AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಮಮಂದಿರ, ಹೊಸ ಸಂಸತ್ ಬಗ್ಗೆ ಮಕ್ಕಳಿಗೆ ತಿಳಿಸುವುದು ನಮ್ಮ ಕರ್ತವ್ಯ: ಎನ್​ಸಿಇಆರ್​ಟಿ ನಿರ್ದೇಶಕರು

NCERT director Dinesh Prasad Saklani: ಶಾಲಾ ಪಠ್ಯಪುಸ್ತಕದಲ್ಲಿ ರಾಮಮಂದಿರದ ಪರವಾಗಿ ಸುಪ್ರೀಂಕೋರ್ಟ್ ತೀರ್ಪು ಕೊಟ್ಟಿರುವುದು, ರಥಯಾತ್ರ, ಕರಸೇವಕರು, ಹೊಸ ಸಂಸತ್ ಮೊದಲಾದ ವಿಚಾರಗಳನ್ನು ಸೇರಿಸಲಾಗಿದೆ. ಇದು ವಿವಾದಕ್ಕೆ ಕಾರಣವಾಗಿದ್ದು, ವಿಪಕ್ಷ ನಾಯಕರು ಆರೋಪ ಮಾಡುತ್ತಿದ್ದಾರೆ. ಈ ಬಗ್ಗೆ ಮಾತನಾಡಿರುವ ಎನ್​ಸಿಇಆರ್​ಟಿ ನಿರ್ದೇಶಕ ದಿನೇಶ್ ಪ್ರಸಾದ್ ಸಕ್ಲಾನಿ, ಇದು ಕೇಸರೀಕರಣ ಅಲ್ಲ. ವಸ್ತು ವಿಚಾರಗಳನ್ನು ವಿದ್ಯಾರ್ಥಿಗಳಿಗೆ ತಿಳಿಸುತ್ತಿದ್ದೇವೆ ಎಂದು ಹೇಳಿದ್ದಾರೆ.

ರಾಮಮಂದಿರ, ಹೊಸ ಸಂಸತ್ ಬಗ್ಗೆ ಮಕ್ಕಳಿಗೆ ತಿಳಿಸುವುದು ನಮ್ಮ ಕರ್ತವ್ಯ: ಎನ್​ಸಿಇಆರ್​ಟಿ ನಿರ್ದೇಶಕರು
ದಿನೇಶ್ ಪ್ರಸಾದ್ ಸಕ್ಲಾನಿ
ಸುಗ್ಗನಹಳ್ಳಿ ವಿಜಯಸಾರಥಿ
|

Updated on: Jun 16, 2024 | 6:48 PM

Share

ನವದೆಹಲಿ, ಜೂನ್ 16: ಶಾಲಾ ಪಠ್ಯಪುಸ್ತಕಗಳಲ್ಲಿ ಗಲಭೆಗಳ (Riots) ಬಗ್ಗೆ ಪಾಠ ಮಾಡುವುದರಿಂದ ಹಿಂಸಾತ್ಮಕ ವ್ಯಕ್ತಿತ್ವಗಳ (violent) ನಿರ್ಮಾಣ ಆಗಬಹುದು ಎಂದು ಎನ್​ಸಿಇಅರ್​ಟಿ ನಿರ್ದೇಶಕ ದಿನೇಶ್ ಪ್ರಸಾದ್ ಸಕ್ಲಾನಿ (Dinesh Prasad Saklani) ಹೇಳಿದ್ದಾರೆ. ಗುಜರಾತ್ ಗಲಭೆ ಘಟನೆಗಳು ಮತ್ತು ಬಾಬರಿ ಮಸೀದಿ ಧ್ವಂಸ ಘಟನೆಯ ಪಠ್ಯದಲ್ಲಿ ಬದಲಾವಣೆ ಮಾಡಲಾಗಿರುವ ವಿಚಾರದ ಬಗ್ಗೆ ಅವರು ಪ್ರತಿಕ್ರಿಯಿಸುತ್ತಿದ್ದರು. ಶಿಕ್ಷಣದಲ್ಲಿ ಕೇಸರೀಕರಣ (Saffronization) ಮಾಡಲಾಗುತ್ತಿದೆ ಎನ್ನುವ ಆರೋಪವನ್ನು ಅವರು ಈ ಸಂದರ್ಭದಲ್ಲಿ ತಳ್ಳಿಹಾಕಿದ್ದಾರೆ.

