AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪೆಟ್ರೋಲ್, ಎಲ್​ಪಿಜಿ ಕೊರತೆ ಇಲ್ಲ: ಸಂಸತ್​ನಲ್ಲಿ ಸಚಿವ ಹರ್ದೀಪ್ ಸಿಂಗ್ ಪುರಿ ಸ್ಪಷ್ಟನೆ

No shortage of Petrol, diesel, LPG in India, says minister Hardeep Singh Puri: ಪಶ್ಚಿಮ ಏಷ್ಯಾ ಬಿಕ್ಕಟ್ಟಿನಿಂದ ಜಾಗತಿಕವಾಗಿ ತೈಲ ಪೂರೈಕೆಯಲ್ಲಿ ವ್ಯತ್ಯಯ ಆಗಿದೆ. ಭಾರತದಲ್ಲಿ ಇಂಧನ ಕೊರತೆ ಉದ್ಭವವಾಗುವ ಆತಂಕ ಇದೆ. ಆದರೆ, ಯಾವುದೇ ಚಿಂತೆಪಡಬೇಕಾದ ಸಂದರ್ಭ ಇಲ್ಲ ಎಂದು ಸರ್ಕಾರ ಪುನರುಚ್ಚರಿಸಿದೆ. ಸಂಸತ್​ನಲ್ಲಿ ಮಾತನಾಡಿದ ಪೆಟ್ರೋಲಿಯಂ ಸಚಿವ ಹರ್ದೀಪ್ ಸಿಂಗ್ ಪುರಿ, ದೇಶದಲ್ಲಿ ಎಲ್​ಪಿಜಿ, ಪೆಟ್ರೋಲ್ ಇತ್ಯಾದಿ ಇಂಧನ ದಾಸ್ತಾನು ಸಾಕಷ್ಟಿದೆ ಎಂದಿದ್ದಾರೆ.

ಪೆಟ್ರೋಲ್, ಎಲ್​ಪಿಜಿ ಕೊರತೆ ಇಲ್ಲ: ಸಂಸತ್​ನಲ್ಲಿ ಸಚಿವ ಹರ್ದೀಪ್ ಸಿಂಗ್ ಪುರಿ ಸ್ಪಷ್ಟನೆ
ಹರ್ದೀಪ್ ಸಿಂಗ್ ಪುರಿ
ಸುಗ್ಗನಹಳ್ಳಿ ವಿಜಯಸಾರಥಿ
|

Updated on: Mar 12, 2026 | 5:29 PM

Share

ನವದೆಹಲಿ, ಮಾರ್ಚ್ 12: ದೇಶದಲ್ಲಿ ಪೆಟ್ರೋಲ್, ಡೀಸಲ್, ಸೀಮೆ ಎಣ್ಣೆ ಅಥವಾ ಎಲ್​ಪಿಜಿ ಲಭ್ಯತೆಯಲ್ಲಿ ಯಾವುದೇ ಕೊರತೆ ಆಗಿಲ್ಲ. ಇಂಧನ ಲಭ್ಯತೆ ಸಾಕಷ್ಟಿದೆ. ಇಂಧನ ಸರಬರಾಜು ಸರಪಳಿ ಸರಾಗವಾಗಿ ಇದೆ ಎಂದು ಸರ್ಕಾರ ಮತ್ತೊಮ್ಮೆ ಸ್ಪಷ್ಟಪಡಿಸಿದೆ. ಸಂಸತ್​ನಲ್ಲಿ ಗುರುವಾರ ಮಾತನಾಡಿದ ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಸಚಿವ ಹರ್ದೀಪ್ ಸಿಂಗ್ ಪುರಿ (Hardeep Singh Puri), ಭಾರತದಲ್ಲಿ ಸಾಕಷ್ಟು ಇಂಧನ ದಾಸ್ತಾನು ಇದ್ದು ಯಾವುದೇ ರೀತಿಯಲ್ಲಿ ಆತಂಕಪಡಬೇಕಾದ ಪರಿಸ್ಥಿತಿ ಇಲ್ಲ ಎಂದು ಹೇಳಿದ್ದಾರೆ.

