Sign In

By signing in or creating an account, you agree with Associated Broadcasting Company's Terms & Conditions and Privacy Policy.

26/11 ಉಗ್ರ ದಾಳಿ ಕೇಂದ್ರ ಮಟ್ಟದಲ್ಲಿ ನಿರ್ಧಾರ ತೆಗೆದುಕೊಳ್ಳುವಲ್ಲಿನ ದೌರ್ಬಲ್ಯವನ್ನು ಬಹಿರಂಗಪಡಿಸಿತು: ಮಾಜಿ ಕ್ಯಾಬಿನೆಟ್ ಕಾರ್ಯದರ್ಶಿ

ಗೃಹ ಸಚಿವಾಲಯದ ಅಡಿಯಲ್ಲಿನ ಏಜೆನ್ಸಿಗಳು ಮತ್ತು ಸಶಸ್ತ್ರ ಪಡೆಗಳ ಗುಪ್ತಚರವು ಸಾಮಾನ್ಯವಾಗಿ ಕ್ಯಾಬಿನೆಟ್ ಕಾರ್ಯದರ್ಶಿಗೆ ಕ್ಷೇತ್ರದ ಸಮಸ್ಯೆಗಳ ಬಗ್ಗೆ ತಿಳಿಸುವುದಿಲ್ಲ. ಇವು ಕೆಲವೇ ಕೆಲ ಸಂಗತಿಗಳನ್ನು ಗೃಹ ಸಚಿವಾಲಯ ಅಥವಾ ಎನ್ಎಸ್ಎಗೆ ಮಾತ್ರ ನೀಡಲು ಆದ್ಯತೆ ನೀಡುತ್ತದೆ.

26/11 ಉಗ್ರ ದಾಳಿ ಕೇಂದ್ರ ಮಟ್ಟದಲ್ಲಿ ನಿರ್ಧಾರ ತೆಗೆದುಕೊಳ್ಳುವಲ್ಲಿನ ದೌರ್ಬಲ್ಯವನ್ನು ಬಹಿರಂಗಪಡಿಸಿತು: ಮಾಜಿ ಕ್ಯಾಬಿನೆಟ್ ಕಾರ್ಯದರ್ಶಿ
Follow us
TV9 Web
| Updated By: ರಶ್ಮಿ ಕಲ್ಲಕಟ್ಟ

