AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

NEET 2021 ಪರೀಕ್ಷೆ ರದ್ದಾಗುವುದಿಲ್ಲ; ಕೇಂದ್ರ ಸರ್ಕಾರದ ಸ್ಪಷ್ಟನೆ

JEE 2020 ಪರೀಕ್ಷೆಯನ್ನು ಆನ್​ಲೈನ್​ನಲ್ಲೇ ನಡೆಸಲಾಗಿತ್ತು. ನೀಟ್​​ ಪರೀಕ್ಷೆಯನ್ನು ಲಿಖಿತ ರೂಪದಲ್ಲಿ ನಡೆಸಲಾಗಿತ್ತು. ಈ ಮಧ್ಯೆ ಎಲ್ಲ ಪರೀಕ್ಷೆಗಳನ್ನು ಆನ್​ಲೈನ್​ನಲ್ಲೇ ನಡೆಸಿ ಎನ್ನುವ ಆಗ್ರಹ ಕೇಳಿ ಬಂದಿತ್ತು.

NEET 2021 ಪರೀಕ್ಷೆ ರದ್ದಾಗುವುದಿಲ್ಲ; ಕೇಂದ್ರ ಸರ್ಕಾರದ ಸ್ಪಷ್ಟನೆ
ಸಾಂದರ್ಭಿಕ ಚಿತ್ರ
ರಾಜೇಶ್ ದುಗ್ಗುಮನೆ
| Edited By: |

Updated on: Dec 10, 2020 | 8:32 PM

Share

ನವದೆಹಲಿ: ಮುಂದಿನ ವರ್ಷ ನಡೆಯಲಿರುವ ರಾಷ್ಟ್ರೀಯ ಅರ್ಹತೆ ಮತ್ತು ಪ್ರವೇಶ ಪರೀಕ್ಷೆಯನ್ನು (ನೀಟ್​​)​ ಕೇಂದ್ರ ಸರ್ಕಾರ ರದ್ದು ಮಾಡಲಿದೆ ಎನ್ನುವ ಸುದ್ದಿ ಹರಿದಾಡಿತ್ತು. ಈ ಬಗ್ಗೆ ಕೇಂದ್ರ ಸರ್ಕಾರ ಸ್ಪಷ್ಟನೆ ನೀಡಿದ್ದು, ನೀಟ್ ಪರೀಕ್ಷೆ ರದ್ದು ಮಾಡುವ ಯಾವುದೇ ಆಲೋಚನೆ ಇಲ್ಲ ಎಂದು ಹೇಳಿದೆ.

ವಿದ್ಯಾರ್ಥಿಗಳ ಜೊತೆ ಆನ್​ಲೈನ್ ಸಂವಾದ ನಡೆಸಿದ ಕೇಂದ್ರ ಶಿಕ್ಷಣ ಸಚಿವ ರಮೇಶ್​ ಪೋಕ್ರಿಯಾಲ್, ವಿದ್ಯಾರ್ಥಿಗಳ ಪ್ರಶ್ನೆಗಳಿಗೆ ಉತ್ತರ ನೀಡಿದ್ದಾರೆ. 2021ರ ನೀಟ್​ ಪರೀಕ್ಷೆ ರದ್ದಾಗಲಿದೆ ಎನ್ನುವ ಸುದ್ದಿ ಹರಿದಾಡಿತ್ತು. ಆದರೆ, ಸರ್ಕಾರ ಆ ರೀತಿ ನಿರ್ಧಾರ ಕೈಗೊಳ್ಳುತ್ತಿಲ್ಲ. ಮುಂದಿನ ವರ್ಷ ನೀಟ್​ ಪರೀಕ್ಷೆ ನಡೆಯುತ್ತದೆ. ಇದನ್ನು ರದ್ದು ಮಾಡಿದರೆ ವಿದ್ಯಾರ್ಥಿ ಸಮುದಾಯ ಹಾಗೂ ದೇಶಕ್ಕೆ ಭಾರೀ ನಷ್ಟ ಉಂಟಾಗಲಿದೆ ಎಂದು ಅವರು ಅಭಿಪ್ರಾಯಪಟ್ಟರು.

