AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪೆಟ್ರೋಲ್, ಎಲ್​ಪಿಜಿ ಕೊರತೆ ಇಲ್ಲ: ಸಂಸತ್​ನಲ್ಲಿ ಸಚಿವ ಹರ್ದೀಪ್ ಸಿಂಗ್ ಪುರಿ ಸ್ಪಷ್ಟನೆ

No shortage of Petrol, diesel, LPG in India, says minister Hardeep Singh Puri: ಪಶ್ಚಿಮ ಏಷ್ಯಾ ಬಿಕ್ಕಟ್ಟಿನಿಂದ ಜಾಗತಿಕವಾಗಿ ತೈಲ ಪೂರೈಕೆಯಲ್ಲಿ ವ್ಯತ್ಯಯ ಆಗಿದೆ. ಭಾರತದಲ್ಲಿ ಇಂಧನ ಕೊರತೆ ಉದ್ಭವವಾಗುವ ಆತಂಕ ಇದೆ. ಆದರೆ, ಯಾವುದೇ ಚಿಂತೆಪಡಬೇಕಾದ ಸಂದರ್ಭ ಇಲ್ಲ ಎಂದು ಸರ್ಕಾರ ಪುನರುಚ್ಚರಿಸಿದೆ. ಸಂಸತ್​ನಲ್ಲಿ ಮಾತನಾಡಿದ ಪೆಟ್ರೋಲಿಯಂ ಸಚಿವ ಹರ್ದೀಪ್ ಸಿಂಗ್ ಪುರಿ, ದೇಶದಲ್ಲಿ ಎಲ್​ಪಿಜಿ, ಪೆಟ್ರೋಲ್ ಇತ್ಯಾದಿ ಇಂಧನ ದಾಸ್ತಾನು ಸಾಕಷ್ಟಿದೆ ಎಂದಿದ್ದಾರೆ.

ಪೆಟ್ರೋಲ್, ಎಲ್​ಪಿಜಿ ಕೊರತೆ ಇಲ್ಲ: ಸಂಸತ್​ನಲ್ಲಿ ಸಚಿವ ಹರ್ದೀಪ್ ಸಿಂಗ್ ಪುರಿ ಸ್ಪಷ್ಟನೆ
ಹರ್ದೀಪ್ ಸಿಂಗ್ ಪುರಿ
ಸುಗ್ಗನಹಳ್ಳಿ ವಿಜಯಸಾರಥಿ
|

Updated on: Mar 12, 2026 | 5:29 PM

Share

ನವದೆಹಲಿ, ಮಾರ್ಚ್ 12: ದೇಶದಲ್ಲಿ ಪೆಟ್ರೋಲ್, ಡೀಸಲ್, ಸೀಮೆ ಎಣ್ಣೆ ಅಥವಾ ಎಲ್​ಪಿಜಿ ಲಭ್ಯತೆಯಲ್ಲಿ ಯಾವುದೇ ಕೊರತೆ ಆಗಿಲ್ಲ. ಇಂಧನ ಲಭ್ಯತೆ ಸಾಕಷ್ಟಿದೆ. ಇಂಧನ ಸರಬರಾಜು ಸರಪಳಿ ಸರಾಗವಾಗಿ ಇದೆ ಎಂದು ಸರ್ಕಾರ ಮತ್ತೊಮ್ಮೆ ಸ್ಪಷ್ಟಪಡಿಸಿದೆ. ಸಂಸತ್​ನಲ್ಲಿ ಗುರುವಾರ ಮಾತನಾಡಿದ ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಸಚಿವ ಹರ್ದೀಪ್ ಸಿಂಗ್ ಪುರಿ (Hardeep Singh Puri), ಭಾರತದಲ್ಲಿ ಸಾಕಷ್ಟು ಇಂಧನ ದಾಸ್ತಾನು ಇದ್ದು ಯಾವುದೇ ರೀತಿಯಲ್ಲಿ ಆತಂಕಪಡಬೇಕಾದ ಪರಿಸ್ಥಿತಿ ಇಲ್ಲ ಎಂದು ಹೇಳಿದ್ದಾರೆ.

ಪೆಟ್ರೋಲ್ ಆಗಲೀ, ಡೀಸಲ್ ಆಗಲೀ, ಸೀಮೆ ಎಣ್ಣೆಯಾಗಲೀ, ಎಲ್​ಪಿಜಿಯಾಗಲೀ ಕೊರತೆ ಎದುರಿಸುತ್ತಿಲ್ಲ. ಅವುಗಳ ಲಭ್ಯತೆ ಬಹಳ ಖಚಿತ ಇದೆ. ಅವುಗಳ ಪೂರೈಕೆ ವ್ಯವಸ್ಥೆಯೂ ಸರಾಗವಾಗಿ ನಡೆಯುತ್ತಿದೆ. ದೇಶದ ಒಟ್ಟಾರೆ ಇಂಧನ ಪರಿಸ್ಥಿತಿ ಉತ್ತಮವಾಗಿದೆ. ಬಳಕೆಗೆ ಬೇಕಾಗುವಷ್ಟು ದಾಸ್ತಾನು ಇದೆ ಎಂದು ಪೆಟ್ರೋಲಿಯಂ ಸಚಿವರು ತಿಳಿಸಿದ್ದಾರೆ.

