AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Breaking News: ಅನುಮತಿಯಿಲ್ಲದೆ ಯಾರೂ ಬಂದ್​ ಮಾಡುವಂತಿಲ್ಲ; ಪಿಎಫ್​ಐಗೆ ಕೇರಳ ಹೈಕೋರ್ಟ್ ತರಾಟೆ

ಯಾರೂ ಅನುಮತಿಯಿಲ್ಲದೆ ರಾಜ್ಯದಲ್ಲಿ ಬಂದ್‌ಗೆ ಕರೆ ನೀಡಲು ಸಾಧ್ಯವಿಲ್ಲ ಎಂದು ಕೇರಳ ಹೈಕೋರ್ಟ್​ ಪಿಎಫ್​ಐ ಸಂಘಟನೆಯನ್ನು ತರಾಟೆಗೆ ತೆಗೆದುಕೊಂಡಿದೆ.

Breaking News: ಅನುಮತಿಯಿಲ್ಲದೆ ಯಾರೂ ಬಂದ್​ ಮಾಡುವಂತಿಲ್ಲ; ಪಿಎಫ್​ಐಗೆ ಕೇರಳ ಹೈಕೋರ್ಟ್ ತರಾಟೆ
ಪಿಎಫ್​ಐ ಸಂಘಟನೆಯ ಪ್ರತಿಭಟನೆ (ಸಂಗ್ರಹ ಚಿತ್ರ)
TV9 Web
| Edited By: |

Updated on:Sep 23, 2022 | 12:15 PM

Share

ತಿರುವನಂತಪುರಂ: ಪಿಎಫ್​ಐ (Popular Front of India) ಕಚೇರಿಗಳ ಮೇಲೆ ಎನ್​ಐಎ (NIA) ದಾಳಿಯನ್ನು ಖಂಡಿಸಿ ದೇಶದ ನಾನಾ ಭಾಗಗಳಲ್ಲಿ ಪ್ರತಿಭಟನೆಗಳು ನಡೆಯುತ್ತಿವೆ. ಇಂದು ಕೇರಳದಲ್ಲಿ ಬಂದ್​ಗೆ (Kerala Bandh) ಕೂಡ ಕರೆ ನೀಡಲಾಗಿದೆ. ಬಂದ್​ಗೆ ಕರೆ ನೀಡಿರುವ ಪಿಎಫ್​ಐ (PFI) ವರ್ತನೆಯ ಬಗ್ಗೆ ಕೇರಳ ಹೈಕೋರ್ಟ್ ಇಂದು (ಶುಕ್ರವಾರ) ಸುಯೊ ಮೋಟೋ ದಾಖಲಿಸಿಕೊಂಡಿದೆ. 12 ಗಂಟೆಗಳ ಪ್ರತಿಭಟನೆಯ ಮಧ್ಯೆ ಬಂದ್​ಗೆ ಕರೆ ನೀಡಲಾಗಿದೆ. ಯಾರೂ ಅನುಮತಿಯಿಲ್ಲದೆ ರಾಜ್ಯದಲ್ಲಿ ಬಂದ್‌ಗೆ ಕರೆ ನೀಡಲು ಸಾಧ್ಯವಿಲ್ಲ ಎಂದು ಕೇರಳ ಹೈಕೋರ್ಟ್​ ಪಿಎಫ್​ಐ ಸಂಘಟನೆಯನ್ನು ತರಾಟೆಗೆ ತೆಗೆದುಕೊಂಡಿದೆ.

ಪಿಎಫ್​​ಐ ಕಚೇರಿ ಮೇಲೆ ಎನ್​ಐಎ ದಾಳಿ ಖಂಡಿಸಿ ಪ್ರತಿಭಟನೆಯ ನೆಪದಲ್ಲಿ ಹಿಂಸಾಚಾರ ಮಾಡುವವರ ವಿರುದ್ಧ ಕ್ರಮ ಕೈಗೊಳ್ಳಲು ಕೇರಳ ಪೊಲೀಸರಿಗೆ ಹೈಕೋರ್ಟ್​​ ಸೂಚನೆ ನೀಡಿದೆ. ಅಲ್ಲದೆ, ಅಂಥವರ ವಿರುದ್ಧ ಸ್ವಯಂಪ್ರೇರಿತ ಕೇಸ್​ ದಾಖಲಿಸುವಂತೆ ಹೈಕೋರ್ಟ್​​ ಸೂಚನೆ ನೀಡಿದೆ. ಕೇರಳ ಬಂದ್​ಗೆ ಪಾಪ್ಯುಲರ್​ ಫ್ರಂಟ್ ಆಫ್ ಇಂಡಿಯಾ ಕರೆ ನೀಡಿರುವ ಹಿನ್ನೆಲೆಯಲ್ಲಿ ಪಿಎಫ್​ಐ ನಾಯಕರ ವಿರುದ್ಧ ಕ್ರಮಕ್ಕೆ ಕೋರ್ಟ್​ ಸೂಚನೆ ನೀಡಿದೆ.

