AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೋದಿ-ಟ್ರಂಪ್ ಮಧ್ಯೆ ಯಾವ ಫೋನ್ ಕರೆಯೂ ಇರಲಿಲ್ಲ; ಕದನ ವಿರಾಮದಲ್ಲಿ ಅಮೆರಿಕದ ಮಧ್ಯಸ್ಥಿಕೆ ನಿರಾಕರಿಸಿದ ಜೈಶಂಕರ್

ಭಯೋತ್ಪಾದನೆಯ ಬಗ್ಗೆ ಭಾರತ ಶೂನ್ಯ ಸಹಿಷ್ಣುತೆಯ ನೀತಿಯನ್ನು ಕಾಯ್ದುಕೊಂಡಿದೆ. ಭಯೋತ್ಪಾದಕ ಸಂಘಟನೆಗಳಿಗೆ ಆಶ್ರಯ ನೀಡುವ ಮತ್ತು ಉತ್ತೇಜಿಸುವಲ್ಲಿ ಪಾಕಿಸ್ತಾನದ ಪಾತ್ರವನ್ನು ಜಾಗತಿಕ ಸಮುದಾಯ ಅರ್ಥಮಾಡಿಕೊಳ್ಳುವುದನ್ನು ಖಚಿತಪಡಿಸಿಕೊಳ್ಳಲು ಭಾರತ ಬಲವಾದ ರಾಜತಾಂತ್ರಿಕ ಕ್ರಮಗಳನ್ನು ತೆಗೆದುಕೊಂಡಿದೆ ಎಂದು ವಿದೇಶಾಂಗ ಸಚಿವ ಎಸ್. ಜೈಶಂಕರ್ ಒತ್ತಿ ಹೇಳಿದ್ದಾರೆ.

ಮೋದಿ-ಟ್ರಂಪ್ ಮಧ್ಯೆ ಯಾವ ಫೋನ್ ಕರೆಯೂ ಇರಲಿಲ್ಲ; ಕದನ ವಿರಾಮದಲ್ಲಿ ಅಮೆರಿಕದ ಮಧ್ಯಸ್ಥಿಕೆ ನಿರಾಕರಿಸಿದ ಜೈಶಂಕರ್
S Jaishankar In Session
ಸುಷ್ಮಾ ಚಕ್ರೆ
|

Updated on: Jul 28, 2025 | 9:03 PM

Share

ನವದೆಹಲಿ, ಜುಲೈ 28: ಆಪರೇಷನ್ ಸಿಂಧೂರ (Operation Sindoor) ಕಾರ್ಯಾಚರಣೆ ಬಳಿಕ ನಡೆದ ಭಾರತ-ಪಾಕಿಸ್ತಾನದ ನಡುವಿನ ಕದನ ವಿರಾಮದಲ್ಲಿ ಅಮೆರಿಕದ ಯಾವುದೇ ಪಾತ್ರವಿಲ್ಲ ಎಂದು ವಿದೇಶಾಂಗ ಸಚಿವ ಎಸ್. ಜೈಶಂಕರ್ ಇಂದು ಮತ್ತೊಮ್ಮೆ ಸದನದಲ್ಲಿ ದೃಢಪಡಿಸಿದ್ದಾರೆ. ಆಪರೇಷನ್ ಸಿಂಧೂರ್ ಕುರಿತ ಚರ್ಚೆಯ ಸಂದರ್ಭದಲ್ಲಿ ಲೋಕಸಭೆಯನ್ನುದ್ದೇಶಿಸಿ ಮಾತನಾಡಿದ ಅವರು, ಕದನ ವಿರಾಮಕ್ಕೆ ಸಂಬಂಧಿಸಿದಂತೆ ಪ್ರಧಾನಿ ನರೇಂದ್ರ ಮೋದಿ ಮತ್ತು ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ನಡುವೆ ಯಾವುದೇ ಫೋನ್ ಸಂಭಾಷಣೆ ನಡೆದಿರಲಿಲ್ಲ ಎಂದಿದ್ದಾರೆ. ಈ ಮೂಲಕ ತಾನೇ ಭಾರತ-ಪಾಕ್ ನಡುವಿನ ಯುದ್ಧ ತಡೆದಿದ್ದು ಎಂಬ ಟ್ರಂಪ್ ಪದೇಪದೆ ನೀಡುತ್ತಿರುವ ಹೇಳಿಕೆಯನ್ನು ತಳ್ಳಿಹಾಕಿದ್ದಾರೆ.

