ತಪ್ಪಿತಸ್ಥರಿಗೆ ಕಠಿಣ ಶಿಕ್ಷೆ ಖಂಡಿತ; ಪುಣೆ ಪೋರ್ಷೆ ಅಪಘಾತದ ಬಗ್ಗೆ ಮೌನ ಮುರಿದ ಸಿಎಂ ಏಕನಾಥ್ ಶಿಂಧೆ

ಪುಣೆಯಲ್ಲಿ ನಡೆದ ಪೋರ್ಷೆ ಕಾರು ಅಪಘಾತದ ಕುರಿತು ಇದೇ ಮೊದಲ ಬಾರಿಗೆ ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ್ ಶಿಂಧೆ ಪ್ರತಿಕ್ರಿಯಿಸಿದ್ದಾರೆ. ಮಹಾರಾಷ್ಟ್ರ ಸರ್ಕಾರ ಈ ಅಪಘಾತದ ಕುರಿತು ಕಠಿಣ ಕ್ರಮ ಕೈಗೊಳ್ಳುತ್ತಿಲ್ಲ, ಅಪರಾಧಿಗಳನ್ನು ಬಚಾವ್ ಮಾಡಲು ನೋಡುತ್ತಿದೆ ಎಂಬ ವಿರೋಧ ಪಕ್ಷಗಳ ಆರೋಪದ ಬೆನ್ನಲ್ಲೇ ಕೊನೆಗೂ ಸಿಎಂ ಶಿಂಧೆ ಮೌನ ಮುರಿದಿದ್ದಾರೆ.

ತಪ್ಪಿತಸ್ಥರಿಗೆ ಕಠಿಣ ಶಿಕ್ಷೆ ಖಂಡಿತ; ಪುಣೆ ಪೋರ್ಷೆ ಅಪಘಾತದ ಬಗ್ಗೆ ಮೌನ ಮುರಿದ ಸಿಎಂ ಏಕನಾಥ್ ಶಿಂಧೆ
ಏಕನಾಥ್ ಶಿಂಧೆ
Follow us
|

Updated on: May 28, 2024 | 9:24 PM

ಮುಂಬೈ: ವ್ಯಕ್ತಿಯು ಎಷ್ಟೇ ಶ್ರೀಮಂತನಾಗಿರಲಿ ಅಥವಾ ಬಡವನಾಗಿರಲಿ ಕಾನೂನು ಎಲ್ಲರಿಗೂ ಸಮಾನವಾಗಿರುತ್ತದೆ. ತಪ್ಪು ಮಾಡಿದ ಯಾರನ್ನೂ ಸುಮ್ಮನೆ ಬಿಡುವುದಿಲ್ಲ. ತಪ್ಪತಸ್ಥರ ವಿರುದ್ಧ ನಾನು ಕಠಿಣ ಕ್ರಮಕ್ಕೆ ಆದೇಶಿಸಿದ್ದೇನೆ ಎಂದು ಪುಣೆ ಪೋರ್ಷೆ ಅಪಘಾತದ ಬಗ್ಗೆ ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ್ ಶಿಂಧೆ (Eknath Shinde) ಮೊದಲ ಬಾರಿಗೆ ಪ್ರತಿಕ್ರಿಯೆ ನೀಡಿದ್ದಾರೆ. ಈ ಅಪಘಾತ ನಡೆದ ಮೊದಲ ದಿನದಿಂದ ಪುಣೆ ಪೊಲೀಸ್ ಆಯುಕ್ತರೊಂದಿಗೆ ಸಂಪರ್ಕದಲ್ಲಿದ್ದೇನೆ. ಎಲ್ಲ ಮಾಹಿತಿಯನ್ನೂ ನಾನು ಪಡೆಯುತ್ತಿದ್ದೇನೆ ಎಂದು ಅವರು ಹೇಳಿದ್ದಾರೆ.

ನಾನು ಅಪಘಾತ ಸಂಭವಿಸಿದ ಮೊದಲ ದಿನದಿಂದಲೂ ಪುಣೆ ಪೊಲೀಸ್ ಆಯುಕ್ತರೊಂದಿಗೆ ಸಂಪರ್ಕದಲ್ಲಿದ್ದೇನೆ. ವ್ಯಕ್ತಿ ಎಷ್ಟೇ ಪ್ರಭಾವಶಾಲಿಯಾಗಿದ್ದರೂ ಯಾವುದೇ ತಾರತಮ್ಯ ಮಾಡಬಾರದು ಎಂದು ನಾನು ಮೊದಲಿನಿಂದಲೂ ಹೇಳಿದ್ದೇನೆ ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ: ಪೋರ್ಷೆ ಕಾರು ಅಪಘಾತ; ಅಪ್ರಾಪ್ತನ ತಂದೆ ವಿಶಾಲ್ ಅಗರ್​ವಾಲ್ 3 ದಿನ ಪೊಲೀಸ್ ವಶಕ್ಕೆ