ಕೇರಳ ರಾಜ್ಯ ಪೊಲೀಸರು “ಸರ್ಕಾರ ಮತ್ತು ಮುಷ್ಕರಕ್ಕಾಗಿ ಕರೆಯನ್ನು ಬೆಂಬಲಿಸದ ಸಾರ್ವಜನಿಕ ಮತ್ತು ಖಾಸಗಿ ಆಸ್ತಿಗೆ ಯಾವುದೇ ಹಾನಿ ಅಥವಾ ವಿನಾಶವಾಗದಂತೆ ತಡೆಗಟ್ಟಲು ಕಠಿಣ ಕ್ರಮಗಳನ್ನು ಜಾರಿಗೆ ತರಬೇಕು” ಎಂದು ಹೈಕೋರ್ಟ್ ಹೇಳಿದೆ. ಇಂದು ಬಂದ್ ಪ್ರಾರಂಭವಾಗುತ್ತಿದ್ದಂತೆ ಕೇರಳ ರಾಜ್ಯ ನಡೆಸುವ ಬಸ್ಸುಗಳ ಮೇಲೆ ಕಲ್ಲು ತೂರಾಟ ಮತ್ತು ದಾಳಿಯ ಘಟನೆಗಳು ವರದಿಯಾಗಿವೆ.  15 ರಾಜ್ಯಗಳು ಮತ್ತು 102 ಸ್ಥಳಗಳಲ್ಲಿ ಗುರುವಾರ ದಾಳಿ ನಡೆಸಲಾಯಿತು.

ಇದನ್ನೂ ಓದಿ: NIA Raids PFI SDPI: ಮಂಗಳೂರಿನಲ್ಲಿ NIA Go Back ಪ್ರತಿಭಟನೆ, 60 ಪಿಎಫ್​ಐ ಕಾರ್ಯಕರ್ತರ ಬಂಧನ; ಬೆಂಗಳೂರು, ಚೆನ್ನೈನಲ್ಲಿಯೂ ದಾಳಿ 

ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ ಹಾಗೂ ಎಸ್​ಡಿಪಿಐ ಸಂಘಟನೆಗಳ ಪದಾಧಿಕಾರಿಗಳ ಮನೆ ಹಾಗೂ ಕಚೇರಿಗಳ ಮೇಲೆ ರಾಷ್ಟ್ರೀಯ ತನಿಖಾ ದಳದ ಅಧಿಕಾರಿಗಳು ದಾಳಿ ನಡೆಸಿ ಮಹತ್ವದ ದಾಖಲೆಗಳನ್ನು ಕಲೆ ಹಾಕಿದ್ದಾರೆ. ಎನ್​ಐಎ, ಜಾರಿ ನಿರ್ದೇಶನಾಲಯ ಮತ್ತು ಗುಪ್ತದಳದಿಂದ ಸಾಕಷ್ಟು ಮಾಹಿತಿ ಕಲೆಹಾಕಿದ ನಂತರವೇ ಪಿಎಫ್​ಐ ಮೇಲೆ ಕೇಂದ್ರ ಸರ್ಕಾರದ ಏಜೆನ್ಸಿಗಳು ದಾಳಿ ನಡೆಸಿದ್ದವು. ವಿವಿಧ ರಾಜ್ಯಗಳ ಪೊಲೀಸರ ನೆರವನ್ನೂ ದಾಳಿಯ ವೇಳೆ ಪಡೆಯಲಾಯಿತು.

