AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸೇಡಿನ ರಾಜಕಾರಣ ಮಾಡುತ್ತಿಲ್ಲ: ಛತ್ತೀಸ್‌ಗಢ ಇಡಿ ದಾಳಿ ಕುರಿತು ನಿರ್ಮಲಾ ಸೀತಾರಾಮನ್

ಜೈಪುರದಲ್ಲಿ ಮಾಧ್ಯಮ ಪ್ರತಿನಿಧಿಗಳನ್ನು ಉದ್ದೇಶಿಸಿ ಮಾತನಾಡಿದ ಸಚಿವರು ಕಾಂಗ್ರೆಸ್ ಭಾರತದ ಪ್ರಗತಿಯ ಬಗ್ಗೆ ಕಾಳಜಿ ವಹಿಸುವುದಿಲ್ಲ. ಆದರೆ ಕುಟುಂಬ ಮತ್ತು ರಾಜವಂಶದ ಬಗ್ಗೆ ಕಾಳಜಿ ವಹಿಸುತ್ತದೆ ಎಂದು ಹೇಳಿದರು.

ಸೇಡಿನ ರಾಜಕಾರಣ ಮಾಡುತ್ತಿಲ್ಲ: ಛತ್ತೀಸ್‌ಗಢ ಇಡಿ ದಾಳಿ ಕುರಿತು ನಿರ್ಮಲಾ ಸೀತಾರಾಮನ್
ನಿರ್ಮಲಾ ಸೀತಾರಾಮನ್
ರಶ್ಮಿ ಕಲ್ಲಕಟ್ಟ
ರಶ್ಮಿ ಕಲ್ಲಕಟ್ಟ|

Updated on:Feb 20, 2023 | 8:14 PM

Share

ಕಾಂಗ್ರೆಸ್ ಪಕ್ಷದ ವಿರುದ್ಧ ವಾಗ್ದಾಳಿ ನಡೆಸಿದ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ (Nirmala Sitharaman), ಆರೋಪಿಗಳ ವಿರುದ್ಧ ಸಾಕಷ್ಟು ಪುರಾವೆಗಳನ್ನು ಸಂಗ್ರಹಿಸಿರುವ ತನಿಖಾ ಸಂಸ್ಥೆಗಳು ನಡೆಸಿದ ದಾಳಿಯಲ್ಲಿ ಸೇಡಿನ ರಾಜಕಾರಣವಿಲ್ಲ ಎಂದು ಸೋಮವಾರ ಹೇಳಿದ್ದಾರೆ. ಜೈಪುರದಲ್ಲಿ ಮಾಧ್ಯಮ ಪ್ರತಿನಿಧಿಗಳನ್ನು ಉದ್ದೇಶಿಸಿ ಮಾತನಾಡಿದ ಸಚಿವರು ಕಾಂಗ್ರೆಸ್(Congress) ಭಾರತದ ಪ್ರಗತಿಯ ಬಗ್ಗೆ ಕಾಳಜಿ ವಹಿಸುವುದಿಲ್ಲ. ಆದರೆ ಕುಟುಂಬ ಮತ್ತು ರಾಜವಂಶದ ಬಗ್ಗೆ ಕಾಳಜಿ ವಹಿಸುತ್ತದೆ ಎಂದು ಹೇಳಿದರು.ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸರ್ಕಾರ ಸೇಡಿನ ರಾಜಕಾರಣ ಮಾಡುತ್ತಿದೆ ಎಂದು ಕಾಂಗ್ರೆಸ್ ಆರೋಪಿಸಿದೆ. ಛತ್ತೀಸ್‌ಗಢದಲ್ಲಿ (Chhattisgarh)ಕಾಂಗ್ರೆಸ್ ನಾಯಕರ ವಿರುದ್ಧ ಜಾರಿ ನಿರ್ದೇಶನಾಲಯದ ದಾಳಿಗಳ ಕುರಿತ ಪ್ರಶ್ನೆಗೆ ಉತ್ತರಿಸಿದ ವಿತ್ತ ಸಚಿವೆ, ತನಿಖಾ ಏಜೆನ್ಸಿಗಳು ತಮ್ಮ ಮನೆಕೆಲಸವನ್ನು ಸ್ವಲ್ಪ ಸಮಯದವರೆಗೆ ಮಾಡುತ್ತವೆ. ಅವರ ಕೈಯಲ್ಲಿ ಅಗತ್ಯವಾದ ಪ್ರಾಥಮಿಕ ವಸ್ತುವಿದ್ದಾಗ ಮಾತ್ರ. ವಿಶೇಷವಾಗಿ ಆದಾಯ ತೆರಿಗೆ ಮತ್ತು ಜಾರಿ ನಿರ್ದೇಶನಾಲಯವಾಗಿದ್ದರೆ, ಸಾಕಷ್ಟು ಸಂಖ್ಯೆಯ ಪ್ರಶ್ನಾವಳಿಗಳನ್ನು ಕಳುಹಿಸಿದ ನಂತರ, ಅವರು ಸಂಪೂರ್ಣ, ಭಾಗಶಃ ಅಥವಾ ಯಾವುದೇ ಉತ್ತರಗಳನ್ನು ಪಡೆಯುವುದಿಲ್ಲ. ಆಗ ಮಾತ್ರ ಅವರು ಹೋಗುತ್ತಾರೆ. ಇಂಥದ್ದೆಲ್ಲ ರಾತ್ರೋರಾತ್ರಿ ಮಾಡಲಾಗುವುದಿಲ್ಲ.

