AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಎರಡು ಬೆರಳಿನ ಪರೀಕ್ಷೆ ಮಾಡಿಲ್ಲ: ಅತ್ಯಾಚಾರ ಪ್ರಕರಣದಲ್ಲಿ ಮಹಿಳಾ ಅಧಿಕಾರಿಯ ಆರೋಪದ ಬಗ್ಗೆ ವಾಯುಪಡೆಯ ಮುಖ್ಯಸ್ಥರ ಪ್ರತಿಕ್ರಿಯೆ

"ಎರಡು ಬೆರಳಿನ ಪರೀಕ್ಷೆಯನ್ನು ಮಾಡಲಾಗಿಲ್ಲ. ವಿಚಾರಣೆಯ ವರದಿಯ ಆಧಾರದ ಮೇಲೆ ಶಿಸ್ತು ಕ್ರಮ ಕೈಗೊಳ್ಳಲಾಗುವುದು" ಎಂದು ಐಎಎಫ್ ಮುಖ್ಯಸ್ಥ ವಿಆರ್ ಚೌಧರಿ ಹೇಳಿರುವುದಾಗಿ ಸುದ್ದಿ ಸಂಸ್ಥೆ ಪಿಟಿಐ ವರದಿ ಮಾಡಿದೆ.

ಎರಡು ಬೆರಳಿನ ಪರೀಕ್ಷೆ ಮಾಡಿಲ್ಲ: ಅತ್ಯಾಚಾರ ಪ್ರಕರಣದಲ್ಲಿ ಮಹಿಳಾ ಅಧಿಕಾರಿಯ ಆರೋಪದ ಬಗ್ಗೆ ವಾಯುಪಡೆಯ ಮುಖ್ಯಸ್ಥರ ಪ್ರತಿಕ್ರಿಯೆ
ವಿ.ಆರ್.ಚೌಧರಿ
TV9 Web
| Updated By: ರಶ್ಮಿ ಕಲ್ಲಕಟ್ಟ|

Updated on: Oct 05, 2021 | 1:45 PM

Share

ದೆಹಲಿ: ಅತ್ಯಾಚಾರಕ್ಕೊಳಗಾಗಿರುವ ವಾಯುಪಡೆಯ ಅಧಿಕಾರಿಯೊಬ್ಬರು ಅತ್ಯಾಚಾರ ನಡೆದಿದೆ ಎಂದು ಸಾಬೀತು ಪಡಿಸಲು ಎರಡು ಬೆರಳಿನ ಪರೀಕ್ಷೆಯನ್ನು ಮಾಡಲಾಗಿತ್ತು ಎಂದು ಆರೋಪಿಸಿದ್ದರು. ಇದಕ್ಕೆ ಪ್ರತಿಕ್ರಿಯಿಸಿದ ಏರ್ ಚೀಫ್ ಮಾರ್ಷಲ್ ವಿಆರ್ ಚೌಧರಿ, ಸಂತ್ರಸ್ತೆಗೆ ಎರಡು ಬೆರಳಿನ ಪರೀಕ್ಷೆ ಮಾಡಿಲ್ಲ ಎಂದು ಹೇಳಿದ್ದಾರೆ. ವಾಯುಪಡೆಯ ಸಹೋದ್ಯೋಗಿಯಿಂದ ಅತ್ಯಾಚಾರಕ್ಕೊಳಗಾದ ನಂತರ ನಡೆದ ಎರಡು ಬೆರಳಿನ ಪರೀಕ್ಷೆ ನನಗೆ ಆಘಾತವನ್ನುಂಟು ಮಾಡಿತು ಎಂದು ಸಂತ್ರಸ್ತೆ ಹೇಳಿದ್ದರು.

“ಎರಡು ಬೆರಳಿನ ಪರೀಕ್ಷೆಯನ್ನು ಮಾಡಲಾಗಿಲ್ಲ. ವಿಚಾರಣೆಯ ವರದಿಯ ಆಧಾರದ ಮೇಲೆ ಶಿಸ್ತು ಕ್ರಮ ಕೈಗೊಳ್ಳಲಾಗುವುದು” ಎಂದು ಐಎಎಫ್ ಮುಖ್ಯಸ್ಥರು ಹೇಳಿರುವುದಾಗಿ ಸುದ್ದಿ ಸಂಸ್ಥೆ ಪಿಟಿಐ ವರದಿ ಮಾಡಿದೆ. ಆರೋಪಿ 29 ವರ್ಷದ ಫ್ಲೈಟ್ ಲೆಫ್ಟಿನೆಂಟ್ ಅವರನ್ನು ಕೋರ್ಟ್ ಮಾರ್ಷಲ್ ಆಕ್ಟ್ ಅಡಿಯಲ್ಲಿ ವಿಚಾರಣೆಗೆ ಒಳಪಡಿಸಲಾಗುವುದು. ತಮಿಳುನಾಡಿನ ಕೊಯಮತ್ತೂರಿನ ನ್ಯಾಯಾಲಯವು ಗುರುವಾರ ಈ ಪ್ರಕರಣವನ್ನು ಭಾರತೀಯ ವಾಯುಪಡೆಗೆ (IAF) ಹಸ್ತಾಂತರಿಸಿದೆ.

