AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹಾಸ್ಟೆಲ್ ಕೋಣೆಯಲ್ಲಿ ತಲೆಗೆ ಗುಂಡು ತಗುಲಿದ ಸ್ಥಿತಿಯಲ್ಲಿ ಇಬ್ಬರು ವಿದ್ಯಾರ್ಥಿಗಳು ಪತ್ತೆ

ಹಾಸ್ಟೆಲ್​​ನಲ್ಲಿ ಇಬ್ಬರು ವಿದ್ಯಾರ್ಥಿಗಳು ತಲೆಗೆ ಗುಂಡು ತಗುಲಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ. ಖಾಸಗಿ ನಿರ್ವಹಣಾ ಸಂಸ್ಥೆಯ ಹಾಸ್ಟೆಲ್ ಕೋಣೆಯಲ್ಲಿ ಮಂಗಳವಾರ ಒಳಗಿನಿಂದ ಲಾಕ್ ಮಾಡಲಾಗಿತ್ತು. ಬಾಗಿಲು ಒಡೆದು ಒಳಗೆ ಹೋದಾಗ ಇಬ್ಬರು ವಿದ್ಯಾರ್ಥಿಗಳು ರಕ್ತದ ಮಡುವಿನಲ್ಲಿ ಬಿದ್ದಿದ್ದರು. ಇಬ್ಬರ ತಲೆಗೂ ಗುಂಡೇಟು ತಗುಲಿತ್ತು. ಓರ್ವ ವಿದ್ಯಾರ್ಥಿ ಸಾವನ್ನಪ್ಪಿದ್ದು, ಮತ್ತೊಬ್ಬನಿಗೆ ಗಂಭೀರ ಗಾಯವಾಗಿದ್ದು, ಸಾವು ಬದುಕಿನ ನಡುವೆ ಹೋರಾಡುತ್ತಿದ್ದಾನೆ.

ಹಾಸ್ಟೆಲ್ ಕೋಣೆಯಲ್ಲಿ ತಲೆಗೆ ಗುಂಡು ತಗುಲಿದ ಸ್ಥಿತಿಯಲ್ಲಿ ಇಬ್ಬರು ವಿದ್ಯಾರ್ಥಿಗಳು ಪತ್ತೆ
ಗುಂಡಿನ ದಾಳಿ
ನಯನಾ ರಾಜೀವ್
|

Updated on: Sep 10, 2025 | 7:52 AM

Share

ಗ್ರೇಟರ್ ನೋಯ್ಡಾ, ಸೆಪ್ಟೆಂಬರ್ 10: ಗ್ರೇಟರ್ ನೋಯ್ಡಾ ವಿಶ್ವವಿದ್ಯಾಲಯದ ಹಾಸ್ಟೆಲ್​​ನಲ್ಲಿ ಇಬ್ಬರು ವಿದ್ಯಾರ್ಥಿಗಳು ತಲೆಗೆ ಗುಂಡು ತಗುಲಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ. ಖಾಸಗಿ ನಿರ್ವಹಣಾ ಸಂಸ್ಥೆಯ ಹಾಸ್ಟೆಲ್ ಕೋಣೆಯಲ್ಲಿ ಮಂಗಳವಾರ ಒಳಗಿನಿಂದ ಲಾಕ್ ಮಾಡಲಾಗಿತ್ತು. ಬಾಗಿಲು ಒಡೆದು ಒಳಗೆ ಹೋದಾಗ ಇಬ್ಬರು ವಿದ್ಯಾರ್ಥಿಗಳು ರಕ್ತದ ಮಡುವಿನಲ್ಲಿ ಬಿದ್ದಿದ್ದರು. ಇಬ್ಬರ ತಲೆಗೂ ಗುಂಡೇಟು ತಗುಲಿತ್ತು. ಓರ್ವ ವಿದ್ಯಾರ್ಥಿ ಸಾವನ್ನಪ್ಪಿದ್ದು, ಮತ್ತೊಬ್ಬನಿಗೆ ಗಂಭೀರ ಗಾಯವಾಗಿದ್ದು, ಸಾವು ಬದುಕಿನ ನಡುವೆ ಹೋರಾಡುತ್ತಿದ್ದಾನೆ.

