AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನುಹ್​ನಲ್ಲಿ ಶೋಭಾ ಯಾತ್ರೆಗೆ ಅನುಮತಿ ನಿರಾಕರಣೆ, ಮೆರವಣಿಗೆ ಮಾಡೇ ಮಾಡುತ್ತೇವೆಂದು ಪಟ್ಟು ಹಿಡಿದ ಹಿಂದೂ ಪರ ಸಂಘಟನೆಗಳು

ಸೂಕ್ಷ್ಮ ಜಿಲ್ಲೆಯಾದ ನುಹ್​ನಲ್ಲಿ ಶೋಭಾ ಯಾತ್ರೆಗೆ ಅನುಮತಿ ನೀಡದಿದ್ದರೂ ತಮ್ಮ ಯಾತ್ರೆಯನ್ನು ಮುಂದುವರೆಸುವುದಾಗಿ ಹಿಂದೂ ಪರ ಸಂಘಟನೆಗಳು ತಿಳಿಸಿವೆ. ಜುಲೈ 31 ರಂದು ವಿಶ್ವ ಹಿಂದೂ ಪರಿಷತ್ (ವಿಎಚ್‌ಪಿ) ಮೆರವಣಿಗೆಯ ಮೇಲೆ ಗುಂಪು ದಾಳಿ ಮಾಡಿತ್ತು, ಮುಸ್ಲಿಂ ಸಂಖ್ಯೆ ಹೆಚ್ಚಿರುವ ನುಹ್‌ನಲ್ಲಿ ನಡೆದ ಘರ್ಷಣೆಯಲ್ಲಿ ಆರು ಜನರು ಸಾವನ್ನಪ್ಪಿದರು. ಮೃತರಲ್ಲಿ ಇಬ್ಬರು ಗೃಹರಕ್ಷಕರು ಹಾಗೂ ಓರ್ವ ಧರ್ಮಗುರು ಸೇರಿದ್ದಾರೆ.

ನುಹ್​ನಲ್ಲಿ ಶೋಭಾ ಯಾತ್ರೆಗೆ ಅನುಮತಿ ನಿರಾಕರಣೆ, ಮೆರವಣಿಗೆ ಮಾಡೇ ಮಾಡುತ್ತೇವೆಂದು ಪಟ್ಟು ಹಿಡಿದ ಹಿಂದೂ ಪರ ಸಂಘಟನೆಗಳು
ಭದ್ರತೆImage Credit source: NDTV
ನಯನಾ ರಾಜೀವ್
|

Updated on: Aug 28, 2023 | 7:50 AM

Share

ಸೂಕ್ಷ್ಮ ಜಿಲ್ಲೆಯಾದ ನುಹ್​ನಲ್ಲಿ ಶೋಭಾ ಯಾತ್ರೆಗೆ ಅನುಮತಿ ನೀಡದಿದ್ದರೂ ತಮ್ಮ ಯಾತ್ರೆಯನ್ನು ಮುಂದುವರೆಸುವುದಾಗಿ ಹಿಂದೂ ಪರ ಸಂಘಟನೆಗಳು ತಿಳಿಸಿವೆ. ಜುಲೈ 31 ರಂದು ವಿಶ್ವ ಹಿಂದೂ ಪರಿಷತ್ (ವಿಎಚ್‌ಪಿ) ಮೆರವಣಿಗೆಯ ಮೇಲೆ ಗುಂಪು ದಾಳಿ ಮಾಡಿತ್ತು, ಮುಸ್ಲಿಂ ಸಂಖ್ಯೆ ಹೆಚ್ಚಿರುವ ನುಹ್‌ನಲ್ಲಿ ನಡೆದ ಘರ್ಷಣೆಯಲ್ಲಿ ಆರು ಮಂದಿ ಸಾವನ್ನಪ್ಪಿದರು. ಮೃತರಲ್ಲಿ ಇಬ್ಬರು ಗೃಹರಕ್ಷಕರು ಹಾಗೂ ಓರ್ವ ಧರ್ಮಗುರು ಸೇರಿದ್ದಾರೆ.

