AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

NEET 2021 ಪರೀಕ್ಷೆ ರದ್ದಾಗುವುದಿಲ್ಲ; ಕೇಂದ್ರ ಸರ್ಕಾರದ ಸ್ಪಷ್ಟನೆ

JEE 2020 ಪರೀಕ್ಷೆಯನ್ನು ಆನ್​ಲೈನ್​ನಲ್ಲೇ ನಡೆಸಲಾಗಿತ್ತು. ನೀಟ್​​ ಪರೀಕ್ಷೆಯನ್ನು ಲಿಖಿತ ರೂಪದಲ್ಲಿ ನಡೆಸಲಾಗಿತ್ತು. ಈ ಮಧ್ಯೆ ಎಲ್ಲ ಪರೀಕ್ಷೆಗಳನ್ನು ಆನ್​ಲೈನ್​ನಲ್ಲೇ ನಡೆಸಿ ಎನ್ನುವ ಆಗ್ರಹ ಕೇಳಿ ಬಂದಿತ್ತು.

NEET 2021 ಪರೀಕ್ಷೆ ರದ್ದಾಗುವುದಿಲ್ಲ; ಕೇಂದ್ರ ಸರ್ಕಾರದ ಸ್ಪಷ್ಟನೆ
ಸಾಂದರ್ಭಿಕ ಚಿತ್ರ
ರಾಜೇಶ್ ದುಗ್ಗುಮನೆ
| Edited By: |

Updated on: Dec 10, 2020 | 8:32 PM

Share

ನವದೆಹಲಿ: ಮುಂದಿನ ವರ್ಷ ನಡೆಯಲಿರುವ ರಾಷ್ಟ್ರೀಯ ಅರ್ಹತೆ ಮತ್ತು ಪ್ರವೇಶ ಪರೀಕ್ಷೆಯನ್ನು (ನೀಟ್​​)​ ಕೇಂದ್ರ ಸರ್ಕಾರ ರದ್ದು ಮಾಡಲಿದೆ ಎನ್ನುವ ಸುದ್ದಿ ಹರಿದಾಡಿತ್ತು. ಈ ಬಗ್ಗೆ ಕೇಂದ್ರ ಸರ್ಕಾರ ಸ್ಪಷ್ಟನೆ ನೀಡಿದ್ದು, ನೀಟ್ ಪರೀಕ್ಷೆ ರದ್ದು ಮಾಡುವ ಯಾವುದೇ ಆಲೋಚನೆ ಇಲ್ಲ ಎಂದು ಹೇಳಿದೆ.

ವಿದ್ಯಾರ್ಥಿಗಳ ಜೊತೆ ಆನ್​ಲೈನ್ ಸಂವಾದ ನಡೆಸಿದ ಕೇಂದ್ರ ಶಿಕ್ಷಣ ಸಚಿವ ರಮೇಶ್​ ಪೋಕ್ರಿಯಾಲ್, ವಿದ್ಯಾರ್ಥಿಗಳ ಪ್ರಶ್ನೆಗಳಿಗೆ ಉತ್ತರ ನೀಡಿದ್ದಾರೆ. 2021ರ ನೀಟ್​ ಪರೀಕ್ಷೆ ರದ್ದಾಗಲಿದೆ ಎನ್ನುವ ಸುದ್ದಿ ಹರಿದಾಡಿತ್ತು. ಆದರೆ, ಸರ್ಕಾರ ಆ ರೀತಿ ನಿರ್ಧಾರ ಕೈಗೊಳ್ಳುತ್ತಿಲ್ಲ. ಮುಂದಿನ ವರ್ಷ ನೀಟ್​ ಪರೀಕ್ಷೆ ನಡೆಯುತ್ತದೆ. ಇದನ್ನು ರದ್ದು ಮಾಡಿದರೆ ವಿದ್ಯಾರ್ಥಿ ಸಮುದಾಯ ಹಾಗೂ ದೇಶಕ್ಕೆ ಭಾರೀ ನಷ್ಟ ಉಂಟಾಗಲಿದೆ ಎಂದು ಅವರು ಅಭಿಪ್ರಾಯಪಟ್ಟರು.

JEE 2020 ಪರೀಕ್ಷೆಯನ್ನು ಆನ್​ಲೈನ್​ನಲ್ಲೇ ನಡೆಸಲಾಗಿತ್ತು. ನೀಟ್​​ ಪರೀಕ್ಷೆಯನ್ನು ಲಿಖಿತ ರೂಪದಲ್ಲಿ ನಡೆಸಲಾಗಿತ್ತು. ಈ ಮಧ್ಯೆ ಎಲ್ಲ ಪರೀಕ್ಷೆಗಳನ್ನು ಆನ್​ಲೈನ್​ನಲ್ಲೇ ನಡೆಸಿ ಎನ್ನುವ ಆಗ್ರಹ ಕೇಳಿ ಬಂದಿತ್ತು. ಈ ಬಗ್ಗೆ ಮಾತನಾಡಿರುವ ಅವರು, ಮುಂದಿನ ದಿನಗಳಲ್ಲಿ ಪರೀಕ್ಷೆಗಳನ್ನು ಆನ್​ಲೈನ್​ನಲ್ಲೇ ಮಾಡುವ ಬಗ್ಗೆ ಸರ್ಕಾರ ಚಿಂತನೆ ನಡೆಸಲಿದೆ ಎಂದರು.