ಭ್ರಷ್ಟಾಚಾರ ಮತ್ತು ಹಣದ ದುರುಪಯೋಗದ ವಿಷಯಗಳಲ್ಲಿ ಹಿಂದಿನ ಅಧ್ಯಕ್ಷರು ನ್ಯಾಯಾಲಯದ ಮೂಲಕ ಜಾಮೀನಿನ ಮೇಲೆ ಹೊರಗಿರುವುದು ವಿಚಿತ್ರ. ಅವರು ಸೇಡಿನ ರಾಜಕೀಯದ ಬಗ್ಗೆ ಮಾತನಾಡುತ್ತಾರೆ. ಪ್ರತಿ ಸಂಸ್ಥೆಯು ಸ್ಪಷ್ಟವಾದ ಸಾಕ್ಷ್ಯಗಳೊಂದಿಗೆ ಹೊರಬರುತ್ತಿದೆ.ಆದ್ದರಿಂದ, ನಮ್ಮ ಮೇಲೆ ಪ್ರತೀಕಾರದ ಆರೋಪ ಮಾಡುವ ಬದಲು ಪಕ್ಷದ ನಿಧಿಯ ದುರುಪಯೋಗದ ವಿಷಯಗಳಲ್ಲಿ ನ್ಯಾಯಾಲಯದಿಂದ ಜಾಮೀನಿನ ಮೇಲೆ ಅವರ ಮುಖ್ಯಸ್ಥರು ಯಾಕೆ ಹೊರಗಿದ್ದಾರೆ ಎಂಬುದನ್ನು ಜನರಿಗೆ ಕಾಂಗ್ರೆಸ್ ವಿವರಿಸಬೇಕು. ಇಂತಿರುವಾಗಕಾಂಗ್ರೆಸ್ ಪಕ್ಷವು ಭ್ರಷ್ಟಾಚಾರದ ಬಗ್ಗೆ ಮಾತನಾಡಬಾರದು.

ಸಂಸತ್ತಿನಲ್ಲಿ ಕಾಂಗ್ರೆಸ್ ಕ್ರೋನಿ ಕ್ಯಾಪಿಟಲಿಸಂ ವಿಷಯವನ್ನು ಪ್ರಸ್ತಾಪಿಸುತ್ತಿದೆ. ಪ್ರಧಾನಿ ಉತ್ತರಿಸದಿರುವ ಬಗ್ಗೆ ಕೇಳಿದಾಗ, ಕಾಂಗ್ರೆಸ್ ಎಂದಿಗೂ ಪ್ರಧಾನಿಯ ಮಾತುಗಳನ್ನು ಕೇಳಲು ಸದನದಲ್ಲಿ ಇದ್ದರೆ ತಾನೇ ಎಂದು ಅವರು ಹೇಳಿದ್ದಾರೆ..”ಕಾಂಗ್ರೆಸ್ ಎತ್ತಿರುವ ಪ್ರಶ್ನೆಗಳಿಗೆ ಪ್ರಧಾನಿ ವಿವರವಾದ ಉತ್ತರಗಳನ್ನು ನೀಡಿದ್ದಾರೆ ಆದರೆ ಅವರು ಆರೋಪಗಳನ್ನು ಮಾಡಿದ ನಂತರ ಸದನದಿಂದ ಹೊರನಡೆದರು. ಏಕೆಂದರೆ ಅವರಿಗೆ ಸತ್ಯವನ್ನು ಎದುರಿಸಲು ಸಾಧ್ಯವಿಲ್ಲ ಎಂದಿದ್ದಾರೆ ನಿರ್ಮಲಾ. ರಾಜಕೀಯ ಪರಿಗಣನೆಗಾಗಿ ಕಾಂಗ್ರೆಸ್ ಭಾರತದ ಅಭಿವೃದ್ಧಿಯನ್ನು ಸ್ಥಗಿತಗೊಳಿಸಿದೆ ಎಂದು ಸೀತಾರಾಮನ್ ಹೇಳಿದರು.

