AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಐಸ್​ಕ್ರೀಂನಲ್ಲಿ ಜರಿ ಹುಳು ಪತ್ತೆ, ಐಸ್​​ಕ್ರೀಂ ಕಂಪನಿ ಹಾಗೂ ಡೆಲಿವರಿ ಆ್ಯಪ್ ವಿರುದ್ಧ ಪ್ರಕರಣ ದಾಖಲು

ಆನ್​ಲೈನ್​ ಮೂಲಕ ಆರ್ಡರ್​ ಮಾಡಲಾಗಿದ್ದ ಐಸ್​ಕ್ರೀಂ ಟಬ್​ನಲ್ಲಿ ಜರಿ ಹುಳು ಪತ್ತೆಯಾಗಿರುವ ಘಟನೆ ನೋಯ್ಡಾದಲ್ಲಿ ನಡೆದಿದೆ.

ಐಸ್​ಕ್ರೀಂನಲ್ಲಿ ಜರಿ ಹುಳು ಪತ್ತೆ, ಐಸ್​​ಕ್ರೀಂ ಕಂಪನಿ ಹಾಗೂ ಡೆಲಿವರಿ ಆ್ಯಪ್ ವಿರುದ್ಧ ಪ್ರಕರಣ ದಾಖಲು
ಐಸ್​ಕ್ರೀಂ
ನಯನಾ ರಾಜೀವ್
|

Updated on: Jun 16, 2024 | 10:55 AM

Share

ಡೆಲಿವರಿ ಆ್ಯಪ್‌ನಿಂದ ಆರ್ಡರ್ ಮಾಡಿದ ಐಸ್ ಕ್ರೀಂ(Ice-Cream)ನಲ್ಲಿ ಜರಿಹುಳು(ಶತಪದಿ) ಪತ್ತೆಯಾಗಿದೆ. ವಿಷಯದ ಬಗ್ಗೆ ಮಾಹಿತಿ ಬಂದ ತಕ್ಷಣ, ಆಹಾರ ಮತ್ತು ಸರಬರಾಜು ಇಲಾಖೆ ತಂಡವು ಸೆಕ್ಟರ್ -22 ರಲ್ಲಿರುವ ಡೆಲಿವರಿ ಆಪ್ ಸ್ಟೋರ್‌ಗೆ ಭೇಟಿ ನೀಡಿದೆ. ಎಲ್ಲಾ ಐಸ್​ಕ್ರೀಂಗಳ ಮಾರಾಟವನ್ನು ನಿಷೇಧಿಸಿದೆ. ಐಸ್ ಕ್ರೀಂ ಮಾದರಿಯನ್ನು ಪರೀಕ್ಷಿಸಲಾಗುತ್ತದೆ. ಐಸ್ ಕ್ರೀಂ ತಯಾರಿಕಾ ಕಂಪನಿ ಮತ್ತು ಡೆಲಿವರಿ ಆ್ಯಪ್ ವಿರುದ್ಧವೂ ಪ್ರಕರಣ ದಾಖಲಿಸಲಾಗುವುದು ಎಂದು ಇಲಾಖೆ ತಿಳಿಸಿದೆ.

ದೀಪಾ ದೇವಿ ಅವರು ಮಕ್ಕಳಿಗೆ ಮ್ಯಾಂಗೋ ಶೇಕ್ ಮಾಡಲು ಡೆಲಿವರಿ ಅಪ್ಲಿಕೇಶನ್‌ನಿಂದ ಐಸ್‌ಕ್ರೀಂ ಆರ್ಡರ್ ಮಾಡಿದ್ದರು. ಐಸ್​ಕ್ರೀಂ ಮುಚ್ಚುಳ ತೆಗೆದ ತಕ್ಷಣ ಹುಳು ಕಾಣಿಸಿತ್ತು, ಆ್ಯಪ್‌ನ ಸಹಾಯವಾಣಿ ಸಂಖ್ಯೆಗೆ ದೂರು ನೀಡಿದ್ದಾರೆ. ಕಂಪನಿಯು ತನ್ನ ತಪ್ಪನ್ನು ಒಪ್ಪಿಕೊಂಡು, ಐಸ್​ಕ್ರೀಂ ಹಣವನ್ನು ಹಿಂದಿರುಗಿಸಿತು.

