AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದೇಶದಲ್ಲಿ ಮಂಗಗಳ ಕಡಿತದಿಂದ ಸಾವಿಗೀಡಾದವರ ಬಗ್ಗೆ ಯಾವುದೇ ದಾಖಲೆಗಳಿಲ್ಲ: ಕೇಂದ್ರ ಸರ್ಕಾರ

2015 ರಲ್ಲಿ 1,900 ಕ್ಕೂ ಹೆಚ್ಚು ಮಂಗ ಕಡಿತದ ಪ್ರಕರಣಗಳು ವರದಿಯಾಗಿವೆ ಎಂದು ಲೋಕಸಭೆಗೆ ಈ ಹಿಂದೆ ತಿಳಿಸಲಾಯಿತು, ಇದು ಹಿಂದಿನ ವರ್ಷಕ್ಕಿಂತ 400 ಕ್ಕೂ ಹೆಚ್ಚು ಪ್ರಕರಣಗಳು ಹೆಚ್ಚಾಗಿದೆ.

ದೇಶದಲ್ಲಿ ಮಂಗಗಳ ಕಡಿತದಿಂದ ಸಾವಿಗೀಡಾದವರ ಬಗ್ಗೆ ಯಾವುದೇ ದಾಖಲೆಗಳಿಲ್ಲ: ಕೇಂದ್ರ ಸರ್ಕಾರ
ಮಂಗ (ಸಂಗ್ರಹ ಚಿತ್ರ)
ರಶ್ಮಿ ಕಲ್ಲಕಟ್ಟ
|

Updated on:Mar 14, 2023 | 1:43 PM

Share

ದೇಶದಲ್ಲಿ ಮಂಗಗಳ ಕಡಿತದಿಂದ (Monkey bite) ಗಾಯಗೊಂಡು ಸಾವಿಗೀಡಾದವರ ಸಂಖ್ಯೆಯ ಬಗ್ಗೆ ತನ್ನ ಬಳಿ ಯಾವುದೇ ದಾಖಲೆಗಳಿಲ್ಲ ಎಂದು ಪರಿಸರ, ಅರಣ್ಯ ಮತ್ತು ಹವಾಮಾನ ಬದಲಾವಣೆ ಸಚಿವಾಲಯವು ಸೋಮವಾರ ಸಂಸತ್​​ಗೆ (Loksabha) ತಿಳಿಸಿದೆ. ಬಿಜೆಪಿ(BJP) ಸಂಸದ ರಾಜ್ ಕುಮಾರ್ ಚಹರ್ ಅವರು ವಿವಿಧ ರಾಜ್ಯಗಳಲ್ಲಿ ಆಗಾಗ್ಗೆ ಕೋತಿಗಳ ಹಾವಳಿಯ ಪ್ರಕರಣಗಳ ಬಗ್ಗೆ ಸಂಸತ್ತಿನಲ್ಲಿ ಕಳವಳ ವ್ಯಕ್ತಪಡಿಸಿದ್ದು, ಸಂತ್ರಸ್ತರಿಗೆ ಪರಿಹಾರದ ಮೊತ್ತದ ಬಗ್ಗೆ ಸ್ಪಷ್ಟೀಕರಣವನ್ನು ಕೋರಿದರು.

“ಕೇಂದ್ರ ಪ್ರಾಯೋಜಿತ ಯೋಜನೆಗಳ ಅಡಿಯಲ್ಲಿ ಪಾವತಿಸಬೇಕಾದ ಪರಿಹಾರದ ಮೊತ್ತದ ಮರುಪಾವತಿಯನ್ನು ಹಣದ ಲಭ್ಯತೆಗೆ ಒಳಪಟ್ಟಿರುವ ವರ್ಧಿತ ದರಗಳ ಪ್ರಕಾರ ರಾಜ್ಯಗಳು ಮಾಡಬಹುದು ಎಂದು ಪತ್ರದಲ್ಲಿ ಸ್ಪಷ್ಟಪಡಿಸಲಾಗಿದೆ” ಎಂದು ಸಚಿವಾಲಯವು ಹೇಳಿದ್ದು ಮಂಗಗಳ ದಾಳಿಯಿಂದ ಉಂಟಾದ ಸಾವುಗಳು ಮತ್ತು ಗಾಯಗಳ ವಿವರಗಳ ಬಗ್ಗೆ ಯಾವುದೇ ದಾಖಲೆಯನ್ನು ಹೊಂದಿಲ್ಲ ಎಂದು ಹೇಳಿದೆ. 2015 ರಲ್ಲಿ 1,900 ಕ್ಕೂ ಹೆಚ್ಚು ಮಂಗ ಕಡಿತದ ಪ್ರಕರಣಗಳು ವರದಿಯಾಗಿವೆ ಎಂದು ಲೋಕಸಭೆಗೆ ಈ ಹಿಂದೆ ತಿಳಿಸಲಾಯಿತು, ಇದು ಹಿಂದಿನ ವರ್ಷಕ್ಕಿಂತ 400 ಕ್ಕೂ ಹೆಚ್ಚು ಪ್ರಕರಣಗಳು ಹೆಚ್ಚಾಗಿದೆ.

