AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Hijab Verdict: ಕರ್ನಾಟಕದ ಶಿಕ್ಷಣ ಸಂಸ್ಥೆಗಳಲ್ಲಿ ಹಿಜಾಬ್​ ಧರಿಸಲು ಇಲ್ಲ ಅವಕಾಶ

ಹಿಜಾಬ್ ವಿವಾದದ ಬಗ್ಗೆ ನ್ಯಾಯಾಧೀಶರು ವಿಭಜಿತ ತೀರ್ಪು ನೀಡಿರುವುದರಿಂದ ಸದ್ಯದ ಮಟ್ಟಿಗೆ ಕರ್ನಾಟಕ ಹೈಕೋರ್ಟ್​ನ ಹಿಜಾಬ್ ತೀರ್ಪು ಊರ್ಜಿತದಲ್ಲಿ ಇರುತ್ತದೆ ಎಂದು ಕಾನೂನು ತಜ್ಞರು ಹೇಳಿದ್ದಾರೆ.

Hijab Verdict: ಕರ್ನಾಟಕದ ಶಿಕ್ಷಣ ಸಂಸ್ಥೆಗಳಲ್ಲಿ ಹಿಜಾಬ್​ ಧರಿಸಲು ಇಲ್ಲ ಅವಕಾಶ
ಪ್ರಾತಿನಿಧಿಕ ಚಿತ್ರ
TV9 Web
| Edited By: |

Updated on:Oct 13, 2022 | 11:23 AM

Share

ದೆಹಲಿ: ಹಿಜಾಬ್ ವಿವಾದದ ಬಗ್ಗೆ ನ್ಯಾಯಾಧೀಶರು ವಿಭಜಿತ ತೀರ್ಪು ನೀಡಿರುವುದರಿಂದ ಸದ್ಯದ ಮಟ್ಟಿಗೆ ಕರ್ನಾಟಕ ಹೈಕೋರ್ಟ್​ನ ಹಿಜಾಬ್ ತೀರ್ಪು ಊರ್ಜಿತದಲ್ಲಿ ಇರುತ್ತದೆ ಎಂದು ಕಾನೂನು ತಜ್ಞರು ಹೇಳಿದ್ದಾರೆ. ಮುಂದಿನ ದಿನಗಳಲ್ಲಿ ಮುಖ್ಯ ನ್ಯಾಯಮೂರ್ತಿ ಪ್ರಕರಣದ ವಿಚಾರಣೆಯ ಬಗ್ಗೆ ನಿರ್ಧಾರ ತೆಗೆದುಕೊಳ್ಳಲಿದ್ದಾರೆ. ಅನಂತರವಷ್ಟೇ ಸುಪ್ರೀಂಕೋರ್ಟ್​ನ ಆದೇಶ ಪ್ರಕಟವಾಗಲಿದ್ದು, ಅದು ಹೈಕೋರ್ಟ್​ ಆದೇಶದ ಜಾಗದಲ್ಲಿ ಊರ್ಜಿತಕ್ಕೆ ಬರಲಿದೆ. ಹೀಗಾಗಿ ಸದ್ಯದ ಮಟ್ಟಿಗೆ ಕರ್ನಾಟಕ ಹೈಕೋರ್ಟ್​ನ ಆದೇಶ ಯಥಾಸ್ಥಿತಿ ಮುಂದುವರಿಯಲಿದ್ದು, ಕರ್ನಾಟಕದ ಶಿಕ್ಷಣ ಸಂಸ್ಥೆಗಳಲ್ಲಿ ಹಿಜಾಬ್ ಧರಿಸಲು ಅವಕಾಶವಿಲ್ಲ ಎಂದು ಕಾನೂನು ತಜ್ಞರು ಹಾಗೂ ವಕೀಲರು ಅಭಿಪ್ರಾಯಪಟ್ಟಿದ್ದಾರೆ.

