AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗರ್ಭಿಣಿ ಪರದಾಟ, ಡೋಲಿಯಲ್ಲೇ ಹೊತ್ತೊಯ್ಯುವಾಗ ಮಾರ್ಗ ಮಧ್ಯೆ ಹೆರಿಗೆ

ಹೈದರಾಬಾದ್: ಆಂಧ್ರಪ್ರದೇಶದ ವಿಜಯನಗರಂ ಜಿಲ್ಲೆಯ ಪಾರ್ಲು ಗ್ರಾಮದಲ್ಲಿ ತುಂಬು ಗರ್ಭಿಣಿಯೊಬ್ಬಳಿಗೆ ನಿನ್ನೆ ದಿಢೀರ್ ಅಂತ ಹೆರಿಗೆ ನೋವು ಕಾಣಿಸಿಕೊಂಡಿದೆ. ತಕ್ಷಣ ಆಕೆಯನ್ನ ಆಸ್ಪತ್ರೆಗೆ ಕರೆದೊಯ್ಯಲು ಕುಟುಂಬಸ್ಥರು ಮುಂದಾಗಿದ್ದಾರೆ. ದುರದೃಷ್ಟ ಅಂದ್ರೆ ಊರಿಗೆ ಸರಿಯಾದ ರಸ್ತೆಯೇ ಇಲ್ಲ. ಹೀಗಾಗಿ, ಕುಟುಂಬಸ್ಥರು ಮತ್ತು ಗ್ರಾಮಸ್ಥರು ಸೇರಿ ಡೋಲಿ ತಯಾರಿಸಿದ್ದಾರೆ. ಬಳಿಕ ಅದರಲ್ಲಿ ಮಹಿಳೆಯನ್ನ ಕೂರಿಸಿ 8ರಿಂದ 10 ಕಿಲೋ ಮೀಟರ್ ನಡೆದುಕೊಂಡೇ ಸಾಗಿದ್ದಾರೆ. ಇಬ್ಬರು ಡೋಲಿಗೆ ಹೆಗಲು ಕೊಟ್ರೆ, ಒಂದಷ್ಟು ಜನ ಬಟ್ಟೆ ಸಾಮಗ್ರಿ ತೆಗೆದುಕೊಂಡು ಹಿಂದೆ ಬಂದಿದ್ದಾರೆ. ಮತ್ತೆ […]

ಗರ್ಭಿಣಿ ಪರದಾಟ, ಡೋಲಿಯಲ್ಲೇ ಹೊತ್ತೊಯ್ಯುವಾಗ ಮಾರ್ಗ ಮಧ್ಯೆ ಹೆರಿಗೆ
ಸಾಧು ಶ್ರೀನಾಥ್​
|

Updated on:Jan 02, 2020 | 10:47 AM

Share

ಹೈದರಾಬಾದ್: ಆಂಧ್ರಪ್ರದೇಶದ ವಿಜಯನಗರಂ ಜಿಲ್ಲೆಯ ಪಾರ್ಲು ಗ್ರಾಮದಲ್ಲಿ ತುಂಬು ಗರ್ಭಿಣಿಯೊಬ್ಬಳಿಗೆ ನಿನ್ನೆ ದಿಢೀರ್ ಅಂತ ಹೆರಿಗೆ ನೋವು ಕಾಣಿಸಿಕೊಂಡಿದೆ. ತಕ್ಷಣ ಆಕೆಯನ್ನ ಆಸ್ಪತ್ರೆಗೆ ಕರೆದೊಯ್ಯಲು ಕುಟುಂಬಸ್ಥರು ಮುಂದಾಗಿದ್ದಾರೆ. ದುರದೃಷ್ಟ ಅಂದ್ರೆ ಊರಿಗೆ ಸರಿಯಾದ ರಸ್ತೆಯೇ ಇಲ್ಲ. ಹೀಗಾಗಿ, ಕುಟುಂಬಸ್ಥರು ಮತ್ತು ಗ್ರಾಮಸ್ಥರು ಸೇರಿ ಡೋಲಿ ತಯಾರಿಸಿದ್ದಾರೆ. ಬಳಿಕ ಅದರಲ್ಲಿ ಮಹಿಳೆಯನ್ನ ಕೂರಿಸಿ 8ರಿಂದ 10 ಕಿಲೋ ಮೀಟರ್ ನಡೆದುಕೊಂಡೇ ಸಾಗಿದ್ದಾರೆ. ಇಬ್ಬರು ಡೋಲಿಗೆ ಹೆಗಲು ಕೊಟ್ರೆ, ಒಂದಷ್ಟು ಜನ ಬಟ್ಟೆ ಸಾಮಗ್ರಿ ತೆಗೆದುಕೊಂಡು ಹಿಂದೆ ಬಂದಿದ್ದಾರೆ. ಮತ್ತೆ ಕೆಲವರು ಕಾಡಿನ ದಾರಿಯಲ್ಲಿ ಯಾವುದೇ ತೊಂದರೆಯಾಗದಂತೆ ಮಾರ್ಗ ಸರಿ ಮಾಡುತ್ತಾ ಸಾಗಿದ್ದಾರೆ.

