ಐಸ್​ಕ್ರೀಂನಲ್ಲಿ ಜರಿ ಹುಳು ಪತ್ತೆ, ಐಸ್​​ಕ್ರೀಂ ಕಂಪನಿ ಹಾಗೂ ಡೆಲಿವರಿ ಆ್ಯಪ್ ವಿರುದ್ಧ ಪ್ರಕರಣ ದಾಖಲು

ಆನ್​ಲೈನ್​ ಮೂಲಕ ಆರ್ಡರ್​ ಮಾಡಲಾಗಿದ್ದ ಐಸ್​ಕ್ರೀಂ ಟಬ್​ನಲ್ಲಿ ಜರಿ ಹುಳು ಪತ್ತೆಯಾಗಿರುವ ಘಟನೆ ನೋಯ್ಡಾದಲ್ಲಿ ನಡೆದಿದೆ.

ಐಸ್​ಕ್ರೀಂನಲ್ಲಿ ಜರಿ ಹುಳು ಪತ್ತೆ, ಐಸ್​​ಕ್ರೀಂ ಕಂಪನಿ ಹಾಗೂ ಡೆಲಿವರಿ ಆ್ಯಪ್ ವಿರುದ್ಧ ಪ್ರಕರಣ ದಾಖಲು
ಐಸ್​ಕ್ರೀಂ
Follow us
|

Updated on: Jun 16, 2024 | 10:55 AM

ಡೆಲಿವರಿ ಆ್ಯಪ್‌ನಿಂದ ಆರ್ಡರ್ ಮಾಡಿದ ಐಸ್ ಕ್ರೀಂ(Ice-Cream)ನಲ್ಲಿ ಜರಿಹುಳು(ಶತಪದಿ) ಪತ್ತೆಯಾಗಿದೆ. ವಿಷಯದ ಬಗ್ಗೆ ಮಾಹಿತಿ ಬಂದ ತಕ್ಷಣ, ಆಹಾರ ಮತ್ತು ಸರಬರಾಜು ಇಲಾಖೆ ತಂಡವು ಸೆಕ್ಟರ್ -22 ರಲ್ಲಿರುವ ಡೆಲಿವರಿ ಆಪ್ ಸ್ಟೋರ್‌ಗೆ ಭೇಟಿ ನೀಡಿದೆ. ಎಲ್ಲಾ ಐಸ್​ಕ್ರೀಂಗಳ ಮಾರಾಟವನ್ನು ನಿಷೇಧಿಸಿದೆ. ಐಸ್ ಕ್ರೀಂ ಮಾದರಿಯನ್ನು ಪರೀಕ್ಷಿಸಲಾಗುತ್ತದೆ. ಐಸ್ ಕ್ರೀಂ ತಯಾರಿಕಾ ಕಂಪನಿ ಮತ್ತು ಡೆಲಿವರಿ ಆ್ಯಪ್ ವಿರುದ್ಧವೂ ಪ್ರಕರಣ ದಾಖಲಿಸಲಾಗುವುದು ಎಂದು ಇಲಾಖೆ ತಿಳಿಸಿದೆ.

ದೀಪಾ ದೇವಿ ಅವರು ಮಕ್ಕಳಿಗೆ ಮ್ಯಾಂಗೋ ಶೇಕ್ ಮಾಡಲು ಡೆಲಿವರಿ ಅಪ್ಲಿಕೇಶನ್‌ನಿಂದ ಐಸ್‌ಕ್ರೀಂ ಆರ್ಡರ್ ಮಾಡಿದ್ದರು. ಐಸ್​ಕ್ರೀಂ ಮುಚ್ಚುಳ ತೆಗೆದ ತಕ್ಷಣ ಹುಳು ಕಾಣಿಸಿತ್ತು, ಆ್ಯಪ್‌ನ ಸಹಾಯವಾಣಿ ಸಂಖ್ಯೆಗೆ ದೂರು ನೀಡಿದ್ದಾರೆ. ಕಂಪನಿಯು ತನ್ನ ತಪ್ಪನ್ನು ಒಪ್ಪಿಕೊಂಡು, ಐಸ್​ಕ್ರೀಂ ಹಣವನ್ನು ಹಿಂದಿರುಗಿಸಿತು.

