AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಿಮ್ಮಿಂದ ಯಾವುದೇ ಪ್ರತಿಕ್ರಿಯೆ ಬಂದಿಲ್ಲ; ಅತ್ಯಾಚಾರ ಪ್ರಕರಣಗಳ ಕುರಿತು ಪ್ರಧಾನಿ ಮೋದಿಗೆ ಮತ್ತೆ ಪತ್ರ ಬರೆದ ಮಮತಾ ಬ್ಯಾನರ್ಜಿ

ಈ ತಿಂಗಳ ಆರಂಭದಲ್ಲಿ ಕೊಲ್ಕತ್ತಾದ ಸರ್ಕಾರಿ ಸ್ವಾಮ್ಯದ ಆರ್‌ಜಿ ಕಾರ್ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯಲ್ಲಿ ವೈದ್ಯೆಯ ಮೇಲೆ ನಡೆದ ಅತ್ಯಾಚಾರ ಮತ್ತು ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ದೇಶಾದ್ಯಂತ ಪ್ರತಿಭಟನೆಗಳ ಹಿನ್ನೆಲೆಯಲ್ಲಿ ತೃಣಮೂಲ ಕಾಂಗ್ರೆಸ್ ನಾಯಕಿ ಮಮತಾ ಬ್ಯಾನರ್ಜಿ ಪತ್ರ ಬರೆದಿದ್ದಾರೆ.

ನಿಮ್ಮಿಂದ ಯಾವುದೇ ಪ್ರತಿಕ್ರಿಯೆ ಬಂದಿಲ್ಲ; ಅತ್ಯಾಚಾರ ಪ್ರಕರಣಗಳ ಕುರಿತು ಪ್ರಧಾನಿ ಮೋದಿಗೆ ಮತ್ತೆ ಪತ್ರ ಬರೆದ ಮಮತಾ ಬ್ಯಾನರ್ಜಿ
ಮಮತಾ ಬ್ಯಾನರ್ಜಿ
ಸುಷ್ಮಾ ಚಕ್ರೆ
|

Updated on: Aug 30, 2024 | 3:15 PM

Share

ಕೊಲ್ಕತ್ತಾ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಇಂದು ಮತ್ತೊಮ್ಮೆ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದು ಅತ್ಯಾಚಾರ ಎಸಗಿದ ಅಪರಾಧಿಗಳಿಗೆ ಕಠಿಣ ಶಿಕ್ಷೆಯನ್ನು ನೀಡುವ ಕೇಂದ್ರ ಕಾನೂನನ್ನು ತರಲು ಒತ್ತಾಯಿಸಿದ್ದಾರೆ. ಇಂತಹ ಸೂಕ್ಷ್ಮ ವಿಷಯದ ಕುರಿತು ಇನ್ನೂ ನಿಮ್ಮಿಂದ ಯಾವುದೇ ಉತ್ತರ ಬಂದಿಲ್ಲ. ಆದರೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವರಿಂದ ಮಾತ್ರ ಉತ್ತರವನ್ನು ಸ್ವೀಕರಿಸಲಾಗಿದೆ ಎಂದಿದ್ದಾರೆ.

7 ದಿನಗಳ ಹಿಂದೆ ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಪ್ರಧಾನಿ ನರೇಂದ್ರ ಮೋದಿಗೆ ಪತ್ರ ಬರೆದಿದ್ದರು. “ಈ ಪ್ರವೃತ್ತಿಯನ್ನು ನೋಡುವುದು ಭಯಾನಕವಾಗಿದೆ. ಇದು ಸಮಾಜದ ಮತ್ತು ರಾಷ್ಟ್ರದ ಆತ್ಮವಿಶ್ವಾಸ ಮತ್ತು ಆತ್ಮಸಾಕ್ಷಿಯನ್ನು ಅಲುಗಾಡಿಸುತ್ತದೆ. ಮಹಿಳೆಯರು ಸುರಕ್ಷಿತ ಭಾವನೆಯನ್ನು ಹೊಂದಲು ಅದನ್ನು ಕೊನೆಗೊಳಿಸುವುದು ನಮ್ಮ ಬದ್ಧ ಕರ್ತವ್ಯವಾಗಿದೆ. ಇಂತಹ ಗಂಭೀರ ಮತ್ತು ಸೂಕ್ಷ್ಮ ಸಮಸ್ಯೆಯನ್ನು ಈ ಘೋರ ಅಪರಾಧಗಳಲ್ಲಿ ಭಾಗಿಯಾದವರಿಗೆ ಅನುಕರಣೀಯ ಶಿಕ್ಷೆಯನ್ನು ಸೂಚಿಸುವ ಕಟ್ಟುನಿಟ್ಟಾದ ಕೇಂದ್ರ ಕಾನೂನಿನ ಮೂಲಕ ಸಮಗ್ರವಾಗಿ ಪರಿಹರಿಸಬೇಕಾಗಿದೆ ಎಂದು ಪತ್ರದಲ್ಲಿ ಮಮತಾ ಬ್ಯಾನರ್ಜಿ ತಿಳಿಸಿದ್ದಾರೆ.

ಇದನ್ನೂ ಓದಿ: ಕೊಲ್ಕತ್ತಾ ಅತ್ಯಾಚಾರ-ಕೊಲೆ ಪ್ರಕರಣ; ಸಂಜಯ್ ರಾಯ್ ಮತ್ತು ಇತರ 6 ಜನರ ಪಾಲಿಗ್ರಾಫ್ ಪರೀಕ್ಷೆ ಆರಂಭ

ಈ ಪ್ರಕರಣಗಳ ತ್ವರಿತ ವಿಚಾರಣೆಗಾಗಿ ತ್ವರಿತಗತಿಯ ವಿಶೇಷ ನ್ಯಾಯಾಲಯಗಳನ್ನು ಸ್ಥಾಪಿಸಲು ಮಮತಾ ಬ್ಯಾನರ್ಜಿ ಪ್ರಸ್ತಾಪಿಸಿದ್ದಾರೆ. “ತ್ವರಿತ ನ್ಯಾಯವನ್ನು ಖಚಿತಪಡಿಸಿಕೊಳ್ಳಲು, ವಿಚಾರಣೆಗಳನ್ನು 15 ದಿನಗಳಲ್ಲಿ ಪೂರ್ಣಗೊಳಿಸಬೇಕು” ಎಂದು ಮಮತಾ ಬ್ಯಾನರ್ಜಿ ಸಲಹೆ ನೀಡಿದ್ದಾರೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
Sushma Chakre
Sushma Chakre

ಮೂಲತಃ ಮಲೆನಾಡ ಹೆಬ್ಬಾಗಿಲು ಶಿವಮೊಗ್ಗದವಳು. ಬೆಂಗಳೂರಿನಲ್ಲಿ ವಾಸ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದೇನೆ. 10 ವರ್ಷಗಳಿಂದ ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡ, ಟಿವಿ9 ಡಿಜಿಟಲ್ ವಿಭಾಗದಲ್ಲಿ ಕೆಲಸ ಮಾಡಿದ ಅನುಭವವಿದೆ. ಸಾಹಿತ್ಯ, ಸಂಗೀತ, ಸಿನಿಮಾ, ಬರವಣಿಗೆಯಲ್ಲಿ ಆಸಕ್ತಿ.

Read More