ಪ್ರಾಥಮಿಕ ತನಿಖೆಯಲ್ಲಿ ಇಬ್ಬರೂ ಕೂಡ ಆತ್ಮಹತ್ಯೆಗೆ ಯತ್ನಿಸಿರುವಂತೆ ಕಾಣುತ್ತದೆ, ಇದರಲ್ಲಿ ಮೂರನೇ ವ್ಯಕ್ತಿಯ ಹಸ್ತಕ್ಷೇಪವಿದ್ದಂತಿಲ್ಲ, ಮೊದಲೇ ಇಬ್ಬರು ಆತ್ಮಹತ್ಯೆ ಮಾಡಿಕೊಳ್ಳಬೇಕೆಂದು ನಿರ್ಧರಿಸಿರಬೇಕು ಎಂದು ಪೊಲೀಸರು ತಿಳಿಸಿದ್ದಾರೆ. ಪ್ರಕರಣ ಕೊಲೆ ಅಥವಾ ಆತ್ಮಹತ್ಯೆಯೋ, ಎರಡೂ ವಿದ್ಯಾರ್ಥಿಗಳು ಒಬ್ಬರ ನಂತರ ಒಬ್ಬರು ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆಯೋ ಎಂಬ ಬಗ್ಗೆ ತನಿಖೆ ನಡೆಸಲಾಗುತ್ತದೆ ಎಂದು ಪೊಲೀಸರು ತಿಳಿಸಿದ್ದಾರೆ.

ಬೆಳಗ್ಗೆ 11.20ಕ್ಕೆ ಭದ್ರತಾ ಸಿಬ್ಬಂದಿ ಮೊದಲ ಮಹಡಿಯ ಲಾಬಿಗೆ ದೀಪಗಳನ್ನು ಆಫ್ಮಾಡಲು ಹೋದಾಗ ಕೊಠಡಿ ಸಂಖ್ಯೆ 127 ರಿಂದ ಕಿರುಚಾಟ ಕೇಳಿಸಿತು . ಆ ಕೋಣೆಯಲ್ಲಿ ಹಿರಿಯ ವಿದ್ಯಾರ್ಥಿ ಹಾಗೂ ನಿವೃತ್ತ ಉಪ ಪೊಲೀಸ್ ವರಿಷ್ಠಾಧಿಕಾರಿಯ ಮಗನೂ ಆಗಿದ್ದ ಯುವಕ ಹಾಗೂ ಆತನ ಆಂಧ್ರಪ್ರದೇಶದ ಚಿಲುಕ್ರುಯಿ ಮೂಲದ ಸ್ನೇಹಿತ ಇದ್ದರು.

ಇಬ್ಬರೂ ಆತ್ಮಸ್ನೇಹಿತರಾಗಿದ್ದರು.ಒಳಗೆ ಹೋಗಲು ಪ್ರಯತ್ನಿಸಿದಾಗ, ಬಾಗಿಲು ಒಳಗಿನಿಂದ ಲಾಕ್ ಆಗಿತ್ತು ಎಂದು ಕಾವಲುಗಾರ ಪೊಲೀಸರಿಗೆ ತಿಳಿಸಿದ್ದಾನೆ. ಅವನು ಹಾಸ್ಟೆಲ್ ವಾರ್ಡನ್‌ಗೆ ಮಾಹಿತಿ ನೀಡಿ, ನಂತರ ಎರಡನೇ ಮಹಡಿಗೆ ಹತ್ತಿ ಬಾಲ್ಕನಿಯಿಂದ ಕೋಣೆಯೊಳಗೆ ನೋಡಿದ್ದಾರೆ.

ಇಬ್ಬರು ರಕ್ತದ ಮಡುವಿನಲ್ಲಿ ಬಿದ್ದಿರುವುದನ್ನು ಸಿಬ್ಬಂದಿ ನೋಡಿದರು. ಏಣಿಯನ್ನು ತರಲಾಯಿತು, ಮತ್ತು ಹಾಸ್ಟೆಲ್ ಸಿಬ್ಬಂದಿ ಬಾಲ್ಕನಿ ಕಿಟಕಿಯನ್ನು ಒಡೆದು ಒಳಗೆ ಪ್ರವೇಶಿಸಿದರು. ನಂತರ ಪೊಲೀಸರು ಹೇಳಿದಂತೆ, ಕೊಠಡಿಯಲ್ಲಿ ಯಾವುದೇ ವಸ್ತುಗಳು ಚೆಲ್ಲಾಪಿಲ್ಲಿಯಾಗಿರಲಿಲ್ಲ. ಇಬ್ಬರೂ ವಿದ್ಯಾರ್ಥಿಗಳನ್ನು ಕೈಲಾಶ್ ಆಸ್ಪತ್ರೆಗೆ ಸಾಗಿಸಲಾಯಿತು, ಅಲ್ಲಿ ಆಂಧ್ರಪ್ರದೇಶದ ವಿದ್ಯಾರ್ಥಿಯನ್ನು ಆಸ್ಪತ್ರೆಗೆ ಕರೆದೊಯ್ಯುವಷ್ಟರಲ್ಲಿ ಮೃತಪಟ್ಟಿರುವುದಾಗಿ ಘೋಷಿಸಲಾಯಿತು. ಆಗ್ರಾ ಮೂಲದ ವಿದ್ಯಾರ್ಥಿಯ ತಲೆಗೆ ಗುಂಡೇಟಿನಿಂದ ಗಾಯವಾಗಿದ್ದು, ಆತನ ಸ್ಥಿತಿ ಗಂಭೀರವಾಗಿದೆ.