Updated on:Dec 02, 2022 | 2:27 PM

ನವೆಂಬರ್ 2008 ರಲ್ಲಿ ಪಾಕಿಸ್ತಾನಿ (Pakistan) ಉಗ್ರರು ಮುಂಬೈಗೆ ಬಂದಿಳಿದಾಗ ದೇಶದ ಉನ್ನತ ನಾಗರಿಕ ಸೇವಕರಾಗಿದ್ದ ಮಾಜಿ ಕ್ಯಾಬಿನೆಟ್ ಕಾರ್ಯದರ್ಶಿ ಕೆಎಂ ಚಂದ್ರಶೇಖರ್, ದಾಳಿ ನಡೆದಾಗ “ಕೇಂದ್ರ ಮಟ್ಟದಲ್ಲಿ ಯಾರು ಏನು ಮಾಡಬೇಕೆಂಬುದರ ಬಗ್ಗೆ ನಿಜವಾದ ಸ್ಪಷ್ಟತೆ ಇರಲಿಲ್ಲ” ಎಂದು ಹೇಳಿದ್ದಾರೆ. 1998 ರಲ್ಲಿ ರಾಷ್ಟ್ರೀಯ ಭದ್ರತಾ ಸಲಹೆಗಾರ (NSA) ಹುದ್ದೆಯ ರಚನೆಯ ನಂತರದ ಪರಿಸ್ಥಿತಿಯನ್ನು ಚಂದ್ರಶೇಖರ್ ಅವರು ಇತ್ತೀಚೆಗೆ ಬಿಡುಗಡೆ ಮಾಡಿದ As good as my word ಎಂಬ ಪುಸ್ತಕದಲ್ಲಿ ಬರೆದಿದ್ದಾರೆ ಎಂದು ಹಿಂದೂಸ್ತಾನ್ ಟೈಮ್ಸ್ ವರದಿ ಮಾಡಿದೆ. ಎನ್‌ಎಸ್‌ಎ ಸ್ಥಾನವನ್ನು ರಚಿಸುವ ಸರ್ಕಾರದ ನಿರ್ಧಾರವು ಸರಿಯಾದ ದಿಕ್ಕಿನಲ್ಲಿ ಒಂದು ಹೆಜ್ಜೆಯಾಗಿದೆ. ಇಲ್ಲಿ ಸರ್ಕಾರವು ಎನ್ಎಸ್ಎ ಮತ್ತು ಕ್ಯಾಬಿನೆಟ್ ಕಾರ್ಯದರ್ಶಿ ನಡುವೆ ಅಧಿಕಾರದ ಜವಾಬ್ದಾರಿಗಳನ್ನು ವಿತರಿಸಲು ಆಯ್ಕೆ ಮಾಡಿದೆ ಅವರು ಬರೆದಿದ್ದಾರೆ. ಇದು ಭದ್ರತೆಗೆ ಸಂಬಂಧಿಸಿದ ವಿಷಯಗಳನ್ನು ನಿರ್ವಹಿಸುವಲ್ಲಿ ಪಾತ್ರಗಳ ನಡುವೆ ಗೊಂದಲದ ಸಾಧ್ಯತೆಯನ್ನು ಸೃಷ್ಟಿಸಿದೆ ಎಂದು ಅವರು ಹೇಳಿದ್ದಾರೆ.26/11 ದಾಳಿ (26/11 attacks) ಗಂಭೀರ ತುರ್ತು ಪರಿಸ್ಥಿತಿಯಲ್ಲಿ ನಿರ್ಧಾರ ತೆಗೆದುಕೊಳ್ಳುವಲ್ಲಿ ಉನ್ನತ ಮಟ್ಟದ ದೌರ್ಬಲ್ಯವನ್ನು ಬಹಿರಂಗಪಡಿಸಿದವು ಎಂದು ಚಂದ್ರಶೇಖರ್ ಬರೆದಿದ್ದಾರೆ.2007 ರಲ್ಲಿ ಆಗಿನ ಪ್ರಧಾನಿ ಮನಮೋಹನ್ ಸಿಂಗ್, ಚಂದ್ರಶೇಖರ್ ಅವರನ್ನು ಆಯ್ಕೆ ಮಾಡಿದ್ದು 2011 ರವರೆಗೆ  ಅವರು ನಾಲ್ಕು ವರ್ಷಗಳ ಕಾಲ ಸೇವೆ ಸಲ್ಲಿಸಿದರು.

“ಗೃಹ ಸಚಿವಾಲಯದ ಅಡಿಯಲ್ಲಿನ ಏಜೆನ್ಸಿಗಳು ಮತ್ತು ಸಶಸ್ತ್ರ ಪಡೆಗಳ ಗುಪ್ತಚರವು ಸಾಮಾನ್ಯವಾಗಿ ಕ್ಯಾಬಿನೆಟ್ ಕಾರ್ಯದರ್ಶಿಗೆ ಕ್ಷೇತ್ರದ ಸಮಸ್ಯೆಗಳ ಬಗ್ಗೆ ತಿಳಿಸುವುದಿಲ್ಲ. ಇವು ಕೆಲವೇ ಕೆಲ ಸಂಗತಿಗಳನ್ನು ಗೃಹ ಸಚಿವಾಲಯ ಅಥವಾ ಎನ್ಎಸ್ಎಗೆ ಮಾತ್ರ ನೀಡಲು ಆದ್ಯತೆ ನೀಡುತ್ತದೆ. ಅದೇ ವೇಳೆ ಭಯೋತ್ಪಾದಕ ದಾಳಿ, ಹೈಜಾಕ್ ಅಥವಾ ವಿವಿಧ ರೀತಿಯ ಉಗ್ರ ದಾಳಿಯೇ ಇರಬಹುದು. ಸಾಕಷ್ಟು ಮತ್ತು ಸಮಯೋಚಿತ ಮಾಹಿತಿಯಿಲ್ಲದೆ, ಕ್ಯಾಬಿನೆಟ್ ಕಾರ್ಯದರ್ಶಿ ಇನ್ನೂ ಬಿಕ್ಕಟ್ಟಿನ ಸಂದರ್ಭಗಳನ್ನು ಎದುರಿಸಬೇಕಾಗುತ್ತದೆ ಎಂದು ಅವರು ಬರೆದಿದ್ದಾರೆ.

ಇದಲ್ಲದೆ, ಯಾವುದೇ ನೈಜ ಸಮನ್ವಯ ಕಾರ್ಯವಿಧಾನ ಇರಲಿಲ್ಲ ಎಂದು ಅವರು ಹೇಳಿದರು.

