AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹಾಸ್ಟೆಲ್ ಕೋಣೆಯಲ್ಲಿ ತಲೆಗೆ ಗುಂಡು ತಗುಲಿದ ಸ್ಥಿತಿಯಲ್ಲಿ ಇಬ್ಬರು ವಿದ್ಯಾರ್ಥಿಗಳು ಪತ್ತೆ

ಹಾಸ್ಟೆಲ್​​ನಲ್ಲಿ ಇಬ್ಬರು ವಿದ್ಯಾರ್ಥಿಗಳು ತಲೆಗೆ ಗುಂಡು ತಗುಲಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ. ಖಾಸಗಿ ನಿರ್ವಹಣಾ ಸಂಸ್ಥೆಯ ಹಾಸ್ಟೆಲ್ ಕೋಣೆಯಲ್ಲಿ ಮಂಗಳವಾರ ಒಳಗಿನಿಂದ ಲಾಕ್ ಮಾಡಲಾಗಿತ್ತು. ಬಾಗಿಲು ಒಡೆದು ಒಳಗೆ ಹೋದಾಗ ಇಬ್ಬರು ವಿದ್ಯಾರ್ಥಿಗಳು ರಕ್ತದ ಮಡುವಿನಲ್ಲಿ ಬಿದ್ದಿದ್ದರು. ಇಬ್ಬರ ತಲೆಗೂ ಗುಂಡೇಟು ತಗುಲಿತ್ತು. ಓರ್ವ ವಿದ್ಯಾರ್ಥಿ ಸಾವನ್ನಪ್ಪಿದ್ದು, ಮತ್ತೊಬ್ಬನಿಗೆ ಗಂಭೀರ ಗಾಯವಾಗಿದ್ದು, ಸಾವು ಬದುಕಿನ ನಡುವೆ ಹೋರಾಡುತ್ತಿದ್ದಾನೆ.

ಹಾಸ್ಟೆಲ್ ಕೋಣೆಯಲ್ಲಿ ತಲೆಗೆ ಗುಂಡು ತಗುಲಿದ ಸ್ಥಿತಿಯಲ್ಲಿ ಇಬ್ಬರು ವಿದ್ಯಾರ್ಥಿಗಳು ಪತ್ತೆ
ಗುಂಡಿನ ದಾಳಿ
ನಯನಾ ರಾಜೀವ್
|

Updated on: Sep 10, 2025 | 7:52 AM

Share

ಗ್ರೇಟರ್ ನೋಯ್ಡಾ, ಸೆಪ್ಟೆಂಬರ್ 10: ಗ್ರೇಟರ್ ನೋಯ್ಡಾ ವಿಶ್ವವಿದ್ಯಾಲಯದ ಹಾಸ್ಟೆಲ್​​ನಲ್ಲಿ ಇಬ್ಬರು ವಿದ್ಯಾರ್ಥಿಗಳು ತಲೆಗೆ ಗುಂಡು ತಗುಲಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ. ಖಾಸಗಿ ನಿರ್ವಹಣಾ ಸಂಸ್ಥೆಯ ಹಾಸ್ಟೆಲ್ ಕೋಣೆಯಲ್ಲಿ ಮಂಗಳವಾರ ಒಳಗಿನಿಂದ ಲಾಕ್ ಮಾಡಲಾಗಿತ್ತು. ಬಾಗಿಲು ಒಡೆದು ಒಳಗೆ ಹೋದಾಗ ಇಬ್ಬರು ವಿದ್ಯಾರ್ಥಿಗಳು ರಕ್ತದ ಮಡುವಿನಲ್ಲಿ ಬಿದ್ದಿದ್ದರು. ಇಬ್ಬರ ತಲೆಗೂ ಗುಂಡೇಟು ತಗುಲಿತ್ತು. ಓರ್ವ ವಿದ್ಯಾರ್ಥಿ ಸಾವನ್ನಪ್ಪಿದ್ದು, ಮತ್ತೊಬ್ಬನಿಗೆ ಗಂಭೀರ ಗಾಯವಾಗಿದ್ದು, ಸಾವು ಬದುಕಿನ ನಡುವೆ ಹೋರಾಡುತ್ತಿದ್ದಾನೆ.