ಉದಯ್​ಪುರ ಮತ್ತು ಅಮರಾವತಿ ನಗರಗಳಲ್ಲಿ ನಡೆದ ಶಿರಚ್ಛೇದ ಪ್ರಕರಣಗಳ ಅಪರಾಧಿಗಳಿಗೆ ಪಿಎಫ್​ಐ ನಂಟು ಇರುವುದು ಬೆಳಕಿಗೆ ಬಂದ ನಂತರ ಕೇಂದ್ರ ಸರ್ಕಾರವು ಪಿಎಫ್​ಐ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲು ಮುಂದಾಗಿದೆ. ದೇಶಾದ್ಯಂತ ನಡೆದ ದಾಳಿಯಲ್ಲಿ ನೂರಾರು ಮಂದಿ ಪಿಎಫ್​ಐ ಕಾರ್ಯಕರ್ತರನ್ನು ಬಂಧಿಸಲಾಗಿದೆ. ಕೇರಳ, ಮಹಾರಾಷ್ಟ್ರ, ಕರ್ನಾಟಕ, ಆಂಧ್ರ ಪ್ರದೇಶ, ಅಸ್ಸಾಂ, ದೆಹಲಿ, ಮಧ್ಯಪ್ರದೇಶ, ಪುದುಚೇರಿ, ತಮಿಳುನಾಡು, ಉತ್ತರ ಪ್ರದೇಶ, ರಾಜಸ್ಥಾನದಲ್ಲಿ ಪಿಎಫ್​ಐ ಕಾರ್ಯಕರ್ತರನ್ನು ಬಂಧಿಸಲಾಗಿತ್ತು.

ಇದನ್ನೂ ಓದಿ: Kerala: ಎನ್​​ಐಎ ದಾಳಿ ಖಂಡಿಸಿ ಕೇರಳದಲ್ಲಿ ಪಿಎಫ್​ಐ ಪ್ರತಿಭಟನೆ, ಬಸ್​​ ಮೇಲೆ ಕಲ್ಲು ತೂರಾಟ ನಡೆಸಿದ ಕಾರ್ಯಕರ್ತರು

ಭಯೋತ್ಪಾದಕ ಕೃತ್ಯಗಳಿಗೆ ಹಣ ಒದಗಿಸುವುದು, ತರಬೇತಿ ಶಿಬಿರಗಳನ್ನು ಆಯೋಜಿಸುವುದು ಸೇರಿದಂತೆ ಹಲವು ಆರೋಪಗಳು ಪಿಎಫ್​ಐ ವಿರುದ್ಧ ಕೇಳಿ ಬಂದಿವೆ. ದೇಶದಲ್ಲಿ ಭಯೋತ್ಪಾದಕ ಚಟುವಟಿಕೆಗಳನ್ನು ಬೆಂಬಲಿಸಿದ ಆರೋಪದ ಮೇಲೆ 11 ರಾಜ್ಯಗಳಲ್ಲಿ ಪಿಎಫ್‌ಐನ 106 ಕಾರ್ಯಕರ್ತರನ್ನು ಬಂಧಿಸಲಾಗಿದೆ. ಅಧಿಕಾರಿಗಳ ಪ್ರಕಾರ ಇದು ದೇಶದ ಅತಿ ದೊಡ್ಡ ದಾಳಿಯಾಗಿದೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಕ್ಲಿಕ್ ಮಾಡಿ

