AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತಮಿಳುನಾಡಿನಲ್ಲಿ ಅಧಿಕಾರ ಹಂಚಿಕೆಯಿಲ್ಲ, ಡಿಎಂಕೆ ಸ್ವತಂತ್ರವಾಗಿ ಸರ್ಕಾರ ರಚಿಸಲಿದೆ; ಕಾಂಗ್ರೆಸ್​ಗೆ ಸಿಎಂ ಸ್ಟಾಲಿನ್ ಸಂದೇಶ

ಡಿಎಂಕೆ ಮತ್ತು ಕಾಂಗ್ರೆಸ್ ನಡುವಿನ ಮೈತ್ರಿ ಗಟ್ಟಿಯಾಗಿದೆ ಎಂದು ತಮಿಳುನಾಡು ಮುಖ್ಯಮಂತ್ರಿ ಎಂ.ಕೆ ಸ್ಟಾಲಿನ್ ಇಂದು ಹೇಳಿದ್ದಾರೆ. ಎರಡೂ ಪಕ್ಷಗಳ ನಡುವಿನ ಬಿರುಕುಗಳ ವರದಿಗಳನ್ನು ಅವರು ತಳ್ಳಿಹಾಕಿದ್ದಾರೆ. ಆದರೆ, ತಮಿಳುನಾಡಿನಲ್ಲಿ ಸಮ್ಮಿಶ್ರ ಸರ್ಕಾರದ ಸಾಧ್ಯತೆಯನ್ನು ಅವರು ನಿರಾಕರಿಸಿದ್ದಾರೆ. "ಸರ್ಕಾರದಲ್ಲಿ ಅಧಿಕಾರ ಹಂಚಿಕೊಳ್ಳುವುದು ತಮಿಳುನಾಡಿಗೆ ಸರಿಹೊಂದುವುದಿಲ್ಲ. ಕಾಂಗ್ರೆಸ್‌ಗೂ ಅದು ಚೆನ್ನಾಗಿ ತಿಳಿದಿದೆ" ಎಂದು ಡಿಎಂಕೆ ಮುಖ್ಯಸ್ಥರೂ ಆಗಿರುವ ಸ್ಟಾಲಿನ್ ಸ್ಪಷ್ಟಪಡಿಸಿದ್ದಾರೆ.

ತಮಿಳುನಾಡಿನಲ್ಲಿ ಅಧಿಕಾರ ಹಂಚಿಕೆಯಿಲ್ಲ, ಡಿಎಂಕೆ ಸ್ವತಂತ್ರವಾಗಿ ಸರ್ಕಾರ ರಚಿಸಲಿದೆ; ಕಾಂಗ್ರೆಸ್​ಗೆ ಸಿಎಂ ಸ್ಟಾಲಿನ್ ಸಂದೇಶ
CM Stalin Image Credit source: PTI
ಸುಷ್ಮಾ ಚಕ್ರೆ
|

Updated on: Feb 11, 2026 | 4:41 PM

Share

ಚೆನ್ನೈ, ಫೆಬ್ರವರಿ 11: ತಮಿಳುನಾಡು ಮುಖ್ಯಮಂತ್ರಿ ಎಂ.ಕೆ ಸ್ಟಾಲಿನ್ (MK Stalin) ಡಿಎಂಕೆ ಸ್ವಂತವಾಗಿ ಸರ್ಕಾರ ರಚಿಸಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಮಿತ್ರಪಕ್ಷಗಳ ನಡುವಿನ ಬಿರುಕು ಬಗ್ಗೆ ಗುಸುಗುಸು ಕೇಳಿಬರುತ್ತಿರುವ ನಡುವೆಯೂ 2026ರ ಚುನಾವಣೆಯಲ್ಲಿ ಕಾಂಗ್ರೆಸ್ ಜೊತೆ ಮೈತ್ರಿ ಮಾಡಿಕೊಂಡು ಸ್ಪರ್ಧಿಸುವುದಾಗಿ ಹೇಳಿದ್ದಾರೆ. ತಾವು ರಾಹುಲ್ ಗಾಂಧಿಯೊಂದಿಗೆ ಸಹೋದರ ಬಾಂಧವ್ಯ ಹೊಂದಿರುವುದಾಗಿ ಹೇಳಿದ್ದಾರೆ. ಆದರೆ ಡಿಎಂಕೆ ತನ್ನದೇ ಆದ ಸರ್ಕಾರವನ್ನು ರಚಿಸುತ್ತದೆ ಎಂದು ಸ್ಟಾಲಿನ್ ಪ್ರತಿಪಾದಿಸಿದ್ದಾರೆ. ಡಿಎಂಕೆ ಪಕ್ಷವು 2021ಕ್ಕಿಂತ ಇನ್ನೂ ಹೆಚ್ಚಿನ ಮುನ್ನಡೆ ಸಾಧಿಸುವ ವಿಶ್ವಾಸ ಹೊಂದಿದೆ ಎಂದು ಹೇಳಿದ್ದಾರೆ.