ಪ್ರಾಥಮಿಕ ತನಿಖೆಯಲ್ಲಿ ಇಬ್ಬರೂ ಕೂಡ ಆತ್ಮಹತ್ಯೆಗೆ ಯತ್ನಿಸಿರುವಂತೆ ಕಾಣುತ್ತದೆ, ಇದರಲ್ಲಿ ಮೂರನೇ ವ್ಯಕ್ತಿಯ ಹಸ್ತಕ್ಷೇಪವಿದ್ದಂತಿಲ್ಲ, ಮೊದಲೇ ಇಬ್ಬರು ಆತ್ಮಹತ್ಯೆ ಮಾಡಿಕೊಳ್ಳಬೇಕೆಂದು ನಿರ್ಧರಿಸಿರಬೇಕು ಎಂದು ಪೊಲೀಸರು ತಿಳಿಸಿದ್ದಾರೆ. ಪ್ರಕರಣ ಕೊಲೆ ಅಥವಾ ಆತ್ಮಹತ್ಯೆಯೋ, ಎರಡೂ ವಿದ್ಯಾರ್ಥಿಗಳು ಒಬ್ಬರ ನಂತರ ಒಬ್ಬರು ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆಯೋ ಎಂಬ ಬಗ್ಗೆ ತನಿಖೆ ನಡೆಸಲಾಗುತ್ತದೆ ಎಂದು ಪೊಲೀಸರು ತಿಳಿಸಿದ್ದಾರೆ.

ಬೆಳಗ್ಗೆ 11.20ಕ್ಕೆ ಭದ್ರತಾ ಸಿಬ್ಬಂದಿ ಮೊದಲ ಮಹಡಿಯ ಲಾಬಿಗೆ ದೀಪಗಳನ್ನು ಆಫ್ಮಾಡಲು ಹೋದಾಗ ಕೊಠಡಿ ಸಂಖ್ಯೆ 127 ರಿಂದ ಕಿರುಚಾಟ ಕೇಳಿಸಿತು . ಆ ಕೋಣೆಯಲ್ಲಿ ಹಿರಿಯ ವಿದ್ಯಾರ್ಥಿ ಹಾಗೂ ನಿವೃತ್ತ ಉಪ ಪೊಲೀಸ್ ವರಿಷ್ಠಾಧಿಕಾರಿಯ ಮಗನೂ ಆಗಿದ್ದ ಯುವಕ ಹಾಗೂ ಆತನ ಆಂಧ್ರಪ್ರದೇಶದ ಚಿಲುಕ್ರುಯಿ ಮೂಲದ ಸ್ನೇಹಿತ ಇದ್ದರು.

ಇಬ್ಬರೂ ಆತ್ಮಸ್ನೇಹಿತರಾಗಿದ್ದರು.ಒಳಗೆ ಹೋಗಲು ಪ್ರಯತ್ನಿಸಿದಾಗ, ಬಾಗಿಲು ಒಳಗಿನಿಂದ ಲಾಕ್ ಆಗಿತ್ತು ಎಂದು ಕಾವಲುಗಾರ ಪೊಲೀಸರಿಗೆ ತಿಳಿಸಿದ್ದಾನೆ. ಅವನು ಹಾಸ್ಟೆಲ್ ವಾರ್ಡನ್‌ಗೆ ಮಾಹಿತಿ ನೀಡಿ, ನಂತರ ಎರಡನೇ ಮಹಡಿಗೆ ಹತ್ತಿ ಬಾಲ್ಕನಿಯಿಂದ ಕೋಣೆಯೊಳಗೆ ನೋಡಿದ್ದಾರೆ.

ಇಬ್ಬರು ರಕ್ತದ ಮಡುವಿನಲ್ಲಿ ಬಿದ್ದಿರುವುದನ್ನು ಸಿಬ್ಬಂದಿ ನೋಡಿದರು. ಏಣಿಯನ್ನು ತರಲಾಯಿತು, ಮತ್ತು ಹಾಸ್ಟೆಲ್ ಸಿಬ್ಬಂದಿ ಬಾಲ್ಕನಿ ಕಿಟಕಿಯನ್ನು ಒಡೆದು ಒಳಗೆ ಪ್ರವೇಶಿಸಿದರು. ನಂತರ ಪೊಲೀಸರು ಹೇಳಿದಂತೆ, ಕೊಠಡಿಯಲ್ಲಿ ಯಾವುದೇ ವಸ್ತುಗಳು ಚೆಲ್ಲಾಪಿಲ್ಲಿಯಾಗಿರಲಿಲ್ಲ. ಇಬ್ಬರೂ ವಿದ್ಯಾರ್ಥಿಗಳನ್ನು ಕೈಲಾಶ್ ಆಸ್ಪತ್ರೆಗೆ ಸಾಗಿಸಲಾಯಿತು, ಅಲ್ಲಿ ಆಂಧ್ರಪ್ರದೇಶದ ವಿದ್ಯಾರ್ಥಿಯನ್ನು ಆಸ್ಪತ್ರೆಗೆ ಕರೆದೊಯ್ಯುವಷ್ಟರಲ್ಲಿ ಮೃತಪಟ್ಟಿರುವುದಾಗಿ ಘೋಷಿಸಲಾಯಿತು. ಆಗ್ರಾ ಮೂಲದ ವಿದ್ಯಾರ್ಥಿಯ ತಲೆಗೆ ಗುಂಡೇಟಿನಿಂದ ಗಾಯವಾಗಿದ್ದು, ಆತನ ಸ್ಥಿತಿ ಗಂಭೀರವಾಗಿದೆ.

