AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

NEET 2021 ಪರೀಕ್ಷೆ ರದ್ದಾಗುವುದಿಲ್ಲ; ಕೇಂದ್ರ ಸರ್ಕಾರದ ಸ್ಪಷ್ಟನೆ

JEE 2020 ಪರೀಕ್ಷೆಯನ್ನು ಆನ್​ಲೈನ್​ನಲ್ಲೇ ನಡೆಸಲಾಗಿತ್ತು. ನೀಟ್​​ ಪರೀಕ್ಷೆಯನ್ನು ಲಿಖಿತ ರೂಪದಲ್ಲಿ ನಡೆಸಲಾಗಿತ್ತು. ಈ ಮಧ್ಯೆ ಎಲ್ಲ ಪರೀಕ್ಷೆಗಳನ್ನು ಆನ್​ಲೈನ್​ನಲ್ಲೇ ನಡೆಸಿ ಎನ್ನುವ ಆಗ್ರಹ ಕೇಳಿ ಬಂದಿತ್ತು.

NEET 2021 ಪರೀಕ್ಷೆ ರದ್ದಾಗುವುದಿಲ್ಲ; ಕೇಂದ್ರ ಸರ್ಕಾರದ ಸ್ಪಷ್ಟನೆ
ಸಾಂದರ್ಭಿಕ ಚಿತ್ರ
ರಾಜೇಶ್ ದುಗ್ಗುಮನೆ
| Updated By: Ghanashyam D M | ಡಿ.ಎಂ.ಘನಶ್ಯಾಮ|

Updated on: Dec 10, 2020 | 8:32 PM

Share

ನವದೆಹಲಿ: ಮುಂದಿನ ವರ್ಷ ನಡೆಯಲಿರುವ ರಾಷ್ಟ್ರೀಯ ಅರ್ಹತೆ ಮತ್ತು ಪ್ರವೇಶ ಪರೀಕ್ಷೆಯನ್ನು (ನೀಟ್​​)​ ಕೇಂದ್ರ ಸರ್ಕಾರ ರದ್ದು ಮಾಡಲಿದೆ ಎನ್ನುವ ಸುದ್ದಿ ಹರಿದಾಡಿತ್ತು. ಈ ಬಗ್ಗೆ ಕೇಂದ್ರ ಸರ್ಕಾರ ಸ್ಪಷ್ಟನೆ ನೀಡಿದ್ದು, ನೀಟ್ ಪರೀಕ್ಷೆ ರದ್ದು ಮಾಡುವ ಯಾವುದೇ ಆಲೋಚನೆ ಇಲ್ಲ ಎಂದು ಹೇಳಿದೆ.

ವಿದ್ಯಾರ್ಥಿಗಳ ಜೊತೆ ಆನ್​ಲೈನ್ ಸಂವಾದ ನಡೆಸಿದ ಕೇಂದ್ರ ಶಿಕ್ಷಣ ಸಚಿವ ರಮೇಶ್​ ಪೋಕ್ರಿಯಾಲ್, ವಿದ್ಯಾರ್ಥಿಗಳ ಪ್ರಶ್ನೆಗಳಿಗೆ ಉತ್ತರ ನೀಡಿದ್ದಾರೆ. 2021ರ ನೀಟ್​ ಪರೀಕ್ಷೆ ರದ್ದಾಗಲಿದೆ ಎನ್ನುವ ಸುದ್ದಿ ಹರಿದಾಡಿತ್ತು. ಆದರೆ, ಸರ್ಕಾರ ಆ ರೀತಿ ನಿರ್ಧಾರ ಕೈಗೊಳ್ಳುತ್ತಿಲ್ಲ. ಮುಂದಿನ ವರ್ಷ ನೀಟ್​ ಪರೀಕ್ಷೆ ನಡೆಯುತ್ತದೆ. ಇದನ್ನು ರದ್ದು ಮಾಡಿದರೆ ವಿದ್ಯಾರ್ಥಿ ಸಮುದಾಯ ಹಾಗೂ ದೇಶಕ್ಕೆ ಭಾರೀ ನಷ್ಟ ಉಂಟಾಗಲಿದೆ ಎಂದು ಅವರು ಅಭಿಪ್ರಾಯಪಟ್ಟರು.

