AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನೋಯ್ಡಾ: ಕಾರಿನಲ್ಲಿ ₹2 ಕೋಟಿಗಿಂತಲೂ ನಗದು ಪತ್ತೆ, 8 ಮಂದಿ ಬಂಧನ

ಪೊಲೀಸರು ವಶಪಡಿಸಿಕೊಂಡ ನಗದು ಮತ್ತು ತಲೆಮರೆಸಿಕೊಂಡ ವ್ಯಕ್ತಿಗಳಿಗೆ ಸಂಬಂಧಿಸಿದಂತೆ ತನಿಖೆ ಮತ್ತು ಅಗತ್ಯ ಕ್ರಮಗಳನ್ನು ತೆಗೆದುಕೊಳ್ಳಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ನೋಯ್ಡಾ: ಕಾರಿನಲ್ಲಿ ₹2 ಕೋಟಿಗಿಂತಲೂ ನಗದು ಪತ್ತೆ, 8 ಮಂದಿ ಬಂಧನ
ಕಾರಿನಲ್ಲಿ ನಗದು ಪತ್ತೆ
TV9 Web
| Edited By: |

Updated on: Nov 11, 2022 | 2:32 PM

Share

ನೋಯ್ಡಾ: ಸೆಕ್ಟರ್ 58 ಪ್ರದೇಶದಲ್ಲಿ ಗುರುವಾರ ಸಂಜೆ ಕಾರಿನಲ್ಲಿ ₹ 2 ಕೋಟಿಗೂ ಹೆಚ್ಚು ನಗದು ವಶಪಡಿಸಿಕೊಂಡಿದ್ದು, ಎಂಟು ಜನರನ್ನು ನೋಯ್ಡಾ ಪೊಲೀಸರು (Noida Police) ಬಂಧಿಸಿದ್ದಾರೆ. ನಗದು ಹವಾಲಾ ದಂಧೆಗೆ (Hawala Network)ಸಂಬಂಧಿಸಿದೆ ಎಂದು ಶಂಕಿಸಲಾಗಿದ್ದು, ವಶಪಡಿಸಿಕೊಂಡ ನಗದನ್ನು ಇನ್ನೂ ಎಣಿಕೆ ಮಾಡಲಾಗುತ್ತಿದೆ ಎಂದು ಪೊಲೀಸರು ಹೇಳಿದ್ದಾರೆ. ಬಂಧಿತರನ್ನು ಅಹಮದಾಬಾದ್‌ನ ಜಯಂತಿ ಭಾಯ್, ದೆಹಲಿಯ ಸಂದೀಪ್ ಶರ್ಮಾ, ದೆಹಲಿಯ ವಿನಯ್ ಕುಮಾರ್, ವಾಯುವ್ಯ ಬಂಗಾಳದ ಅಭಿಜೀತ್ ಹಜ್ರಾ, ನೋಯ್ಡಾ ಸೆಕ್ಟರ್ -56 ರ ರೋಹಿತ್ ಜೈನ್, ದೆಹಲಿಯ ವಿಪುಲ್, ಮುಂಬೈನ ಮಿನೇಶ್ ಶಾ ಮತ್ತು ಇಂದೋರ್‌ನ ಅನುಜ್ ಎಂದು ಗುರುತಿಸಲಾಗಿದೆ.ಪೊಲೀಸರು ವಶಪಡಿಸಿಕೊಂಡ ಕೂಡಲೇ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ಸ್ಥಳಕ್ಕೆ ಧಾವಿಸಿದ್ದಾರೆ. ‘ಹವಾಲಾ ಜಾಲಕ್ಕಾಗಿ ₹ 2 ಕೋಟಿ ಹಣ ತೆಗೆದಿರಬಹುದೆಂದು ನಿರೀಕ್ಷಿಸಲಾಗಿದ್ದು, ಬಂಧಿತರೆಲ್ಲರ ವಿಚಾರಣೆ ನಡೆಯುತ್ತಿದೆ’ ಎಂದು ಪೊಲೀಸರು ತಿಳಿಸಿದ್ದಾರೆ.