ಲೋಕಸಭೆಯಲ್ಲಿ ಮಾತನಾಡಿದ ಸಚಿವ ಜೈಶಂಕರ್, ಏಪ್ರಿಲ್ 22 (ಪಹಲ್ಗಾಮ್ ಭಯೋತ್ಪಾದಕ ದಾಳಿ ನಡೆದ ದಿನ) ಮತ್ತು ಜೂನ್ 17 (ಭಾರತ-ಪಾಕಿಸ್ತಾನ ಕದನ ವಿರಾಮ ಘೋಷಿಸಿದ 1 ತಿಂಗಳ ನಂತರ) ನಡುವೆ ಡೊನಾಲ್ಡ್ ಟ್ರಂಪ್ ಮತ್ತು ಪ್ರಧಾನಿ ಮೋದಿ ನಡುವೆ ಯಾವುದೇ ಫೋನ್ ಸಂಭಾಷಣೆ ನಡೆದಿಲ್ಲ ಎಂದು ಪ್ರತಿಪಾದಿಸಿದ್ದಾರೆ.

ಇದನ್ನೂ ಓದಿ: ಸಂಸತ್​​ನಲ್ಲಿ ಆಪರೇಷನ್ ಸಿಂಧೂರ್ ಬಗ್ಗೆ ವಿರೋಧಿಸಲ್ಲ ಎಂದ ಶಶಿ ತರೂರ್; ಕಾಂಗ್ರೆಸ್​ ಮನವಿಗೆ ಒಪ್ಪದ ಸಂಸದ

ಆಪರೇಷನ್ ಸಿಂಧೂರ್ ಸಮಯದಲ್ಲಿ ಭಾರತವು ಅಮೆರಿಕದೊಂದಿಗೆ ನಡೆಸಿದ ಚರ್ಚೆಗಳ ಬಗ್ಗೆ ಬೆಳಕು ಚೆಲ್ಲಿದ ಸಚಿವ ಜೈಶಂಕರ್, ಅಮೆರಿಕದ ಉಪಾಧ್ಯಕ್ಷ ಜೆ.ಡಿ ವ್ಯಾನ್ಸ್ ಅವರು ಪ್ರಧಾನಿ ಮೋದಿಗೆ ಕರೆ ಮಾಡಿ ಪಾಕಿಸ್ತಾನದಿಂದ ಭಾರಿ ದಾಳಿಯ ಬಗ್ಗೆ ಎಚ್ಚರಿಕೆ ನೀಡಿದ್ದರು. ಆದರೆ, ಟ್ರಂಪ್ ಯಾವುದೇ ಕರೆ ಮಾಡಿಲ್ಲ. ವ್ಯಾನ್ಸ್ ಅವರ ಬಳಿ ಪ್ರಧಾನಿ ಮೋದಿ ಅವರು ಭಾರತವು ಪಾಕಿಸ್ತಾನದ ದಾಳಿಗೆ ಇನ್ನಷ್ಟು ಬಲವಾಗಿ ಪ್ರತಿಕ್ರಿಯಿಸುತ್ತದೆ ಎಂದು ಉತ್ತರಿಸಿದ್ದರು ಎಂದಿದ್ದಾರೆ.