ಪ್ರತಿಭಟನೆಗೆ ಪ್ರತಿಕ್ರಿಯೆಯಾಗಿ, ಹರಿಯಾಣ ಸರ್ಕಾರವು 1,900 ಹರಿಯಾಣ ಪೊಲೀಸ್ ಸಿಬ್ಬಂದಿ ಮತ್ತು 24 ಕಂಪನಿ ಅರೆಸೇನಾ ಪಡೆಗಳನ್ನು ಅಂತರ-ರಾಜ್ಯ ಮತ್ತು ಅಂತರ-ಜಿಲ್ಲಾ ಗಡಿಗಳಲ್ಲಿ ನಿಯೋಜಿಸುವ ಮೂಲಕ ಜಿಲ್ಲೆಯಲ್ಲಿ ಭದ್ರತೆಯನ್ನು ಬಿಗಿಗೊಳಿಸಿದೆ. ಸೆಪ್ಟೆಂಬರ್ 3 ರಿಂದ 7 ರವರೆಗೆ ನುಹ್‌ನಲ್ಲಿ ಜಿ 20 ಶೆರ್ಪಾ ಗ್ರೂಪ್ ಸಭೆ ಮತ್ತು ಜುಲೈ 31 ಹಿಂಸಾಚಾರದ ನಂತರ ಕಾನೂನು ಮತ್ತು ಸುವ್ಯವಸ್ಥೆಯನ್ನು ಕಾಪಾಡುವ ಅಗತ್ಯತೆಯಿಂದಾಗಿ ರಾಜ್ಯ ಆಡಳಿತವು ಯಾತ್ರೆಗೆ ಅನುಮತಿ ನಿರಾಕರಿಸಿದೆ.

ಮುಂಜಾಗ್ರತಾ ಕ್ರಮವಾಗಿ ಜಿಲ್ಲೆಯಲ್ಲಿ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ. ಹೊರಗಿನವರು ಪ್ರವೇಶಿಸುವುದನ್ನು ನಿಷೇಧಿಸಲಾಗಿದೆ, ಶಿಕ್ಷಣ ಸಂಸ್ಥೆಗಳು ಮತ್ತು ಬ್ಯಾಂಕ್‌ಗಳನ್ನು ಮುಚ್ಚಲಾಗಿದೆ ಮತ್ತು ಮೊಬೈಲ್ ಇಂಟರ್ನೆಟ್ ಮತ್ತು ಬೃಹತ್ SMS ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಜುಲೈನಲ್ಲಿ ಕೋಮು ಘರ್ಷಣೆಯನ್ನು ಕಂಡ ಜಿಲ್ಲೆಯಲ್ಲಿ ನಾಲ್ಕು ಅಥವಾ ಅದಕ್ಕಿಂತ ಹೆಚ್ಚು ಜನರು ಒಟ್ಟಿಗೆ ಸೇರಬಾರದು ಎಂದು ಹೇಳಲಾಗಿದೆ.

ಮತ್ತಷ್ಟು ಓದಿ: G20 ಸಿದ್ಧತೆ ನಡುವೆ ಕೋಮು ಗಲಭೆ‌ ಆತಂಕ: ಹರಿಯಾಣದ ನುಹ್‌ನಲ್ಲಿ ಮತ್ತೆ ಸೆಕ್ಷನ್ 144 ಜಾರಿ

