AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗರ್ಭಿಣಿ ಪರದಾಟ, ಡೋಲಿಯಲ್ಲೇ ಹೊತ್ತೊಯ್ಯುವಾಗ ಮಾರ್ಗ ಮಧ್ಯೆ ಹೆರಿಗೆ

ಹೈದರಾಬಾದ್: ಆಂಧ್ರಪ್ರದೇಶದ ವಿಜಯನಗರಂ ಜಿಲ್ಲೆಯ ಪಾರ್ಲು ಗ್ರಾಮದಲ್ಲಿ ತುಂಬು ಗರ್ಭಿಣಿಯೊಬ್ಬಳಿಗೆ ನಿನ್ನೆ ದಿಢೀರ್ ಅಂತ ಹೆರಿಗೆ ನೋವು ಕಾಣಿಸಿಕೊಂಡಿದೆ. ತಕ್ಷಣ ಆಕೆಯನ್ನ ಆಸ್ಪತ್ರೆಗೆ ಕರೆದೊಯ್ಯಲು ಕುಟುಂಬಸ್ಥರು ಮುಂದಾಗಿದ್ದಾರೆ. ದುರದೃಷ್ಟ ಅಂದ್ರೆ ಊರಿಗೆ ಸರಿಯಾದ ರಸ್ತೆಯೇ ಇಲ್ಲ. ಹೀಗಾಗಿ, ಕುಟುಂಬಸ್ಥರು ಮತ್ತು ಗ್ರಾಮಸ್ಥರು ಸೇರಿ ಡೋಲಿ ತಯಾರಿಸಿದ್ದಾರೆ. ಬಳಿಕ ಅದರಲ್ಲಿ ಮಹಿಳೆಯನ್ನ ಕೂರಿಸಿ 8ರಿಂದ 10 ಕಿಲೋ ಮೀಟರ್ ನಡೆದುಕೊಂಡೇ ಸಾಗಿದ್ದಾರೆ. ಇಬ್ಬರು ಡೋಲಿಗೆ ಹೆಗಲು ಕೊಟ್ರೆ, ಒಂದಷ್ಟು ಜನ ಬಟ್ಟೆ ಸಾಮಗ್ರಿ ತೆಗೆದುಕೊಂಡು ಹಿಂದೆ ಬಂದಿದ್ದಾರೆ. ಮತ್ತೆ […]

ಗರ್ಭಿಣಿ ಪರದಾಟ, ಡೋಲಿಯಲ್ಲೇ ಹೊತ್ತೊಯ್ಯುವಾಗ ಮಾರ್ಗ ಮಧ್ಯೆ ಹೆರಿಗೆ
ಸಾಧು ಶ್ರೀನಾಥ್​
|

Updated on:Jan 02, 2020 | 10:47 AM

Share

ಹೈದರಾಬಾದ್: ಆಂಧ್ರಪ್ರದೇಶದ ವಿಜಯನಗರಂ ಜಿಲ್ಲೆಯ ಪಾರ್ಲು ಗ್ರಾಮದಲ್ಲಿ ತುಂಬು ಗರ್ಭಿಣಿಯೊಬ್ಬಳಿಗೆ ನಿನ್ನೆ ದಿಢೀರ್ ಅಂತ ಹೆರಿಗೆ ನೋವು ಕಾಣಿಸಿಕೊಂಡಿದೆ. ತಕ್ಷಣ ಆಕೆಯನ್ನ ಆಸ್ಪತ್ರೆಗೆ ಕರೆದೊಯ್ಯಲು ಕುಟುಂಬಸ್ಥರು ಮುಂದಾಗಿದ್ದಾರೆ. ದುರದೃಷ್ಟ ಅಂದ್ರೆ ಊರಿಗೆ ಸರಿಯಾದ ರಸ್ತೆಯೇ ಇಲ್ಲ. ಹೀಗಾಗಿ, ಕುಟುಂಬಸ್ಥರು ಮತ್ತು ಗ್ರಾಮಸ್ಥರು ಸೇರಿ ಡೋಲಿ ತಯಾರಿಸಿದ್ದಾರೆ. ಬಳಿಕ ಅದರಲ್ಲಿ ಮಹಿಳೆಯನ್ನ ಕೂರಿಸಿ 8ರಿಂದ 10 ಕಿಲೋ ಮೀಟರ್ ನಡೆದುಕೊಂಡೇ ಸಾಗಿದ್ದಾರೆ. ಇಬ್ಬರು ಡೋಲಿಗೆ ಹೆಗಲು ಕೊಟ್ರೆ, ಒಂದಷ್ಟು ಜನ ಬಟ್ಟೆ ಸಾಮಗ್ರಿ ತೆಗೆದುಕೊಂಡು ಹಿಂದೆ ಬಂದಿದ್ದಾರೆ. ಮತ್ತೆ ಕೆಲವರು ಕಾಡಿನ ದಾರಿಯಲ್ಲಿ ಯಾವುದೇ ತೊಂದರೆಯಾಗದಂತೆ ಮಾರ್ಗ ಸರಿ ಮಾಡುತ್ತಾ ಸಾಗಿದ್ದಾರೆ.

ಮಾರ್ಗ ಮಧ್ಯೆಯೇ ಮುದ್ದಾದ ಮಗುವಿಗೆ ಜನ್ಮಕೊಟ್ಟ ತಾಯಿ: ಹೌದು ತಗ್ಗು ಅಂಕು ಡೊಂಕಾದ ರಸ್ತೇಲಿ ಮಹಿಳೆಗೆ ಹೆರಿಗೆ ನೋವು ಜಾಸ್ತಿಯಾಗಿದೆ. ಌಂಬುಲೆನ್ಸ್​ಗೆ ಫೋನ್ ಮಾಡಿದ್ರೂ, ಮಹಿಳೆಯಿದ್ದ ಸ್ಥಳಕ್ಕೆ ಌಂಬುಲೆನ್ಸ್ ಬರಲು ಸಾಧ್ಯವಾಗಿಲ್ಲ. ಕೊನೆಗೆ ಕಾಡಿನ ದಾರಿಯಲ್ಲೇ ಮಹಾತಾಯಿ ಮುದ್ದಾದ ಹೆಣ್ಣು ಮಗುವಿಗೆ ಜನ್ಮ ನೀಡಿದ್ದಾಳೆ.

ಸದ್ಯ ತಾಯಿ ಮತ್ತು ಮಗು ಆರೋಗ್ಯವಾಗಿದ್ದು, ಆಸ್ಪತ್ರೆಗೆ ದಾಖಲಾಗಿದ್ದಾರೆ. ಒಟ್ನಲ್ಲಿ, ಅದೆಷ್ಟೇ ಸರ್ಕಾರ ಬಂದು ಹೋದ್ರೂ, ರಾಜಕಾರಣಿಗಳು ಉದ್ದುದ್ದ ಭಾಷಣ ಬೀಗಿದ್ರೂ ಗ್ರಾಮೀಣ ಪ್ರದೇಶದಲ್ಲಿ ಜನ ಇನ್ನೂ ನರಕದಲ್ಲೇ ದಿನ ದೂಡುತ್ತಿದ್ದಾರೆ.

Published On - 10:27 am, Thu, 2 January 20

ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