AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Noida: ರ‍್ಯಾಂಪ್​ವಾಕ್​ ಮಾಡುವಾಗ ಕಬ್ಬಿಣದ ಪಿಲ್ಲರ್​ ಬಿದ್ದು ಮಾಡೆಲ್ ಸಾವು

ನೋಯ್ಡಾದಲ್ಲಿ ನಡೆಯುತ್ತಿದ್ದ ಫ್ಯಾಷನ್​ ರನ್​ವೇನಲ್ಲಿ ನಡೆದುಕೊಂಡು ಹೋಗುತ್ತಿರುವಾಗ ಕಬ್ಬಿಣದ ಪಿಲ್ಲರ್ ಬಿದ್ದು 24 ವರ್ಷದ ಮಾಡೆಲ್ ಮೃತಪಟ್ಟಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ.

Noida: ರ‍್ಯಾಂಪ್​ವಾಕ್​ ಮಾಡುವಾಗ ಕಬ್ಬಿಣದ ಪಿಲ್ಲರ್​ ಬಿದ್ದು ಮಾಡೆಲ್ ಸಾವು
ಪೊಲೀಸರುImage Credit source: NDTV
ನಯನಾ ರಾಜೀವ್
|

Updated on:Jun 12, 2023 | 7:40 AM

Share

ನೋಯ್ಡಾದಲ್ಲಿ ನಡೆಯುತ್ತಿದ್ದ ಫ್ಯಾಷನ್​ ರನ್​ವೇನಲ್ಲಿ ನಡೆದುಕೊಂಡು ಹೋಗುತ್ತಿರುವಾಗ ಕಬ್ಬಿಣದ ಪಿಲ್ಲರ್ ಬಿದ್ದು 24 ವರ್ಷದ ಮಾಡೆಲ್ ಮೃತಪಟ್ಟಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ. ಮಹಿಳೆಯನ್ನು ವಂಶಿಕಾ ಚೋಪ್ರಾ ಎಂದು ಗುರುತಿಸಲಾಗಿದೆ. ನೋಯ್ಡಾದ ಸೆಕ್ಟರ್ 16 ಎ ನಲ್ಲಿರುವ ಫಿಲ್ಮ್ ಸಿಟಿಯ ಲಕ್ಷ್ಮಿ ಸುಡಿಯೋದಲ್ಲಿ ಅಪಘಾತ ಸಂಭವಿಸಿದೆ. ಬೆಳಕಿನ ಉದ್ದೇಶಕ್ಕಾಗಿ ಕಬ್ಬಿಣದ ಕಂಬವನ್ನು ನಿರ್ಮಿಸಲಾಗಿದೆ ಆದರೆ ಅದು ವೇದಿಕೆಯ ಮೇಲೆ ಬಿದ್ದು ಮಾಡೆಲ್ ತಕ್ಷಣವೇ ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಅಪಘಾತದಲ್ಲಿ ಬಾಬಿ ರಾಜ್ ಎಂಬ ವ್ಯಕ್ತಿ ಗಾಯಗೊಂಡಿದ್ದು, ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಫ್ಯಾಷನ್ ಶೋ ಆಯೋಜಕರು ಮತ್ತು ಇತರ ನಾಲ್ವರನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಮತ್ತಷ್ಟು ಓದಿ: ನಟ, ಮಾಡೆಲ್ ಆದಿತ್ಯ ಸಿಂಗ್ ಅನುಮಾನಾಸ್ಪದ ಸಾವು

ವಂಶಿಕಾ ಅವರ ಸಾವಿನ ಬಗ್ಗೆ ಅವರ ಕುಟುಂಬ ಸದಸ್ಯರಿಗೆ ಮಾಹಿತಿ ನೀಡಲಾಗಿದೆ. ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ. ಈ ಸಂಬಂಧ ಪೊಲೀಸರು ಫ್ಯಾಷನ್ ಶೋ ಆಯೋಜಕ ಮತ್ತು ಲೈಟಿಂಗ್ ಕೆಲಸದಲ್ಲಿ ತೊಡಗಿದ್ದ 4 ಜನರನ್ನು ಬಂಧಿಸಿದ್ದಾರೆ ಎಂದು ನೋಯ್ಡಾದ ಹೆಚ್ಚುವರಿ ಡಿಸಿಪಿ ಮೋಹನ್ ಅವಸ್ತಿ ತಿಳಿಸಿದ್ದಾರೆ. ಫ್ಯಾಷನ್ ಶೋಗೆ ಅನುಮತಿ ನೀಡಿಲ್ಲ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 7:40 am, Mon, 12 June 23

Follow Us
ಬಾಗೇಪಲ್ಲಿ ಕಾರು ಚಾಲಕನ ಹತ್ಯೆ ಮಾಡಿದ ಆರೋಪಿಗೆ ಪೊಲೀಸರ ತೀವ್ರ ಶೋಧ
ಬಾಗೇಪಲ್ಲಿ ಕಾರು ಚಾಲಕನ ಹತ್ಯೆ ಮಾಡಿದ ಆರೋಪಿಗೆ ಪೊಲೀಸರ ತೀವ್ರ ಶೋಧ
ಬಾಲ್ಯದಲ್ಲೇ ನಟಿಸುವ ಆಸೆಯಿತ್ತು, ಅಪ್ಪ ಬೇಡ ಅಂದಿದ್ರು: ಮೋನಿಷಾ ವಿಜಯ್
ಬಾಲ್ಯದಲ್ಲೇ ನಟಿಸುವ ಆಸೆಯಿತ್ತು, ಅಪ್ಪ ಬೇಡ ಅಂದಿದ್ರು: ಮೋನಿಷಾ ವಿಜಯ್
ಬೆಂಗಳೂರಿಗೆ ಬಂದ ಇಡಿ ನಿರ್ದೇಶಕ ರಾಹುಲ್ ನವೀನ್
ಬೆಂಗಳೂರಿಗೆ ಬಂದ ಇಡಿ ನಿರ್ದೇಶಕ ರಾಹುಲ್ ನವೀನ್
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