AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊವಿಡ್ ಲಸಿಕೆ ಹಾಕಿಸಿಕೊಳ್ಳದಿದ್ದರೆ ಈ ರಾಜ್ಯದಲ್ಲಿ ಸರ್ಕಾರಿ ನೌಕರರಿಗೆ ಸಂಬಳವೇ ಸಿಗಲ್ಲ!

ಒಂದೇ ಡೋಸ್ ಲಸಿಕೆ ಪಡೆದವರಾಗಲಿ ಅಥವಾ ಎರಡು ಡೋಸ್ ಪಡೆದವರಾಗಲಿ ಪಂಜಾಬ್ ಸರ್ಕಾರದ ಉದ್ಯೋಗ ಪೋರ್ಟಲ್​ನಲ್ಲಿ ಅವರು ತಮ್ಮ ಕೊವಿಡ್ ಲಸಿಕೆಯ ಸರ್ಟಿಫಿಕೆಟ್ ಅನ್ನು ಅಪ್​ಲೋಡ್ ಮಾಡಿದರೆ ಮಾತ್ರ ಸಂಬಳ ಪಡೆಯಬಹುದು.

ಕೊವಿಡ್ ಲಸಿಕೆ ಹಾಕಿಸಿಕೊಳ್ಳದಿದ್ದರೆ ಈ ರಾಜ್ಯದಲ್ಲಿ ಸರ್ಕಾರಿ ನೌಕರರಿಗೆ ಸಂಬಳವೇ ಸಿಗಲ್ಲ!
ಸಾಂದರ್ಭಿಕ ಚಿತ್ರ
TV9 Web
| Edited By: |

Updated on: Dec 22, 2021 | 6:40 PM

Share

ನವದೆಹಲಿ: ಒಂದೆಡೆ ದೇಶಾದ್ಯಂತ ಕೊವಿಡ್ ಕೇಸುಗಳು ಮತ್ತೆ ಹೆಚ್ಚಾಗುತ್ತಿವೆ. ಇನ್ನೊಂದೆಡೆ ಕೊವಿಡ್ ಲಸಿಕಾ ಅಭಿಯಾನವೂ ಯಶಸ್ವಿಯಾಗಿ ನಡೆಯುತ್ತಿದೆ. ಒಮಿಕ್ರಾನ್ ರೂಪಾಂತರಿ ಸೋಂಕು ಹೆಚ್ಚಾಗುತ್ತಿರುವುದರಿಂದ ದೇಶದಲ್ಲಿ ಕಟ್ಟುನಿಟ್ಟಿನ ನಿಯಮಗಳನ್ನು ಜಾರಿಗೊಳಿಸಲಾಗುತ್ತದೆ. ಅದರಂತೆ ಪಂಜಾಬ್ ರಾಜ್ಯದಲ್ಲಿ ಸರ್ಕಾರಿ ನೌಕರರು ತಮ್ಮ ಲಸಿಕಾ ಪ್ರಮಾಣಪತ್ರವನ್ನು ನೀಡದಿದ್ದರೆ ಅವರಿಗೆ ಸಂಬಳವನ್ನು ನೀಡುವುದಿಲ್ಲ ಎಂದು ಪಂಜಾಬ್ ಸರ್ಕಾರ ಇಂದು ತಿಳಿಸಿದೆ.

ಒಂದೇ ಡೋಸ್ ಲಸಿಕೆ ಪಡೆದವರಾಗಲಿ ಅಥವಾ ಎರಡು ಡೋಸ್ ಪಡೆದವರಾಗಲಿ ಪಂಜಾಬ್ ಸರ್ಕಾರದ ಉದ್ಯೋಗ ಪೋರ್ಟಲ್​ನಲ್ಲಿ ಅವರು ತಮ್ಮ ಕೊವಿಡ್ ಲಸಿಕೆಯ ಸರ್ಟಿಫಿಕೆಟ್ ಅನ್ನು ಅಪ್​ಲೋಡ್ ಮಾಡಿದರೆ ಮಾತ್ರ ಸಂಬಳ ಪಡೆಯಬಹುದು. ಲಸಿಕೆ ಹಾಕದ ನೌಕರರಿಗೆ ಏನು ಮಾಡಲು ಉದ್ದೇಶಿಸಿದೆ ಎಂಬುದನ್ನು ಸರ್ಕಾರದ ಆದೇಶವು ಸ್ಪಷ್ಟಪಡಿಸಿಲ್ಲ. ಜನರು ತಮ್ಮನ್ನು ಲಸಿಕೆ ಹಾಕಿಸಿಕೊಳ್ಳಲು ಪಂಜಾಬ್‌ನ ಕಟ್ಟುನಿಟ್ಟಾದ ನೀತಿಯು ಹೆಚ್ಚು ಹರಡುವ ಕೊರೊನಾವೈರಸ್‌ನ ಒಮಿಕ್ರಾನ್ ಸೋಂಕಿನ ಬಗ್ಗೆ ಹೆಚ್ಚು ಎಚ್ಚರಿಕೆಯಿಂದ ಇರಲು ಜನರಿಗೆ ಸೂಚಿಸುತ್ತಿದೆ.