ಇದನ್ನೂ ಓದಿ
Image
Mumbai Attack: 26/11 ದಾಳಿಯಲ್ಲಿ ನಾನು ಎಲ್ಲವನ್ನೂ ಕಳೆದುಕೊಂಡೆ: ಕರಂಬಿರ್ ಕಾಂಗ್
Image
26/11 Mumbai Attack: 26/11ಕ್ಕೆ ಮುಂಬೈನಲ್ಲಿ ಏನೇನಾಯ್ತು?; ಇಲ್ಲಿದೆ ಕರಾಳ ಘಟನೆಯ ವಿವರ

26/11 ರಂದು ನಿಜವಾದ ಬಿಕ್ಕಟ್ಟು ಉಂಟಾದಾಗ ಕೇಂದ್ರ ಮಟ್ಟದಲ್ಲಿ ಯಾರು ಏನು ಮಾಡಬೇಕೆಂಬುದರ ಬಗ್ಗೆ ನಿಜವಾದ ಸ್ಪಷ್ಟತೆ ಇರಲಿಲ್ಲ. ಕಾನೂನು ಮತ್ತು ಸುವ್ಯವಸ್ಥೆಯು ಭಾರತೀಯ ಸಂವಿಧಾನದ ಅಡಿಯಲ್ಲಿ ರಾಜ್ಯದ ವಿಷಯವಾಗಿದೆ. ಕೇಂದ್ರದ ಮಧ್ಯಸ್ಥಿಕೆಯು ಸಂಬಂಧಪಟ್ಟ ರಾಜ್ಯ ಸರ್ಕಾರದ ಕೋರಿಕೆಯ ಮೇರೆಗೆ ಮಾತ್ರವೇ ಎಂಬುದರ ಬ್ಗಗೆ ಇಲ್ಲಿ ಗೊಂದಲವಿತ್ತು.

ನಾನು ಈ ಬಿಕ್ಕಟ್ಟು ನಿಭಾಯಿಸಲು ಶ್ರಮಿಸಿದೆ. ನನ್ನ ಬಳಿ ಯಾವುದೇ ಹಿನ್ನೆಲೆ ಮಾಹಿತಿ ಇರಲಿಲ್ಲ, ಯಾವುದೇ ಗುಪ್ತಚರ ಇನ್‌ಪುಟ್‌ಗಳಿಲ್ಲ, ತಡರಾತ್ರಿಯವರೆಗೂ ಮುಂಬೈನಲ್ಲಿ ನಿಜವಾಗಿ ಏನು ನಡೆಯುತ್ತಿದೆ ಎಂಬುದರ ಸಂಪೂರ್ಣ ಜ್ಞಾನವೂ ಇರಲಿಲ್ಲ. .ಬಿಕ್ಕಟ್ಟಿನ ಆಯಾಮಗಳು ಮತ್ತು ಬಿಕ್ಕಟ್ಟನ್ನು ತನ್ನದೇ ಆದ ರೀತಿಯಲ್ಲಿ ನಿಭಾಯಿಸುವ ರಾಜ್ಯ ಸರ್ಕಾರದ ಸಾಮರ್ಥ್ಯದ ಬಗ್ಗೆ ನನಗೆ ತಿಳಿದಿರಲಿಲ್ಲ ಎಂದು ಅವರು ಹೇಳಿದ್ದಾರೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 2:22 pm, Fri, 2 December 22