ಏನಿದು ಪ್ರಕರಣ?

ಸೆಪ್ಟೆಂಬರ್ 20 ರಂದು ತಮಿಳುನಾಡು ಪೊಲೀಸರು ಸಲ್ಲಿಸಿದ ಪ್ರಾಥಮಿಕ ಮಾಹಿತಿ ವರದಿ (FIR) ಪ್ರಕಾರ ಭಾರತೀಯ ವಾಯುಪಡೆಯ (IAF) ಮಹಿಳಾ ಅಧಿಕಾರಿಯು ತಮಿಳುನಾಡಿನ ಕೊಯಮತ್ತೂರು ಜಿಲ್ಲೆಯ ವಾಯುಪಡೆಯ ಆಡಳಿತ ಕಾಲೇಜಿ ಕ್ಯಾಂಪಸ್​​ನಲ್ಲಿ ಅತ್ಯಾಚಾರಕ್ಕೊಳಗಾಗಿದ್ದಾಳೆ ಎಂದು ಹಿಂದೂಸ್ತಾನ್ ಟೈಮ್ಸ್ ವರದಿ ಮಾಡಿದೆ.

ಆಕೆಯ ಪಾದದ ಗಾಯದ ನೋವನ್ನು ಸಹಿಸಬಹುದಾದರೆ (ಆಪಾದಿತ ಅಪರಾಧಕ್ಕೆ ಕೆಲವು ಗಂಟೆಗಳ ಮೊದಲು  ಈ ಗಾಯವಾಗಿತ್ತು), ತನ್ನ ಅತ್ಯಾಚಾರಿಯನ್ನು  ಕ್ಯಾಂಪಸ್‌ನಲ್ಲಿ ನೋಡುವ ನೋವನ್ನು ಸಹ ನಿಭಾಯಿಸಬಹುದೆಂದು ಕಾಲೇಜು ಅಧಿಕಾರಿಗಳು ಹೇಳಿರುವುದಾಗಿ ಸಂತ್ರಸ್ತೆ ದೂರಿದ್ದಾಳೆ.

ಎಫ್ಐಆರ್ ಪ್ರಕಾರ ಸಂತ್ರಸ್ತೆ ಸೆಪ್ಟೆಂಬರ್ 9 ರಂದು ತರಬೇತಿ ಸಮಯದಲ್ಲಿ ಬ್ಯಾಸ್ಕೆಟ್ ಬಾಲ್ ಆಡುವಾಗ ಆಕೆಯ ಬಲಗಾಲಿಗೆ ಗಾಯವಾಗಿತ್ತು. ಆಕೆ ನೋವು ನಿವಾರಕ ಸೇವಿಸಿ ಆ ಸಂಜೆ ತನ್ನ ಸಹೋದ್ಯೋಗಿಗಳೊಂದಿಗೆ ಅಧಿಕಾರಿಗಳ ಮೆಸ್ ಬಾರ್​​ನಲ್ಲಿ ಭೇಟಿಯಾದಳು. ಅಲ್ಲಿ ಆರೋಪಿ ತನ್ನ ಎರಡನೇ ಡ್ರಿಂಕ್ಸ್ ಗೆ ಪಾವತಿ ಮಾಡಿದ್ದ. ಸಂತ್ರಸ್ತೆ ವಾಂತಿ ಮಾಡಿ ಮಲಗಲು ಹೋದಳು ಮತ್ತು ಇಬ್ಬರು ಸ್ನೇಹಿತರು (ಒಬ್ಬ ಪುರುಷ ಮತ್ತು ಇನ್ನೊಬ್ಬ ಮಹಿಳೆ) ಅವಳನ್ನು ನೋಡಿಕೊಂಡರು ಮತ್ತು ಹೊರಡುವ ಮೊದಲು ಕೊಠಡಿಯನ್ನು ಹೊರಗಿನಿಂದ ಮುಚ್ಚಿದರು ಎಂದು ಅಧಿಕಾರಿಯೊಬ್ಬರು ಹೇಳಿದ್ದಾರೆ.