JEE 2020 ಪರೀಕ್ಷೆಯನ್ನು ಆನ್​ಲೈನ್​ನಲ್ಲೇ ನಡೆಸಲಾಗಿತ್ತು. ನೀಟ್​​ ಪರೀಕ್ಷೆಯನ್ನು ಲಿಖಿತ ರೂಪದಲ್ಲಿ ನಡೆಸಲಾಗಿತ್ತು. ಈ ಮಧ್ಯೆ ಎಲ್ಲ ಪರೀಕ್ಷೆಗಳನ್ನು ಆನ್​ಲೈನ್​ನಲ್ಲೇ ನಡೆಸಿ ಎನ್ನುವ ಆಗ್ರಹ ಕೇಳಿ ಬಂದಿತ್ತು. ಈ ಬಗ್ಗೆ ಮಾತನಾಡಿರುವ ಅವರು, ಮುಂದಿನ ದಿನಗಳಲ್ಲಿ ಪರೀಕ್ಷೆಗಳನ್ನು ಆನ್​ಲೈನ್​ನಲ್ಲೇ ಮಾಡುವ ಬಗ್ಗೆ ಸರ್ಕಾರ ಚಿಂತನೆ ನಡೆಸಲಿದೆ ಎಂದರು.

ಪಠ್ಯಕ್ರಮದಲ್ಲಿ ಬದಲಾವಣೆ?

JEE ಹಾಗೂ ನೀಟ್​ ಪಠ್ಯಕ್ರಮ ಮತ್ತು ಪರೀಕ್ಷಾ ವಿಧಾನದಲ್ಲಿ ಬದಲಾವಣೆ ಅಗತ್ಯವಿದೆ ಎಂದು ಕಂಡು ಬಂದರೆ ನಾವದನ್ನು ಮಾಡುತ್ತೇವೆ. 2021ರ ಸಿಬಿಎಸ್​ಇ ಪರೀಕ್ಷಾ ದಿನಾಂಕವನ್ನು ನಿಗದಿಗಿಂತಲೂ ಮೊದಲೇ ಘೋಷಣೆ ಮಾಡುತ್ತೇವೆ ಎಂದು ರಮೇಶ್​ ಪೋಕ್ರಿಯಾಲ್ ತಿಳಿಸಿದರು.