ಸೆಕ್ಟರ್ 55ರಲ್ಲಿ ಹವಾಲಾ ದಂಧೆ ನಡೆದಿರುವ ಬಗ್ಗೆ ಪೊಲೀಸರಿಗೆ ಮಾಹಿತಿ ಸಿಕ್ಕಿತ್ತು. “ಹವಾಲಾ ದಂಧೆ ನಡೆಸುತ್ತಿರುವ ಕೆಲವರು ಸೆಕ್ಟರ್ -55 ರಲ್ಲಿ ಸಾಕಷ್ಟು ನಗದು ಹೊಂದಿರುವವರು ಡೀಲ್ ಮಾಡಲು ಬರುತ್ತಿದ್ದಾರೆ ಎಂದು ಪೊಲೀಸ್ ಠಾಣೆ ಸೆಕ್ಟರ್ 58 ಗೆ ಮಾಹಿತಿ ಸಿಕ್ಕಿತು. ನೋಯ್ಡಾದ ಸೆಕ್ಟರ್ 55 ರ ಪೊಲೀಸ್ ತಂಡವು ಮಾಹಿತಿಯ ಮೇರೆಗೆ ತ್ವರಿತ ಕ್ರಮ ಕೈಗೊಂಡು ಎಂಟು ಜನರನ್ನು ಬಂಧಿಸಿತು. ಎಂದು ಪೊಲೀಸರು ಹೇಳಿದರು. ವಿಚಾರಣೆಯ ನಂತರ ಆದಾಯ ತೆರಿಗೆ ಇಲಾಖೆಯಿಂದ ವಶ ಪಡಿಸಿಕೊಂಡಿರುವ ನಗದು ಎಣಿಕೆಯನ್ನು ಮಾಡಲಾಗುತ್ತದೆ.

ಪೊಲೀಸರು ವಶಪಡಿಸಿಕೊಂಡ ನಗದು ಮತ್ತು ತಲೆಮರೆಸಿಕೊಂಡ ವ್ಯಕ್ತಿಗಳಿಗೆ ಸಂಬಂಧಿಸಿದಂತೆ ತನಿಖೆ ಮತ್ತು ಅಗತ್ಯ ಕ್ರಮಗಳನ್ನು ತೆಗೆದುಕೊಳ್ಳಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಹೆಚ್ಚಿನ ತನಿಖೆ ನಡೆಸಲಾಗುತ್ತಿದೆ. ಹೆಚ್ಚಿನ ವಿವರಗಳನ್ನು ನಿರೀಕ್ಷಿಸಲಾಗಿದೆ.