ಮಾರ್ಗ ಮಧ್ಯೆಯೇ ಮುದ್ದಾದ ಮಗುವಿಗೆ ಜನ್ಮಕೊಟ್ಟ ತಾಯಿ: ಹೌದು ತಗ್ಗು ಅಂಕು ಡೊಂಕಾದ ರಸ್ತೇಲಿ ಮಹಿಳೆಗೆ ಹೆರಿಗೆ ನೋವು ಜಾಸ್ತಿಯಾಗಿದೆ. ಌಂಬುಲೆನ್ಸ್​ಗೆ ಫೋನ್ ಮಾಡಿದ್ರೂ, ಮಹಿಳೆಯಿದ್ದ ಸ್ಥಳಕ್ಕೆ ಌಂಬುಲೆನ್ಸ್ ಬರಲು ಸಾಧ್ಯವಾಗಿಲ್ಲ. ಕೊನೆಗೆ ಕಾಡಿನ ದಾರಿಯಲ್ಲೇ ಮಹಾತಾಯಿ ಮುದ್ದಾದ ಹೆಣ್ಣು ಮಗುವಿಗೆ ಜನ್ಮ ನೀಡಿದ್ದಾಳೆ.

ಸದ್ಯ ತಾಯಿ ಮತ್ತು ಮಗು ಆರೋಗ್ಯವಾಗಿದ್ದು, ಆಸ್ಪತ್ರೆಗೆ ದಾಖಲಾಗಿದ್ದಾರೆ. ಒಟ್ನಲ್ಲಿ, ಅದೆಷ್ಟೇ ಸರ್ಕಾರ ಬಂದು ಹೋದ್ರೂ, ರಾಜಕಾರಣಿಗಳು ಉದ್ದುದ್ದ ಭಾಷಣ ಬೀಗಿದ್ರೂ ಗ್ರಾಮೀಣ ಪ್ರದೇಶದಲ್ಲಿ ಜನ ಇನ್ನೂ ನರಕದಲ್ಲೇ ದಿನ ದೂಡುತ್ತಿದ್ದಾರೆ.

Published On - 10:27 am, Thu, 2 January 20

Follow Us
ಅಧಿಕಾರಿ ಮೇಲೆ ಪಾಲಿಕೆ ಸದಸ್ಯ ಹಲ್ಲೆ: ಪ್ರಕರಣದಲ್ಲಿ​ ಶಾಸಕ ರೆಡ್ಡಿ ಎಂಟ್ರಿ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯ ಹಲ್ಲೆ: ಪ್ರಕರಣದಲ್ಲಿ​ ಶಾಸಕ ರೆಡ್ಡಿ ಎಂಟ್ರಿ
ಹಿಂದೆ ಸಂಬಂಧಿಯನ್ನ ಕೊಂದ್ರು, ಈಗ ಅಳಿಯನ ಹತ್ಯೆ:ಮಾಜಿ ಸಚಿವ ಬೆಳಮಗಿ ಕಣ್ಣೀರು
ಹಿಂದೆ ಸಂಬಂಧಿಯನ್ನ ಕೊಂದ್ರು, ಈಗ ಅಳಿಯನ ಹತ್ಯೆ:ಮಾಜಿ ಸಚಿವ ಬೆಳಮಗಿ ಕಣ್ಣೀರು
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!