“ತಮಿಳುನಾಡಿನಲ್ಲಿ ಡಿಎಂಕೆ-ಕಾಂಗ್ರೆಸ್ ಮೈತ್ರಿಕೂಟ ಪ್ರಬಲವಾಗಿದೆ. ಚುನಾವಣೆಯಲ್ಲಿ ಒಟ್ಟಾಗಿ ಹೋರಾಡಲಿದೆ. ಸರ್ಕಾರದಲ್ಲಿ ಅಧಿಕಾರ ಹಂಚಿಕೆಯ ಪ್ರಶ್ನೆ ಈಗ ಉದ್ಭವಿಸುವುದಿಲ್ಲ” ಎಂದು ಅವರು ಸ್ಪಷ್ಟಪಡಿಸಿದ್ದಾರೆ.

ಇದನ್ನೂ ಓದಿ: ಕರ್ನಾಟಕದಲ್ಲಷ್ಟೇ ಅಲ್ಲ ಕೇರಳ, ತಮಿಳುನಾಡಲ್ಲೂ ನಡೆದಿದೆ ರಾಜ್ಯಪಾಲರು VS ಸರ್ಕಾರ ಸಂಘರ್ಷ! ಅಲ್ಲಿ ಏನೇನಾಗಿತ್ತು? ಇಲ್ಲಿದೆ ನೋಡಿ

2021ರ ತಮಿಳುನಾಡು ವಿಧಾನಸಭಾ ಚುನಾವಣೆಯಲ್ಲಿ ಡಿಎಂಕೆ 234 ಸ್ಥಾನಗಳಲ್ಲಿ 133 ಸ್ಥಾನಗಳನ್ನು ಗೆದ್ದು ಸ್ವಂತವಾಗಿ ಸರ್ಕಾರ ರಚಿಸಲು ಅವಕಾಶ ಮಾಡಿಕೊಟ್ಟಿತು. ಅದರ ಮಿತ್ರಪಕ್ಷವಾಗಿ ಸ್ಪರ್ಧಿಸಿದ ಕಾಂಗ್ರೆಸ್ 25 ಸ್ಥಾನಗಳಲ್ಲಿ 18 ಸ್ಥಾನಗಳನ್ನು ಗೆದ್ದಿತು. ಆದರೆ, ಕಾಂಗ್ರೆಸ್​ಗೆ ಯಾವುದೇ ಸಚಿವ ಸ್ಥಾನ ನೀಡಲಾಗಿಲ್ಲ.

ಈ ಬಾರಿ ಕೂಡ ಮಿತ್ರಪಕ್ಷಗಳ ನಡುವೆ ಘರ್ಷಣೆ ಉಂಟಾಗಿದ್ದು, ಕಾಂಗ್ರೆಸ್ ಕಠಿಣ ಚೌಕಾಶಿ ನಡೆಸುತ್ತಿದೆ. ತಮಿಳುನಾಡಿನಲ್ಲಿ ಡಿಎಂಕೆ ತನ್ನನ್ನು ನಿಗ್ರಹಿಸುತ್ತಿದೆ ಎಂದು ಆರೋಪಿಸಿರುವ ಕಾಂಗ್ರೆಸ್ ಹೆಚ್ಚಿನ ಸ್ಥಾನಗಳನ್ನು ಬಯಸುತ್ತಿರುವುದಾಗಿ ಹೇಳಿದೆ.