2015 ರಲ್ಲಿ ದೆಹಲಿಯಲ್ಲಿ ಪ್ರತಿದಿನ ಕನಿಷ್ಠ ಐದು ಕೋತಿ ಕಡಿತದ ಪ್ರಕರಣಗಳು ವರದಿಯಾಗಿವೆ.

ಕಾಡು ಪ್ರಾಣಿಗಳಿಂದ ಉಂಟಾಗುವ ದಾಳಿ, ಗಾಯಗಳು ಮತ್ತು ಆಸ್ತಿ ಮತ್ತು ಜೀವ ಹಾನಿಗಳಿಗೆ ಪರಿಹಾರವನ್ನು ಕೇಂದ್ರ ಪ್ರಾಯೋಜಿತ ಯೋಜನೆಯಡಿ ಒಳಪಡಿಸಲಾಗಿದೆ ಎಂದು 2018 ರ ಪರಿಸರ, ಅರಣ್ಯ ಮತ್ತು ಹವಾಮಾನ ಬದಲಾವಣೆ ಸಚಿವಾಲಯದ ಪತ್ರದಲ್ಲಿ ತಿಳಿಸಲಾಗಿದೆ.

ಇದನ್ನೂ ಓದಿ:Bhopal gas tragedy: ಭೋಪಾಲ್ ಅನಿಲ ದುರಂತ, ಕೇಂದ್ರದ ಹೆಚ್ಚಿನ ಪರಿಹಾರ ಮನವಿ ವಜಾಗೊಳಿಸಿದ ಸುಪ್ರೀಂ

ಸೋಮವಾರ ಸರ್ಕಾರ ನೀಡಿದ ಉತ್ತರದಲ್ಲಿ ಅಂಥಾ ದಾಳಿಯ ಸಂತ್ರಸ್ತರಿಗೆ ಪಾವತಿಸುವ ಪರಿಹಾರ ಮೊತ್ತವನ್ನು ಸಹ ಹೆಚ್ಚಿಸಲಾಗಿದೆ ಎಂದು ಹೇಳಿದೆ, ರಾಜ್ಯಗಳಲ್ಲಿ ಲಭ್ಯವಿರುವ ಹಣವನ್ನು ಅವಲಂಬಿಸಿ ಪಾವತಿಸಬೇಕಾದ ಪರಿಹಾರದ ಮರುಪಾವತಿಯನ್ನು ಮಾಡಲಾಗುತ್ತದೆ ಎಂದು ಅದು ಸ್ಪಷ್ಟಪಡಿಸಿದೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 12:49 pm, Tue, 14 March 23

Follow Us
ಗ್ಯಾಸ್​ ಇಲ್ಲಿದೇ ಬೆಂಗಳೂರಿನ ಗಲ್ಲಿ ಗಲ್ಲಿಯಲ್ಲೂ ನಿಂತ ಆಟೋಗಳು!
ಗ್ಯಾಸ್​ ಇಲ್ಲಿದೇ ಬೆಂಗಳೂರಿನ ಗಲ್ಲಿ ಗಲ್ಲಿಯಲ್ಲೂ ನಿಂತ ಆಟೋಗಳು!
ಅಧಿಕಾರಿ ಮೇಲೆ ಪಾಲಿಕೆ ಸದಸ್ಯ ಹಲ್ಲೆ: ಪ್ರಕರಣದಲ್ಲಿ​ ಶಾಸಕ ರೆಡ್ಡಿ ಎಂಟ್ರಿ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯ ಹಲ್ಲೆ: ಪ್ರಕರಣದಲ್ಲಿ​ ಶಾಸಕ ರೆಡ್ಡಿ ಎಂಟ್ರಿ
ಹಿಂದೆ ಸಂಬಂಧಿಯನ್ನ ಕೊಂದ್ರು, ಈಗ ಅಳಿಯನ ಹತ್ಯೆ:ಮಾಜಿ ಸಚಿವ ಬೆಳಮಗಿ ಕಣ್ಣೀರು
ಹಿಂದೆ ಸಂಬಂಧಿಯನ್ನ ಕೊಂದ್ರು, ಈಗ ಅಳಿಯನ ಹತ್ಯೆ:ಮಾಜಿ ಸಚಿವ ಬೆಳಮಗಿ ಕಣ್ಣೀರು
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