AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮುಂಬೈ ವಿಮಾನ ನಿಲ್ದಾಣದಲ್ಲಿ ವ್ಹೀಲ್​ ಚೇರ್​ ಇಲ್ಲದೆ ಕುಸಿದು ಬಿದ್ದು 80 ವರ್ಷದ ಪ್ರಯಾಣಿಕ ಸಾವು

ವೃದ್ಧರೊಬ್ಬರು ಮುಂಬೈ ವಿಮಾನ ನಿಲ್ದಾಣದಲ್ಲಿ ಕುಸಿದು ಬಿದ್ದು ಸಾವನ್ನಪ್ಪಿರುವ ಘಟನೆ ವರದಿಯಾಗಿದೆ. ಅವರು ನ್ಯೂಯಾರ್ಕ್​ನಿಂದ ಮುಂಬೈಗೆ ತೆರಳುತ್ತಿದ್ದ ಏರ್ ಇಂಡಿಯಾ ವಿಮಾನದಲ್ಲಿ ಆಗಮಿಸಿದ್ದರು. ಅವರಿಗೆ ವ್ಹೀಲ್​ಚೇರ್​ ಕೊಡದ ಕಾರಣ ಕುಸಿದುಬಿದ್ದು ಸಾವನ್ನಪ್ಪಿರುವ ಘಟನೆ ನಡೆದಿದೆ.

ಮುಂಬೈ ವಿಮಾನ ನಿಲ್ದಾಣದಲ್ಲಿ ವ್ಹೀಲ್​ ಚೇರ್​ ಇಲ್ಲದೆ ಕುಸಿದು ಬಿದ್ದು 80 ವರ್ಷದ ಪ್ರಯಾಣಿಕ ಸಾವು
ವ್ಹೀಲ್​ಚೇರ್Image Credit source: Curly Tales
Follow us
ನಯನಾ ರಾಜೀವ್
|

Updated on: Feb 16, 2024 | 9:43 AM

ನ್ಯೂಯಾರ್ಕ್‌ನಿಂದ ಮುಂಬೈಗೆ ತೆರಳುತ್ತಿದ್ದ ಏರ್ ಇಂಡಿಯಾ(Air India) ವಿಮಾನದಲ್ಲಿ ಪ್ರಯಾಣಿಸುತ್ತಿದ್ದ 80 ವರ್ಷದ ವೃದ್ಧರೊಬ್ಬರು ಮುಂಬೈ ವಿಮಾನ ನಿಲ್ದಾಣದ ಇಮಿಗ್ರೇಷನ್ ಕೌಂಟರ್‌ನಲ್ಲಿ ಕುಸಿದು ಬಿದ್ದು ಸಾವನ್ನಪ್ಪಿರುವ ಘಟನೆ ನಡೆದಿದೆ. ಮೊದಲೇ ಎರಡು ವ್ಹೀಲ್​ಚೇರ್​ಗಳನ್ನು​ ಕಾಯ್ದಿರಿಸಿದ್ದರು, ಆದರೆ ಒಂದು ಚೇರ್​ ಮಾತ್ರ ನೀಡಲಾಗಿತ್ತು. ಅದರಲ್ಲಿ ಅವರ ಪತ್ನಿಯನ್ನು ಕೂರಿಸಿಕೊಂಡು ಅವರು ವ್ಹೀಲ್​ಚೇರ್​ ಹಿಂದೆಯೇ ನಡೆದರು. ಆ ವ್ಯಕ್ತಿ ಸುಮಾರು 1.5 ಕಿ.ಮೀ ನಡೆದು ಇಮಿಗ್ರೇಷನ್‌ಗೆ ತೆರಳಿದರು, ಅಲ್ಲಿ ಹೃದಯಾಘಾತದಿಂದ ಅವರು ಹಠಾತ್ತನೆ ಕುಸಿದರು.

ತಕ್ಷಣ ಅವರನ್ನು ಮುಂಬೈ ವಿಮಾನ ನಿಲ್ದಾಣದ ವೈದ್ಯಕೀಯ ಸೌಲಭ್ಯಕ್ಕೆ ಕರೆದೊಯ್ಯಲಾಯಿತು ಮತ್ತು ನಂತರ ಅವರನ್ನು ನಾನಾವತಿ ಆಸ್ಪತ್ರೆಗೆ ಕರೆದೊಯ್ಯಲಾಯಿತು, ಅಲ್ಲಿ ವೈದ್ಯರು ಅವರು ಸಾವನ್ನಪ್ಪಿದ್ದಾರೆ ಎಂದು ಘೋಷಿಸಿದರು. ಭಾರತ ಮೂಲದ ದಂಪತಿ ಅಮೆರಿಕ ಪ್ರಜೆಯಾಗಿದ್ದರು, ವರು ಭಾನುವಾರ ನ್ಯೂಯಾರ್ಕ್‌ನಿಂದ ಹೊರಟಿದ್ದ ಮುಂಬೈಗೆ ಹೋಗುವ ಏರ್ ಇಂಡಿಯಾ ವಿಮಾನ AI-116 ಅನ್ನು ಹತ್ತಿದ್ದರು.