ಇದನ್ನೂ ಓದಿ: ಇನ್ನೂ 20 ವರ್ಷ ವಿರೋಧ ಪಕ್ಷದ ಕುರ್ಚಿಯಲ್ಲೇ ಇರ್ತೀರಿ; ಕಾಂಗ್ರೆಸ್ ವಿರುದ್ಧ ಗುಡುಗಿದ ಅಮಿತ್ ಶಾ

ಮೇ 9 ಮತ್ತು 10ರಂದು ಪಾಕಿಸ್ತಾನದಿಂದ ಪುನರಾವರ್ತಿತ ದಾಳಿಗಳನ್ನು ಭಾರತ ಯಶಸ್ವಿಯಾಗಿ ತಡೆಯಿತು ಎಂದು ಜೈಶಂಕರ್ ಖಚಿತಪಡಿಸಿದ್ದಾರೆ. ಹಲವಾರು ದೇಶಗಳು ಮೇ 10ರಂದು ಭಾರತವನ್ನು ಸಂಪರ್ಕಿಸಿ ಪಾಕಿಸ್ತಾನವು ಕದನ ವಿರಾಮಕ್ಕೆ ಸಿದ್ಧವಾಗಿದೆ ಎಂದು ಭಾರತಕ್ಕೆ ತಿಳಿಸಿದ್ದವು. ಆದರೆ, ಮಿಲಿಟರಿ ಕಾರ್ಯಾಚರಣೆಗಳ ಮಹಾನಿರ್ದೇಶಕರ (ಡಿಜಿಎಂಒ) ಚಾನೆಲ್ ಮೂಲಕ ಬಂದರೆ ಮಾತ್ರ ಪಾಕಿಸ್ತಾನದಿಂದ ಕದನ ವಿರಾಮದ ಮಾತುಕತೆಗಳನ್ನು ಪರಿಗಣಿಸುವುದಾಗಿ ಭಾರತ ಎಲ್ಲಾ ದೇಶಗಳಿಗೆ ಸ್ಪಷ್ಟಪಡಿಸಿದೆ ಎಂದು ವಿದೇಶಾಂಗ ಸಚಿವ ಜೈಶಂಕರ್ ಹೇಳಿದ್ದಾರೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ 

Follow Us
Sushma Chakre
Sushma Chakre

ಮೂಲತಃ ಮಲೆನಾಡ ಹೆಬ್ಬಾಗಿಲು ಶಿವಮೊಗ್ಗದವಳು. ಬೆಂಗಳೂರಿನಲ್ಲಿ ವಾಸ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದೇನೆ. 10 ವರ್ಷಗಳಿಂದ ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡ, ಟಿವಿ9 ಡಿಜಿಟಲ್ ವಿಭಾಗದಲ್ಲಿ ಕೆಲಸ ಮಾಡಿದ ಅನುಭವವಿದೆ. ಸಾಹಿತ್ಯ, ಸಂಗೀತ, ಸಿನಿಮಾ, ಬರವಣಿಗೆಯಲ್ಲಿ ಆಸಕ್ತಿ.