ಮತ್ತಷ್ಟು ಓದಿ:

ಟೀಚರ್ ಹೊಡೆದಿದ್ದಕ್ಕೆ ಬೇಸರ, ಶಿಕ್ಷಕರ ಮೇಲೆ ಗುಂಡು ಹಾರಿಸಿದ ವಿದ್ಯಾರ್ಥಿ

ಸಹಾಯಕ ಪೊಲೀಸ್ ಆಯುಕ್ತ ವಿವೇಕ್ ರಂಜನ್ ರೈ ಮಾತನಾಡಿ, ಬಳಸಿದ ಹ್ಯಾಂಡ್‌ಗನ್ ವಿದ್ಯಾರ್ಥಿಯ ತಂದೆಯದ್ದಾಗಿತ್ತು. ರಿವಾಲ್ವರ್ ನಿಂದ ಎರಡು ಸುತ್ತು ಗುಂಡು ಹಾರಿಸಲಾಗಿದೆ. ಎರಡೂ ಗುಂಡುಗಳು ವಿದ್ಯಾರ್ಥಿಗಳ ತಲೆಯನ್ನು ಭೇದಿಸಿ ಗೋಡೆಯಲ್ಲಿ ಸಿಲುಕಿಕೊಂಡಿವೆ. ಒಬ್ಬರು ಇನ್ನೊಬ್ಬರಿಗೆ ಗುಂಡು ಹಾರಿಸಿಕೊಂಡ ನಂತರ ಸ್ವತಃ ಗುಂಡು ಹಾರಿಸಿಕೊಂಡಿದ್ದಾರೆಯೇ ಅಥವಾ ಇಬ್ಬರೂ ಪ್ರತ್ಯೇಕವಾಗಿ ಗುಂಡು ಹಾರಿಸಿದ್ದಾರೆಯೇ ಎಂದು ಖಚಿತಪಡಿಸಿಕೊಳ್ಳಲು ನಾವು ವಿಧಿವಿಜ್ಞಾನ ಫಲಿತಾಂಶಗಳಿಗಾಗಿ ಕಾಯುತ್ತಿದ್ದೇವೆ ಎಂದು ತಿಳಿಸಿದ್ದಾರೆ.