ಅಜಯ್ ರಾವ್ ಓದಿದ್ದು ಎಸ್​ಎಸ್​ಎಲ್​ಸಿ ತನಕ ಮಾತ್ರ; ಅಚ್ಚರಿ ವಿಷಯ ಹೇಳಿದ ನಟ
ಅಜಯ್ ರಾವ್ ಓದಿದ್ದು ಎಸ್​ಎಸ್​ಎಲ್​ಸಿ ತನಕ ಮಾತ್ರ; ಅಚ್ಚರಿ ವಿಷಯ ಹೇಳಿದ ನಟ
ಒಬ್ಬ ಸಿಬ್ಬಂದಿ ತಪ್ಪಿನಿಂದ 20,000 ಶಿಕ್ಷಕರು ನೋವಿಗೀಡಾಗಿದ್ದಾರೆ: ಪ್ರಸನ್ನ
ಒಬ್ಬ ಸಿಬ್ಬಂದಿ ತಪ್ಪಿನಿಂದ 20,000 ಶಿಕ್ಷಕರು ನೋವಿಗೀಡಾಗಿದ್ದಾರೆ: ಪ್ರಸನ್ನ
ಪ್ರತಿಭಟನೆ ಕಾರಣ ಬೆಂಗಳೂರು-ಮಂಗಳೂರು ರಾಷ್ಟ್ರೀಯ ಹೆದ್ದಾರಿ ಬಂದ್
ಪ್ರತಿಭಟನೆ ಕಾರಣ ಬೆಂಗಳೂರು-ಮಂಗಳೂರು ರಾಷ್ಟ್ರೀಯ ಹೆದ್ದಾರಿ ಬಂದ್
ನಾವು 75 ಲಕ್ಷ ಇದ್ರೂ 7 ಜನ ಮಾತ್ರ ಶಾಸಕರಿದ್ದೇವೆ: ಸಿಎಂ ಇಬ್ರಾಹಿಂ ಬೇಸರ
ನಾವು 75 ಲಕ್ಷ ಇದ್ರೂ 7 ಜನ ಮಾತ್ರ ಶಾಸಕರಿದ್ದೇವೆ: ಸಿಎಂ ಇಬ್ರಾಹಿಂ ಬೇಸರ
ಉಡುಪಿ, ತಿರುಪತಿಗೆ ಮುಸ್ಲಿಮರನ್ನ ಸೇರಿಸಿಕೊಳ್ಳುತ್ತೀರಾ? ಇಬ್ರಾಹಿಂ ಪ್ರಶ್ನೆ
ಉಡುಪಿ, ತಿರುಪತಿಗೆ ಮುಸ್ಲಿಮರನ್ನ ಸೇರಿಸಿಕೊಳ್ಳುತ್ತೀರಾ? ಇಬ್ರಾಹಿಂ ಪ್ರಶ್ನೆ
ಲಿಂಗಾಯತ ಸಚಿವರೆಲ್ಲ ಚರ್ಚೆಗೆ ಪೂರ್ವಸಿದ್ಧತೆ ಮಾಡಿಕೊಂಡಿದ್ದೆವು: ಪಾಟೀಲ್
ಲಿಂಗಾಯತ ಸಚಿವರೆಲ್ಲ ಚರ್ಚೆಗೆ ಪೂರ್ವಸಿದ್ಧತೆ ಮಾಡಿಕೊಂಡಿದ್ದೆವು: ಪಾಟೀಲ್
ಮಾಲೀಕನ ಮೇಲೆ ನಡೆದ ದಾಳಿ ತಪ್ಪಿಸಿ ಹೀರೋ ಆದ ಸಾಕುನಾಯಿ!
ಮಾಲೀಕನ ಮೇಲೆ ನಡೆದ ದಾಳಿ ತಪ್ಪಿಸಿ ಹೀರೋ ಆದ ಸಾಕುನಾಯಿ!
ನನ್ನನ್ನು ರಾಜಕೀಯವಾಗಿ ಬೆಳೆಸಿದ್ದು ಡಿಕೆ ಶಿವಕುಮಾರ್: ಸೋಮಶೇಖರ್
ನನ್ನನ್ನು ರಾಜಕೀಯವಾಗಿ ಬೆಳೆಸಿದ್ದು ಡಿಕೆ ಶಿವಕುಮಾರ್: ಸೋಮಶೇಖರ್
ಪಿಲಿಭಿತ್ ಅಭಯಾರಣ್ಯದಲ್ಲಿ ಹೆಬ್ಬಾವನ್ನು ತಿಂದು ವಾಂತಿ ಮಾಡಿದ ಹುಲಿ
ಪಿಲಿಭಿತ್ ಅಭಯಾರಣ್ಯದಲ್ಲಿ ಹೆಬ್ಬಾವನ್ನು ತಿಂದು ವಾಂತಿ ಮಾಡಿದ ಹುಲಿ
ಜಿಲ್ಲೆಯಲ್ಲಿ ಬಿಜೆಪಿಗೆ ಉತ್ತಮ ಫಲಿತಾಂಶ ಕೊಡಿಸುವ ಸವಾಲು ಸ್ವೀಕಾರ: ಬಿವೈವಿ
ಜಿಲ್ಲೆಯಲ್ಲಿ ಬಿಜೆಪಿಗೆ ಉತ್ತಮ ಫಲಿತಾಂಶ ಕೊಡಿಸುವ ಸವಾಲು ಸ್ವೀಕಾರ: ಬಿವೈವಿ