ಮತ್ತಷ್ಟು ಓದಿ:

ಟೀಚರ್ ಹೊಡೆದಿದ್ದಕ್ಕೆ ಬೇಸರ, ಶಿಕ್ಷಕರ ಮೇಲೆ ಗುಂಡು ಹಾರಿಸಿದ ವಿದ್ಯಾರ್ಥಿ

ಸಹಾಯಕ ಪೊಲೀಸ್ ಆಯುಕ್ತ ವಿವೇಕ್ ರಂಜನ್ ರೈ ಮಾತನಾಡಿ, ಬಳಸಿದ ಹ್ಯಾಂಡ್‌ಗನ್ ವಿದ್ಯಾರ್ಥಿಯ ತಂದೆಯದ್ದಾಗಿತ್ತು. ರಿವಾಲ್ವರ್ ನಿಂದ ಎರಡು ಸುತ್ತು ಗುಂಡು ಹಾರಿಸಲಾಗಿದೆ. ಎರಡೂ ಗುಂಡುಗಳು ವಿದ್ಯಾರ್ಥಿಗಳ ತಲೆಯನ್ನು ಭೇದಿಸಿ ಗೋಡೆಯಲ್ಲಿ ಸಿಲುಕಿಕೊಂಡಿವೆ. ಒಬ್ಬರು ಇನ್ನೊಬ್ಬರಿಗೆ ಗುಂಡು ಹಾರಿಸಿಕೊಂಡ ನಂತರ ಸ್ವತಃ ಗುಂಡು ಹಾರಿಸಿಕೊಂಡಿದ್ದಾರೆಯೇ ಅಥವಾ ಇಬ್ಬರೂ ಪ್ರತ್ಯೇಕವಾಗಿ ಗುಂಡು ಹಾರಿಸಿದ್ದಾರೆಯೇ ಎಂದು ಖಚಿತಪಡಿಸಿಕೊಳ್ಳಲು ನಾವು ವಿಧಿವಿಜ್ಞಾನ ಫಲಿತಾಂಶಗಳಿಗಾಗಿ ಕಾಯುತ್ತಿದ್ದೇವೆ ಎಂದು ತಿಳಿಸಿದ್ದಾರೆ.

