AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಜಮ್ಮು-ಕಾಶ್ಮೀರದ ಅಭಿವೃದ್ಧಿ ತಡೆಯಲು ಯಾರಿಂದಲೂ ಸಾಧ್ಯವಿಲ್ಲ’-ಬಹಿರಂಗ ಸಭೆಯಲ್ಲಿ ಮಾತನಾಡಿದ ಅಮಿತ್ ಶಾ

Amit Shah: ಅಮಿತ್​ ಶಾ ಬಹಿರಂಗ ಸಭೆಯ ವೇಳೆ ಅಪಾರ ಸಂಖ್ಯೆಯಲ್ಲಿ ಜನರು ಸೇರಿದ್ದರು. ಘೋಷಣೆಗಳನ್ನು ಕೂಗುತ್ತಿದ್ದರು. ಇಲ್ಲಿ ಪೊಲೀಸ್​ ಮತ್ತು ಅರೆಸೇನಾ ಪಡೆಗಳ ಭದ್ರತೆಯನ್ನು ನಿಯೋಜಿಸಲಾಗಿತ್ತು. 

‘ಜಮ್ಮು-ಕಾಶ್ಮೀರದ ಅಭಿವೃದ್ಧಿ ತಡೆಯಲು ಯಾರಿಂದಲೂ ಸಾಧ್ಯವಿಲ್ಲ’-ಬಹಿರಂಗ ಸಭೆಯಲ್ಲಿ ಮಾತನಾಡಿದ ಅಮಿತ್ ಶಾ
ಗೃಹ ಸಚಿವ ಅಮಿತ್ ಶಾ (ಸಂಗ್ರಹ ಚಿತ್ರ)
TV9 Web
| Updated By: Lakshmi Hegde|

Updated on: Oct 24, 2021 | 4:57 PM

Share

ನಿನ್ನೆಯಿಂದ ಜಮ್ಮು-ಕಾಶ್ಮೀರ ಪ್ರವಾಸದಲ್ಲಿರುವ ಗೃಹ ಸಚಿವ ಅಮಿತ್​ ಶಾ (Amit Shah) ಇಂದು ಭಗವತಿ ನಗರದಲ್ಲಿ ಸಾರ್ವಜನಿಕ ರ್ಯಾಲಿ ನಡೆಸಿದರು. 2019ರಲ್ಲಿ ಜಮ್ಮು-ಕಾಶ್ಮೀರದ ವಿಶೇಷ ಸ್ಥಾನಮಾನ ರದ್ದುಗೊಳಿಸಿದ ಬಳಿಕ ಇದೇ ಮೊದಲ ಬಾರಿಗೆ ಅಲ್ಲಿಗೆ ಭೇಟಿ ನೀಡಿರುವ ಅಮಿತ್​ ಶಾ ಇಂದು ಸಾರ್ವಜನಿಕರನ್ನು ಉದ್ದೇಶಿಸಿ ಮಾತನಾಡಿ, ‘ಜಮ್ಮು-ಕಾಶ್ಮೀರ ಪ್ರಧಾನಿ ನರೇಂದ್ರ ಮೋದಿ(Narendra Modi)ಯವರ ಹೃದಯದಲ್ಲಿದೆ’ ಎಂದು ಹೇಳಿದರು. ಜಮ್ಮು ಪ್ರದೇಶಕ್ಕೆ ತಾರತಮ್ಯ ತೋರಿಸುವ ಕಾಲ ಮುಗಿಯಿತು. ಈಗ ಕಾಶ್ಮೀರ ಮತ್ತು ಜಮ್ಮು ಎರಡೂ ನಗರಗಳನ್ನೂ ಒಟ್ಟಾಗಿಯೇ ಅಭಿವೃದ್ಧಿಗೊಳಿಸಲಾಗುವುದು ಎಂದು ತಿಳಿಸಿದರು. 