Published On - 11:37 am, Fri, 23 September 22

Follow Us
ಕರ್ನಾಟಕ ಸಂಪುಟ ವಿಸ್ತರಣೆ ಬಗ್ಗೆ ಕೈ ಹೈಕಮಾಂಡ್ ನಾಯಕರು ಹೇಳಿದ್ದಿಷ್ಟು!
ಕರ್ನಾಟಕ ಸಂಪುಟ ವಿಸ್ತರಣೆ ಬಗ್ಗೆ ಕೈ ಹೈಕಮಾಂಡ್ ನಾಯಕರು ಹೇಳಿದ್ದಿಷ್ಟು!
ರಾಹುಲ್ ಸಭೆ ಅಂತ್ಯ, ಬೆಂಗಳುರಿನತ್ತ ಡಿಕೆಶಿ: ಸಂಪುಟ ವಿಸ್ತರಣೆ ಕಥೆ ಏನಾಯ್ತು
ರಾಹುಲ್ ಸಭೆ ಅಂತ್ಯ, ಬೆಂಗಳುರಿನತ್ತ ಡಿಕೆಶಿ: ಸಂಪುಟ ವಿಸ್ತರಣೆ ಕಥೆ ಏನಾಯ್ತು
ತಾಯಿ ನೆನಪಿಗಾಗಿ ಹೊಸ ವಾಚ್ ರೆಡಿ ಮಾಡಿಸಿದ ಪುತ್ರ ಕುಮಾರಸ್ವಾಮಿ
ತಾಯಿ ನೆನಪಿಗಾಗಿ ಹೊಸ ವಾಚ್ ರೆಡಿ ಮಾಡಿಸಿದ ಪುತ್ರ ಕುಮಾರಸ್ವಾಮಿ
ಅತ್ತೆ ಚೆನ್ನಮ್ಮರ ಜೊತೆಗಿನ ನೆನೆಪು ಹಂಚಿಕೊಂಡ ಸೊಸೆ ಭವಾನಿ ರೇವಣ್ಣ
ಅತ್ತೆ ಚೆನ್ನಮ್ಮರ ಜೊತೆಗಿನ ನೆನೆಪು ಹಂಚಿಕೊಂಡ ಸೊಸೆ ಭವಾನಿ ರೇವಣ್ಣ
ಕಾವೇರಿ ಹೋರಾಟ: ಚಿತ್ರರಂಗದ ಒಗ್ಗಟ್ಟು ಪ್ರಶ್ನಿಸಿದ್ದಕ್ಕೆ ರಾಕ್​ಲೈನ್ ಗರಂ
ಕಾವೇರಿ ಹೋರಾಟ: ಚಿತ್ರರಂಗದ ಒಗ್ಗಟ್ಟು ಪ್ರಶ್ನಿಸಿದ್ದಕ್ಕೆ ರಾಕ್​ಲೈನ್ ಗರಂ
ರೈತರ ಪರ ಚಿತ್ರರಂಗ ಇದ್ದೇ ಇರುತ್ತೆ: ಫಿಲಂ ಚೇಂಬರ್ ಅಧ್ಯಕ್ಷೆ ಜಯಮಾಲ
ರೈತರ ಪರ ಚಿತ್ರರಂಗ ಇದ್ದೇ ಇರುತ್ತೆ: ಫಿಲಂ ಚೇಂಬರ್ ಅಧ್ಯಕ್ಷೆ ಜಯಮಾಲ
ರಾಜ್ಯದ ಮೇಲ್ಮನವಿ ತಿರಸ್ಕರಿಸಿದ CWMA, ಕರ್ನಾಟಕ ಬಂದ್ ಎಚ್ಚರಿಕೆ
ರಾಜ್ಯದ ಮೇಲ್ಮನವಿ ತಿರಸ್ಕರಿಸಿದ CWMA, ಕರ್ನಾಟಕ ಬಂದ್ ಎಚ್ಚರಿಕೆ
ವಿಜಯ್ ಅವರೇ ಬಲವಂತವಾಗಿ ನೀರು ಪಡೆಯಬೇಡಿ: ಪ್ರಥಮ್
ವಿಜಯ್ ಅವರೇ ಬಲವಂತವಾಗಿ ನೀರು ಪಡೆಯಬೇಡಿ: ಪ್ರಥಮ್
Cauvery Dispute: ಕಾವೇರಿ ನೀರು ವಿವಾದ; ವಾಣಿಜ್ಯ ಮಂಡಳಿಯಲ್ಲಿ ಮಹತ್ವದ ಸಭೆ
Cauvery Dispute: ಕಾವೇರಿ ನೀರು ವಿವಾದ; ವಾಣಿಜ್ಯ ಮಂಡಳಿಯಲ್ಲಿ ಮಹತ್ವದ ಸಭೆ
ನೀರಿನ ಸಮಸ್ಯೆಗೆ ಶಾಶ್ವತ ಪರಿಹಾರ ಕಂಡುಕೊಂಡ ಮಂತ್ರಾಲಯದ ರಾಯರ ಮಠ
ನೀರಿನ ಸಮಸ್ಯೆಗೆ ಶಾಶ್ವತ ಪರಿಹಾರ ಕಂಡುಕೊಂಡ ಮಂತ್ರಾಲಯದ ರಾಯರ ಮಠ