ಹನ್ನೆರಡನೇ ತರಗತಿಯ ರಾಜಕೀಯ ಶಾಸ್ತ್ರದ ಪಠ್ಯಪುಸ್ತಕದಲ್ಲಿ ಬಾಬ್ರಿ ಮಸೀದಿಯನ್ನು ಮೂರು ಗೋಪುರದ ಕಟ್ಟಡವೆಂದು ಬಣ್ಣಿಸಲಾಗಿದೆ. ಅಯೋಧ್ಯೆಯ ಪಾಠವನ್ನು ನಾಲ್ಕು ಪುಟಗಳಿಂದ ಎರಡು ಪುಟಕ್ಕೆ ಇಳಿಸಲಾಗಿದೆ. ಲಾಲಕೃಷ್ಣ ಆಡ್ವಾನಿ ನೇತೃತ್ವದಲ್ಲಿ ನಡೆದ ಬಿಜೆಪಿ ರಥಯಾತ್ರೆ ಘಟನೆಯನ್ನು ಉಲ್ಲೇಖಿಸಲಾಗಿದೆ. ಕರಸೇವಕರಿಂದ ಬಾಬ್ರಿ ಮಸೀದಿ ಕೆಡವಲಾಗಿದ್ದು ಆ ಸಂಬಂಧಿತ ಘಟನೆಗಳ ವಿವರ ಕೊಡಲಾಗಿದೆ. ವಿಪಕ್ಷಗಳ ನಾಯಕರು ಈ ಪಠ್ಯ ಪರಿಷ್ಕರಣೆಯನ್ನು ಕೇಸರೀಕರಣ ಎಂದು ಆರೋಪ ಮಾಡಿದ್ದಾರೆ.

ಬದಲಾವಣೆ ತಂದಿರುವುದರಲ್ಲಿ ಏನು ತಪ್ಪಿದೆ: ಎನ್​ಸಿಇಆರ್​ಟಿ ಮುಖ್ಯಸ್ಥ

ಯಾವುದಾದರೂ ಅಪ್ರಸ್ತುತ ವಿಷಯವಾಗಿದ್ದರೆ ಅದನ್ನು ಅಪ್​ಡೇಟ್ ಮಾಡಬೇಕಾಗುತ್ತದೆ. ಬದಲಾವಣೆಯನ್ನೇ ಮಾಡಬಾರದು ಎಂದು ಹೇಳಲು ಆಗಲ್ಲ. ಈ ಪರಿಷ್ಕರಣೆಯನ್ನು ಕೇಸರೀಕರಣ ಎಂದು ಕರೆಯಲಾಗದು. ನಾವು ಮಕ್ಕಳಿಗೆ ಇತಿಹಾಸ ಹೇಳಿಕೊಡುವುದು ನೈಜ ಜ್ಞಾನವನ್ನು ತುಂಬಲೇ ಹೊರತು, ಘರ್ಷಣೆಗೆ ನೂಕುವುದಕ್ಕಲ್ಲ ಎಂದು ದಿನೇಶ್ ಪ್ರಸಾದ್ ಸಾಕ್ಲಾನಿ ಹೇಳಿದ್ದಾರೆ.

ಇದನ್ನೂ ಓದಿ: ನೀಟ್ ಪರೀಕ್ಷಾ ಅಕ್ರಮ ಎಸಗಿದವರನ್ನು ಸುಮ್ಮನೆ ಬಿಡೋದಿಲ್ಲ: ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಭರವಸೆ

‘ರಾಮ ಮಂದಿರದ ಪರವಾಗಿ ಸುಪ್ರೀಂಕೋರ್ಟ್ ತೀರ್ಪು ಕೊಟ್ಟಿದೆ. ಅದನ್ನು ನಮ್ಮ ಪಠ್ಯಪುಸ್ತಕದಲ್ಲಿ ಸೇರಿಸಿರುವುದು ಯಾಕೆ ತಪ್ಪಾಗುತ್ತದೆ? ಹೊಸ ಸಂಸತ್ ಅನ್ನು ಕಟ್ಟಿದ್ದಾರೆ. ಅದರ ಬಗ್ಗೆ ವಿದ್ಯಾರ್ಥಿಗಳಿಗೆ ತಿಳಿಸಬಾರದೇಕೆ? ಪ್ರಾಚೀನ ಘಟನೆಗಳ ಜೊತೆಗೆ ಇತ್ತೀಚಿನ ವಿದ್ಯಮಾನಗಳನ್ನೂ ಮಕ್ಕಳಿಗೆ ತಿಳಿಸುವುದು ನಮ್ಮ ಕರ್ತವ್ಯ’ ಎಂದು ಅವರು ಸ್ಪಷ್ಟಪಡಿಸಿದ್ದಾರೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
‘ಮಾರ್ಕ್’-‘45’ ಒಂದೇ ದಿನ ಬಿಡುಗಡೆ: ಸುದೀಪ್ ಹೇಳಿದ್ದೇನು?
‘ಮಾರ್ಕ್’-‘45’ ಒಂದೇ ದಿನ ಬಿಡುಗಡೆ: ಸುದೀಪ್ ಹೇಳಿದ್ದೇನು?
ಬೌಲಿಂಗ್‌ನಲ್ಲಿ ಪಾಕ್ ನಾಯಕನ ವಿಕೆಟ್ ಎಗರಿಸಿದ ವೈಭವ್
ಬೌಲಿಂಗ್‌ನಲ್ಲಿ ಪಾಕ್ ನಾಯಕನ ವಿಕೆಟ್ ಎಗರಿಸಿದ ವೈಭವ್
ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!