ಪೆಟ್ರೋಲ್ ಆಗಲೀ, ಡೀಸಲ್ ಆಗಲೀ, ಸೀಮೆ ಎಣ್ಣೆಯಾಗಲೀ, ಎಲ್​ಪಿಜಿಯಾಗಲೀ ಕೊರತೆ ಎದುರಿಸುತ್ತಿಲ್ಲ. ಅವುಗಳ ಲಭ್ಯತೆ ಬಹಳ ಖಚಿತ ಇದೆ. ಅವುಗಳ ಪೂರೈಕೆ ವ್ಯವಸ್ಥೆಯೂ ಸರಾಗವಾಗಿ ನಡೆಯುತ್ತಿದೆ. ದೇಶದ ಒಟ್ಟಾರೆ ಇಂಧನ ಪರಿಸ್ಥಿತಿ ಉತ್ತಮವಾಗಿದೆ. ಬಳಕೆಗೆ ಬೇಕಾಗುವಷ್ಟು ದಾಸ್ತಾನು ಇದೆ ಎಂದು ಪೆಟ್ರೋಲಿಯಂ ಸಚಿವರು ತಿಳಿಸಿದ್ದಾರೆ.

ಇದನ್ನೂ ಓದಿ: ಹಾರ್ಮುಜ್ ಜಲಸಂಧಿ ದಾಟಿ ಮುಂಬೈ ಬಂದರು ತಲುಪಿದ ಭಾರತದ ಮೊದಲ ತೈಲ ಟ್ಯಾಂಕರ್

ದೇಶದಲ್ಲಿ ಈಗ ಎಲ್​ಪಿಜಿ ಲಭ್ಯತೆಯೇ ದೊಡ್ಡ ಚಿಂತೆಯ ವಿಷಯವಾಗಿದೆ. ಈ ವಿಚಾರದ ಬಗ್ಗೆ ಹರ್ದೀಪ್ ಸಿಂಗ್ ಪುರಿ ಆಶಾದಾಯಕವಾಗಿ ಮಾತನಾಡಿದ್ದಾರೆ. ದೇಶೀಯ ಎಲ್​ಪಿಜಿ ಪೂರೈಕೆ ಪೂರ್ಣ ಸಂರಕ್ಷಿತವಾಗಿದೆ. ಜಾಗತಿಕ ರಾಜಕೀಯ ಬಿಕ್ಕಟ್ಟು, ಇಂಧನ ಮಾರುಕಟ್ಟೆಗಳ ವ್ಯತ್ಯಯಗಳ ಪರಿಣಾಮಗಳು ಎಲ್​ಪಿಜಿ ಪೂರೈಕೆ ಮೇಲೆ ಉಂಟಾಗದಂತೆ ನೋಡಿಕೊಳ್ಳಲಾಗುತ್ತಿದೆ ಎಂದು ಸಚಿವರು ಭರವಸೆ ನೀಡಿದ್ದಾರೆ.

ಭಾರತದ 60ರಷ್ಟು ಎಲ್​ಪಿಜಿ ಪೂರೈಕೆಯನ್ನು ಗಲ್ಫ್ ದೇಶಗಳಿಂದ ಪಡೆಯಲಾಗುತ್ತಿದೆ. ಇರಾನ್ ಯುದ್ಧದಿಂದಾಗಿ ಹಾರ್ಮುಜ್ ಜಲಸಂಧಿಗೆ ತಡೆಯುಂಟಾಗಿರುವುದರಿಂದ ಗಲ್ಫ್​ನಿಂದ ಎಲ್​ಪಿಜಿ ಪೂರೈಕೆ ಸ್ಥಗಿತಗೊಂಡಿದೆ. ಇದನ್ನು ಸರಿದೂಗಿಸಲು ಭಾರತ ಸರ್ಕಾರ ಬೇರೆ ಬೇರೆ ಪ್ರದೇಶಗಳಿಂದ ತೈಲ, ಅನಿಲಗಳ ಪೂರೈಕೆ ಪಡೆಯುತ್ತಿದೆ.

