್ಲಿ ಲಾಭ, ವೃಷಭಕ್ಕೆ ಉದ್ಯೋಗದಲ್ಲಿ ಸ್ಥಾನ ಪಲ್ಲಟದ ಯೋಗ
ಮೇಷಕ್ಕೆ ಹೂಡಿಕೆಯಲ್ಲಿ ಲಾಭ, ವೃಷಭಕ್ಕೆ ಉದ್ಯೋಗದಲ್ಲಿ ಸ್ಥಾನ ಪಲ್ಲಟದ ಯೋಗ
ಕುಮಾರ್ ಬಂಗಾರಪ್ಪ ಹೊಗಳಿಕೆ ಮಾತು ಕೇಳಿ ತಬ್ಬಿಕೊಂಡ ರಾಗಿಣಿ ದ್ವಿವೇದಿ
ಕುಮಾರ್ ಬಂಗಾರಪ್ಪ ಹೊಗಳಿಕೆ ಮಾತು ಕೇಳಿ ತಬ್ಬಿಕೊಂಡ ರಾಗಿಣಿ ದ್ವಿವೇದಿ
ನಟಿ ಪ್ರಿಯಾಂಕಾ ಉಪೇಂದ್ರ 50ನೇ ಸಿನಿಮಾ ‘ಡಿಟೆಕ್ಟಿವ್ ತೀಷ್ಣ’; ಏನಿದರ ಕಥೆ?
ನಟಿ ಪ್ರಿಯಾಂಕಾ ಉಪೇಂದ್ರ 50ನೇ ಸಿನಿಮಾ ‘ಡಿಟೆಕ್ಟಿವ್ ತೀಷ್ಣ’; ಏನಿದರ ಕಥೆ?
ಬಸ್ ಮೇಲೆ ಬಿದ್ದ ಬೃಹತ್ ಮರ; ಯುಕೆಜಿ ಬಾಲಕಿ ಚಿರನ್ವಿ ಸಾವು
ಬಸ್ ಮೇಲೆ ಬಿದ್ದ ಬೃಹತ್ ಮರ; ಯುಕೆಜಿ ಬಾಲಕಿ ಚಿರನ್ವಿ ಸಾವು
'ಮೊಟ್ಟೆ ಹೊಡೆಯುವ ಸಂಸ್ಕೃತಿ ಶುರು ಮಾಡಿದ್ದೇ ಬಿಜೆಪಿಯವರು': ಹರಿಪ್ರಸಾದ್
'ಮೊಟ್ಟೆ ಹೊಡೆಯುವ ಸಂಸ್ಕೃತಿ ಶುರು ಮಾಡಿದ್ದೇ ಬಿಜೆಪಿಯವರು': ಹರಿಪ್ರಸಾದ್
‘ಮುಂಗಾರು ಮಳೆ’, ‘ಕೆಜಿಎಫ್’ ಸಿನಿಮಾಗಳ ಸ್ಮರಿಸಿದ ತೆಲುಗು ನಟ: ವಿಡಿಯೋ
‘ಮುಂಗಾರು ಮಳೆ’, ‘ಕೆಜಿಎಫ್’ ಸಿನಿಮಾಗಳ ಸ್ಮರಿಸಿದ ತೆಲುಗು ನಟ: ವಿಡಿಯೋ
ಪತ್ನಿಗೆ ಗೃಹಲಕ್ಷ್ಮಿ ಹಣ ಬಂದಿಲ್ಲ: ಪತಿ ಏಕಾಂಗಿಯಾಗಿ ಪ್ರತಿಭಟನೆ
ಪತ್ನಿಗೆ ಗೃಹಲಕ್ಷ್ಮಿ ಹಣ ಬಂದಿಲ್ಲ: ಪತಿ ಏಕಾಂಗಿಯಾಗಿ ಪ್ರತಿಭಟನೆ
‘ಬಿಜೆಪಿಗರ ಮೇಲೆ ಮೊಟ್ಟೆ ಎಸೆತ ಪೂರ್ವ ನಿಯೋಜಿತ ಕೃತ್ಯ’ ಎಂದ ಆರ್​​ ಅಶೋಕ್
‘ಬಿಜೆಪಿಗರ ಮೇಲೆ ಮೊಟ್ಟೆ ಎಸೆತ ಪೂರ್ವ ನಿಯೋಜಿತ ಕೃತ್ಯ’ ಎಂದ ಆರ್​​ ಅಶೋಕ್