AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಐಸ್​ಕ್ರೀಂನಲ್ಲಿ ಜರಿ ಹುಳು ಪತ್ತೆ, ಐಸ್​​ಕ್ರೀಂ ಕಂಪನಿ ಹಾಗೂ ಡೆಲಿವರಿ ಆ್ಯಪ್ ವಿರುದ್ಧ ಪ್ರಕರಣ ದಾಖಲು

ಆನ್​ಲೈನ್​ ಮೂಲಕ ಆರ್ಡರ್​ ಮಾಡಲಾಗಿದ್ದ ಐಸ್​ಕ್ರೀಂ ಟಬ್​ನಲ್ಲಿ ಜರಿ ಹುಳು ಪತ್ತೆಯಾಗಿರುವ ಘಟನೆ ನೋಯ್ಡಾದಲ್ಲಿ ನಡೆದಿದೆ.

ಐಸ್​ಕ್ರೀಂನಲ್ಲಿ ಜರಿ ಹುಳು ಪತ್ತೆ, ಐಸ್​​ಕ್ರೀಂ ಕಂಪನಿ ಹಾಗೂ ಡೆಲಿವರಿ ಆ್ಯಪ್ ವಿರುದ್ಧ ಪ್ರಕರಣ ದಾಖಲು
ಐಸ್​ಕ್ರೀಂ
Follow us
ನಯನಾ ರಾಜೀವ್
|

Updated on: Jun 16, 2024 | 10:55 AM

ಡೆಲಿವರಿ ಆ್ಯಪ್‌ನಿಂದ ಆರ್ಡರ್ ಮಾಡಿದ ಐಸ್ ಕ್ರೀಂ(Ice-Cream)ನಲ್ಲಿ ಜರಿಹುಳು(ಶತಪದಿ) ಪತ್ತೆಯಾಗಿದೆ. ವಿಷಯದ ಬಗ್ಗೆ ಮಾಹಿತಿ ಬಂದ ತಕ್ಷಣ, ಆಹಾರ ಮತ್ತು ಸರಬರಾಜು ಇಲಾಖೆ ತಂಡವು ಸೆಕ್ಟರ್ -22 ರಲ್ಲಿರುವ ಡೆಲಿವರಿ ಆಪ್ ಸ್ಟೋರ್‌ಗೆ ಭೇಟಿ ನೀಡಿದೆ. ಎಲ್ಲಾ ಐಸ್​ಕ್ರೀಂಗಳ ಮಾರಾಟವನ್ನು ನಿಷೇಧಿಸಿದೆ. ಐಸ್ ಕ್ರೀಂ ಮಾದರಿಯನ್ನು ಪರೀಕ್ಷಿಸಲಾಗುತ್ತದೆ. ಐಸ್ ಕ್ರೀಂ ತಯಾರಿಕಾ ಕಂಪನಿ ಮತ್ತು ಡೆಲಿವರಿ ಆ್ಯಪ್ ವಿರುದ್ಧವೂ ಪ್ರಕರಣ ದಾಖಲಿಸಲಾಗುವುದು ಎಂದು ಇಲಾಖೆ ತಿಳಿಸಿದೆ.

ದೀಪಾ ದೇವಿ ಅವರು ಮಕ್ಕಳಿಗೆ ಮ್ಯಾಂಗೋ ಶೇಕ್ ಮಾಡಲು ಡೆಲಿವರಿ ಅಪ್ಲಿಕೇಶನ್‌ನಿಂದ ಐಸ್‌ಕ್ರೀಂ ಆರ್ಡರ್ ಮಾಡಿದ್ದರು. ಐಸ್​ಕ್ರೀಂ ಮುಚ್ಚುಳ ತೆಗೆದ ತಕ್ಷಣ ಹುಳು ಕಾಣಿಸಿತ್ತು, ಆ್ಯಪ್‌ನ ಸಹಾಯವಾಣಿ ಸಂಖ್ಯೆಗೆ ದೂರು ನೀಡಿದ್ದಾರೆ. ಕಂಪನಿಯು ತನ್ನ ತಪ್ಪನ್ನು ಒಪ್ಪಿಕೊಂಡು, ಐಸ್​ಕ್ರೀಂ ಹಣವನ್ನು ಹಿಂದಿರುಗಿಸಿತು.