ವಿಷಯದ ಬಗ್ಗೆ ಮಾಹಿತಿ ಪಡೆದ ಆಹಾರ ಸುರಕ್ಷತಾ ಅಧಿಕಾರಿಗಳ ತಂಡವೂ ಸೆಕ್ಟರ್-12 ತಲುಪಿತು. ಸಂತ್ರಸ್ತೆಯ ದೂರಿನ ಆಧಾರದ ಮೇಲೆ, ಅವರು ಸೆಕ್ಟರ್ -22 ರಲ್ಲಿರುವ ಆಪ್ ಸ್ಟೋರ್‌ಗೆ ತಲುಪಿದರು ಮತ್ತು ಆ ಬ್ಯಾಚ್ ಐಸ್ ಕ್ರೀಮ್ ಮಾರಾಟವನ್ನು ನಿಲ್ಲಿಸಿದರು.

ಮತ್ತಷ್ಟು ಓದಿ:ಆನ್​ಲೈನ್​ ಮೂಲಕ ಆರ್ಡರ್​ ಮಾಡಿದ್ದ ಐಸ್​ಕ್ರೀಂನಲ್ಲಿ ಮನುಷ್ಯನ ಬೆರಳು ಪತ್ತೆ

ಈ ಸಂಬಂಧ ದೂರನ್ನು ಸ್ವೀಕರಿಸಿ ಕೂಡಲೇ ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ಮುಖ್ಯ ಆಹಾರ ಸುರಕ್ಷತಾ ಅಧಿಕಾರಿ ಅಕ್ಷಯ್ ಗೋಯಲ್ ಹೇಳಿದ್ದಾರೆ. ಭಾನುವಾರ ಪ್ರಕರಣ ದಾಖಲಾಗಲಿದೆ.