ಸಂಸ್ಥೆಯ ಹಾಸ್ಟೆಲ್ ಸುಮಾರು 500 ವಿದ್ಯಾರ್ಥಿಗಳನ್ನು ಹೊಂದಿದೆ. ಈ ಇಬ್ಬರು ಪ್ರತ್ಯೇಕ ಮಹಡಿಗಳಲ್ಲಿದ್ದರು,  ಈ ಆಘಾತಕಾರಿ ಘಟನೆಯು ಕ್ಯಾಂಪಸ್ ಅನ್ನು ಅಲ್ಲೋಲಕಲ್ಲೋಲಗೊಳಿಸಿದೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
ಕಾಂಗ್ರೆಸ್ಸಿಗನಾಗಿ ಹುಟ್ಟಿದ್ದೇನೆ, ಕಾಂಗ್ರೆಸ್ಸಿಗನಾಗೇ ಸಾಯ್ತೇನೆ: ಡಿಕೆಶಿ
ಕಾಂಗ್ರೆಸ್ಸಿಗನಾಗಿ ಹುಟ್ಟಿದ್ದೇನೆ, ಕಾಂಗ್ರೆಸ್ಸಿಗನಾಗೇ ಸಾಯ್ತೇನೆ: ಡಿಕೆಶಿ
‘ಲವ್ ಮಾಕ್ಟೇಲ್ 3’ ಸಿನಿಮಾ ಕಥೆ ಕಾಪಿ? ಎಲ್ಲವನ್ನೂ ವಿವರಿಸಿದ ರಾಘವೇಂದ್ರ
‘ಲವ್ ಮಾಕ್ಟೇಲ್ 3’ ಸಿನಿಮಾ ಕಥೆ ಕಾಪಿ? ಎಲ್ಲವನ್ನೂ ವಿವರಿಸಿದ ರಾಘವೇಂದ್ರ
ಡಾ. ಸಮೀಕ್ಷಾ ರೆಡ್ಡಿ ಸಾವಿನ ಬಗ್ಗೆ ಸ್ಫೋಟಕ ಮಾಹಿತಿ
ಡಾ. ಸಮೀಕ್ಷಾ ರೆಡ್ಡಿ ಸಾವಿನ ಬಗ್ಗೆ ಸ್ಫೋಟಕ ಮಾಹಿತಿ
‘ಡಾರ್ಲಿಂಗ್ ಕೃಷ್ಣಗೆ ಕತೆ ಹೇಳಿದ್ದೆ, ಈಗ ಮರ್ತೋಗಿದೆ ಅಂತಿದ್ದಾರೆ’
‘ಡಾರ್ಲಿಂಗ್ ಕೃಷ್ಣಗೆ ಕತೆ ಹೇಳಿದ್ದೆ, ಈಗ ಮರ್ತೋಗಿದೆ ಅಂತಿದ್ದಾರೆ’
ಬಾರ್​​, ರೆಸ್ಟೋರೆಂಟ್​ಗಳಿಗೂ ತಟ್ಟಿದ್ದ ಗ್ಯಾಸ್ ಅಭಾವದ ಎಫೆಕ್ಟ್
ಬಾರ್​​, ರೆಸ್ಟೋರೆಂಟ್​ಗಳಿಗೂ ತಟ್ಟಿದ್ದ ಗ್ಯಾಸ್ ಅಭಾವದ ಎಫೆಕ್ಟ್
ಬಿಜೆಪಿ ಅಭ್ಯರ್ಥಿಯ ಪತ್ನಿಗೆ ಉಡಿ ತುಂಬಿದ ಮುಸ್ಲಿಂ ಮಹಿಳೆಯರು
ಬಿಜೆಪಿ ಅಭ್ಯರ್ಥಿಯ ಪತ್ನಿಗೆ ಉಡಿ ತುಂಬಿದ ಮುಸ್ಲಿಂ ಮಹಿಳೆಯರು
ಕಾಲ್ತುಳಿತದಲ್ಲಿ ಮೃತಪಟ್ಟ ಅಭಿಮಾನಿಗಳಿಗೆ ಆರ್​ಸಿಬಿಯಿಂದ ವಿಶೇಷ ನಮನ
ಕಾಲ್ತುಳಿತದಲ್ಲಿ ಮೃತಪಟ್ಟ ಅಭಿಮಾನಿಗಳಿಗೆ ಆರ್​ಸಿಬಿಯಿಂದ ವಿಶೇಷ ನಮನ
ಕಾರಿನಲ್ಲೇ ಸುಟ್ಟು ಹೋದ ಧಾರವಾಡದ ಮಾಜಿ ಶಾಸಕನ ಪುತ್ರ
ಕಾರಿನಲ್ಲೇ ಸುಟ್ಟು ಹೋದ ಧಾರವಾಡದ ಮಾಜಿ ಶಾಸಕನ ಪುತ್ರ
ಇರಾನ್ ಯುದ್ಧದ ನಡುವೆ ಹಾರ್ಮುಜ್ ಜಲಸಂಧಿ ದಾಟಿದ ಎಲ್​ಪಿಜಿ ಹೊತ್ತ 2 ಹಡಗುಗಳು
ಇರಾನ್ ಯುದ್ಧದ ನಡುವೆ ಹಾರ್ಮುಜ್ ಜಲಸಂಧಿ ದಾಟಿದ ಎಲ್​ಪಿಜಿ ಹೊತ್ತ 2 ಹಡಗುಗಳು
ಪ್ರೀತಿ ನೀಡಲು ಪ್ರಾಣಿಯೇ ಆಗಬೇಕಿಲ್ಲ, ಮನುಷ್ಯತ್ವವೊಂದಿದ್ದರೆ ಸಾಕು!
ಪ್ರೀತಿ ನೀಡಲು ಪ್ರಾಣಿಯೇ ಆಗಬೇಕಿಲ್ಲ, ಮನುಷ್ಯತ್ವವೊಂದಿದ್ದರೆ ಸಾಕು!