“ಅವರು ಭಾರತದ ಪ್ರಗತಿಯ ಬಗ್ಗೆ ಕಾಳಜಿ ವಹಿಸಲಿಲ್ಲ ಆದರೆ ಪಕ್ಷ, ಕುಟುಂಬ ಮತ್ತು ರಾಜವಂಶದ ಕಲ್ಯಾಣದ ಬಗ್ಗೆ ಮಾತ್ರ ಕಾಳಜಿ ವಹಿಸುತ್ತಾರೆ” ಎಂದಿದ್ದಾರೆ ನಿರ್ಮಲಾ.

ಪೆಟ್ರೋಲ್ ಮತ್ತು ಡೀಸೆಲ್ ಅನ್ನು ಜಿಎಸ್‌ಟಿಗೆ ಸೇರಿಸಿರುವ ಕುರಿತು, ಕಾಂಗ್ರೆಸ್ ಅಥವಾ ಇತರ ಯಾವುದೇ ಪಕ್ಷಗಳು ಬರಲು ಬಯಸಿದರೆ, ಅವರು ಅದನ್ನು ಜಿಎಸ್‌ಟಿ ಕೌನ್ಸಿಲ್‌ಗೆ ತಂದು ಕೌನ್ಸಿಲ್ ನಲ್ಲಿ ಚರ್ಚಿಸಿ ಎಂದು ಸಚಿವೆ ಹೇಳಿದ್ದಾರೆ. ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದ ನಿರ್ಮಲಾ, ಯುಪಿಎ ರಾಜಕೀಯ ಪರಿಗಣನೆಯಲ್ಲಿ ಭಾರತದ ಅಭಿವೃದ್ಧಿಯನ್ನು ಸ್ಥಗಿತಗೊಳಿಸಿದೆ ಮತ್ತು ಅದನ್ನು ಕೇಳಲು ಯಾವುದೇ ನೈತಿಕ ಆಧಾರವಿಲ್ಲ ಎಂದು ಹೇಳಿದರು.

ಇದನ್ನೂ ಓದಿ: ಕಲ್ಲಿದ್ದಲು ಪ್ರಕರಣ: ಛತ್ತೀಸ್‌ಗಢದಲ್ಲಿ ಕಾಂಗ್ರೆಸ್ ನಾಯಕರು,ಪದಾಧಿಕಾರಿಗಳ ಸ್ಥಳಗಳಲ್ಲಿ ಇಡಿ ದಾಳಿ

ಏತನ್ಮಧ್ಯೆ, ದಾಳಿಯ ಸಮಯವು  ಸಂಶಯ ಹುಟ್ಟಿಸುತ್ತದೆ ಎಂದು ಕಾಂಗ್ರೆಸ್ ವಕ್ತಾರ ಸ್ವರ್ಣಿಮ್ ಚತುರ್ವೇದಿ ಹೇಳಿದ್ದಾರೆ. ಪಕ್ಷ ಅಥವಾ ಸಂಘಟನಾ ಕಾರ್ಯಕ್ರಮಗಳು ಇದ್ದಾಗಲೆಲ್ಲ ಈ ದಾಳಿಗಳನ್ನು ನಡೆಸುವುದು ಏಕೆ? ಮತ್ತು ವಿರೋಧ ಪಕ್ಷದ ನಾಯಕರ ವಿರುದ್ಧ 95% ದಾಳಿಗಳು ಏಕೆ? ಎಂದು ಅವರು ಕೇಳಿದ್ದಾರೆ.ಕಾಂಗ್ರೆಸ್ ನಾಯಕರನ್ನು ಗುರಿಯಾಗಿಸಿಕೊಂಡು ನಂತರದ ಸರ್ಕಾರಗಳು ಮಾಡುತ್ತಿರುವ ಕೆಲಸಕ್ಕೆ ಅಡ್ಡಿಪಡಿಸುವುದು ಅಥವಾ ಅವರನ್ನು ಬೀಳಿಸಲು ಪ್ರಯತ್ನಿಸುವುದು ಬಿಜೆಪಿಯ ಉದ್ದೇಶವಾಗಿದೆ.