ಇದನ್ನೂ ಓದಿ: ಹಾರ್ಮುಜ್ ಜಲಸಂಧಿ ಮೂಲಕ ಭಾರತೀಯ ತೈಲ ಸಾಗಣೆಗೆ ಇರಾನ್ ಒಪ್ಪಿಗೆ

ಇದೇ ವೇಳೆ, ಹಾರ್ಮುಜ್ ಜಲಸಂಧಿಯಿಂದ ಭಾರತಕ್ಕೆ ಸಾಗಿಸಬೇಕಾಗಿರುವ ತೈಲ ಹಡಗುಗಳಿಗೆ ಇರಾನ್​ನ ಅನುಮತಿ ಸಿಕ್ಕಿದೆ. ಎರಡು ಹಡಗುಗಳು ಭಾರತದತ್ತ ಹೊರಟಿವೆ ಎನ್ನುವಂತಹ ಸುದ್ದಿ ಬಂದಿತ್ತು. ಆದರೆ, ಸರ್ಕಾರ ಈ ಬಗ್ಗೆ ಯಾವುದೇ ಪ್ರತಿಕ್ರಿಯೆ ನೀಡಿಲ್ಲ. ಇರಾನ್​ನ ಸಚಿವರೊಂದಿಗೆ ಎಸ್ ಜೈಶಂಕರ್ ಮಾತುಕತೆಗಳನ್ನು ನಡೆಸಿದ್ದಾರೆ. ಈಗಲೇ ಆ ಸಂಬಂಧ ಮಾಹಿತಿ ನೀಡಲು ಸಾಧ್ಯವಿಲ್ಲ ಎಂದು ವಿದೇಶಾಂಗ ವ್ಯವಹಾರಗಳ ಸಚಿವಾಲಯದ ವಕ್ತಾರರಾದ ರಣಧೀರ್ ಜೈಸ್ವಾಲ್ ಹೇಳಿದ್ದಾರೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Follow Us
Vijaya Sarathy SN
Vijaya Sarathy SN

ಹುಟ್ಟೂರು ಹಾಸನ ಜಿಲ್ಲೆಯ ಶ್ರವಣಬೆಳಗೊಳ ಸಮೀಪದ ಒಂದು ಪುಟ್ಟ ಹಳ್ಳಿ. ಬೆಳದದ್ದು ಬೆಂಗಳೂರು ನಗರದಲ್ಲಿ. ಹಲವು ವರ್ಷಗಳಿಂದ ಪತ್ರಿಕಾ ರಂಗದಲ್ಲಿ ನೆಲೆ. ಬರವಣಿಗೆಯ ಆಸಕ್ತಿ ಮತ್ತು ಪರಿಣಿತಿಯ ಕ್ಷೇತ್ರಗಳು ಆರ್ಥಿಕತೆ, ಹಣಕಾಸು, ಅಂತರರಾಷ್ಟ್ರೀಯ ವಿದ್ಯಮಾನ, ಜನಕ್ರಾಂತಿ, ರಾಷ್ಟ್ರೀಯತೆ, ಸಂಸ್ಕೃತಿ, ಮಾನವ ಸಂಬಂಧ, ಕ್ರೀಡೆ ಮೊದಲಾದವು ಇವೆ. ಓದುಗರಿಗೆ ಸುಲಭವಾಗಿ ಅರ್ಥವಾಗುವಂತೆ ಸಾಧ್ಯವಾದಷ್ಟೂ ಸ್ಫುಟವಾಗಿ, ಸರಳವಾಗಿ ಬರೆಯುವ ಇಚ್ಛೆ.