ಹರ್ಯಾಣ ಪೊಲೀಸರು ಟೋಲ್ ಮೂಲಕ ಹಾದುಹೋಗುವ ಪ್ರತಿಯೊಂದು ವಾಹನವನ್ನು ನಿಲ್ಲಿಸಿ ತಪಾಸಣೆ ನಡೆಸುತ್ತಿದ್ದಾರೆ. ಅಧಿಕಾರಿಗಳು ಅನುಮತಿ ನಿರಾಕರಿಸಿರುವ ಮೆರವಣಿಗೆಯಲ್ಲಿ ಪಾಲ್ಗೊಳ್ಳುವ ಬದಲು ಸಮೀಪದ ದೇವಸ್ಥಾನಗಳಿಗೆ ಭೇಟಿ ನೀಡಿ ಪ್ರಾರ್ಥನೆ ಸಲ್ಲಿಸುವಂತೆ ಹರಿಯಾಣ ಮುಖ್ಯಮಂತ್ರಿ ಮನೋಹರ್ ಲಾಲ್ ಖಟ್ಟರ್ ಭಾನುವಾರ ಜನರಿಗೆ ಸಲಹೆ ನೀಡಿದ್ದಾರೆ. ಕೋಮು ಘರ್ಷಣೆಗೆ ಸಂಬಂಧಿಸಿದಂತೆ ಇದುವರೆಗೆ 393 ಜನರನ್ನು ಬಂಧಿಸಲಾಗಿದೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಗೋಪಾಲ್‌ಗಂಜ್‌ನ ದೇವಸ್ಥಾನದಿಂದ 50 ಲಕ್ಷ ಮೌಲ್ಯದ ಚಿನ್ನದ ಕಿರೀಟ, ಆಭರಣ ಕಳವು
ಗೋಪಾಲ್‌ಗಂಜ್‌ನ ದೇವಸ್ಥಾನದಿಂದ 50 ಲಕ್ಷ ಮೌಲ್ಯದ ಚಿನ್ನದ ಕಿರೀಟ, ಆಭರಣ ಕಳವು
ಗಂಡನ ಬಗ್ಗೆ ಬಿಗ್ ಬಾಸ್​ನಲ್ಲಿ ಚೈತ್ರಾ ಕುಂದಾಪುರ ಹೇಳಿದ್ದು ಸುಳ್ಳು: ತಂದೆ
ಗಂಡನ ಬಗ್ಗೆ ಬಿಗ್ ಬಾಸ್​ನಲ್ಲಿ ಚೈತ್ರಾ ಕುಂದಾಪುರ ಹೇಳಿದ್ದು ಸುಳ್ಳು: ತಂದೆ
ಪ್ರೇಮ್ ಕಹಾನಿ: 19 ವರ್ಷದ ಯುವತಿ ಹಿಂದೆ ಬಿದ್ದು ದುರಂತ ಅಂತ್ಯಕಂಡ 40 ಅಂಕಲ್
ಪ್ರೇಮ್ ಕಹಾನಿ: 19 ವರ್ಷದ ಯುವತಿ ಹಿಂದೆ ಬಿದ್ದು ದುರಂತ ಅಂತ್ಯಕಂಡ 40 ಅಂಕಲ್
ಬೇರೆ ಮಹಿಳೆ ಜತೆ ಲವ್ವಿಡವ್ವಿ: ಹೆಂಡ್ತಿ ಹತ್ಯೆಗೆ ಸುಪಾರಿ ಕೊಟ್ಟ ಪತಿ
ಬೇರೆ ಮಹಿಳೆ ಜತೆ ಲವ್ವಿಡವ್ವಿ: ಹೆಂಡ್ತಿ ಹತ್ಯೆಗೆ ಸುಪಾರಿ ಕೊಟ್ಟ ಪತಿ
ಡಿಕೆಶಿ ಪ್ರಾರ್ಥನೆಗೆ ಅಸ್ತು ಎಂದಳಾ ಶಕ್ತಿದೇವಿ? ಅರ್ಚಕರು ಹೇಳಿದ್ದಿಷ್ಟು
ಡಿಕೆಶಿ ಪ್ರಾರ್ಥನೆಗೆ ಅಸ್ತು ಎಂದಳಾ ಶಕ್ತಿದೇವಿ? ಅರ್ಚಕರು ಹೇಳಿದ್ದಿಷ್ಟು
ಚೈತ್ರಾ ಕುಂದಾಪುರ ಡಿಬಾರ್ ಆಗಿದ್ದಳು: ಎಲ್ಲ ವಿಷಯ ಹೇಳಿದ ತಂದೆ ಬಾಲಕೃಷ್ಣ
ಚೈತ್ರಾ ಕುಂದಾಪುರ ಡಿಬಾರ್ ಆಗಿದ್ದಳು: ಎಲ್ಲ ವಿಷಯ ಹೇಳಿದ ತಂದೆ ಬಾಲಕೃಷ್ಣ
ಸಂಜು ಹೊಡೆತಕ್ಕೆ ಸಿಲುಕಿ ನೋವಿನಿಂದ ನರಳಾಡಿದ ಅಂಪೈರ್
ಸಂಜು ಹೊಡೆತಕ್ಕೆ ಸಿಲುಕಿ ನೋವಿನಿಂದ ನರಳಾಡಿದ ಅಂಪೈರ್
ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್
ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್
ಗೃಹಲಕ್ಷ್ಮೀ ಹಣದ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಸಿಎಂ ಆರ್ಥಿಕ ಸಲಹೆಗಾರ
ಗೃಹಲಕ್ಷ್ಮೀ ಹಣದ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಸಿಎಂ ಆರ್ಥಿಕ ಸಲಹೆಗಾರ
ಶಾಲೆಗೆ ಬರುವ ಮಕ್ಕಳನ್ನ ಗಾರೆ ಕೆಲಸಕ್ಕಚ್ಚಿದ ಮೇಸ್ಟ್ರು, ವಿಡಿಯೋ ವೈರಲ್
ಶಾಲೆಗೆ ಬರುವ ಮಕ್ಕಳನ್ನ ಗಾರೆ ಕೆಲಸಕ್ಕಚ್ಚಿದ ಮೇಸ್ಟ್ರು, ವಿಡಿಯೋ ವೈರಲ್