ಕೆಲವು ದಿನಗಳ ಹಿಂದೆ ಆನ್​ಲೈನ್​ ಮೂಲಕ ತರಿಸಲಾಗಿದ್ದ ಕೋನ್​ ಐಸ್​ಕ್ರೀಂನಲ್ಲಿ ಮಾನವನ ಬೆರಳುಗಳು ಪತ್ತೆಯಾಗಿತ್ತು. ಬಳಿಕ ಸ್ವತಃ ವೈದ್ಯರಾಗಿರುವ ಗ್ರಾಹಕರು ಅದನ್ನು ಅರಿತು ಕೂಡಲೇ ಪೊಲೀಸರಿಗೆ ದೂರು ನೀಡಿದ್ದರು.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ನೀವು ಏನಾದರೂ ಅಂದುಕೊಳ್ರಿ ನಾನಿರೋದು ಹೀಗೆ: ಶಿವಣ್ಣ
ನೀವು ಏನಾದರೂ ಅಂದುಕೊಳ್ರಿ ನಾನಿರೋದು ಹೀಗೆ: ಶಿವಣ್ಣ
ನಾಳೆ ಹಮ್ಮಿಕೊಂಡಿದ್ದ ಚಾಮುಂಡಿ ಚಲೋ ರದ್ದು: ಪ್ರತಾಪ್ ಸಿಂಹ ಹೇಳಿದ್ದಿಷ್ಟು
ನಾಳೆ ಹಮ್ಮಿಕೊಂಡಿದ್ದ ಚಾಮುಂಡಿ ಚಲೋ ರದ್ದು: ಪ್ರತಾಪ್ ಸಿಂಹ ಹೇಳಿದ್ದಿಷ್ಟು
ಮಧ್ಯಪ್ರದೇಶದ ಶಾಜಾಪುರದಲ್ಲಿ ಭೀಕರ ಅಪಘಾತ; ಶಾಲಾ ಬಸ್ ಪಲ್ಟಿ, ಮಕ್ಕಳಿಗೆ ಗಾಯ
ಮಧ್ಯಪ್ರದೇಶದ ಶಾಜಾಪುರದಲ್ಲಿ ಭೀಕರ ಅಪಘಾತ; ಶಾಲಾ ಬಸ್ ಪಲ್ಟಿ, ಮಕ್ಕಳಿಗೆ ಗಾಯ
ಗ್ಯಾರಂಟಿ ಯೋಜನೆಗಳು, ಬಡವರ ಸುರಕ್ಷತೆ, ಕಲ್ಯಾಣ ಕೃತಿ ಬಿಡುಗಡೆ ಮಾಡಿದ ಸಿಎಂ
ಗ್ಯಾರಂಟಿ ಯೋಜನೆಗಳು, ಬಡವರ ಸುರಕ್ಷತೆ, ಕಲ್ಯಾಣ ಕೃತಿ ಬಿಡುಗಡೆ ಮಾಡಿದ ಸಿಎಂ
ಕೋಲಾರ ಕಾಂಗ್ರೆಸ್ ಕಾರ್ಯಕರ್ತರ ಸಭೆಯಲ್ಲಿ ಮಾರಾಮಾರಿ
ಕೋಲಾರ ಕಾಂಗ್ರೆಸ್ ಕಾರ್ಯಕರ್ತರ ಸಭೆಯಲ್ಲಿ ಮಾರಾಮಾರಿ
ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಕಾರು, ಸಿಟಿವಿಯಲ್ಲಿ ಭೀಕರ ದೃಶ್ಯ ಸೆರೆ
ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಕಾರು, ಸಿಟಿವಿಯಲ್ಲಿ ಭೀಕರ ದೃಶ್ಯ ಸೆರೆ
ಕೊತ್ವಾಲನ ಶಿಷ್ಯರು ವಿಧಾನಸೌಧಕ್ಕೆ ಬಂದ್ಮೇಲೆ ಕುಲಗೆಟ್ಟಿದ್ದು: ಹೆಚ್​ಡಿಕೆ
ಕೊತ್ವಾಲನ ಶಿಷ್ಯರು ವಿಧಾನಸೌಧಕ್ಕೆ ಬಂದ್ಮೇಲೆ ಕುಲಗೆಟ್ಟಿದ್ದು: ಹೆಚ್​ಡಿಕೆ
ಸ್ಯಾಮ್​ಸಂಗ್ ಎಲೆಕ್ಟ್ರಾನಿಕ್ಸ್ ಹಬ್ಬದ ವಿಶೇಷ ಮಾರಾಟ ಕೊಡುಗೆ ಆರಂಭ
ಸ್ಯಾಮ್​ಸಂಗ್ ಎಲೆಕ್ಟ್ರಾನಿಕ್ಸ್ ಹಬ್ಬದ ವಿಶೇಷ ಮಾರಾಟ ಕೊಡುಗೆ ಆರಂಭ
ಶಿವಣ್ಣ-ಉಪ್ಪಿ ನಟನೆಯ ‘45’ ಚಿತ್ರದ ಸುದ್ದಿಗೋಷ್ಠಿ ಲೈವ್ ನೋಡಿ
ಶಿವಣ್ಣ-ಉಪ್ಪಿ ನಟನೆಯ ‘45’ ಚಿತ್ರದ ಸುದ್ದಿಗೋಷ್ಠಿ ಲೈವ್ ನೋಡಿ
VIDEO: ಮೈದಾನದಲ್ಲೇ ಹೊಡೆದಾಡಿಕೊಂಡ ಬ್ಯಾಟರ್-ಬೌಲರ್..!
VIDEO: ಮೈದಾನದಲ್ಲೇ ಹೊಡೆದಾಡಿಕೊಂಡ ಬ್ಯಾಟರ್-ಬೌಲರ್..!