AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದೇಶದಲ್ಲಿ ಮಂಗಗಳ ಕಡಿತದಿಂದ ಸಾವಿಗೀಡಾದವರ ಬಗ್ಗೆ ಯಾವುದೇ ದಾಖಲೆಗಳಿಲ್ಲ: ಕೇಂದ್ರ ಸರ್ಕಾರ

2015 ರಲ್ಲಿ 1,900 ಕ್ಕೂ ಹೆಚ್ಚು ಮಂಗ ಕಡಿತದ ಪ್ರಕರಣಗಳು ವರದಿಯಾಗಿವೆ ಎಂದು ಲೋಕಸಭೆಗೆ ಈ ಹಿಂದೆ ತಿಳಿಸಲಾಯಿತು, ಇದು ಹಿಂದಿನ ವರ್ಷಕ್ಕಿಂತ 400 ಕ್ಕೂ ಹೆಚ್ಚು ಪ್ರಕರಣಗಳು ಹೆಚ್ಚಾಗಿದೆ.

ದೇಶದಲ್ಲಿ ಮಂಗಗಳ ಕಡಿತದಿಂದ ಸಾವಿಗೀಡಾದವರ ಬಗ್ಗೆ ಯಾವುದೇ ದಾಖಲೆಗಳಿಲ್ಲ: ಕೇಂದ್ರ ಸರ್ಕಾರ
ಮಂಗ (ಸಂಗ್ರಹ ಚಿತ್ರ)
ರಶ್ಮಿ ಕಲ್ಲಕಟ್ಟ
|

Updated on:Mar 14, 2023 | 1:43 PM

Share

ದೇಶದಲ್ಲಿ ಮಂಗಗಳ ಕಡಿತದಿಂದ (Monkey bite) ಗಾಯಗೊಂಡು ಸಾವಿಗೀಡಾದವರ ಸಂಖ್ಯೆಯ ಬಗ್ಗೆ ತನ್ನ ಬಳಿ ಯಾವುದೇ ದಾಖಲೆಗಳಿಲ್ಲ ಎಂದು ಪರಿಸರ, ಅರಣ್ಯ ಮತ್ತು ಹವಾಮಾನ ಬದಲಾವಣೆ ಸಚಿವಾಲಯವು ಸೋಮವಾರ ಸಂಸತ್​​ಗೆ (Loksabha) ತಿಳಿಸಿದೆ. ಬಿಜೆಪಿ(BJP) ಸಂಸದ ರಾಜ್ ಕುಮಾರ್ ಚಹರ್ ಅವರು ವಿವಿಧ ರಾಜ್ಯಗಳಲ್ಲಿ ಆಗಾಗ್ಗೆ ಕೋತಿಗಳ ಹಾವಳಿಯ ಪ್ರಕರಣಗಳ ಬಗ್ಗೆ ಸಂಸತ್ತಿನಲ್ಲಿ ಕಳವಳ ವ್ಯಕ್ತಪಡಿಸಿದ್ದು, ಸಂತ್ರಸ್ತರಿಗೆ ಪರಿಹಾರದ ಮೊತ್ತದ ಬಗ್ಗೆ ಸ್ಪಷ್ಟೀಕರಣವನ್ನು ಕೋರಿದರು.

