AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನೋಯ್ಡಾ: ಸಾವಿನ ಹಾದಿ ತೋರಿದ ಗೂಗಲ್ ಮ್ಯಾಪ್, 30 ಅಡಿ ಆಳದ ಚರಂಡಿಗೆ ಬಿದ್ದು ವ್ಯಕ್ತಿ ಸಾವು

ಗ್ರೇಟರ್ ನೋಯ್ಡಾದಲ್ಲಿ 30 ಅಡಿ ಆಳದ ಚರಂಡಿಗೆ ಕಾರು ಬಿದ್ದು 31 ವರ್ಷದ ಸ್ಟೇಷನ್ ಮಾಸ್ಟರ್ ಸಾವನ್ನಪ್ಪಿದ್ದಾರೆ. ಮಂಗಳವಾರ ನಡೆದ ಅಪಘಾತದ ಬಗ್ಗೆ ಮಾಹಿತಿ ನೀಡಿದ ಪೊಲೀಸರು, ಶನಿವಾರ ಸೆಕ್ಟರ್ ಪಿ4 ಪ್ರದೇಶದಲ್ಲಿ ಈ ಘಟನೆ ನಡೆದಿದೆ ಎಂದು ತಿಳಿಸಿದ್ದಾರೆ. ಮೃತರ ಹೆಸರು ಭರತ್ ಸಿಂಗ್, ಅವರು ದೆಹಲಿಯ ಮಾಂಡವಲಿ ಪ್ರದೇಶದ ನಿವಾಸಿಯಾಗಿದ್ದರು. ಅವರು ಮದುವೆಯಲ್ಲಿ ಪಾಲ್ಗೊಳ್ಳಲು ಗ್ರೇಟರ್ ನೋಯ್ಡಾಗೆ ಹೋಗುತ್ತಿದ್ದರು.

ನೋಯ್ಡಾ: ಸಾವಿನ ಹಾದಿ ತೋರಿದ ಗೂಗಲ್ ಮ್ಯಾಪ್, 30 ಅಡಿ ಆಳದ ಚರಂಡಿಗೆ ಬಿದ್ದು ವ್ಯಕ್ತಿ ಸಾವು
ನಯನಾ ರಾಜೀವ್
|

Updated on: Mar 05, 2025 | 12:11 PM

Share

ನೋಯ್ಡಾ, ಮಾರ್ಚ್​ 05: ಗೂಗಲ್ ಮ್ಯಾಪ್ ನಂಬಿ ಹೋಗಿ ಕಾರು ಸಮೇತ 30 ಅಡಿ ಆಳದ ಚರಂಡಿ(Drain)ಗೆ ಬಿದ್ದು ವ್ಯಕ್ತಿಯೊಬ್ಬ ಪ್ರಾಣ ಕಳೆದುಕೊಂಡಿರುವ ಘಟನೆ ನೋಯ್ಡಾದಲ್ಲಿ ನಡೆದಿದೆ. ಮ್ಯಾಪ್​ ದಾರಿಯನ್ನು ತಪ್ಪಾಗಿ ತೋರಿಸಿರಬಹುದು ಎಂದು ಸ್ಥಳೀಯರು ಹೇಳುತ್ತಿದ್ದಾರೆ. ಆದರೆ ಪೊಲೀಸರು ಅದನ್ನು ದೃಢೀಕರಿಸಿಲ್ಲ.