ವಿಷಯದ ಬಗ್ಗೆ ಮಾಹಿತಿ ಪಡೆದ ಆಹಾರ ಸುರಕ್ಷತಾ ಅಧಿಕಾರಿಗಳ ತಂಡವೂ ಸೆಕ್ಟರ್-12 ತಲುಪಿತು. ಸಂತ್ರಸ್ತೆಯ ದೂರಿನ ಆಧಾರದ ಮೇಲೆ, ಅವರು ಸೆಕ್ಟರ್ -22 ರಲ್ಲಿರುವ ಆಪ್ ಸ್ಟೋರ್‌ಗೆ ತಲುಪಿದರು ಮತ್ತು ಆ ಬ್ಯಾಚ್ ಐಸ್ ಕ್ರೀಮ್ ಮಾರಾಟವನ್ನು ನಿಲ್ಲಿಸಿದರು.

ಮತ್ತಷ್ಟು ಓದಿ:ಆನ್​ಲೈನ್​ ಮೂಲಕ ಆರ್ಡರ್​ ಮಾಡಿದ್ದ ಐಸ್​ಕ್ರೀಂನಲ್ಲಿ ಮನುಷ್ಯನ ಬೆರಳು ಪತ್ತೆ

ಈ ಸಂಬಂಧ ದೂರನ್ನು ಸ್ವೀಕರಿಸಿ ಕೂಡಲೇ ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ಮುಖ್ಯ ಆಹಾರ ಸುರಕ್ಷತಾ ಅಧಿಕಾರಿ ಅಕ್ಷಯ್ ಗೋಯಲ್ ಹೇಳಿದ್ದಾರೆ. ಭಾನುವಾರ ಪ್ರಕರಣ ದಾಖಲಾಗಲಿದೆ.

ಕೆಲವು ದಿನಗಳ ಹಿಂದೆ ಆನ್​ಲೈನ್​ ಮೂಲಕ ತರಿಸಲಾಗಿದ್ದ ಕೋನ್​ ಐಸ್​ಕ್ರೀಂನಲ್ಲಿ ಮಾನವನ ಬೆರಳುಗಳು ಪತ್ತೆಯಾಗಿತ್ತು. ಬಳಿಕ ಸ್ವತಃ ವೈದ್ಯರಾಗಿರುವ ಗ್ರಾಹಕರು ಅದನ್ನು ಅರಿತು ಕೂಡಲೇ ಪೊಲೀಸರಿಗೆ ದೂರು ನೀಡಿದ್ದರು.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