ವಿಮಾನ ನಿಲ್ದಾಣದ ಅಧಿಕಾರಿಯ ಪ್ರಕಾರ, ವಿಮಾನದ 32 ಪ್ರಯಾಣಿಕರು ಗಾಲಿಕುರ್ಚಿ ಸೌಲಭ್ಯವನ್ನು ಮೊದಲೇ ಕಾಯ್ದಿರಿಸಿದ್ದರು. ಆ 15 ಗಾಲಿಕುರ್ಚಿಗಳು ಮಾತ್ರ ಪ್ರಯಾಣಿಕರಿಗೆ ಲಭ್ಯವಿವೆ. ವ್ಹೀಲ್‌ಚೇರ್‌ಗಳಿಗೆ ಹೆಚ್ಚಿನ ಬೇಡಿಕೆಯಿರುವ ಕಾರಣ, ಮೃತ ಪ್ರಯಾಣಿಕನಿಗೆ ವ್ಹೀಲ್​ ಚೇರ್ ನೆರವು ನೀಡುವವರೆಗೆ ಕಾಯುವಂತೆ ವಿನಂತಿಸಲಾಯಿತು ಆದರೆ ಅವರು ತಮ್ಮ ಸಂಗಾತಿಯೊಂದಿಗೆ ನಡೆಯಲು ನಿರ್ಧರಿಸಿದರು ಎಂದು ಏರ್ ಇಂಡಿಯಾ ವಕ್ತಾರರು ತಿಳಿಸಿದ್ದಾರೆ.

ಮತ್ತಷ್ಟು ಓದಿ: ಜಪಾನ್​​​ನ ವಿಮಾನ ನಿಲ್ದಾಣದ ರನ್‌ವೇಯಲ್ಲಿ ಚಲಿಸುತ್ತಿದ್ದ ವಿಮಾನದಲ್ಲಿ ಬೆಂಕಿ, 5 ಜನ ಸಾವು

ವಿಮಾನಯಾನ ಸಂಸ್ಥೆಯು ಮೃತರ ಕುಟುಂಬ ಸದಸ್ಯರೊಂದಿಗೆ ನಿರಂತರ ಸಂಪರ್ಕದಲ್ಲಿದ್ದು, ಅಗತ್ಯ ನೆರವು ನೀಡುತ್ತಿದೆ ಎಂದು ಹೇಳಿದ್ದಾರೆ. ವಯಸ್ಸಾದ ಮತ್ತು ದುರ್ಬಲ ಪ್ರಯಾಣಿಕರು ಮತ್ತು ವೈದ್ಯಕೀಯ ಸ್ಥಿತಿಯನ್ನು ಹೊಂದಿರುವವರಿಗೆ ಗಾಲಿಕುರ್ಚಿಗೆ ಶುಲ್ಕ ವಿಧಿಸಲಾಗುತ್ತದೆ.