ಮೃತರನ್ನು ದೆಹಲಿಯ ಮಂದವಾಲಿ ನಿವಾಸಿ 31 ವರ್ಷದ ಭರತ್ ಸಿಂಗ್ ಎಂದು ಗುರುತಿಸಲಾಗಿದ್ದು, ಅವರು ಸ್ಟೇಷನ್ ಮಾಸ್ಟರ್ ಆಗಿ ಕೆಲಸ ಮಾಡುತ್ತಿದ್ದರು ಎಂದು ಪೊಲೀಸರನ್ನು ಉಲ್ಲೇಖಿಸಿ ಸುದ್ದಿ ಸಂಸ್ಥೆ ಪಿಟಿಐ ವರದಿ ಮಾಡಿದೆ. ಮಾರ್ಚ್ 1 ರಂದು ಗ್ರೇಟರ್ ನೋಯ್ಡಾದ ಸೆಕ್ಟರ್ ಪಿ 4 ನಲ್ಲಿ ಶನಿವಾರ ಈ ಘಟನೆ ಸಂಭವಿಸಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಭರತ್ ಸಿಂಗ್ ಮದುವೆಯಲ್ಲಿ ಭಾಗವಹಿಸಲು ತೆರಳುತ್ತಿದ್ದಾಗ ಈ ಘಟನೆ ನಡೆದಿದೆ.

ಇದನ್ನೂ ಓದಿ
Image
ಗೂಗಲ್ ಮ್ಯಾಪ್ಸ್ ನಿಖರವಾದ ಟ್ರಾಫಿಕ್ ಮಾಹಿತಿಯನ್ನು ಹೇಗೆ ನೀಡುತ್ತೆ?
Image
ಗೂಗಲ್‌ ಮ್ಯಾಪ್‌ ನೋಡಿಕೊಂಡು ಹೋಗಿ ದುರಂತ ಸಾವು ಕಂಡ ವೈದ್ಯ
Image
ಗೂಗಲ್ ಮ್ಯಾಪ್ ನಂಬಿ ಮೂವರ ಪ್ರಾಣ ಹೋಯ್ತು
Image
ಗೂಗಲ್ ಮ್ಯಾಪ್ ನಂಬಿ ಕಾರು ಓಡಿಸಿ, ಹಳ್ಳದೊಳಗೆ ಮುಳುಗಿದ ಕಾರು

ಶನಿವಾರ ಮಧ್ಯಾಹ್ನ 3.30 ರ ಸುಮಾರಿಗೆ ಕೇಂದ್ರೀಯ ವಿಹಾರ್ ಪ್ರದೇಶದ ಬಳಿ ಕಾರು ಚರಂಡಿಗೆ ಬಿದ್ದಿದೆ ಎಂದು ಪೊಲೀಸರಿಗೆ ಮಾಹಿತಿ ಸಿಕ್ಕಿತು ಎಂದು ಬೀಟಾ 2 ಪೊಲೀಸ್ ಠಾಣೆಯ ಉಸ್ತುವಾರಿ ವಿಜಯ್ ಕುಮಾರ್ ತಿಳಿಸಿದ್ದಾರೆ. ಭರತ್ ಸಿಂಗ್ ರಾಣಿ ರಾಂಪುರದಲ್ಲಿ ಮದುವೆ ಕಾರ್ಯಕ್ರಮಕ್ಕೆ ಹೋಗುತ್ತಿದ್ದಾಗ ಅಪಘಾತ ಸಂಭವಿಸಿದೆ ಎಂದು ಕುಮಾರ್ ಹೇಳಿದರು.

ರಸ್ತೆಯ ಕೊನೆಯಲ್ಲಿ ಯಾವುದೇ ಎಚ್ಚರಿಕೆ ಫಲಕಗಳು ಇರಲಿಲ್ಲ, ಇದರಿಂದಾಗಿ ಕಾರು ನಿಯಂತ್ರಣ ತಪ್ಪಿ ಚರಂಡಿಗೆ ಬಿದ್ದಿರಬಹುದು ಎಂದು ಹೇಳಿದರು.

ಪ್ರತ್ಯಕ್ಷದರ್ಶಿ ಸೌರಭ್ ಮಾತನಾಡಿ, ಕಾರು ವೇಗವಾಗಿ ಚಲಿಸುತ್ತಿತ್ತು, ಏಕಾಏಕಿ ಚರಂಡಿಗೆ ಬಿದ್ದಿದೆ ಎಂದಿದ್ದಾರೆ. ಸ್ಥಳೀಯರು ಸಹಾಯ ಮಾಡಲು ಧಾವಿಸಿದರು, ಆದರೆ ಕಾರು ಪಲ್ಟಿಯಾಗಿ ನೀರಿನಿಂದ ತುಂಬಿತ್ತು ಎಂದು ಅವರು ಹೇಳಿದರು.