ಸಂಸ್ಥೆಯ ಹಾಸ್ಟೆಲ್ ಸುಮಾರು 500 ವಿದ್ಯಾರ್ಥಿಗಳನ್ನು ಹೊಂದಿದೆ. ಈ ಇಬ್ಬರು ಪ್ರತ್ಯೇಕ ಮಹಡಿಗಳಲ್ಲಿದ್ದರು,  ಈ ಆಘಾತಕಾರಿ ಘಟನೆಯು ಕ್ಯಾಂಪಸ್ ಅನ್ನು ಅಲ್ಲೋಲಕಲ್ಲೋಲಗೊಳಿಸಿದೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
ಗಾಯಕಿ ಆಶಾ ಭೋಸ್ಲೆ ಕನ್ನಡದಲ್ಲಿ 4ನೇ ಗೀತೆ ಹಾಡಲು ಒಪ್ಪಿಕೊಂಡಿದ್ದು ಹೇಗೆ?
ಗಾಯಕಿ ಆಶಾ ಭೋಸ್ಲೆ ಕನ್ನಡದಲ್ಲಿ 4ನೇ ಗೀತೆ ಹಾಡಲು ಒಪ್ಪಿಕೊಂಡಿದ್ದು ಹೇಗೆ?
ಸಂಪುಟ ಪುನಾರಚನೆಗೆ ಎಐಸಿಸಿ ಅಧ್ಯಕ್ಷ ಖರ್ಗೆ ಮಹತ್ವದ ಭರವಸೆ: ಶಾಸಕರು ಖುಷ್​
ಸಂಪುಟ ಪುನಾರಚನೆಗೆ ಎಐಸಿಸಿ ಅಧ್ಯಕ್ಷ ಖರ್ಗೆ ಮಹತ್ವದ ಭರವಸೆ: ಶಾಸಕರು ಖುಷ್​
ಚೊಚ್ಚಲ ಪಂದ್ಯದಲ್ಲೇ ಮೂವರನ್ನು ಶೂನ್ಯಕ್ಕೆ ಔಟ್ ಮಾಡಿದ ಪ್ರಫುಲ್
ಚೊಚ್ಚಲ ಪಂದ್ಯದಲ್ಲೇ ಮೂವರನ್ನು ಶೂನ್ಯಕ್ಕೆ ಔಟ್ ಮಾಡಿದ ಪ್ರಫುಲ್
ಅತ್ಯಧಿಕ ಸೊನ್ನೆ.. ಅನಗತ್ಯ ದಾಖಲೆ ಬರೆದ ಅಭಿಷೇಕ್ ಶರ್ಮಾ
ಅತ್ಯಧಿಕ ಸೊನ್ನೆ.. ಅನಗತ್ಯ ದಾಖಲೆ ಬರೆದ ಅಭಿಷೇಕ್ ಶರ್ಮಾ
ವಚನಾನಂದ ಸ್ವಾಮೀಜಿ ಉಚ್ಚಾಟನೆ ಮಠದಲ್ಲಿ ತಳ್ಳಾಟ, ನೂಕಾಟ: ಶ್ರೀಗಳಿಗೆ ಗಾಯ
ವಚನಾನಂದ ಸ್ವಾಮೀಜಿ ಉಚ್ಚಾಟನೆ ಮಠದಲ್ಲಿ ತಳ್ಳಾಟ, ನೂಕಾಟ: ಶ್ರೀಗಳಿಗೆ ಗಾಯ
ಹೇಗಿದೆ ನೋಡಿ ಕುಂದಾಪುರದ ವಂಡ್ಸೆ ಶಾಲೆಯ ರೋಬೋಟ್​​ ಟೀಚರ್​​ ಪಾಠ
ಹೇಗಿದೆ ನೋಡಿ ಕುಂದಾಪುರದ ವಂಡ್ಸೆ ಶಾಲೆಯ ರೋಬೋಟ್​​ ಟೀಚರ್​​ ಪಾಠ
ಪತ್ನಿ ಗರ್ಭಿಣಿಯಾಗುತ್ತಿದ್ದಂತೆ ಪತಿಯ ರಂಗೀನಾಟ: ಹೆರಿಗೆಗೆ ಹೋದಾಗ ಮತ್ತೊಂದು
ಪತ್ನಿ ಗರ್ಭಿಣಿಯಾಗುತ್ತಿದ್ದಂತೆ ಪತಿಯ ರಂಗೀನಾಟ: ಹೆರಿಗೆಗೆ ಹೋದಾಗ ಮತ್ತೊಂದು
ಪಂಚಮಸಾಲಿ ಗುರುಪೀಠದಿಂದ ಉಚ್ಛಾಟನೆ ಮಾಡಿರುವ ಬಗ್ಗೆ ವಚನಾನಂದ ಸ್ವಾಮೀಜಿ ಮಾತು
ಪಂಚಮಸಾಲಿ ಗುರುಪೀಠದಿಂದ ಉಚ್ಛಾಟನೆ ಮಾಡಿರುವ ಬಗ್ಗೆ ವಚನಾನಂದ ಸ್ವಾಮೀಜಿ ಮಾತು
ಪಾದಚಾರಿಗಳ ಮೇಲೆ ಎರಗಿದ ಕಾರು; ಸಿಸಿಟಿವಿಯಲ್ಲಿ ಸೆರೆಯಾಯ್ತು ಭೀಕರ ದೃಶ್ಯ
ಪಾದಚಾರಿಗಳ ಮೇಲೆ ಎರಗಿದ ಕಾರು; ಸಿಸಿಟಿವಿಯಲ್ಲಿ ಸೆರೆಯಾಯ್ತು ಭೀಕರ ದೃಶ್ಯ
ಬಸವಜಯ ಮೃತ್ಯುಂಜಯಶ್ರೀ ಲೈಂಗಿಕ ಕಿರುಕುಳ ಪ್ರಕರಣಕ್ಕೆ ಬಿಗ್​​ ಟ್ವಿಸ್ಟ್
ಬಸವಜಯ ಮೃತ್ಯುಂಜಯಶ್ರೀ ಲೈಂಗಿಕ ಕಿರುಕುಳ ಪ್ರಕರಣಕ್ಕೆ ಬಿಗ್​​ ಟ್ವಿಸ್ಟ್