ಆರ್‌ಟಿಇ, ಆಹಾರ ಭದ್ರತಾ ಕಾಯ್ದೆ ಮತ್ತು ಎಂಜಿಎನ್‌ಆರ್‌ಇಜಿಎಯಂತಹ ಕಲ್ಯಾಣ ಯೋಜನೆಗಳನ್ನು ಕಾಂಗ್ರೆಸ್ ತಂದಿದ್ದು ಅದು ಲಕ್ಷಾಂತರ ಜನರಿಗೆ ಸಹಾಯ ಮಾಡಿದೆ.ಜನಕಲ್ಯಾಣಕ್ಕಾಗಿ ಇಂತಹ ಯಾವುದೇ ಯೋಜನೆ ತರಲು ಬಿಜೆಪಿಗೆ ಸಾಧ್ಯವಾಗಿಲ್ಲ ಎಂದು ಚತುರ್ವೇದಿ ಹೇಳಿದ್ದಾರೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 8:12 pm, Mon, 20 February 23

Follow Us
Rashmi Kallakatta
Rashmi Kallakatta

ಊರು ಕಾಸರಗೋಡು. ಓದಿದ್ದು ಇಂಜಿನಿಯರಿಂಗ್, ಪಬ್ಲಿಕ್ ಅಡ್ಮಿನಿಸ್ಟ್ರೇಷನ್ ಮತ್ತು ಇಂಗ್ಲಿಷ್ ಸ್ನಾತಕೋತ್ತರ ಪದವಿ. ಕನ್ನಡಪ್ರಭ, ಪ್ರಜಾವಾಣಿ ಡಿಜಿಟಲ್ ಮತ್ತು ಪ್ರಿಂಟ್ ವಿಭಾಗದಲ್ಲಿ ಕೆಲಸದ ಅನುಭವ. ಬ್ಲಾಗರ್, ಸಾಹಿತ್ಯ ಪ್ರೇಮಿ. ಇಲ್ಲಿವರೆಗೆ 2 ಪುಸ್ತಕಗಳು ಪ್ರಕಟವಾಗಿವೆ. ಕಲೆ,ಸಾಹಿತ್ಯ,ತಂತ್ರಜ್ಞಾನ,ಸಂದರ್ಶನ, ಫ್ಯಾಕ್ಟ್ ಚೆಕಿಂಗ್ ಆಸಕ್ತಿಕರ ವಿಷಯಗಳು. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷ ಅನುಭವ

ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ
RCB ಅಭಿಮಾನಿಗಳಿಗೆ ಬಿಗ್ ಶಾಕ್: ರಸ್ತೆಗಳಲ್ಲಿ ಸಂಭ್ರಮಾಚರಣೆ ಮಾಡಿದ್ರೆ ಕ್ರಮ
RCB ಅಭಿಮಾನಿಗಳಿಗೆ ಬಿಗ್ ಶಾಕ್: ರಸ್ತೆಗಳಲ್ಲಿ ಸಂಭ್ರಮಾಚರಣೆ ಮಾಡಿದ್ರೆ ಕ್ರಮ
ಏಕಾಏಕಿ ಸಲೂನ್​​ ಒಳಗೆ ನುಗ್ಗಿದ ಹೋರಿ; ಸಿಸಿಟಿವಿ ದೃಶ್ಯ ವೈರಲ್!
ಏಕಾಏಕಿ ಸಲೂನ್​​ ಒಳಗೆ ನುಗ್ಗಿದ ಹೋರಿ; ಸಿಸಿಟಿವಿ ದೃಶ್ಯ ವೈರಲ್!
ಶಾಸಕಾಂಗ ಪಕ್ಷದ ನಾಯಕನ ಆಯ್ಕೆ ಪ್ರಕ್ರಿಯೆ ಹೇಗೆ?
ಶಾಸಕಾಂಗ ಪಕ್ಷದ ನಾಯಕನ ಆಯ್ಕೆ ಪ್ರಕ್ರಿಯೆ ಹೇಗೆ?
ಡಿಸಿಎಂಗಳ ಆಯ್ಕೆಯೇ ಈಗ ಕಾಂಗ್ರೆಸ್​​ ಹೈಕಮಾಂಡ್​​ಗೆ ದೊಡ್ಡ ಸವಾಲು!
ಡಿಸಿಎಂಗಳ ಆಯ್ಕೆಯೇ ಈಗ ಕಾಂಗ್ರೆಸ್​​ ಹೈಕಮಾಂಡ್​​ಗೆ ದೊಡ್ಡ ಸವಾಲು!