ಮತ್ತಷ್ಟು ಓದಿ: Tech Info: ಗೂಗಲ್ ಮ್ಯಾಪ್ಸ್ ನಿಖರವಾದ ಟ್ರಾಫಿಕ್ ಮಾಹಿತಿಯನ್ನು ಹೇಗೆ ನೀಡುತ್ತೆ?, ಇದು ಹೇಗೆ ಕೆಲಸ ಮಾಡುತ್ತದೆ?

ರಸ್ತೆಯ ಕೊನೆಯಲ್ಲಿ ಮತ್ತು ಚರಂಡಿ ಬಳಿ ಎಚ್ಚರಿಕೆ ಫಲಕಗಳಿಲ್ಲದಿರುವುದು ಅಪಾಯವನ್ನುಂಟುಮಾಡುತ್ತದೆ. ಅಪಘಾತಕ್ಕೆ ಸಂಬಂಧಿಸಿದಂತೆ, ಸಾಮಾಜಿಕ ಮಾಧ್ಯಮದಲ್ಲಿ ಕಾರು ಸವಾರ ಗೂಗಲ್ ನಕ್ಷೆಯ ಸಹಾಯದಿಂದ ಹೋಗುತ್ತಿದ್ದಾಗ ರಸ್ತೆ ಕೊನೆಗೊಂಡಿತ್ತು ಆಗ ಅಪಘಾತ ಸಂಭವಿಸಿರಬಹುದು ಎಂದು ಹೇಳಲಾಗುತ್ತಿದೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಕಾಡಾನೆಗಳ ಹಿಂಡು ಡ್ರೋನ್ ಕ್ಯಾಮರಾದಲ್ಲಿ ಸೆರೆ
ಕಾಡಾನೆಗಳ ಹಿಂಡು ಡ್ರೋನ್ ಕ್ಯಾಮರಾದಲ್ಲಿ ಸೆರೆ
ಕೆಟ್ಟ ಪ್ರಪಂಚದಲ್ಲಿ ಸ್ವರ್ಗ ತೋರಿಸ್ತೀನಿ; ಉಪ್ಪಿ ಡೈಲಾಗ್​ ಹೇಳಿದ ಗಿಲ್ಲಿ
ಕೆಟ್ಟ ಪ್ರಪಂಚದಲ್ಲಿ ಸ್ವರ್ಗ ತೋರಿಸ್ತೀನಿ; ಉಪ್ಪಿ ಡೈಲಾಗ್​ ಹೇಳಿದ ಗಿಲ್ಲಿ
ಬಿಗ್ ಬಾಸ್ ಅಲ್ಲಿ ರಕ್ಷಿತಾ ಶೆಟ್ಟಿ ವಿರುದ್ಧ ತಿರುಗಿಬಿದ್ದ ಮನೆ ಮಂದಿ
ಬಿಗ್ ಬಾಸ್ ಅಲ್ಲಿ ರಕ್ಷಿತಾ ಶೆಟ್ಟಿ ವಿರುದ್ಧ ತಿರುಗಿಬಿದ್ದ ಮನೆ ಮಂದಿ
'ಕಣ್ಣೀರು ಸುರಿಸಬೇಡ, ನಿನ್ನ ಹಿಂದೆ ನಾನಿದ್ದೇನೆ'; ರಿಷಬ್​ಗೆ ದೈವದ ಅಭಯ
'ಕಣ್ಣೀರು ಸುರಿಸಬೇಡ, ನಿನ್ನ ಹಿಂದೆ ನಾನಿದ್ದೇನೆ'; ರಿಷಬ್​ಗೆ ದೈವದ ಅಭಯ