ವ್ಯಾಕ್ಸಿನೇಷನ್ ಪ್ರಮಾಣಪತ್ರಗಳನ್ನು ಪಂಜಾಬ್ ಸರ್ಕಾರದ iHRMS ವೆಬ್‌ಸೈಟ್‌ನಲ್ಲಿ ಅಪ್‌ಲೋಡ್ ಮಾಡಬೇಕು. ವೇತನ ವಿತರಣೆಯಲ್ಲಿ ವಂಚನೆಯನ್ನು ತಡೆಗಟ್ಟುವ ಮೂಲಕ ನೌಕರನ ಗೊತ್ತುಪಡಿಸಿದ ಬ್ಯಾಂಕ್ ಖಾತೆಯ ಖಾತೆಗೆ ಮಾತ್ರ ವೇತನವನ್ನು ಸ್ವಯಂಚಾಲಿತವಾಗಿ ಜಮಾ ಮಾಡಲಾಗುತ್ತದೆ.

ಭಾರತದಲ್ಲಿ ಇಲ್ಲಿಯವರೆಗೆ 210ಕ್ಕೂ ಹೆಚ್ಚು ಒಮಿಕ್ರಾನ್ ರೂಪಾಂತರದ ಸೋಂಕಿನ ಪ್ರಕರಣಗಳು ದಾಖಲಾಗಿವೆ. ಈಗಾಗಲೇ 90 ಜನರು ಚೇತರಿಸಿಕೊಂಡಿದ್ದಾರೆ ಎಂದು ಆರೋಗ್ಯ ಸಚಿವಾಲಯ ಇಂದು ತಿಳಿಸಿದೆ. ಇಂದು ಭಾರತದಲ್ಲಿ 6,317 ಹೊಸ ಕೊರೋನಾವೈರಸ್ ಸೋಂಕಿನ ಪ್ರಕರಣಗಳು ದಾಖಲಾಗಿವೆ.

ಇದನ್ನೂ ಓದಿ: Bengaluru Covid Vaccine: ಒಂದೆರಡು ದಿನದಲ್ಲಿ ಬೆಂಗಳೂರಿನಲ್ಲಿ ಶೇ. 100ರಷ್ಟು ಕೊವಿಡ್ ಲಸಿಕೆ ವಿತರಣೆ

ಇಲ್ಲಿಯವರೆಗೆ 3 ದೇಶಗಳಲ್ಲಿ ಒಮಿಕ್ರಾನ್ ಸಾವುಗಳು ವರದಿಯಾಗಿವೆ; ಹೆಚ್ಚಿನ ಸಾವುನೋವುಗಳ ಬಗ್ಗೆ ಎಚ್ಚರಿಸಿದ ತಜ್ಞರು