ಮಾರ್ಚ್ 15 ತೀರ್ಪು ಪ್ರಕಟಿಸಿದ್ದ ಹೈಕೋರ್ಟ್, ಹಿಜಾಬ್ ಇಸ್ಲಾಂನ ಅತ್ಯಗತ್ಯ ಭಾಗವಲ್ಲ ಎಂದು ತೀರ್ಪು ನೀಡಿತ್ತು. ಹೈಕೋರ್ಟ್ ತೀರ್ಪು ಪ್ರಶ್ನಿಸಿ ಸುಪ್ರೀಂಕೋರ್ಟ್​ಗೆ ಹಲವರು ಅರ್ಜಿ ಸಲ್ಲಿಸಿದ್ದರು.

‘ಪ್ರತಿಭಟನೆಗಳಿಂದ ಶಾಲೆ-ಕಾಲೇಜು ಮುಚ್ಚಿದ್ದು ನೋವಿನ ಸಂಗತಿ. ಸಂವಿಧಾನ, ವೈಯಕ್ತಿಕ ಕಾನೂನಿನ ಗಂಭೀರ ವಿಚಾರಣೆ ನಡೆಯುತ್ತಿದೆ. ನಮ್ಮದು ವೈವಿಧ್ಯಮಯ ಸಂಸ್ಕೃತಿ, ಭಾಷೆ, ಧರ್ಮಗಳ ದೇಶ. ಸರ್ಕಾರಕ್ಕೆ ತನ್ನದೇ ಆದ ಧರ್ಮ ಎಂಬುದಿಲ್ಲ. ಪ್ರತಿಯೊಬ್ಬ ನಾಗರಿಕನಿಗೂ ಧಾರ್ಮಿಕ ಆಚರಣೆಯ ಹಕ್ಕಿದೆ. ಆದರೆ ಈ ಹಕ್ಕು ಪರಿಪೂರ್ಣ ಹಕ್ಕಲ್ಲ, ನಿರ್ಬಂಧಗಳಿವೆ’ ಎಂದು ಅಭಿಪ್ರಾಯಪಟ್ಟಿತ್ತು.

ತರಗತಿಯಲ್ಲಿ ಹಿಜಾಬ್ ಧರಿಸುವುದು ಮೂಲಭೂತ ಹಕ್ಕೇ ಎಂಬ ಪ್ರಶ್ನೆ ಕೇಳಿಕೊಂಡಿದ್ದ ಹೈಕೋರ್ಟ್, ಈ ಬಗ್ಗೆ ಆಳವಾದ ವಿಚಾರಣೆ ನಡೆಸುವ ಅಗತ್ಯವಿದೆ. ನಮ್ಮದು ನಾಗರಿಕ ಸಮಾಜ. ಧರ್ಮ, ಸಂಸ್ಕೃತಿ ಹೆಸರಲ್ಲಿ ಶಾಂತಿ, ಸಾಮರಸ್ಯಕ್ಕೆ ಧಕ್ಕೆ ಸರಿಯಲ್ಲ. ಯಾವುದೇ ವ್ಯಕ್ತಿ ಇಂತಹ ಕೃತ್ಯ ನಡೆಸಲು ಅವಕಾಶವಿಲ್ಲ. ಪ್ರತಿಭಟನೆಗಳಿಂದ ಶಾಲೆ-ಕಾಲೇಜುಗಳು ಬಂದ್ ಆಗಬಾರದು ಎಂದು ಹೇಳಿತ್ತು.