ಅವಳು ಮಲಗಿದ್ದಾಗ, ಆರೋಪಿ ಒಳಗೆ ಬಂದು ಆಕೆಯನ್ನು ಎಬ್ಬಿಸಲು ಪ್ರಯತ್ನಿಸಿದ್ದಾನೆ. ಆತ ಅವಳನ್ನು ಚುಂಬಿಸಲು ಪ್ರಯತ್ನಿಸುತ್ತಿರುವಾಗ ಆಕೆ ತಳ್ಳಲು ಯತ್ನಿಸಿದಳು. ಆದರೆ ಅವಳ ಪಾದದ ಗಾಯದಿಂದಾಗಿ ಈ ಪ್ರಯತ್ನ ವ್ಯರ್ಥವಾಯಿತು. ಆಕೆಯ ಒಪ್ಪಿಗೆಯೊಂದಿಗೆ ಆ ವ್ಯಕ್ತಿ ಕೋಣೆಯಲ್ಲಿ ಇದ್ದನೇ ಎಂದು ಮಹಿಳಾ ಸ್ನೇಹಿತೆ ಕೇಳಿರುವುದಾಗಿ ಎಫ್ಐಆರ್​​ನಲ್ಲಿದೆ.

ಎಫ್ಐಆರ್ ಪ್ರಕಾರ ಮರುದಿನ ಆಕೆಯ ಖಾಸಗಿತನಕ್ಕೆ ಧಕ್ಕೆ ತಂದಿದ್ದಕ್ಕೆ ಆರೋಪಿ ವಿಷಾದ ವ್ಯಕ್ತಪಡಿಸಿದ್ದನು. ಆದರೆ ಆಕೆಯ ಮಹಿಳಾ ಸ್ನೇಹಿತೆ ಹಾಸಿಗೆಯ ಮೇಲೆ ವೀರ್ಯದ ಕಲೆಗಳನ್ನು ತೋರಿಸಿದಳು.

ಸೆಪ್ಟೆಂಬರ್ 11 ರಂದು ಅವಳಿಗೆ ಎರಡು ಆಯ್ಕೆಗಳನ್ನು ನೀಡಿದ ಇಬ್ಬರು ಅಧಿಕಾರಿಗಳನ್ನು ಭೇಟಿಯಾಗಲು ಹೇಳಲಾಯಿತು.ಒಂದೋ ದೂರು ದಾಖಲಿಸಿ, ಅಥವಾ ಎಲ್ಲವೂ ಒಪ್ಪಿಗೆಯಿಂದ ನಡೆದದ್ದು ಎಂದು ಲಿಖಿತ ಹೇಳಿಕೆ ನೀಡಿ ಎಂಬ ಎರಡು ಆಯ್ಕೆ ನೀಡಿ ವಾಯುಪಡೆ ಆಸ್ಪತ್ರೆಗೆ ಹೋಗುವಂತೆ ಸಂತ್ರಸ್ತೆಗೆ ನಿರ್ದೇಶಿಸಲಾಯಿತು.

ಆಕೆಯ ಸ್ನೇಹಿತರು ಅವಳ ಜೊತೆಗಿದ್ದರು, ಮತ್ತು ವೈದ್ಯರು ತಪ್ಪೊಪ್ಪಿಗೆ ವಿಡಿಯೊವನ್ನು ನೋಡಲು ಬಯಸಿದ್ದರು. ಅವರು ಸಂತ್ರಸ್ತೆಗೆ ಆಕೆಯ ಲೈಂಗಿಕ ಇತಿಹಾಸದ ಬಗ್ಗೆ ಕೇಳಿದರು ಮತ್ತು ಆಕೆಯ ಖಾಸಗಿ ಭಾಗಗಳನ್ನು ದೈಹಿಕವಾಗಿ ಪರೀಕ್ಷಿಸಿದರು.

“ಅತ್ಯಾಚಾರವಾಗಿದೆಯೇ ಎಂದು ಸಾಬೀತು ಪಡಿಸಲು ಎರಡು ಬೆರಳಿನ ಪರೀಕ್ಷೆಯನ್ನು ಮಾಡಲಾಗುವುದಿಲ್ಲ ಎಂದು ನಂತರವೇ ನನಗೆ ತಿಳಿಯಿತು. ಈ ಕ್ರಮವು ಅತ್ಯಾಚಾರಕ್ಕೊಳಗಾದ ಆಘಾತದೊಂದಿಗೆ ಮತ್ತಷ್ಟು ನನ್ನನ್ನು ಘಾಸಿಗೊಳಿಸಿತು ”ಎಂದು ಎಫ್‌ಐಆರ್ ನಲ್ಲಿ ಹೇಳಲಾಗಿದೆ.

ಇದನ್ನೂ ಓದಿ: ಅತ್ಯಾಚಾರದ ನಂತರ ಎರಡು ಬೆರಳು ಪರೀಕ್ಷೆಯಿಂದ ಆಘಾತಕ್ಕೊಳಗಾದೆ: ಐಎಎಫ್ ಅಧಿಕಾರಿ

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