48 ಗಂಟೆಗಳಲ್ಲಿ ಅಭಿಷೇಕ್ ದಾಖಲೆ ಮುರಿದ ಇಶಾನ್ ಕಿಶನ್
48 ಗಂಟೆಗಳಲ್ಲಿ ಅಭಿಷೇಕ್ ದಾಖಲೆ ಮುರಿದ ಇಶಾನ್ ಕಿಶನ್
ಬಿಗ್ ಬಾಸ್: ಬಂಗಾರದ ಅಂಗಡಿಯಲ್ಲಿ ಕಾವ್ಯಾ ಜೊತೆ ಸೆಲ್ಫಿಗೆ ಮುಗಿಬಿದ್ದ ಜನ
ಬಿಗ್ ಬಾಸ್: ಬಂಗಾರದ ಅಂಗಡಿಯಲ್ಲಿ ಕಾವ್ಯಾ ಜೊತೆ ಸೆಲ್ಫಿಗೆ ಮುಗಿಬಿದ್ದ ಜನ
ಕೂದಲೆಳೆ ಅಂತರದಲ್ಲಿ ಪ್ರಾಣಾಪಾಯದಿಂದ ಪಾರಾದ ಅಫ್ಘಾನ್ ಬ್ಯಾಟರ್
ಕೂದಲೆಳೆ ಅಂತರದಲ್ಲಿ ಪ್ರಾಣಾಪಾಯದಿಂದ ಪಾರಾದ ಅಫ್ಘಾನ್ ಬ್ಯಾಟರ್
ಅಪರೂಪದ ವಸ್ತು ಪತ್ತೆ:ಲಕ್ಕುಂಡಿ ನೈಜ ಗತವೈಭವ ಈಗ ಆರಂಭ!
ಅಪರೂಪದ ವಸ್ತು ಪತ್ತೆ:ಲಕ್ಕುಂಡಿ ನೈಜ ಗತವೈಭವ ಈಗ ಆರಂಭ!
‘ಈ ಬಂಗಾರದ ಚೈನ್ ನನಗೆ ಅಲ್ವಾ ಸರ್’: ಶಾಕ್ ಆದ ಗಿಲ್ಲಿ ನಟ
‘ಈ ಬಂಗಾರದ ಚೈನ್ ನನಗೆ ಅಲ್ವಾ ಸರ್’: ಶಾಕ್ ಆದ ಗಿಲ್ಲಿ ನಟ
ರಕ್ಷಿತಾ ಶೆಟ್ಟಿ ಕಣ್ಣಲ್ಲಿ ನನ್ನ ಗೆಲುವಿನ ಖುಷಿ ಕಾಣಿಸಿತು: ಗಿಲ್ಲಿ ನಟ
ರಕ್ಷಿತಾ ಶೆಟ್ಟಿ ಕಣ್ಣಲ್ಲಿ ನನ್ನ ಗೆಲುವಿನ ಖುಷಿ ಕಾಣಿಸಿತು: ಗಿಲ್ಲಿ ನಟ
ಬಾಬರ್ ಆಝಂ ತಂಡದಿಂದ ಹೊರಬಿದ್ದ ಬೆನ್ನಲ್ಲೇ ಫೈನಲ್​ಗೇರಿದ ಸಿಡ್ನಿ ಸಿಕ್ಸರ್ಸ್
ಬಾಬರ್ ಆಝಂ ತಂಡದಿಂದ ಹೊರಬಿದ್ದ ಬೆನ್ನಲ್ಲೇ ಫೈನಲ್​ಗೇರಿದ ಸಿಡ್ನಿ ಸಿಕ್ಸರ್ಸ್
ರಾಹುಲ್​​ ನೀಡಿದ್ದ ಭರವಸೆ ಬಗ್ಗೆ ಬೈಕ್​​ ಟ್ಯಾಕ್ಸಿ ರೈಡರ್​​ಗಳು ಏನಂದ್ರು?
ರಾಹುಲ್​​ ನೀಡಿದ್ದ ಭರವಸೆ ಬಗ್ಗೆ ಬೈಕ್​​ ಟ್ಯಾಕ್ಸಿ ರೈಡರ್​​ಗಳು ಏನಂದ್ರು?
ಮತ್ತೊಂದು ಕೆಟ್ಟ ದಾಖಲೆಯೊಂದಿಗೆ ವಿಶ್ವ ಮಟ್ಟದಲ್ಲಿ ಸುದ್ದಿಯಾದ ಬೆಂಗಳೂರು
ಮತ್ತೊಂದು ಕೆಟ್ಟ ದಾಖಲೆಯೊಂದಿಗೆ ವಿಶ್ವ ಮಟ್ಟದಲ್ಲಿ ಸುದ್ದಿಯಾದ ಬೆಂಗಳೂರು
ಸಾಲು ಸಾಲು ರಜೆ ಹಿನ್ನೆಲೆ ಊರಿನತ್ತ ಹೊರಟ ಜನರಿಗೆ ಶಾಕ್​​: ದುಪ್ಪಟ್ಟು ದರ
ಸಾಲು ಸಾಲು ರಜೆ ಹಿನ್ನೆಲೆ ಊರಿನತ್ತ ಹೊರಟ ಜನರಿಗೆ ಶಾಕ್​​: ದುಪ್ಪಟ್ಟು ದರ