Read More
ಸುದೀಪ್ ರೀತಿಯೇ ಸಂಜಿತ್ ಇದ್ದಾರೆ; ಕಾರಣ ಕೊಟ್ಟ ಪ್ರಿಯಾ
ಸುದೀಪ್ ರೀತಿಯೇ ಸಂಜಿತ್ ಇದ್ದಾರೆ; ಕಾರಣ ಕೊಟ್ಟ ಪ್ರಿಯಾ
ಕಬಿನಿ ಹಿನ್ನೀರಿನಲ್ಲಿ ಆಹಾರ ಸಿಗದೆ ಆನೆಗಳ ಪರದಾಟ: ಮಳೆ ಕೊರತೆಯಿಂದ ಸಮಸ್ಯೆ
ಕಬಿನಿ ಹಿನ್ನೀರಿನಲ್ಲಿ ಆಹಾರ ಸಿಗದೆ ಆನೆಗಳ ಪರದಾಟ: ಮಳೆ ಕೊರತೆಯಿಂದ ಸಮಸ್ಯೆ
ಹೊಸಕೋಟೆ: ಕಣ್ಣೂರಹಳ್ಳಿ ರಸ್ತೆಯಲ್ಲಿ 23 ನಾಗರಹಾವು ಮರಿಗಳ ಪತ್ತೆ!
ಹೊಸಕೋಟೆ: ಕಣ್ಣೂರಹಳ್ಳಿ ರಸ್ತೆಯಲ್ಲಿ 23 ನಾಗರಹಾವು ಮರಿಗಳ ಪತ್ತೆ!
ಕರ್ಕಾಟಕ ರಾಶಿಗೆ ಗುರು ಪ್ರವೇಶ; 12ರಾಶಿಗಳ ಮೇಲೆ ಇದರ ಪ್ರಭಾವ ಹೇಗಿರಲಿದೆ?
ಕರ್ಕಾಟಕ ರಾಶಿಗೆ ಗುರು ಪ್ರವೇಶ; 12ರಾಶಿಗಳ ಮೇಲೆ ಇದರ ಪ್ರಭಾವ ಹೇಗಿರಲಿದೆ?
ವಿಶ್ವ ದಾಖಲೆ... ಒಂದೇ ಓವರ್‌ನಲ್ಲಿ ೬ ಸಿಕ್ಸ್ ಸಿಡಿಸಿದ ಕುಶಾಲ್!
ವಿಶ್ವ ದಾಖಲೆ... ಒಂದೇ ಓವರ್‌ನಲ್ಲಿ ೬ ಸಿಕ್ಸ್ ಸಿಡಿಸಿದ ಕುಶಾಲ್!
ಕೈಯಿಂದ ಪದೇ ಪದೇ ಎಣ್ಣೆ, ಹಾಲು ಜಾರಿಬಿದ್ರೆ ಏನರ್ಥ?
ಕೈಯಿಂದ ಪದೇ ಪದೇ ಎಣ್ಣೆ, ಹಾಲು ಜಾರಿಬಿದ್ರೆ ಏನರ್ಥ?
ಇಂದು ಈ ರಾಶಿಯವರು ಆರ್ಥಿಕ ವಿಷಯಗಳಲ್ಲಿ ಎಚ್ಚರಿಕೆ ವಹಿಸಬೇಕು
ಇಂದು ಈ ರಾಶಿಯವರು ಆರ್ಥಿಕ ವಿಷಯಗಳಲ್ಲಿ ಎಚ್ಚರಿಕೆ ವಹಿಸಬೇಕು
ಡಿಕೆ ಶಿವಕುಮಾರ್ ಜತೆ ಸಂಪುಟ ಸೇರೋ ಸಂಭಾವ್ಯ ಸಚಿವರ ಪಟ್ಟಿ ಇಲ್ಲಿದೆ
ಡಿಕೆ ಶಿವಕುಮಾರ್ ಜತೆ ಸಂಪುಟ ಸೇರೋ ಸಂಭಾವ್ಯ ಸಚಿವರ ಪಟ್ಟಿ ಇಲ್ಲಿದೆ
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