ಜಮ್ಮುವಿನ ಜನರು ಅನ್ಯಾಯಕ್ಕೆ ಒಳಗಾಗುವ ಸಮಯ ಮುಗಿದಿದೆ.  ಇನ್ನು ಮುಂದೆ ಯಾರೂ ಇಲ್ಲಿಯ ಜನರಿಗೆ ಅನ್ಯಾಯ ಮಾಡಲು ಸಾಧ್ಯವಿಲ್ಲ. ಇಲ್ಲಿ ಅಭಿವೃದ್ಧಿಯಾಗುವುದನ್ನು ತಡೆಯಲು ಕೆಲವರು ಪ್ರಯತ್ನ ಮಾಡುತ್ತಿದ್ದಾರೆ. ಆದರೆ ಅದು ಯಾರಿಂದಲೂ ಸಾಧ್ಯವಿಲ್ಲ ಎಂದು ಹೇಳಲು ನಾನೀಗ ಜಮ್ಮುವಿಗೆ ಬಂದಿದ್ದೇನೆ ಎಂದು ಅಮಿತ್​ ಶಾ ಹೇಳಿದರು.  ಜಮ್ಮು-ಕಾಶ್ಮೀರದಲ್ಲಿ ಆರ್ಟಿಕಲ್​ 370 ರದ್ದುಗೊಳಿಸಬೇಕು ಎಂದು ನಿರ್ಧಾರ ಮಾಡಿದ್ದು ಪ್ರಧಾನಮಂತ್ರಿ ನರೇಂದ್ರ ಮೋದಿ. ಇಲ್ಲಿ ವಾಲ್ಮೀಕ ಸಮಾಜದವರು ಮತ್ತು ಪಶ್ಚಿಮ ಪಾಕಿಸ್ತಾನದಿಂದ ಬಂದ ನಿರಾಶ್ರಿತರೆಡೆಗೆ ತೋರಿಸಲಾಗುತ್ತಿದ್ದ ತಾರತಮ್ಯವೀಗ ಕೊನೆಗೊಂಡಿದೆ. ಜಮ್ಮು-ಕಾಶ್ಮೀರದಲ್ಲಿ ಈಗ ಕನಿಷ್ಠ ವೇತನ ಕಾಯ್ದೆ ಜಾರಿಗೊಂಡಿದೆ. ಈ ಕೇಂದ್ರಾಡಳಿತ ಪ್ರದೇಶಕ್ಕೆ ಈಗಾಗಲೇ 12 ಸಾವಿರ ಕೋಟಿ ರೂಪಾಯಿ ಹೂಡಿಕೆ ಹರಿದುಬಂದಿದ್ದು, 2022ರ ಹೊತ್ತಿಗೆ 51 ಸಾವಿರ ಕೋಟಿ ರೂ.ಹೂಡಿಕೆಯಾಗುವ ನಿರೀಕ್ಷೆಯಿದೆ ಎಂದು ಮಾಹಿತಿ ನೀಡಿದರು.

ಜಮ್ಮು-ಕಾಶ್ಮೀರದ ಅಭಿವೃದ್ಧಿಯನ್ನು ತಡೆಯಲು ಯಾರಿಂದಲೂ ಸಾಧ್ಯವಿಲ್ಲ. ಇದು ದೇಗುಲಗಳ ನಾಡು. ಮಾತಾ ವೈಷ್ಣೋ ದೇವಿ, ಪ್ರೇಮನಾಥ್ ದುರ್ಗಾ ದೇವರುಗಳು ಇಲ್ಲಿ ನೆಲೆಸಿದ್ದಾರೆ. ಶ್ಯಾಮಪ್ರಸಾದ್​ ಮುಖರ್ಜಿಯವರ ತ್ಯಾಗದ ಭೂಮಿ ಇದು.  ಇಲ್ಲಿ ಕೇವಲ 7 ವೈದ್ಯಕೀಯ ಕಾಲೇಜುಗಳು ಇದ್ದವು. ಇದೀಗ ಜಮ್ಮು-ಕಾಶ್ಮೀರದಲ್ಲಿ ಇನ್ನೂ 7 ಹೊಸ ವೈದ್ಯಕೀಯ ಕಾಲೇಜುಗಳನ್ನು ನಮ್ಮ ಸರ್ಕಾರ ನಿರ್ಮಾಣ ಮಾಡಲಿದೆ. ಇಲ್ಲಿನ ಅಭಿವೃದ್ಧಿಗಾಗಿ ಯುವಕರು ನಮ್ಮೊಂದಿಗೆ ಕೈಜೋಡಿಸಿದರೆ ಭಯೋತ್ಪಾದಕರು ತಮ್ಮ ಕಾರ್ಯದಲ್ಲಿ ವಿಫಲರಾಗುತ್ತಾರೆ ಎಂದು ಅಮಿತ್​ ಶಾ ಹೇಳಿದರು.  ಜಮ್ಮು-ಕಾಶ್ಮೀರದಲ್ಲಿ ಭಯೋತ್ಪಾದನೆ ಸಂಪೂರ್ಣ ನಾಶವಾಗಬೇಕು. ಯಾವುದೇ ನಾಗರಿಕನೂ ಹತ್ಯೆಗೀಡಾಗಬಾರದು ಎಂಬ ಗುರಿಯನ್ನು ನಮ್ಮ ಸರ್ಕಾರ ಹೊಂದಿದೆ ಎಂದು ಅಮಿತ್​ ಶಾ ಹೇಳಿದರು.