ಪಠ್ಯಕ್ರಮದಲ್ಲಿ ಬದಲಾವಣೆ?

JEE ಹಾಗೂ ನೀಟ್​ ಪಠ್ಯಕ್ರಮ ಮತ್ತು ಪರೀಕ್ಷಾ ವಿಧಾನದಲ್ಲಿ ಬದಲಾವಣೆ ಅಗತ್ಯವಿದೆ ಎಂದು ಕಂಡು ಬಂದರೆ ನಾವದನ್ನು ಮಾಡುತ್ತೇವೆ. 2021ರ ಸಿಬಿಎಸ್​ಇ ಪರೀಕ್ಷಾ ದಿನಾಂಕವನ್ನು ನಿಗದಿಗಿಂತಲೂ ಮೊದಲೇ ಘೋಷಣೆ ಮಾಡುತ್ತೇವೆ ಎಂದು ರಮೇಶ್​ ಪೋಕ್ರಿಯಾಲ್ ತಿಳಿಸಿದರು.

ಕೊರೊನಾ ಕರಾಳತೆ, ನೀಟ್​ಗೆ ಅಡ್ಡಿ: ವಿದ್ಯಾರ್ಥಿನಿಗೆ ಸಿಎಂ ಯಡಿಯೂರಪ್ಪ, ಆರೋಗ್ಯ ಸಚಿವರ ನೆರವು

Follow Us
Rajesh Duggumane
Rajesh Duggumane

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More
ಕಬಿನಿ ಹಿನ್ನೀರಿನಲ್ಲಿ ಆಹಾರ ಸಿಗದೆ ಆನೆಗಳ ಪರದಾಟ: ಮಳೆ ಕೊರತೆಯಿಂದ ಸಮಸ್ಯೆ
ಕಬಿನಿ ಹಿನ್ನೀರಿನಲ್ಲಿ ಆಹಾರ ಸಿಗದೆ ಆನೆಗಳ ಪರದಾಟ: ಮಳೆ ಕೊರತೆಯಿಂದ ಸಮಸ್ಯೆ
ಹೊಸಕೋಟೆ: ಕಣ್ಣೂರಹಳ್ಳಿ ರಸ್ತೆಯಲ್ಲಿ 23 ನಾಗರಹಾವು ಮರಿಗಳ ಪತ್ತೆ!
ಹೊಸಕೋಟೆ: ಕಣ್ಣೂರಹಳ್ಳಿ ರಸ್ತೆಯಲ್ಲಿ 23 ನಾಗರಹಾವು ಮರಿಗಳ ಪತ್ತೆ!
ಕರ್ಕಾಟಕ ರಾಶಿಗೆ ಗುರು ಪ್ರವೇಶ; 12ರಾಶಿಗಳ ಮೇಲೆ ಇದರ ಪ್ರಭಾವ ಹೇಗಿರಲಿದೆ?
ಕರ್ಕಾಟಕ ರಾಶಿಗೆ ಗುರು ಪ್ರವೇಶ; 12ರಾಶಿಗಳ ಮೇಲೆ ಇದರ ಪ್ರಭಾವ ಹೇಗಿರಲಿದೆ?
ವಿಶ್ವ ದಾಖಲೆ... ಒಂದೇ ಓವರ್‌ನಲ್ಲಿ ೬ ಸಿಕ್ಸ್ ಸಿಡಿಸಿದ ಕುಶಾಲ್!
ವಿಶ್ವ ದಾಖಲೆ... ಒಂದೇ ಓವರ್‌ನಲ್ಲಿ ೬ ಸಿಕ್ಸ್ ಸಿಡಿಸಿದ ಕುಶಾಲ್!
ಕೈಯಿಂದ ಪದೇ ಪದೇ ಎಣ್ಣೆ, ಹಾಲು ಜಾರಿಬಿದ್ರೆ ಏನರ್ಥ?
ಕೈಯಿಂದ ಪದೇ ಪದೇ ಎಣ್ಣೆ, ಹಾಲು ಜಾರಿಬಿದ್ರೆ ಏನರ್ಥ?
ಇಂದು ಈ ರಾಶಿಯವರು ಆರ್ಥಿಕ ವಿಷಯಗಳಲ್ಲಿ ಎಚ್ಚರಿಕೆ ವಹಿಸಬೇಕು
ಇಂದು ಈ ರಾಶಿಯವರು ಆರ್ಥಿಕ ವಿಷಯಗಳಲ್ಲಿ ಎಚ್ಚರಿಕೆ ವಹಿಸಬೇಕು
ಡಿಕೆ ಶಿವಕುಮಾರ್ ಜತೆ ಸಂಪುಟ ಸೇರೋ ಸಂಭಾವ್ಯ ಸಚಿವರ ಪಟ್ಟಿ ಇಲ್ಲಿದೆ
ಡಿಕೆ ಶಿವಕುಮಾರ್ ಜತೆ ಸಂಪುಟ ಸೇರೋ ಸಂಭಾವ್ಯ ಸಚಿವರ ಪಟ್ಟಿ ಇಲ್ಲಿದೆ
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್