Read More
ಅತಾವುಲ್ಲಾ ಹತ್ಯೆ ಪ್ರಕರಣದ ಬಗ್ಗೆ ಸ್ಫೋಟಕ ಹೇಳಿಕೆ ನೀಡಿದ ಪೊಲೀಸರು
ಅತಾವುಲ್ಲಾ ಹತ್ಯೆ ಪ್ರಕರಣದ ಬಗ್ಗೆ ಸ್ಫೋಟಕ ಹೇಳಿಕೆ ನೀಡಿದ ಪೊಲೀಸರು
34 ರನ್​ಗಳಿದ್ದಾಗ ಕ್ಯಾಚ್ ಬಿಟ್ಟ ಸಿರಾಜ್; 93 ರನ್ ಚಚ್ಚಿದ ಅಲೆನ್
34 ರನ್​ಗಳಿದ್ದಾಗ ಕ್ಯಾಚ್ ಬಿಟ್ಟ ಸಿರಾಜ್; 93 ರನ್ ಚಚ್ಚಿದ ಅಲೆನ್
ಬಿಸಿಸಿಐನ ರೋಬೋ ಶ್ವಾನ ಚಂಪಕ್ ಮೇಲೆ ಕೊಹ್ಲಿ ಅಸಮಾಧಾನ
ಬಿಸಿಸಿಐನ ರೋಬೋ ಶ್ವಾನ ಚಂಪಕ್ ಮೇಲೆ ಕೊಹ್ಲಿ ಅಸಮಾಧಾನ
ಲಕ್ಕುಂಡಿಯಲ್ಲಿ ಪತ್ತೆಯಾಗಿದ್ದ ನಿಧಿ ಮೌಲ್ಯ 8 ಕೋಟಿ ರೂ
ಲಕ್ಕುಂಡಿಯಲ್ಲಿ ಪತ್ತೆಯಾಗಿದ್ದ ನಿಧಿ ಮೌಲ್ಯ 8 ಕೋಟಿ ರೂ
ತಮಿಳು ನಟ ಜಯಂ ರವಿ ಕಣ್ಣೀರು, ಆಕ್ರೋಶ: ಆಗಿದ್ದೇನು? ವಿಡಿಯೋ ನೋಡಿ
ತಮಿಳು ನಟ ಜಯಂ ರವಿ ಕಣ್ಣೀರು, ಆಕ್ರೋಶ: ಆಗಿದ್ದೇನು? ವಿಡಿಯೋ ನೋಡಿ
ಝಲ್ಮುರಿ ಇಲ್ಲಿಗೂ ತಲುಪಿತೇ? ಮೋದಿ ಪ್ರಶ್ನೆಗೆ ಭಾರತೀಯ ವಲಸಿಗರ ಕರತಾಡನ
ಝಲ್ಮುರಿ ಇಲ್ಲಿಗೂ ತಲುಪಿತೇ? ಮೋದಿ ಪ್ರಶ್ನೆಗೆ ಭಾರತೀಯ ವಲಸಿಗರ ಕರತಾಡನ
ಹಾವೇರಿ: ಸಿನಿಮೀಯ ಶೈಲಿಯಲ್ಲಿ ಕಳ್ಳತನ; ಲಕ್ಷಾಂತರ ಮೌಲ್ಯದ ಚಿನ್ನಾಭರಣ ಲೂಟಿ
ಹಾವೇರಿ: ಸಿನಿಮೀಯ ಶೈಲಿಯಲ್ಲಿ ಕಳ್ಳತನ; ಲಕ್ಷಾಂತರ ಮೌಲ್ಯದ ಚಿನ್ನಾಭರಣ ಲೂಟಿ
ಪ್ರಧಾನಿ ಮೋದಿಗೆ ಹೇಗ್‌ನಲ್ಲಿ ಯುವ ಕಲಾವಿದರಿಂದ ಸಂಗೀತ, ನೃತ್ಯದ ಸ್ವಾಗತ
ಪ್ರಧಾನಿ ಮೋದಿಗೆ ಹೇಗ್‌ನಲ್ಲಿ ಯುವ ಕಲಾವಿದರಿಂದ ಸಂಗೀತ, ನೃತ್ಯದ ಸ್ವಾಗತ
ಭೀಕರ ಅಪಘಾತ; ಫುಟ್‌ಪಾತ್‌ಗೆ ನುಗ್ಗಿದ ಕಾರು, ಮಗು ಸೇರಿ ಮೂವರಿಗೆ ಗಂಭೀರ ಗಾಯ
ಭೀಕರ ಅಪಘಾತ; ಫುಟ್‌ಪಾತ್‌ಗೆ ನುಗ್ಗಿದ ಕಾರು, ಮಗು ಸೇರಿ ಮೂವರಿಗೆ ಗಂಭೀರ ಗಾಯ
ಜೆ.ಪಿ. ಪಾರ್ಕ್ ಫ್ಲೈಓವರ್ ಕೆಳಗೆ ಕಸದ ರಾಶಿ! GBA ನಿದ್ದೆ ಜಾರಿದೆಯೇ?
ಜೆ.ಪಿ. ಪಾರ್ಕ್ ಫ್ಲೈಓವರ್ ಕೆಳಗೆ ಕಸದ ರಾಶಿ! GBA ನಿದ್ದೆ ಜಾರಿದೆಯೇ?