ಕೊರೊನಾ ಕರಾಳತೆ, ನೀಟ್​ಗೆ ಅಡ್ಡಿ: ವಿದ್ಯಾರ್ಥಿನಿಗೆ ಸಿಎಂ ಯಡಿಯೂರಪ್ಪ, ಆರೋಗ್ಯ ಸಚಿವರ ನೆರವು

Follow Us
ಯುಗಾದಿ ವರ್ಷ ಭವಿಷ್ಯ; ಮೇಷ ರಾಶಿಯ ಶುಭ -ಅಶುಭ ಫಲಗಳ ಮಾಹಿತಿ ಇಲ್ಲಿದೆ
ಯುಗಾದಿ ವರ್ಷ ಭವಿಷ್ಯ; ಮೇಷ ರಾಶಿಯ ಶುಭ -ಅಶುಭ ಫಲಗಳ ಮಾಹಿತಿ ಇಲ್ಲಿದೆ
ಬಜೆಟ್ ಬೆನ್ನಲ್ಲೇ ಅಧಿಕಾರ ಹಂಚಿಕೆ ಬಗ್ಗೆ ಸಿಎಂ ಸಿದ್ದರಾಮಯ್ಯ ಶಾಕಿಂಗ್ ಮಾತು
ಬಜೆಟ್ ಬೆನ್ನಲ್ಲೇ ಅಧಿಕಾರ ಹಂಚಿಕೆ ಬಗ್ಗೆ ಸಿಎಂ ಸಿದ್ದರಾಮಯ್ಯ ಶಾಕಿಂಗ್ ಮಾತು
ಸಿನಿಮಾ ಜರ್ನಿಗೆ ಬೆಂಬಲವಾಗಿ ನಿಂತ ಶಿವಣ್ಣನಿಗೆ ಧನ್ಯವಾದ ಹೇಳಿದ ವಿಜಯ್
ಸಿನಿಮಾ ಜರ್ನಿಗೆ ಬೆಂಬಲವಾಗಿ ನಿಂತ ಶಿವಣ್ಣನಿಗೆ ಧನ್ಯವಾದ ಹೇಳಿದ ವಿಜಯ್
ಕೋಲಾರದ ರೈತನ ಮಗ ಯುಪಿಎಸ್​ಸಿ ಪಾಸ್​ ಮಾಡಿದ್ದು ಹೇಗೆ ಗೊತ್ತಾ?
ಕೋಲಾರದ ರೈತನ ಮಗ ಯುಪಿಎಸ್​ಸಿ ಪಾಸ್​ ಮಾಡಿದ್ದು ಹೇಗೆ ಗೊತ್ತಾ?
ಬೆಂಗಳೂರು ಹೋಟೆಲ್​ಗಳಲ್ಲಿ ಕಾಫಿ, ತಿಂಡಿ ದರ ಹೆಚ್ಚಳ ಸಾಧ್ಯತೆ
ಬೆಂಗಳೂರು ಹೋಟೆಲ್​ಗಳಲ್ಲಿ ಕಾಫಿ, ತಿಂಡಿ ದರ ಹೆಚ್ಚಳ ಸಾಧ್ಯತೆ
ಮಾರ್ಕೆಟ್​ನಲ್ಲಿ ಟೊಮ್ಯೊಟೋ ಬೆಲೆ ತೀವ್ರ ಕುಸಿತ! ರೈತರು ಕಂಗಾಲು
ಮಾರ್ಕೆಟ್​ನಲ್ಲಿ ಟೊಮ್ಯೊಟೋ ಬೆಲೆ ತೀವ್ರ ಕುಸಿತ! ರೈತರು ಕಂಗಾಲು
ಎಲ್​ಪಿಜಿ ಬೆಲೆ ಏರಿಕೆ, ಹೋಟೆಲ್​​ಗಳಲ್ಲಿ ತಿಂಡಿಗಳ ಬೆಲೆ ಏರಿಕೆ ಸಾಧ್ಯತೆ
ಎಲ್​ಪಿಜಿ ಬೆಲೆ ಏರಿಕೆ, ಹೋಟೆಲ್​​ಗಳಲ್ಲಿ ತಿಂಡಿಗಳ ಬೆಲೆ ಏರಿಕೆ ಸಾಧ್ಯತೆ
ಮಾರಿ ಹಬ್ಬದಲ್ಲಿ ನೂರಾರು ಕುರಿಗಳ ಬಲಿ, ರಕ್ತ ಹೀರಿದ ಅರ್ಚಕ: ವಿಡಿಯೋ ವೈರಲ್
ಮಾರಿ ಹಬ್ಬದಲ್ಲಿ ನೂರಾರು ಕುರಿಗಳ ಬಲಿ, ರಕ್ತ ಹೀರಿದ ಅರ್ಚಕ: ವಿಡಿಯೋ ವೈರಲ್
ಟಿವಿ9 ಎಕ್ಸ್​​ಪೋದಲ್ಲಿ ಹಯಗ್ರೀವ ಯಶಸ್ಸಿನ ಬಗ್ಗೆ ಧನ್ವೀರ್​-ಸಂಜನಾ ಮಾತು
ಟಿವಿ9 ಎಕ್ಸ್​​ಪೋದಲ್ಲಿ ಹಯಗ್ರೀವ ಯಶಸ್ಸಿನ ಬಗ್ಗೆ ಧನ್ವೀರ್​-ಸಂಜನಾ ಮಾತು
ಶ್ರೀಕೃಷ್ಣನಿಗೆ 16 ಸಾವಿರ ಪತ್ನಿಯರಿದ್ದಿದ್ದು ನಿಜವೇ? ಅಸಲಿಯತ್ತು ಇಲ್ಲಿದೆ
ಶ್ರೀಕೃಷ್ಣನಿಗೆ 16 ಸಾವಿರ ಪತ್ನಿಯರಿದ್ದಿದ್ದು ನಿಜವೇ? ಅಸಲಿಯತ್ತು ಇಲ್ಲಿದೆ