Follow Us
ಪತಿ, ಅತ್ತೆ-ಮಾವನಿಗೆ ಪತ್ನಿಯಿಂದ ಕಿರುಕುಳ
ಪತಿ, ಅತ್ತೆ-ಮಾವನಿಗೆ ಪತ್ನಿಯಿಂದ ಕಿರುಕುಳ
ಜನ ಮನೆಯಲ್ಲಿ ಕಾಯುತ್ತಿದ್ದರೆ, ಇತ್ತ ನದಿಯಲ್ಲಿ ತೇಲಿಬಂದವು ಆಧಾರ್ ಕಾರ್ಡ್
ಜನ ಮನೆಯಲ್ಲಿ ಕಾಯುತ್ತಿದ್ದರೆ, ಇತ್ತ ನದಿಯಲ್ಲಿ ತೇಲಿಬಂದವು ಆಧಾರ್ ಕಾರ್ಡ್
ವಿಷ್ಣುವರ್ಧನ್ ಅವರ ‘ಸೂರ್ಯವಂಶ’ ಪಾತ್ರ ನೆನಪಿಸಿಕೊಂಡ ಎಸ್ ನಾರಾಯಣ್
ವಿಷ್ಣುವರ್ಧನ್ ಅವರ ‘ಸೂರ್ಯವಂಶ’ ಪಾತ್ರ ನೆನಪಿಸಿಕೊಂಡ ಎಸ್ ನಾರಾಯಣ್
ವಿಷಕಾರಿ ಅಂಶ ಪತ್ತೆ: ಮಕ್ಕಳಿಗೆ ತಂಪು ಪಾನೀಯ ಕುಡಿಯುವವರೇ ಎಚ್ಚರ!
ವಿಷಕಾರಿ ಅಂಶ ಪತ್ತೆ: ಮಕ್ಕಳಿಗೆ ತಂಪು ಪಾನೀಯ ಕುಡಿಯುವವರೇ ಎಚ್ಚರ!
ರಶ್ಮಿಕಾ ಮಂದಣ್ಣ-ವಿಜಯ್ ದೇವರಕೊಂಡ ಆರತಕ್ಷತೆ ಬಂದ ಅತಿಥಿಗಳು: ವಿಡಿಯೋ
ರಶ್ಮಿಕಾ ಮಂದಣ್ಣ-ವಿಜಯ್ ದೇವರಕೊಂಡ ಆರತಕ್ಷತೆ ಬಂದ ಅತಿಥಿಗಳು: ವಿಡಿಯೋ
ಲೋಕಾ ರೈಡ್ ವೇಳೆ AEE ಮನೆಯಲ್ಲಿ ಸಿಕ್ತು ಚಿನ್ನ, ಬೆಳ್ಳಿ , ಕಂತೆ ಕಂತೆ ನಗದು
ಲೋಕಾ ರೈಡ್ ವೇಳೆ AEE ಮನೆಯಲ್ಲಿ ಸಿಕ್ತು ಚಿನ್ನ, ಬೆಳ್ಳಿ , ಕಂತೆ ಕಂತೆ ನಗದು
ಎಥೆನಾಲ್ ಟ್ಯಾಂಕರ್​​ ಪಲ್ಟಿ: ಕ್ಷಣಾರ್ಧದಲ್ಲಿ ಧಗಧಗಿಸಿದ ಬೆಂಕಿ
ಎಥೆನಾಲ್ ಟ್ಯಾಂಕರ್​​ ಪಲ್ಟಿ: ಕ್ಷಣಾರ್ಧದಲ್ಲಿ ಧಗಧಗಿಸಿದ ಬೆಂಕಿ
ಬನ್ನೇರುಘಟ್ಟದಲ್ಲಿ ಮೃಗಗಳಿಗೂ ಐಸ್ ಕ್ಯಾಂಡಿ-ಲಾಲಿಪಾಪ್!
ಬನ್ನೇರುಘಟ್ಟದಲ್ಲಿ ಮೃಗಗಳಿಗೂ ಐಸ್ ಕ್ಯಾಂಡಿ-ಲಾಲಿಪಾಪ್!
ಮಾನವೀಯತೆ ಮರೆತ್ರಾ ವೈದ್ಯರು?: ರೋಗಿಗೆ ಚಿಕಿತ್ಸೆ ನೀಡದೆ ನಿರ್ಲಕ್ಷ್ಯ ಆರೋಪ
ಮಾನವೀಯತೆ ಮರೆತ್ರಾ ವೈದ್ಯರು?: ರೋಗಿಗೆ ಚಿಕಿತ್ಸೆ ನೀಡದೆ ನಿರ್ಲಕ್ಷ್ಯ ಆರೋಪ
ದೇವಿಯರಿಗೆ ಉಡಿ ತುಂಬಿ, ಭಕ್ತರಿಗೆ ಪ್ರಸಾದ ವ್ಯವಸ್ಥೆ ಮಾಡಿದ ಮುಸ್ಲಿಮರು
ದೇವಿಯರಿಗೆ ಉಡಿ ತುಂಬಿ, ಭಕ್ತರಿಗೆ ಪ್ರಸಾದ ವ್ಯವಸ್ಥೆ ಮಾಡಿದ ಮುಸ್ಲಿಮರು