Published On - 10:53 am, Thu, 13 October 22

ಡಿಕೆಶಿ ನಿವಾಸಕ್ಕೆ ದಿಢೀರ್ ರೇಣುಕಾಚಾರ್ಯ: 20 ನಿಮಿಷ ಮಾತುತೆ
ಡಿಕೆಶಿ ನಿವಾಸಕ್ಕೆ ದಿಢೀರ್ ರೇಣುಕಾಚಾರ್ಯ: 20 ನಿಮಿಷ ಮಾತುತೆ
5 ಪಂದ್ಯಗಳಲ್ಲಿ 4ನೇ ಶತಕ ಸಿಡಿಸಿದ ದೇವದತ್ ಪಡಿಕ್ಕಲ್
5 ಪಂದ್ಯಗಳಲ್ಲಿ 4ನೇ ಶತಕ ಸಿಡಿಸಿದ ದೇವದತ್ ಪಡಿಕ್ಕಲ್
ಕೊನೆಯ ಹಂತದಲ್ಲಿ ಈ ಮಾತು ಬೇಕಾ? ಅಶ್ವಿನಿ-ಗಿಲ್ಲಿಗೆ ಸುದೀಪ್ ಕ್ಲಾಸ್
ಕೊನೆಯ ಹಂತದಲ್ಲಿ ಈ ಮಾತು ಬೇಕಾ? ಅಶ್ವಿನಿ-ಗಿಲ್ಲಿಗೆ ಸುದೀಪ್ ಕ್ಲಾಸ್
'ನಮ್ಮನ್ನ ಬಿಟ್ಟು ಹೋಗ್ಬೇಡಿ ಟೀಚರ್ಸ್​' ಶಿಕ್ಷಕರ ಮುಂದೆ ಮಕ್ಕಳ ಕಣ್ಣೀರು!
'ನಮ್ಮನ್ನ ಬಿಟ್ಟು ಹೋಗ್ಬೇಡಿ ಟೀಚರ್ಸ್​' ಶಿಕ್ಷಕರ ಮುಂದೆ ಮಕ್ಕಳ ಕಣ್ಣೀರು!
ಶಾಲೆ ಗೇಟ್​ ಬಂದ್​ ಮಾಡಿ ಶಿಕ್ಷಕರನ್ನ ತಡೆದು ಕಣ್ಣೀರಿಟ್ಟ ಮಕ್ಕಳು
ಶಾಲೆ ಗೇಟ್​ ಬಂದ್​ ಮಾಡಿ ಶಿಕ್ಷಕರನ್ನ ತಡೆದು ಕಣ್ಣೀರಿಟ್ಟ ಮಕ್ಕಳು
ಅಕ್ರಮ‌ ಕಟ್ಟಡ ಹೆಸರಿನಲ್ಲಿ ಖಾಸಗಿ ಶಾಲೆ ತೆರವು: ಶಾಮಿಯಾನದಡಿ ಮಕ್ಕಳಿಗೆ ಪಾಠ
ಅಕ್ರಮ‌ ಕಟ್ಟಡ ಹೆಸರಿನಲ್ಲಿ ಖಾಸಗಿ ಶಾಲೆ ತೆರವು: ಶಾಮಿಯಾನದಡಿ ಮಕ್ಕಳಿಗೆ ಪಾಠ
BBL 2026: ರಣರೋಚಕ ಪಂದ್ಯದಲ್ಲಿ ರೋಚಕ ಜಯ..!
BBL 2026: ರಣರೋಚಕ ಪಂದ್ಯದಲ್ಲಿ ರೋಚಕ ಜಯ..!
ಬಣದ ಹುಣ್ಣಿಮೆಗೆ ಜನಸಾಗರ, ಬೆಳಗಾವಿಯಲ್ಲಿ ಬಸ್ ಕೊರತೆಯಿಂದ ಭಕ್ತರ ಪರದಾಟ
ಬಣದ ಹುಣ್ಣಿಮೆಗೆ ಜನಸಾಗರ, ಬೆಳಗಾವಿಯಲ್ಲಿ ಬಸ್ ಕೊರತೆಯಿಂದ ಭಕ್ತರ ಪರದಾಟ
ಬಿಗ್ ಬಾಸ್​​ನಲ್ಲಿ ಸುದೀಪ್ ಚರ್ಚೆ ಮಾಡಬೇಕಿರುವ ವಿಷಯಗಳ ಪಟ್ಟಿ ದೊಡ್ಡದಿದೆ
ಬಿಗ್ ಬಾಸ್​​ನಲ್ಲಿ ಸುದೀಪ್ ಚರ್ಚೆ ಮಾಡಬೇಕಿರುವ ವಿಷಯಗಳ ಪಟ್ಟಿ ದೊಡ್ಡದಿದೆ
ಸರ್ಕಾರದ ಗ್ಯಾರಂಟಿ ಯೋಜನೆ ವಿರುದ್ಧ ಗುಡುಗಿದ ಹೆಚ್​​ಡಿ ದೇವೇಗೌಡ
ಸರ್ಕಾರದ ಗ್ಯಾರಂಟಿ ಯೋಜನೆ ವಿರುದ್ಧ ಗುಡುಗಿದ ಹೆಚ್​​ಡಿ ದೇವೇಗೌಡ