ಎನ್‌ಡಿಟಿವಿ ವರದಿಯ ಪ್ರಕಾರ, ಮಹಾರಾಷ್ಟ್ರ ಸಿಎಂ ವೈಯಕ್ತಿಕವಾಗಿ ಪುಣೆ ಪೊಲೀಸ್ ಕಮಿಷನರ್‌ಗೆ ವೈದ್ಯರು ಅಥವಾ ಬೇರೆಯವರೂ ಸೇರಿದಂತೆ ಎಲ್ಲರನ್ನೂ ಹೊಣೆಗಾರರನ್ನಾಗಿ ಮಾಡಲು ಸೂಚಿಸಿದ್ದಾರೆ.

ಸಾವಿಗೀಡಾದ ಇಬ್ಬರು ಕೂಡ ಯಾರೋ ಒಬ್ಬರ ಮಕ್ಕಳು. ಈ ಪ್ರಕರಣದಲ್ಲಿ ಎಲ್ಲ ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು. ಅವರ ಹಿನ್ನೆಲೆಯನ್ನೂ ಪರಿಶೀಲಿಸಲಾಗುವುದು. ವೈದ್ಯರಾಗಲಿ ಅಥವಾ ಬೇರೆಯವರಾಗಲಿ ಯಾರನ್ನೂ ಬಿಡಬೇಡಿ ಎಂದು ಪೊಲೀಸ್ ಕಮಿಷನರ್‌ಗೆ ಖುದ್ದಾಗಿ ಹೇಳಿದ್ದೇನೆ ಎಂದು ಏಕನಾಥ್ ಶಿಂಧೆ ತಿಳಿಸಿದ್ದಾರೆ.

ಮಹಾರಾಷ್ಟ್ರದಲ್ಲಿ ಪೊಲೀಸರು, ರಾಜಕಾರಣಿಗಳು ಮತ್ತು ಶ್ರೀಮಂತ ವ್ಯಕ್ತಿಗಳ ನಡುವಿನ ಸಂಬಂಧವನ್ನು ಆರೋಪಿಸಿ ಮುಖ್ಯಮಂತ್ರಿ ಮತ್ತು ಅವರ ಸಚಿವ ಸಂಪುಟ ರಾಜೀನಾಮೆ ನೀಡಬೇಕೆಂದು ಕಾಂಗ್ರೆಸ್‌ನ ಮಹಾರಾಷ್ಟ್ರ ಅಧ್ಯಕ್ಷ ನಾನಾ ಪಟೋಲೆ ಒತ್ತಾಯಿಸಿದ್ದರು. ಇದರ ಬೆನ್ನಲ್ಲೇ ಏಕನಾಥ್ ಶಿಂಧೆ ಈ ಅಪಘಾತದ ಬಗ್ಗೆ ಮೊದಲ ಬಾರಿಗೆ ಹೇಳಿಕೆ ನೀಡಿದ್ದಾರೆ.

ಇದನ್ನೂ ಓದಿ: Pune Porsche Accident: ಪುಣೆ ಪೋರ್ಷೆ ಅಪಘಾತ; ಅಗರ್​ವಾಲ್ ಕುಟುಂಬದ ವಿರುದ್ಧ ಮತ್ತೊಬ್ಬರಿಂದ ದೂರು

ಏನಿದು ಘಟನೆ?:

ಮೇ 19ರಂದು ಪೋರ್ಷೆ ಕಾರು ಚಲಾಯಿಸಿ ಇಬ್ಬರು ಸಾಫ್ಟ್‌ವೇರ್ ಇಂಜಿನಿಯರ್‌ಗಳ ಸಾವಿಗೆ ಕಾರಣವಾದ 17ರ ಹರೆಯದ ಯುವಕನನ್ನು ಒಳಗೊಂಡ ಪುಣೆ ಅಪಘಾತ ಪ್ರಕರಣವು ರಾಷ್ಟ್ರವ್ಯಾಪಿ ಆಕ್ರೋಶಕ್ಕೆ ಕಾರಣವಾಗಿತ್ತು. ಕುಡಿದ ಮತ್ತಿನಲ್ಲಿ ಮಧ್ಯಪ್ರದೇಶ ಮೂಲದ ಇಬ್ಬರು ಪ್ರಯಾಣಿಸುತ್ತಿದ್ದ ಬೈಕ್​ಗೆ ಪೋರ್ಷೆ ಕಾರು ಡಿಕ್ಕಿ ಹೊಡೆದು ಅವರಿಬ್ಬರೂ ಸಾವನ್ನಪ್ಪಿದ್ದರು. ಪುಣೆಯ ಅಪ್ರಾಪ್ತ ಚಾಲಕನ ರಕ್ತದ ಮಾದರಿ ಬದಲಿಸಿದ್ದಕ್ಕಾಗಿ ಆಸ್ಪತ್ರೆಯ ಇಬ್ಬರು ವೈದ್ಯರು ಮತ್ತು ಉದ್ಯೋಗಿಯ ಬಂಧನದೊಂದಿಗೆ ಈ ಪ್ರಕರಣ ಹೊಸ ತಿರುವು ಪಡೆದುಕೊಂಡಿದೆ.

ಪುಣೆ ಪೊಲೀಸರು ಸಸೂನ್ ಆಸ್ಪತ್ರೆಯ ಫೋರೆನ್ಸಿಕ್ ಮೆಡಿಸಿನ್ ವಿಭಾಗದ ಮುಖ್ಯಸ್ಥ ಡಾ. ಅಜಯ್ ತಾವರೆ, ಮುಖ್ಯ ವೈದ್ಯಾಧಿಕಾರಿ ಡಾ. ಶ್ರೀಹರಿ ಹಾಲ್ನೋರ್ ಮತ್ತು ಡಾ. ತಾವರೆ ಅವರ ಅಡಿಯಲ್ಲಿ ಕೆಲಸ ಮಾಡುವ ಅತುಲ್ ಘಟಕಾಂಬಳೆ ಅವರನ್ನು ಬಂಧಿಸಿದ್ದಾರೆ. ಅವರನ್ನು ಮೇ 30ರವರೆಗೆ ಪೊಲೀಸ್ ಕಸ್ಟಡಿಗೆ ನೀಡಲಾಗಿದೆ.