ವಿಷಯದ ಬಗ್ಗೆ ಮಾಹಿತಿ ಪಡೆದ ಆಹಾರ ಸುರಕ್ಷತಾ ಅಧಿಕಾರಿಗಳ ತಂಡವೂ ಸೆಕ್ಟರ್-12 ತಲುಪಿತು. ಸಂತ್ರಸ್ತೆಯ ದೂರಿನ ಆಧಾರದ ಮೇಲೆ, ಅವರು ಸೆಕ್ಟರ್ -22 ರಲ್ಲಿರುವ ಆಪ್ ಸ್ಟೋರ್‌ಗೆ ತಲುಪಿದರು ಮತ್ತು ಆ ಬ್ಯಾಚ್ ಐಸ್ ಕ್ರೀಮ್ ಮಾರಾಟವನ್ನು ನಿಲ್ಲಿಸಿದರು.

ಮತ್ತಷ್ಟು ಓದಿ:ಆನ್​ಲೈನ್​ ಮೂಲಕ ಆರ್ಡರ್​ ಮಾಡಿದ್ದ ಐಸ್​ಕ್ರೀಂನಲ್ಲಿ ಮನುಷ್ಯನ ಬೆರಳು ಪತ್ತೆ

ಈ ಸಂಬಂಧ ದೂರನ್ನು ಸ್ವೀಕರಿಸಿ ಕೂಡಲೇ ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ಮುಖ್ಯ ಆಹಾರ ಸುರಕ್ಷತಾ ಅಧಿಕಾರಿ ಅಕ್ಷಯ್ ಗೋಯಲ್ ಹೇಳಿದ್ದಾರೆ. ಭಾನುವಾರ ಪ್ರಕರಣ ದಾಖಲಾಗಲಿದೆ.