ಏರ್ ಇಂಡಿಯಾ ವೈದ್ಯಕೀಯ ಅಧಿಕಾರಿಯು ವಿನಂತಿಯನ್ನು ಮಂಜೂರು ಮಾಡಲು ಕನಿಷ್ಠ 72 ಗಂಟೆಗಳನ್ನು ತೆಗೆದುಕೊಳ್ಳುತ್ತದೆ. ಕೆನಡಾದಂತಹ ಕೆಲವು ಕಚೇರಿಗಳಲ್ಲಿ, ಇದು ಐದು ಕೆಲಸದ ದಿನಗಳನ್ನು ತೆಗೆದುಕೊಳ್ಳುತ್ತದೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ರಾಮನಗರ ಜಿಲ್ಲೆಯ ಹಲವೆಡೆ ಭಾರಿ ಮಳೆ: ಮಾಗಡಿಯಲ್ಲಿ ಮನೆಗಳಿಗೆ ನುಗ್ಗಿದ ನೀರು
ರಾಮನಗರ ಜಿಲ್ಲೆಯ ಹಲವೆಡೆ ಭಾರಿ ಮಳೆ: ಮಾಗಡಿಯಲ್ಲಿ ಮನೆಗಳಿಗೆ ನುಗ್ಗಿದ ನೀರು
Daily Devotional: ಕಾಲುಂಗುರ ಕಳೆದು ಹೋದರೆ ಅದರ ಮುನ್ಸೂಚನೆ ಏನು?
Daily Devotional: ಕಾಲುಂಗುರ ಕಳೆದು ಹೋದರೆ ಅದರ ಮುನ್ಸೂಚನೆ ಏನು?
ಈ ದಿನ ಜ್ಯೇಷ್ಠ ನಕ್ಷತ್ರ, ಸಿದ್ಧಯೋಗ: ಯಾವ ರಾಶಿಗಳಿಗೆ ಶುಭ ದಿನ ತಿಳಿಯಿರಿ
ಈ ದಿನ ಜ್ಯೇಷ್ಠ ನಕ್ಷತ್ರ, ಸಿದ್ಧಯೋಗ: ಯಾವ ರಾಶಿಗಳಿಗೆ ಶುಭ ದಿನ ತಿಳಿಯಿರಿ
ತುಂಬ ಆ್ಯಕ್ಟೀವ್ ಆಗಿದ್ದ ರಾಕೇಶ್​ಗೆ ಹೃದಯಾಘಾತ, ನಂಬೋಕೆ ಆಗಲಿಲ್ಲ: ರಘು
ತುಂಬ ಆ್ಯಕ್ಟೀವ್ ಆಗಿದ್ದ ರಾಕೇಶ್​ಗೆ ಹೃದಯಾಘಾತ, ನಂಬೋಕೆ ಆಗಲಿಲ್ಲ: ರಘು
ನೆಲಮಂಗಲದಲ್ಲಿ ಭಾರೀ ಮಳೆ: ರಾಷ್ಟ್ರೀಯ ಹೆದ್ದಾರಿ ಜಲಾವೃತ, ಟ್ರಾಫಿಕ್ ಜಾಮ್
ನೆಲಮಂಗಲದಲ್ಲಿ ಭಾರೀ ಮಳೆ: ರಾಷ್ಟ್ರೀಯ ಹೆದ್ದಾರಿ ಜಲಾವೃತ, ಟ್ರಾಫಿಕ್ ಜಾಮ್
ನಾಗೇಶ್ ಮೇಲೆ ಹಲ್ಲೆ ನಡೆಸಿ ಕೊಲೆ ಮಾಡಿದ ದೃಶ್ಯ ಸಿಸಿಟಿವಿಯಲ್ಲಿ ಸೆರೆ
ನಾಗೇಶ್ ಮೇಲೆ ಹಲ್ಲೆ ನಡೆಸಿ ಕೊಲೆ ಮಾಡಿದ ದೃಶ್ಯ ಸಿಸಿಟಿವಿಯಲ್ಲಿ ಸೆರೆ
ಸ್ನೇಹಿತರೊಂದಿಗೆ ಸೇರಿ ತಂದೆಯನ್ನೇ ಕೊಂದ ಮಗ: ಪ್ರಕರಣದ ಅಸಲಿಯತ್ತು ಇಲ್ಲಿದೆ
ಸ್ನೇಹಿತರೊಂದಿಗೆ ಸೇರಿ ತಂದೆಯನ್ನೇ ಕೊಂದ ಮಗ: ಪ್ರಕರಣದ ಅಸಲಿಯತ್ತು ಇಲ್ಲಿದೆ
ಹಿಂದೊಮ್ಮೆ ಪಾಕಿಸ್ತಾನ ಫೈರ್ ಮಾಡಿದ ಮಿಸೈಲ್ 5 ವರ್ಷದ ನಂತರ ಸಿಡಿದಿತ್ತು!
ಹಿಂದೊಮ್ಮೆ ಪಾಕಿಸ್ತಾನ ಫೈರ್ ಮಾಡಿದ ಮಿಸೈಲ್ 5 ವರ್ಷದ ನಂತರ ಸಿಡಿದಿತ್ತು!
ಆಡಿದ ಮಾತಿಗೆ ಕ್ಷಮೆ ಯಾಚಿಸಿದ ಮಧ್ಯಪ್ರದೇಶದ ಮಂತ್ರಿ ವಿಜಯ್ ಶಾ
ಆಡಿದ ಮಾತಿಗೆ ಕ್ಷಮೆ ಯಾಚಿಸಿದ ಮಧ್ಯಪ್ರದೇಶದ ಮಂತ್ರಿ ವಿಜಯ್ ಶಾ
ಒಪ್ಪಿಕೊಂಡಷ್ಟು ಅನುದಾನವನ್ನು ಕೇಂದ್ರ ಬಿಡುಗಡೆ ಮಾಡಬೇಕು: ಸಿದ್ದರಾಮಯ್ಯ
ಒಪ್ಪಿಕೊಂಡಷ್ಟು ಅನುದಾನವನ್ನು ಕೇಂದ್ರ ಬಿಡುಗಡೆ ಮಾಡಬೇಕು: ಸಿದ್ದರಾಮಯ್ಯ