ಇದನ್ನೂ ಓದಿ: ಹಾರ್ಮುಜ್ ಜಲಸಂಧಿ ದಾಟಿ ಮುಂಬೈ ಬಂದರು ತಲುಪಿದ ಭಾರತದ ಮೊದಲ ತೈಲ ಟ್ಯಾಂಕರ್

ದೇಶದಲ್ಲಿ ಈಗ ಎಲ್​ಪಿಜಿ ಲಭ್ಯತೆಯೇ ದೊಡ್ಡ ಚಿಂತೆಯ ವಿಷಯವಾಗಿದೆ. ಈ ವಿಚಾರದ ಬಗ್ಗೆ ಹರ್ದೀಪ್ ಸಿಂಗ್ ಪುರಿ ಆಶಾದಾಯಕವಾಗಿ ಮಾತನಾಡಿದ್ದಾರೆ. ದೇಶೀಯ ಎಲ್​ಪಿಜಿ ಪೂರೈಕೆ ಪೂರ್ಣ ಸಂರಕ್ಷಿತವಾಗಿದೆ. ಜಾಗತಿಕ ರಾಜಕೀಯ ಬಿಕ್ಕಟ್ಟು, ಇಂಧನ ಮಾರುಕಟ್ಟೆಗಳ ವ್ಯತ್ಯಯಗಳ ಪರಿಣಾಮಗಳು ಎಲ್​ಪಿಜಿ ಪೂರೈಕೆ ಮೇಲೆ ಉಂಟಾಗದಂತೆ ನೋಡಿಕೊಳ್ಳಲಾಗುತ್ತಿದೆ ಎಂದು ಸಚಿವರು ಭರವಸೆ ನೀಡಿದ್ದಾರೆ.

ಭಾರತದ 60ರಷ್ಟು ಎಲ್​ಪಿಜಿ ಪೂರೈಕೆಯನ್ನು ಗಲ್ಫ್ ದೇಶಗಳಿಂದ ಪಡೆಯಲಾಗುತ್ತಿದೆ. ಇರಾನ್ ಯುದ್ಧದಿಂದಾಗಿ ಹಾರ್ಮುಜ್ ಜಲಸಂಧಿಗೆ ತಡೆಯುಂಟಾಗಿರುವುದರಿಂದ ಗಲ್ಫ್​ನಿಂದ ಎಲ್​ಪಿಜಿ ಪೂರೈಕೆ ಸ್ಥಗಿತಗೊಂಡಿದೆ. ಇದನ್ನು ಸರಿದೂಗಿಸಲು ಭಾರತ ಸರ್ಕಾರ ಬೇರೆ ಬೇರೆ ಪ್ರದೇಶಗಳಿಂದ ತೈಲ, ಅನಿಲಗಳ ಪೂರೈಕೆ ಪಡೆಯುತ್ತಿದೆ.

ಇದನ್ನೂ ಓದಿ: ಹಾರ್ಮುಜ್ ಜಲಸಂಧಿ ಮೂಲಕ ಭಾರತೀಯ ತೈಲ ಸಾಗಣೆಗೆ ಇರಾನ್ ಒಪ್ಪಿಗೆ

ಇದೇ ವೇಳೆ, ಹಾರ್ಮುಜ್ ಜಲಸಂಧಿಯಿಂದ ಭಾರತಕ್ಕೆ ಸಾಗಿಸಬೇಕಾಗಿರುವ ತೈಲ ಹಡಗುಗಳಿಗೆ ಇರಾನ್​ನ ಅನುಮತಿ ಸಿಕ್ಕಿದೆ. ಎರಡು ಹಡಗುಗಳು ಭಾರತದತ್ತ ಹೊರಟಿವೆ ಎನ್ನುವಂತಹ ಸುದ್ದಿ ಬಂದಿತ್ತು. ಆದರೆ, ಸರ್ಕಾರ ಈ ಬಗ್ಗೆ ಯಾವುದೇ ಪ್ರತಿಕ್ರಿಯೆ ನೀಡಿಲ್ಲ. ಇರಾನ್​ನ ಸಚಿವರೊಂದಿಗೆ ಎಸ್ ಜೈಶಂಕರ್ ಮಾತುಕತೆಗಳನ್ನು ನಡೆಸಿದ್ದಾರೆ. ಈಗಲೇ ಆ ಸಂಬಂಧ ಮಾಹಿತಿ ನೀಡಲು ಸಾಧ್ಯವಿಲ್ಲ ಎಂದು ವಿದೇಶಾಂಗ ವ್ಯವಹಾರಗಳ ಸಚಿವಾಲಯದ ವಕ್ತಾರರಾದ ರಣಧೀರ್ ಜೈಸ್ವಾಲ್ ಹೇಳಿದ್ದಾರೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Follow Us
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