ಕೆಲವು ದಿನಗಳ ಹಿಂದೆ ಆನ್​ಲೈನ್​ ಮೂಲಕ ತರಿಸಲಾಗಿದ್ದ ಕೋನ್​ ಐಸ್​ಕ್ರೀಂನಲ್ಲಿ ಮಾನವನ ಬೆರಳುಗಳು ಪತ್ತೆಯಾಗಿತ್ತು. ಬಳಿಕ ಸ್ವತಃ ವೈದ್ಯರಾಗಿರುವ ಗ್ರಾಹಕರು ಅದನ್ನು ಅರಿತು ಕೂಡಲೇ ಪೊಲೀಸರಿಗೆ ದೂರು ನೀಡಿದ್ದರು.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಬಾಗಲಕೋಟೆ ಸೇರಿ ರಾಜ್ಯದ 5 ರೈಲು ನಿಲ್ದಾಣಗಳನ್ನು ಉದ್ಘಾಟಿಸಲಿರುವ ಮೋದಿ
ಬಾಗಲಕೋಟೆ ಸೇರಿ ರಾಜ್ಯದ 5 ರೈಲು ನಿಲ್ದಾಣಗಳನ್ನು ಉದ್ಘಾಟಿಸಲಿರುವ ಮೋದಿ
ಸೊಸೆ ರಾಧಿಕಾ ನನಗೆ ಗುಡ್ ಎನ್ನಬೇಕು: ಸಿನಿಮಾ ಕನಸು ಹೇಳಿಕೊಂಡ ಯಶ್ ತಾಯಿ
ಸೊಸೆ ರಾಧಿಕಾ ನನಗೆ ಗುಡ್ ಎನ್ನಬೇಕು: ಸಿನಿಮಾ ಕನಸು ಹೇಳಿಕೊಂಡ ಯಶ್ ತಾಯಿ
ಅಧಿಕಾರ ಸ್ವೀಕರಿಸಿದ ನೂತನ ಡಿಜಿಪಿ ಡಾ. ಎಂ. ಎ ಸಲೀಂ
ಅಧಿಕಾರ ಸ್ವೀಕರಿಸಿದ ನೂತನ ಡಿಜಿಪಿ ಡಾ. ಎಂ. ಎ ಸಲೀಂ
ಸಿಂಧ್​ನಲ್ಲಿ ನೀರಿಗಾಗಿ ಹಿಂಸಾಚಾರ; ಇಬ್ಬರು ಸಾವು, ಸಚಿವರ ಮನೆಗೆ ಬೆಂಕಿ
ಸಿಂಧ್​ನಲ್ಲಿ ನೀರಿಗಾಗಿ ಹಿಂಸಾಚಾರ; ಇಬ್ಬರು ಸಾವು, ಸಚಿವರ ಮನೆಗೆ ಬೆಂಕಿ
ನಮ್ಮ ಬ್ಯಾನರ್ 2ನೇ ಸಿನಿಮಾ ಶರಣ್ ಜತೆ: ಸಿಹಿ ಸುದ್ದಿ ನೀಡಿದ ಯಶ್ ತಾಯಿ
ನಮ್ಮ ಬ್ಯಾನರ್ 2ನೇ ಸಿನಿಮಾ ಶರಣ್ ಜತೆ: ಸಿಹಿ ಸುದ್ದಿ ನೀಡಿದ ಯಶ್ ತಾಯಿ
ನಾನು ರೆಡ್ ಕಾರ್ಪೆಟ್ ಮೇಲೆ ನಿಂತಿದ್ದರೆ ಪ್ರಶ್ನೆ ಉದ್ಭವಿಸುತ್ತದೆ: ಸಿಎಂ
ನಾನು ರೆಡ್ ಕಾರ್ಪೆಟ್ ಮೇಲೆ ನಿಂತಿದ್ದರೆ ಪ್ರಶ್ನೆ ಉದ್ಭವಿಸುತ್ತದೆ: ಸಿಎಂ
ಬೇರೆ ಬೇರೆ ಸ್ಥಳಗಳಿಗೆ ಹೋಗುತ್ತೇವೆಂದಿದ್ದ ಸಿಎಂ, ಡಿಸಿಎಂ ಜೊತೆಗಿದ್ದರು
ಬೇರೆ ಬೇರೆ ಸ್ಥಳಗಳಿಗೆ ಹೋಗುತ್ತೇವೆಂದಿದ್ದ ಸಿಎಂ, ಡಿಸಿಎಂ ಜೊತೆಗಿದ್ದರು
ಮೊನ್ನೆ ಬಿಡದಿ ಭದ್ರಾಪುರ ಬಳಿ ಇವತ್ತು ಅತ್ತಿಬೆಲೆ ಮಾರ್ಗ ರೇಲ್ವೇ ಬ್ರಿಜ್
ಮೊನ್ನೆ ಬಿಡದಿ ಭದ್ರಾಪುರ ಬಳಿ ಇವತ್ತು ಅತ್ತಿಬೆಲೆ ಮಾರ್ಗ ರೇಲ್ವೇ ಬ್ರಿಜ್
ಶಿವರಾಜ್ ಕುಮಾರ್​ಗಾಗಿ ಸಿನಿಮಾ ನಿರ್ಮಿಸುವಾಸೆ ವ್ಯಕ್ತಪಡಿಸಿದ ಯಶ್ ತಾಯಿ
ಶಿವರಾಜ್ ಕುಮಾರ್​ಗಾಗಿ ಸಿನಿಮಾ ನಿರ್ಮಿಸುವಾಸೆ ವ್ಯಕ್ತಪಡಿಸಿದ ಯಶ್ ತಾಯಿ
ತೋರಿಕೆಯ ಸಿಟಿ ರೌಂಡ್ಸ್ ಸಿದ್ದರಾಮಯ್ಯಗೆ ಬೇಕಿತ್ತೇ? ಜನರ ಪ್ರಶ್ನೆ
ತೋರಿಕೆಯ ಸಿಟಿ ರೌಂಡ್ಸ್ ಸಿದ್ದರಾಮಯ್ಯಗೆ ಬೇಕಿತ್ತೇ? ಜನರ ಪ್ರಶ್ನೆ