JEE 2020 ಪರೀಕ್ಷೆಯನ್ನು ಆನ್​ಲೈನ್​ನಲ್ಲೇ ನಡೆಸಲಾಗಿತ್ತು. ನೀಟ್​​ ಪರೀಕ್ಷೆಯನ್ನು ಲಿಖಿತ ರೂಪದಲ್ಲಿ ನಡೆಸಲಾಗಿತ್ತು. ಈ ಮಧ್ಯೆ ಎಲ್ಲ ಪರೀಕ್ಷೆಗಳನ್ನು ಆನ್​ಲೈನ್​ನಲ್ಲೇ ನಡೆಸಿ ಎನ್ನುವ ಆಗ್ರಹ ಕೇಳಿ ಬಂದಿತ್ತು. ಈ ಬಗ್ಗೆ ಮಾತನಾಡಿರುವ ಅವರು, ಮುಂದಿನ ದಿನಗಳಲ್ಲಿ ಪರೀಕ್ಷೆಗಳನ್ನು ಆನ್​ಲೈನ್​ನಲ್ಲೇ ಮಾಡುವ ಬಗ್ಗೆ ಸರ್ಕಾರ ಚಿಂತನೆ ನಡೆಸಲಿದೆ ಎಂದರು.

ಪಠ್ಯಕ್ರಮದಲ್ಲಿ ಬದಲಾವಣೆ?

JEE ಹಾಗೂ ನೀಟ್​ ಪಠ್ಯಕ್ರಮ ಮತ್ತು ಪರೀಕ್ಷಾ ವಿಧಾನದಲ್ಲಿ ಬದಲಾವಣೆ ಅಗತ್ಯವಿದೆ ಎಂದು ಕಂಡು ಬಂದರೆ ನಾವದನ್ನು ಮಾಡುತ್ತೇವೆ. 2021ರ ಸಿಬಿಎಸ್​ಇ ಪರೀಕ್ಷಾ ದಿನಾಂಕವನ್ನು ನಿಗದಿಗಿಂತಲೂ ಮೊದಲೇ ಘೋಷಣೆ ಮಾಡುತ್ತೇವೆ ಎಂದು ರಮೇಶ್​ ಪೋಕ್ರಿಯಾಲ್ ತಿಳಿಸಿದರು.

ಕೊರೊನಾ ಕರಾಳತೆ, ನೀಟ್​ಗೆ ಅಡ್ಡಿ: ವಿದ್ಯಾರ್ಥಿನಿಗೆ ಸಿಎಂ ಯಡಿಯೂರಪ್ಪ, ಆರೋಗ್ಯ ಸಚಿವರ ನೆರವು

ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ
ಆರ್​ಸಿಬಿಯಲ್ಲಿ ಅವಕಾಶ ಸಿಗಲಿಲ್ಲ; 56 ಎಸೆತಗಳಲ್ಲಿ ಶತಕ ಸಿಡಿಸಿದ ಸೀಫರ್ಟ್
ಆರ್​ಸಿಬಿಯಲ್ಲಿ ಅವಕಾಶ ಸಿಗಲಿಲ್ಲ; 56 ಎಸೆತಗಳಲ್ಲಿ ಶತಕ ಸಿಡಿಸಿದ ಸೀಫರ್ಟ್
ಸಂಸತ್ತಿಗೆ ಸೈಕಲ್​​ನಲ್ಲಿ ಬಂದ ಸಂಸದ
ಸಂಸತ್ತಿಗೆ ಸೈಕಲ್​​ನಲ್ಲಿ ಬಂದ ಸಂಸದ