ಇದನ್ನೂ ಓದಿ: ಖಾಸಗಿ ಶಾಲೆಗಳ ಶುಲ್ಕ ವಸೂಲಿಗೆ ಬೀಳುತ್ತಾ ಬ್ರೇಕ್? ತಮಿಳುನಾಡು ಮಾದರಿ ಶಿಕ್ಷಣ ನೀತಿ ಜಾರಿಗೆ ಒತ್ತಾಯ

“ಮೈತ್ರಿಕೂಟದಲ್ಲಿ ಬಿರುಕು ಮೂಡಿಸಲು ಕೆಲವರು ಅಧಿಕಾರ ಹಂಚಿಕೆಯ ವಿಷಯವನ್ನು ಕೆಣಕುತ್ತಿದ್ದಾರೆ. ಆ ತಂತ್ರ ಕೆಲಸ ಮಾಡುವುದಿಲ್ಲ. ಮೈತ್ರಿಕೂಟದಲ್ಲಿನ ಗೊಂದಲದ ವದಂತಿಗಳನ್ನು ಉದ್ದೇಶಪೂರ್ವಕವಾಗಿ ಹರಡಲಾಗುತ್ತಿದೆ. ರಾಜಕೀಯವನ್ನು ಮೀರಿ, ನಾನು ರಾಹುಲ್ ಗಾಂಧಿಯನ್ನು ಸಹೋದರನಂತೆ ನೋಡುತ್ತೇನೆ. ಅವರು ನನ್ನನ್ನು ಸಹ ಅದೇ ರೀತಿ ನೋಡುತ್ತಾರೆ” ಎಂದು ಸ್ಟಾಲಿನ್ ಹೇಳಿದ್ದಾರೆ.