Follow Us
ಮಾಜಿ ಮ್ಯಾನೇಜರ್ ನಾಪತ್ತೆಯಲ್ಲಿ ದರ್ಶನ್ ಕೈವಾಡ ಆರೋಪ
ಮಾಜಿ ಮ್ಯಾನೇಜರ್ ನಾಪತ್ತೆಯಲ್ಲಿ ದರ್ಶನ್ ಕೈವಾಡ ಆರೋಪ
ಬೆಂಗಳೂರಿನಲ್ಲಿ ಬೆಂಕಿ ಅವಘಡ: ಇಡ್ಲಿ ಸ್ಟೀಮರ್​​ನಿಂದ ಇಡೀ ಹೋಟೆಲ್ ಭಸ್ಮ
ಬೆಂಗಳೂರಿನಲ್ಲಿ ಬೆಂಕಿ ಅವಘಡ: ಇಡ್ಲಿ ಸ್ಟೀಮರ್​​ನಿಂದ ಇಡೀ ಹೋಟೆಲ್ ಭಸ್ಮ
ತಲೆಮರಿಸಿಕೊಳ್ಳುವಷ್ಟು ಸಾಲ ಆಗಿದ್ದೇಕೆ? ವಿವರಿಸಿದ ದರ್ಶನ್ ಮಾಜಿ ಮ್ಯಾನೇಜರ್
ತಲೆಮರಿಸಿಕೊಳ್ಳುವಷ್ಟು ಸಾಲ ಆಗಿದ್ದೇಕೆ? ವಿವರಿಸಿದ ದರ್ಶನ್ ಮಾಜಿ ಮ್ಯಾನೇಜರ್
ಚಲಿಸುತ್ತಿದ್ದ KSRTC ಬಸ್​ನಲ್ಲಿ ಕಾಣಿಸಿಕೊಂಡ ಬೆಂಕಿ: ತಪ್ಪಿದ ಭಾರಿ ಅನಾಹುತ
ಚಲಿಸುತ್ತಿದ್ದ KSRTC ಬಸ್​ನಲ್ಲಿ ಕಾಣಿಸಿಕೊಂಡ ಬೆಂಕಿ: ತಪ್ಪಿದ ಭಾರಿ ಅನಾಹುತ
VIDEO: ಕೊಹ್ಲಿಯ ಪಾದ ಮುಟ್ಟಿ ನಮಸ್ಕರಿಸಿದ ಯುವ ವೇಗಿ: ಆಮೇಲೇನಾಯ್ತು? 
VIDEO: ಕೊಹ್ಲಿಯ ಪಾದ ಮುಟ್ಟಿ ನಮಸ್ಕರಿಸಿದ ಯುವ ವೇಗಿ: ಆಮೇಲೇನಾಯ್ತು? 
ರಾಜಕೀಯ ನಾಯಕರ ಕರೆಗಳ ರೆಕಾರ್ಡ್?: ವಚನಾನಂದ ಶ್ರೀ ವಿರುದ್ಧ ಗಂಭೀರ ಆರೋಪ
ರಾಜಕೀಯ ನಾಯಕರ ಕರೆಗಳ ರೆಕಾರ್ಡ್?: ವಚನಾನಂದ ಶ್ರೀ ವಿರುದ್ಧ ಗಂಭೀರ ಆರೋಪ
ಕಾಂಗ್ರೆಸ್ ವಿರುದ್ಧ ಭುಗಿಲೆದ್ದ ಮುಸ್ಲಿಂ ಧಾರ್ಮಿಕ ಮುಖಂಡರ ಆಕ್ರೋಶ
ಕಾಂಗ್ರೆಸ್ ವಿರುದ್ಧ ಭುಗಿಲೆದ್ದ ಮುಸ್ಲಿಂ ಧಾರ್ಮಿಕ ಮುಖಂಡರ ಆಕ್ರೋಶ
ಪೋಷಕರೆದುರೇ ಮಕ್ಕಳಿಗೆ ಚಾಕುವಿನಿಂದ ಇರಿದ ಅಪರಿಚಿತ ಮಹಿಳೆ
ಪೋಷಕರೆದುರೇ ಮಕ್ಕಳಿಗೆ ಚಾಕುವಿನಿಂದ ಇರಿದ ಅಪರಿಚಿತ ಮಹಿಳೆ
ಬೆಂಗಳೂರಿನಲ್ಲಿ 'ತೆಂಗಿನಕಾಯಿ ಕಳ್ಳಿ'ಯ ಹಾವಳಿ!
ಬೆಂಗಳೂರಿನಲ್ಲಿ 'ತೆಂಗಿನಕಾಯಿ ಕಳ್ಳಿ'ಯ ಹಾವಳಿ!
ಒಂದು ಕುಟುಂಬಕ್ಕಾಗಿ ಕಾಂಗ್ರೆಸ್ ನಮ್ಮ ಕೈಬಿಟ್ಟಿದೆ: ಮುಸ್ಲಿಮರಿಂದ ಆಕ್ರೋಶ
ಒಂದು ಕುಟುಂಬಕ್ಕಾಗಿ ಕಾಂಗ್ರೆಸ್ ನಮ್ಮ ಕೈಬಿಟ್ಟಿದೆ: ಮುಸ್ಲಿಮರಿಂದ ಆಕ್ರೋಶ