ಅಮಿತ್​ ಶಾ ಬಹಿರಂಗ ಸಭೆಯ ವೇಳೆ ಅಪಾರ ಸಂಖ್ಯೆಯಲ್ಲಿ ಜನರು ಸೇರಿದ್ದರು. ಘೋಷಣೆಗಳನ್ನು ಕೂಗುತ್ತಿದ್ದರು. ಇಲ್ಲಿ ಪೊಲೀಸ್​ ಮತ್ತು ಅರೆಸೇನಾ ಪಡೆಗಳ ಭದ್ರತೆಯನ್ನು ನಿಯೋಜಿಸಲಾಗಿತ್ತು.  ಬಹಿರಂಗ ಸಭೆ ನಡೆಸುವುದಕ್ಕೂ ಮೊದಲು ಅಮಿತ್​ ಶಾ ಜಮ್ಮುವಿನ ಐಐಟಿ ಸಂಸ್ಥೆಯನ್ನು ಉದ್ಘಾಟಿಸಿದ್ದಾರೆ. ನಿನ್ನೆ ಉನ್ನತ ಮಟ್ಟದ ಭದ್ರತಾ ಪರಿಶೀಲನೆ ಸಭೆಯನ್ನು ನಡೆಸಿದ್ದಾರೆ.

ಇದನ್ನೂ ಓದಿ: Jaguar: ‘ಜಾಗ್ವಾರ್’ ಚಿತ್ರಕ್ಕೆ 5 ವರ್ಷಗಳ ಸಂಭ್ರಮ; ದಾಸರಹಳ್ಳಿಯಲ್ಲಿ ನಡೆದ ವಿಶೇಷ ಕಾರ್ಯಕ್ರಮದಲ್ಲಿ ಭಾಗವಹಿಸಿದ ನಿಖಿಲ್

ಭಾರತೀಯ ನೌಕಾಪಡೆ ಹೊಸ ಶಕ್ತಿ ತುಂಬಲಿದೆ ಎಂಕೆ 54 ಟಾರ್ಪೆಡೊ: ಅಮೆರಿಕದೊಂದಿಗೆ 423 ಕೋಟಿ ಒಪ್ಪಂದ

ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ
ಆರ್​ಸಿಬಿಯಲ್ಲಿ ಅವಕಾಶ ಸಿಗಲಿಲ್ಲ; 56 ಎಸೆತಗಳಲ್ಲಿ ಶತಕ ಸಿಡಿಸಿದ ಸೀಫರ್ಟ್
ಆರ್​ಸಿಬಿಯಲ್ಲಿ ಅವಕಾಶ ಸಿಗಲಿಲ್ಲ; 56 ಎಸೆತಗಳಲ್ಲಿ ಶತಕ ಸಿಡಿಸಿದ ಸೀಫರ್ಟ್
ಸಂಸತ್ತಿಗೆ ಸೈಕಲ್​​ನಲ್ಲಿ ಬಂದ ಸಂಸದ
ಸಂಸತ್ತಿಗೆ ಸೈಕಲ್​​ನಲ್ಲಿ ಬಂದ ಸಂಸದ