ಈಗಾಗಲೇ ಅಪ್ರಾಪ್ತ ಬಾಲಕನ ತಂದೆ ವಿಶಾಲ್ ಅಗರ್ವಾಲ್ ಮತ್ತು ಅಜ್ಜ ಸುರೇಂದ್ರ ಅಗರ್ವಾಲ್ ವಿರುದ್ಧ ತಮ್ಮ ಚಾಲಕನ ‘ಅಕ್ರಮ ಬಂಧನ’ಕ್ಕಾಗಿ ಪ್ರಕರಣ ದಾಖಲಿಸಿದ್ದಾರೆ. ಪೊಲೀಸರ ಪ್ರಕಾರ, ತಂದೆ ಮತ್ತು ಅಜ್ಜ ಇಬ್ಬರೂ ಕುಟುಂಬದ ಚಾಲಕನಿಗೆ ಹಣ ನೀಡುವುದಾಗಿ ಮತ್ತು ಬೆದರಿಕೆ ಹಾಕುವ ಮೂಲಕ ಅಪಘಾತದ ಹೊಣೆ ಹೊರುವಂತೆ ಒತ್ತಡ ಹೇರಿದ್ದರು. ಅಲ್ಲದೆ, ಸುರೇಂದ್ರ ಅಗರ್​ವಾಲ್ ಅವರಿಗೆ ಭೂಗತ ಲೋಕದ ನಂಟಿದೆ ಎಂದು ಕೂಡ ಹೇಳಲಾಗುತ್ತಿದೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ತಾಜಾ ಸುದ್ದಿ
‘ಈ ಸ್ಥಿತಿ ಬಂದಿದ್ದಕ್ಕೆ ​ ಜೈಲಿನಲ್ಲಿ ದರ್ಶನ್ ಸಾಕಷ್ಟು ನೋವಿನಲ್ಲಿದ್ದಾರೆ’
‘ಈ ಸ್ಥಿತಿ ಬಂದಿದ್ದಕ್ಕೆ ​ ಜೈಲಿನಲ್ಲಿ ದರ್ಶನ್ ಸಾಕಷ್ಟು ನೋವಿನಲ್ಲಿದ್ದಾರೆ’
ಆಷಾಢ ಮಾಸದ ವಿಶೇಷ ರಾಶಿ ಭವಿಷ್ಯ 2024: ಯಾವ ರಾಶಿಗೆ ಏನು ಫಲ? ಇಲ್ಲಿದೆ ವಿವರ
ಆಷಾಢ ಮಾಸದ ವಿಶೇಷ ರಾಶಿ ಭವಿಷ್ಯ 2024: ಯಾವ ರಾಶಿಗೆ ಏನು ಫಲ? ಇಲ್ಲಿದೆ ವಿವರ
ಈ ರಾಶಿಯವರು ಮೇಲಿದ ಬಿದ್ದು ಕಾಲು ನೋವು ಮಾಡಿಕೊಳ್ಳುವ ಸಂಭವವಿದೆ, ಎಚ್ಚರ
ಈ ರಾಶಿಯವರು ಮೇಲಿದ ಬಿದ್ದು ಕಾಲು ನೋವು ಮಾಡಿಕೊಳ್ಳುವ ಸಂಭವವಿದೆ, ಎಚ್ಚರ
ಮಕ್ಕಳಿಗೆ ದೃಷ್ಠಿ ಬೊಟ್ಟುಇಡುವುದರ ಅರ್ಥವೇನು ಗೊತ್ತಾ?
ಮಕ್ಕಳಿಗೆ ದೃಷ್ಠಿ ಬೊಟ್ಟುಇಡುವುದರ ಅರ್ಥವೇನು ಗೊತ್ತಾ?
ಹೊಸ ಫೋಲ್ಡ್​ ಫೋನ್ ಪ್ರಿ ಬುಕಿಂಗ್ ಆರಂಭಿಸಿದ ಸ್ಯಾಮ್​ಸಂಗ್
ಹೊಸ ಫೋಲ್ಡ್​ ಫೋನ್ ಪ್ರಿ ಬುಕಿಂಗ್ ಆರಂಭಿಸಿದ ಸ್ಯಾಮ್​ಸಂಗ್
ಕಾಶಪ್ಪನವರ್ ಸಿಎಂ ಆಗಬೇಕೆಂದ ನಂದವಾಡಗಿ ವೀರಶೈವ ಲಿಂಗಾಯತ ಮಠದ ಸ್ವಾಮೀಜಿ
ಕಾಶಪ್ಪನವರ್ ಸಿಎಂ ಆಗಬೇಕೆಂದ ನಂದವಾಡಗಿ ವೀರಶೈವ ಲಿಂಗಾಯತ ಮಠದ ಸ್ವಾಮೀಜಿ
ಹಾವೇರಿ ಉಪ ಚುನಾವಣೆಗಾಗಿ ಈಗಿಂದಲೇ ಕೆಲಸ ಶುರುಮಾಡಿದ್ದೇವೆ:ಸತೀಶ್ ಜಾರಕಿಹೊಳಿ
ಹಾವೇರಿ ಉಪ ಚುನಾವಣೆಗಾಗಿ ಈಗಿಂದಲೇ ಕೆಲಸ ಶುರುಮಾಡಿದ್ದೇವೆ:ಸತೀಶ್ ಜಾರಕಿಹೊಳಿ
ಈ ನಟಿಯರು ಇಷ್ಟು ದಿನ ಯಾಕೆ ಸುಮ್ಮನಿದ್ರು? ರೇಣುಕಾ ಸ್ವಾಮಿ ತಂದೆ ಪ್ರಶ್ನೆ
ಈ ನಟಿಯರು ಇಷ್ಟು ದಿನ ಯಾಕೆ ಸುಮ್ಮನಿದ್ರು? ರೇಣುಕಾ ಸ್ವಾಮಿ ತಂದೆ ಪ್ರಶ್ನೆ
ದರ್ಶನ್ ₹22 ಕೋಟಿ ಸಂಭಾವನೆ ಪಡೆಯೋದು ಕೇಳಿ ಶಾಕ್ ಆಯ್ತು: ಸರಿಗಮ ವಿಜಿ
ದರ್ಶನ್ ₹22 ಕೋಟಿ ಸಂಭಾವನೆ ಪಡೆಯೋದು ಕೇಳಿ ಶಾಕ್ ಆಯ್ತು: ಸರಿಗಮ ವಿಜಿ
ಕುಡುಕ ಆಟೋರಿಕ್ಷಾ ಸೆಲ್ಫೀ ತೆಗೆಸಿಕೊಂಡ ಬಳಿಕ ಈಶ್ವರಪ್ಪ ಕುಡಿತ ಬಿಡು ಅಂದರು
ಕುಡುಕ ಆಟೋರಿಕ್ಷಾ ಸೆಲ್ಫೀ ತೆಗೆಸಿಕೊಂಡ ಬಳಿಕ ಈಶ್ವರಪ್ಪ ಕುಡಿತ ಬಿಡು ಅಂದರು