ರಾಹುಲ್ ಗಾಂಧಿ ಕಳೆದ ತಿಂಗಳು ಡಿಎಂಕೆ ಸಂಸದೆ ಕನಿಮೋಳಿ ಅವರನ್ನು ಭೇಟಿಯಾದರು. ಸೀಟು ಹಂಚಿಕೆ ಮಾತುಕತೆಗಳು ಫೆಬ್ರವರಿ 22ರಿಂದ ಔಪಚಾರಿಕವಾಗಿ ಪ್ರಾರಂಭವಾಗಲಿವೆ ಎಂದು ಡಿಎಂಕೆ ಇಂದು ತಿಳಿಸಿದೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಕರ್ನಾಟಕ ಸಂಪುಟ ವಿಸ್ತರಣೆ ಬಗ್ಗೆ ಕೈ ಹೈಕಮಾಂಡ್ ನಾಯಕರು ಹೇಳಿದ್ದಿಷ್ಟು!
ಕರ್ನಾಟಕ ಸಂಪುಟ ವಿಸ್ತರಣೆ ಬಗ್ಗೆ ಕೈ ಹೈಕಮಾಂಡ್ ನಾಯಕರು ಹೇಳಿದ್ದಿಷ್ಟು!
ರಾಹುಲ್ ಸಭೆ ಅಂತ್ಯ, ಬೆಂಗಳುರಿನತ್ತ ಡಿಕೆಶಿ: ಸಂಪುಟ ವಿಸ್ತರಣೆ ಕಥೆ ಏನಾಯ್ತು
ರಾಹುಲ್ ಸಭೆ ಅಂತ್ಯ, ಬೆಂಗಳುರಿನತ್ತ ಡಿಕೆಶಿ: ಸಂಪುಟ ವಿಸ್ತರಣೆ ಕಥೆ ಏನಾಯ್ತು
ತಾಯಿ ನೆನಪಿಗಾಗಿ ಹೊಸ ವಾಚ್ ರೆಡಿ ಮಾಡಿಸಿದ ಪುತ್ರ ಕುಮಾರಸ್ವಾಮಿ
ತಾಯಿ ನೆನಪಿಗಾಗಿ ಹೊಸ ವಾಚ್ ರೆಡಿ ಮಾಡಿಸಿದ ಪುತ್ರ ಕುಮಾರಸ್ವಾಮಿ
ಅತ್ತೆ ಚೆನ್ನಮ್ಮರ ಜೊತೆಗಿನ ನೆನೆಪು ಹಂಚಿಕೊಂಡ ಸೊಸೆ ಭವಾನಿ ರೇವಣ್ಣ
ಅತ್ತೆ ಚೆನ್ನಮ್ಮರ ಜೊತೆಗಿನ ನೆನೆಪು ಹಂಚಿಕೊಂಡ ಸೊಸೆ ಭವಾನಿ ರೇವಣ್ಣ
ಕಾವೇರಿ ಹೋರಾಟ: ಚಿತ್ರರಂಗದ ಒಗ್ಗಟ್ಟು ಪ್ರಶ್ನಿಸಿದ್ದಕ್ಕೆ ರಾಕ್​ಲೈನ್ ಗರಂ
ಕಾವೇರಿ ಹೋರಾಟ: ಚಿತ್ರರಂಗದ ಒಗ್ಗಟ್ಟು ಪ್ರಶ್ನಿಸಿದ್ದಕ್ಕೆ ರಾಕ್​ಲೈನ್ ಗರಂ
ರೈತರ ಪರ ಚಿತ್ರರಂಗ ಇದ್ದೇ ಇರುತ್ತೆ: ಫಿಲಂ ಚೇಂಬರ್ ಅಧ್ಯಕ್ಷೆ ಜಯಮಾಲ
ರೈತರ ಪರ ಚಿತ್ರರಂಗ ಇದ್ದೇ ಇರುತ್ತೆ: ಫಿಲಂ ಚೇಂಬರ್ ಅಧ್ಯಕ್ಷೆ ಜಯಮಾಲ
ರಾಜ್ಯದ ಮೇಲ್ಮನವಿ ತಿರಸ್ಕರಿಸಿದ CWMA, ಕರ್ನಾಟಕ ಬಂದ್ ಎಚ್ಚರಿಕೆ
ರಾಜ್ಯದ ಮೇಲ್ಮನವಿ ತಿರಸ್ಕರಿಸಿದ CWMA, ಕರ್ನಾಟಕ ಬಂದ್ ಎಚ್ಚರಿಕೆ
ವಿಜಯ್ ಅವರೇ ಬಲವಂತವಾಗಿ ನೀರು ಪಡೆಯಬೇಡಿ: ಪ್ರಥಮ್
ವಿಜಯ್ ಅವರೇ ಬಲವಂತವಾಗಿ ನೀರು ಪಡೆಯಬೇಡಿ: ಪ್ರಥಮ್
Cauvery Dispute: ಕಾವೇರಿ ನೀರು ವಿವಾದ; ವಾಣಿಜ್ಯ ಮಂಡಳಿಯಲ್ಲಿ ಮಹತ್ವದ ಸಭೆ
Cauvery Dispute: ಕಾವೇರಿ ನೀರು ವಿವಾದ; ವಾಣಿಜ್ಯ ಮಂಡಳಿಯಲ್ಲಿ ಮಹತ್ವದ ಸಭೆ
ನೀರಿನ ಸಮಸ್ಯೆಗೆ ಶಾಶ್ವತ ಪರಿಹಾರ ಕಂಡುಕೊಂಡ ಮಂತ್ರಾಲಯದ ರಾಯರ ಮಠ
ನೀರಿನ ಸಮಸ್ಯೆಗೆ ಶಾಶ್ವತ ಪರಿಹಾರ ಕಂಡುಕೊಂಡ ಮಂತ್ರಾಲಯದ ರಾಯರ ಮಠ