“ಕೇಂದ್ರ ಪ್ರಾಯೋಜಿತ ಯೋಜನೆಗಳ ಅಡಿಯಲ್ಲಿ ಪಾವತಿಸಬೇಕಾದ ಪರಿಹಾರದ ಮೊತ್ತದ ಮರುಪಾವತಿಯನ್ನು ಹಣದ ಲಭ್ಯತೆಗೆ ಒಳಪಟ್ಟಿರುವ ವರ್ಧಿತ ದರಗಳ ಪ್ರಕಾರ ರಾಜ್ಯಗಳು ಮಾಡಬಹುದು ಎಂದು ಪತ್ರದಲ್ಲಿ ಸ್ಪಷ್ಟಪಡಿಸಲಾಗಿದೆ” ಎಂದು ಸಚಿವಾಲಯವು ಹೇಳಿದ್ದು ಮಂಗಗಳ ದಾಳಿಯಿಂದ ಉಂಟಾದ ಸಾವುಗಳು ಮತ್ತು ಗಾಯಗಳ ವಿವರಗಳ ಬಗ್ಗೆ ಯಾವುದೇ ದಾಖಲೆಯನ್ನು ಹೊಂದಿಲ್ಲ ಎಂದು ಹೇಳಿದೆ. 2015 ರಲ್ಲಿ 1,900 ಕ್ಕೂ ಹೆಚ್ಚು ಮಂಗ ಕಡಿತದ ಪ್ರಕರಣಗಳು ವರದಿಯಾಗಿವೆ ಎಂದು ಲೋಕಸಭೆಗೆ ಈ ಹಿಂದೆ ತಿಳಿಸಲಾಯಿತು, ಇದು ಹಿಂದಿನ ವರ್ಷಕ್ಕಿಂತ 400 ಕ್ಕೂ ಹೆಚ್ಚು ಪ್ರಕರಣಗಳು ಹೆಚ್ಚಾಗಿದೆ.

2015 ರಲ್ಲಿ ದೆಹಲಿಯಲ್ಲಿ ಪ್ರತಿದಿನ ಕನಿಷ್ಠ ಐದು ಕೋತಿ ಕಡಿತದ ಪ್ರಕರಣಗಳು ವರದಿಯಾಗಿವೆ.

ಕಾಡು ಪ್ರಾಣಿಗಳಿಂದ ಉಂಟಾಗುವ ದಾಳಿ, ಗಾಯಗಳು ಮತ್ತು ಆಸ್ತಿ ಮತ್ತು ಜೀವ ಹಾನಿಗಳಿಗೆ ಪರಿಹಾರವನ್ನು ಕೇಂದ್ರ ಪ್ರಾಯೋಜಿತ ಯೋಜನೆಯಡಿ ಒಳಪಡಿಸಲಾಗಿದೆ ಎಂದು 2018 ರ ಪರಿಸರ, ಅರಣ್ಯ ಮತ್ತು ಹವಾಮಾನ ಬದಲಾವಣೆ ಸಚಿವಾಲಯದ ಪತ್ರದಲ್ಲಿ ತಿಳಿಸಲಾಗಿದೆ.

ಇದನ್ನೂ ಓದಿ:Bhopal gas tragedy: ಭೋಪಾಲ್ ಅನಿಲ ದುರಂತ, ಕೇಂದ್ರದ ಹೆಚ್ಚಿನ ಪರಿಹಾರ ಮನವಿ ವಜಾಗೊಳಿಸಿದ ಸುಪ್ರೀಂ

ಸೋಮವಾರ ಸರ್ಕಾರ ನೀಡಿದ ಉತ್ತರದಲ್ಲಿ ಅಂಥಾ ದಾಳಿಯ ಸಂತ್ರಸ್ತರಿಗೆ ಪಾವತಿಸುವ ಪರಿಹಾರ ಮೊತ್ತವನ್ನು ಸಹ ಹೆಚ್ಚಿಸಲಾಗಿದೆ ಎಂದು ಹೇಳಿದೆ, ರಾಜ್ಯಗಳಲ್ಲಿ ಲಭ್ಯವಿರುವ ಹಣವನ್ನು ಅವಲಂಬಿಸಿ ಪಾವತಿಸಬೇಕಾದ ಪರಿಹಾರದ ಮರುಪಾವತಿಯನ್ನು ಮಾಡಲಾಗುತ್ತದೆ ಎಂದು ಅದು ಸ್ಪಷ್ಟಪಡಿಸಿದೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 12:49 pm, Tue, 14 March 23

ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